Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:22 - ಕನ್ನಡ ಸತ್ಯವೇದವು J.V. (BSI)

22 ಯೆಹೋವನು ಮೋಶೆಗೆ - ಆಕಾಶಕ್ಕೆ ನಿನ್ನ ಕೈ ಚಾಚು; ಆಗ ಐಗುಪ್ತದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹೊಲದಲ್ಲಿರುವ ಎಲ್ಲಾ ಪೈರುಗಳ ಮೇಲೆಯೂ ಆನೆಕಲ್ಲಿನ ಮಳೆ ಬೀಳುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆಹೋವನು ಮೋಶೆಗೆ, “ಆಕಾಶಕ್ಕೆ ನಿನ್ನ ಕೈಚಾಚು, ಆಗ ಐಗುಪ್ತ ದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಹೊಲದಲ್ಲಿರುವ ಎಲ್ಲಾ ಪೈರುಗಳ ಮೇಲೆಯೂ ಆನೆಕಲ್ಲಿನ ಮಳೆ ಬೀಳುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸರ್ವೇಶ್ವರ ಮೋಶೆಗೆ; “ಆಕಾಶದತ್ತ ನಿನ್ನ ಕೈಚಾಚು; ಆಗ ಈಜಿಪ್ಟ್ ದೇಶದಲ್ಲೆಲ್ಲಾ ಆನೆಕಲ್ಲಿನ ಮಳೆ ಬೀಳುವುದು - ಮನುಷ್ಯರ ಮೇಲೂ ಮೃಗಗಳ ಮೇಲೂ ಹೊಲದಲ್ಲಿನ ಪೈರುಪಚ್ಚೆಗಳ ಮೇಲೂ ಬೀಳುವುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೆಹೋವನು ಮೋಶೆಗೆ, “ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು; ಆಗ ಈಜಿಪ್ಟಿನಲ್ಲೆಲ್ಲಾ ಆಲಿಕಲ್ಲಿನ ಮಳೆ ಬೀಳತೊಡಗುವುದು. ಆಲಿಕಲ್ಲಿನ ಮಳೆಯು ಜನರ, ಪ್ರಾಣಿಗಳ ಮತ್ತು ಈಜಿಪ್ಟಿನ ಹೊಲಗಳಲ್ಲಿರುವ ಎಲ್ಲಾ ಸಸ್ಯಗಳ ಮೇಲೆ ಬೀಳುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ಯೆಹೋವ ದೇವರು ಮೋಶೆಗೆ, “ಆಕಾಶದ ಕಡೆಗೆ ನಿನ್ನ ಕೈಚಾಚು. ಈಜಿಪ್ಟ್ ದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಮತ್ತು ಈಜಿಪ್ಟ್ ದೇಶದಲ್ಲಿ ಇರುವ ಎಲ್ಲಾ ಹೊಲದ ಬೆಳೆಯ ಮೇಲೆಯೂ ಆಲಿಕಲ್ಲಿನ ಮಳೆ ಸುರಿಯುವುದು,” ಎಂದು ಪ್ರಕಟಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:22
7 ತಿಳಿವುಗಳ ಹೋಲಿಕೆ  

ಮತ್ತು ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆನೇಕಲ್ಲಿನ ಮಳೆ ಸುರಿಯಿತು; ಒಂದೊಂದು ಕಲ್ಲು ಹೆಚ್ಚುಕಡಿಮೆ ನಾಲ್ಕುಮಣ ತೂಕವಾಗಿತ್ತು. ಆ ಆನೇಕಲ್ಲಿನ ಮಳೆಯ ಕಾಟವು ಬಹಳ ಹೆಚ್ಚಾಗಿದ್ದದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು ದೇವರನ್ನು ದೂಷಿಸಿದರು.


ತರುವಾಯ ಯೆಹೋವನು ಮೋಶೆಯ ಸಂಗಡ ಮಾತಾಡಿ - ನೀನು ಆರೋನನಿಗೆ - ನಿನ್ನ ಕೋಲನ್ನು ಚಾಚಿ ಭೂವಿುಯ ಧೂಳನ್ನು ಹೊಡೆ; ಹೊಡೆಯಲು ಐಗುಪ್ತ ದೇಶದಲ್ಲೆಲ್ಲಾ ಧೂಳು ಹೇನುಗಳಾಗುವದು ಎಂದು ಹೇಳು ಅಂದನು.


ಯೆಹೋವನು ಮೋಶೆಯ ಸಂಗಡ ಮಾತಾಡಿ - ನೀನು ಆರೋನನಿಗೆ - ನೀನು ಕೋಲನ್ನು ಹಿಡಿದುಕೊಂಡು ಹೊಳೆ ಕಾಲುವೆ ಕೆರೆ ಇವುಗಳ ಮೇಲೆ ಕೈಚಾಚು; ಆಗ ಐಗುಪ್ತದೇಶದ ಮೇಲೆಲ್ಲಾ ಕಪ್ಪೆಗಳು ಬರುವವು ಎಂದು ಹೇಳಬೇಕು ಅಂದನು.


ಯೆಹೋವನು ಮೋಶೆಯ ಸಂಗಡ ಮಾತಾಡಿ - ನೀನು ಆರೋನನಿಗೆ - ನಿನ್ನ ಕೊಲನ್ನು ತೆಗೆದುಕೊಂಡು ಐಗುಪ್ತ ದೇಶದಲ್ಲಿರುವ ಹೊಳೆ ಕಾಲುವೆ ಕೆರೆ ಕೊಳ ಮೊದಲಾದ ನೀರಿರುವ ಎಲ್ಲಾ ಸ್ಥಳಗಳ ಮೇಲೆ ಅದನ್ನು ಚಾಚು ಎಂದು ಹೇಳಬೇಕು; ಅವನು ಚಾಚುವಾಗ ಆ ನೀರೆಲ್ಲಾ ರಕ್ತವಾಗುವದು; ಐಗುಪ್ತ ದೇಶದಲ್ಲೆಲ್ಲಾ ಮರದ ಪಾತ್ರೆಗಳಲ್ಲಿಯೂ ಕಲ್ಲಿನ ಪಾತ್ರೆಗಳಲ್ಲಿಯೂ ಇರುವ ನೀರೂ ರಕ್ತವಾಗುವದು ಅಂದನು.


ಯಾರು ಯೆಹೋವನ ಮಾತನ್ನು ಮನಸ್ಸಿಗೆ ತೆಗೆದುಕೊಳ್ಳಲಿಲ್ಲವೋ ಅವರು ತಮ್ಮ ಆಳುಗಳನ್ನೂ ಪಶುಗಳನ್ನೂ ಅಡವಿಯಲ್ಲೇ ಬಿಟ್ಟರು.


ತರುವಾಯ ಯೆಹೋವನು ಮೋಶೆಗೆ - ಆಕಾಶಕ್ಕೆ ನಿನ್ನ ಕೈ ಚಾಚು; ಆಗ ಐಗುಪ್ತದೇಶದಲ್ಲೆಲ್ಲಾ ಕತ್ತಲುಂಟಾಗುವದು; ಆ ಕತ್ತಲಿನಿಂದ ಜನರು ತಡವರಿಸುತ್ತಾ ನಡೆಯುವರೆಂದು ಹೇಳಿದನು.


ಅವರು ಇಸ್ರಾಯೇಲ್ಯರಿಗೆ ಬೆಂಗೊಟ್ಟು ಬೇತ್‍ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ಮುಟ್ಟುವವರೆಗೂ ಯೆಹೋವನು ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿ ಅನೇಕರನ್ನು ಸಾಯಿಸಿದನು. ಇಸ್ರಾಯೇಲ್ಯರ ಕತ್ತಿಯಿಂದ ಸಂಹೃತರಾದವರಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚು ಮಂದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು