Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:17 - ಕನ್ನಡ ಸತ್ಯವೇದವು J.V. (BSI)

17 ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ನಿನ್ನನ್ನು ಅವರ ಮುಂದೆ ಆಟಂಕವಾಗಿ ಒಡ್ಡುತ್ತೀಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ಅವರ ಮುಂದೆ, ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ಅವರ ಮುಂದೆ ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೂ ನೀನು ನನ್ನ ಜನರಿಗೆ ವಿರುದ್ಧವಾಗಿರುವೆ; ಅವರಿಗೆ ಸ್ವತಂತ್ರವನ್ನು ಕೊಡದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನೀನು ಇನ್ನೂ ಅವರನ್ನು ಕಳುಹಿಸದೆ ನನ್ನ ಜನರಿಗೆ ವಿರೋಧವಾಗಿ ನಿನ್ನನ್ನು ನೀನೇ ಹೆಚ್ಚಿಸಿಕೊಳ್ಳುತ್ತೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:17
14 ತಿಳಿವುಗಳ ಹೋಲಿಕೆ  

ಕರ್ತನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?


ಆ ಘನವನ್ನು ಅವನು ದೇವರಿಗೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.


ಅಯ್ಯೋ, ತನ್ನನ್ನು ರೂಪಿಸಿದಾತನ ಸಂಗಡ ವ್ಯಾಜ್ಯವಾಡುವವನ ಗತಿ ಏನು! ಮಣ್ಣು ಮಡಕೆಗಳಲ್ಲಿ ಅವನೂ ಒಂದು ಮಡಕೆಯಲ್ಲವೆ. ಮಣ್ಣು - ಏನು ಮಾಡುತ್ತೀ ಎಂದು ರೂಪಿಸುವವನನ್ನು ಕೇಳುವದುಂಟೇ? ನಿನ್ನ ಕಾರ್ಯವು [ನಿನ್ನ ವಿಷಯವಾಗಿ] ಅವನಿಗೆ ಕೈಯಿಲ್ಲ ಅಂದೀತೇ?


ನೀನು ನನಗೆ ವಿರೋಧವಾಗಿ ಕುಪಿತನಾಗಿರುವದೂ ಉಬ್ಬಿಕೊಂಡಿರುವದೂ ನನಗೆ ತಿಳಿದುಬಂತು. ಆದದರಿಂದ ನಿನಗೆ ಮೂಗುದಾರವನ್ನೂ ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿದ್ದಾನೆ.


ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನಾಭಿಮಾನವನ್ನು ನೋಡಿ ನಾಚಿಕೆಪಡುವರು; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.


ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಆಡಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ? ಎತ್ತಿಕೊಂಡವನನ್ನು ಕೋಲು ಬೀಸಿದಂತಾಯಿತು, ಮರಕ್ಕಿಂತ ಶ್ರೇಷ್ಠನಾಗಿರುವ ಮನುಷ್ಯನನ್ನು ದೊಣ್ಣೆಯು ಎತ್ತಿಕೊಂಡ ಹಾಗಾಯಿತು.


ನಿನ್ನ ಕೈಯೂ ದೇವರ ಕೈಯೂ ಸಮವೋ? ದೇವರ ಧ್ವನಿಯಂತೆ ಗುಡುಗಬಲ್ಲಿಯಾ?


ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು; ಆತನಿಗೆ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೆ ಉಳಿಸಿದೆನು.


ಹಾಗಾದರೆ ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು; ಐಗುಪ್ತರಾಜ್ಯವು ಸ್ಥಾಪಿಸಲ್ಪಟ್ಟ ದಿನ ಮೊದಲುಗೊಂಡು ಇಂದಿನವರೆಗೂ ಅಂಥ ಕಲ್ಲಿನ ಮಳೆ ಬಿದ್ದಿಲ್ಲ.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ನಿನ್ನ ಮನಸ್ಸನ್ನು ದೇವರ ಮನಸ್ಸಿನಷ್ಟು ಹೆಚ್ಚಿಸಿಕೊಂಡದರಿಂದ


ಹೀಗೆ ಅವನ ಹೃದಯವು ಉಬ್ಬಿ ಅವನ ಸ್ವಭಾವವು ಜಡವಾಗಿ ಅವನಿಗೆ ಸೊಕ್ಕೇರಲು ಅವನನ್ನು ರಾಜಾಸನದಿಂದ ತಳ್ಳಿ ಮಾನವನ್ನು ತೆಗೆದುಬಿಟ್ಟನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು