Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 2:17 - ಕನ್ನಡ ಸತ್ಯವೇದವು J.V. (BSI)

17 ನಾನು ನಿಮ್ಮ ಕೈದುಡಿತದ ಫಲವನ್ನೆಲ್ಲಾ ಆನೆಕಲ್ಲು, ಕಾಡಿಗೆ, ಬಿಸಿಗಾಳಿ, ಇವುಗಳಿಂದ ಹಾಳು ಮಾಡಿ ನಿಮ್ಮನ್ನು ಬಾಧಿಸಿದರೂ ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ನಿಮ್ಮ ದುಡಿತದ ಫಲವನ್ನೆಲ್ಲಾ ಆನೆಕಲ್ಲು ಮಳೆಯಿಂದಲೂ, ಬಿಸಿಗಾಳಿಗೂ ಹಾಳುಮಾಡಿ ನಿಮ್ಮನ್ನು ಬಾಧಿಸಿದರೂ, ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಾನು ನಿಮ್ಮ ದುಡಿಮೆಯ ಫಲವನ್ನು ಆನೆಕಲ್ಲು, ಬೂಷ್ಟು, ಬಿಸಿಗಾಳಿ - ಇವುಗಳಿಂದ ಹಾಳುಮಾಡಿ ನಿಮ್ಮನ್ನು ಬಾಧಿಸಿದೆನು. ಆದರೂ ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ, ಇದನ್ನು ನೆನಪಿನಲ್ಲಿಡಿ. ಇದು ಸರ್ವೇಶ್ವರನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯಾಕೆ ಹೀಗಾಯಿತು? ಯಾಕೆಂದರೆ ನಾನು ನಿಮ್ಮನ್ನು ಶಿಕ್ಷಿಸಿದೆನು. ನೀವು ನೆಟ್ಟ ಮರಗಳನ್ನು ನಾಶಮಾಡಲು ನಾನು ರೋಗವನ್ನು ಕಳುಹಿಸಿದೆನು. ನಿಮ್ಮ ಕೈಕೆಲಸವನ್ನು ಹಾಳುಮಾಡಲು ನಾನು ಆಲಿಕಲ್ಲಿನ ಮಳೆಯನ್ನು ಕಳುಹಿಸಿದೆನು. ನಾನು ಇಷ್ಟೆಲ್ಲಾ ಮಾಡಿದರೂ ನೀವು ಯಾರೂ ನನ್ನ ಬಳಿಗೆ ಬರಲಿಲ್ಲ.’ ಇದು ಯೆಹೋವನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾನು ನಿಮ್ಮ ಕೈ ದುಡಿತಗಳನ್ನೆಲ್ಲಾ ಬೂಜಿನಿಂದಲೂ ಉರಿಗಾಳಿಯಿಂದಲೂ ಕಲ್ಮಳೆಯಿಂದಲೂ ಹಾಳುಮಾಡಿದೆನು. ಆದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 2:17
32 ತಿಳಿವುಗಳ ಹೋಲಿಕೆ  

ಆತನು ನಿಮ್ಮನ್ನು ಕ್ಷಯರೋಗ ಚಳಿಜ್ವರ ಉರಿತ ಉಷ್ಣಜ್ವರಗಳಿಂದಲೂ ದೇಶವನ್ನು ಕ್ಷಾಮದಿಂದಲೂ ಬೆಳೆಯನ್ನು ಕಾಡಿಗೆ ಬಿಸಿಗಾಳಿಗಳಿಂದಲೂ ಬಾಧಿಸಲಾಗಿ ನೀವು ಸಾಯುವ ತನಕ ಇವು ನಿಮ್ಮನ್ನು ಬೆನ್ಹತ್ತುವವು.


ದೇಶ, ಬೆಟ್ಟ, ಧಾನ್ಯ, ದ್ರಾಕ್ಷಾರಸ, ಎಣ್ಣೆ, ಭೂವಿುಯ ಉತ್ಪತ್ತಿ, ಮನುಷ್ಯ, ಪಶು, ನಾನಾ ಕೈದುಡಿತ, ಇವುಗಳಿಗೆಲ್ಲಾ ಹಾಳುದೆಶೆ ತಂದಿದ್ದೇನೆ.


ನೀವು ಬಹು ಬೆಳೆಯನ್ನು ನಿರೀಕ್ಷಿಸಿದಿರಿ, ಆಹಾ, ಸ್ವಲ್ಪ ಮಾತ್ರ ಸಿಕ್ಕಿತು; ನೀವು ಮನೆಗೆ ತೆಗೆದುಕೊಂಡು ಬಂದಾಗ ನಾನು ಅದರ ಮೇಲೆ ಉಸುರುಬಿಟ್ಟೆನು. ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇದಕ್ಕೆಲ್ಲಾ ಕಾರಣವೇನು? ನನ್ನ ಆಲಯವು ಹಾಳುಬಿದ್ದಿದೆ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನತನ್ನ ಮನೆಯ ಕೆಲಸಕ್ಕೆ ತವಕಪಡುತ್ತಿದ್ದಾನೆ, ಇದೇ ಕಾರಣ.


ದೇಶಕ್ಕೆ ಕ್ಷಾಮ, ಘೋರವ್ಯಾಧಿ, ಬಿಸಿಗಾಳಿ, ಬೂದಿ, ವಿುಡಿತೆ, ಜಿಟ್ಟೇಹುಳ, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಅಂತು ಯಾವ ಉಪದ್ರವದಿಂದಾಗಲಿ


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ಪಶ್ಚಾತ್ತಾಪಪಡಲಿಲ್ಲ, ಸಂಹರಿಸಿದರೂ ಶಿಕ್ಷಣಕ್ಕೆ ಒಪ್ಪಲಿಲ್ಲ; ತಮ್ಮ ಮುಖವನ್ನು ಕಲ್ಲಿಗಿಂತ ಕಠಿಣಮಾಡಿಕೊಂಡು ತಿರುಗಿಕೊಳ್ಳಲೊಲ್ಲದೆ ಹೋಗಿದ್ದಾರೆ.


ದೇವರ ಕಡೆಗೆ ತಿರುಗಿಕೊಳ್ಳುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ದೇವರ ಕಡೆಗೆ ತಿರುಗಿಕೊಂಡು ತನ್ನ ಜಾರತ್ವವನ್ನು ಬಿಟ್ಟುಬಿಡುವದಕ್ಕೆ ಅವಳಿಗೆ ಇಷ್ಟವಿಲ್ಲ.


ನಿಮ್ಮ ಊರುಗಳಲ್ಲೆಲ್ಲಾ ನಿಮ್ಮ ಹಲ್ಲಿಗೆ ಏನೂ ಸಿಕ್ಕದಂತೆಯೂ ನಿಮ್ಮ ಸಕಲ ನಿವಾಸಗಳಲ್ಲಿ ಅನ್ನದ ಕೊರತೆಯಾಗುವ ಹಾಗೂ ಮಾಡಿದೆನು; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.


ನಮ್ಮ ಪಿತೃಗಳು ದುಡಿದದ್ದನ್ನೂ ಅವರ ದನಕುರಿಗಳನ್ನೂ ಅವರ ಗಂಡು ಹೆಣ್ಣು ಮಕ್ಕಳನ್ನೂ ಬಾಳ್ ದೇವತೆಯು ನಮ್ಮ ಬಾಲ್ಯಾರಭ್ಯ ನುಂಗುತ್ತಾ ಬಂದಿದೆ.


ಯೆಹೋವನು ತನ್ನ ಬಲಗೈ ಮೇಲೆ, ತನ್ನ ಭುಜಬಲದ ಮೇಲೆ, ಆಣೆಯಿಟ್ಟು - ನಿನ್ನ ದವಸವನ್ನು ನಿನ್ನ ಶತ್ರುಗಳ ಆಹಾರಕ್ಕೆ ಇನ್ನು ಕೊಡಲೇ ಕೊಡೆನು. ನೀನು ದುಡಿದ ದ್ರಾಕ್ಷಾರಸವನ್ನು ಅನ್ಯರು ಕುಡಿಯುವದೇ ಇಲ್ಲ;


ಆಗ ಆತನು ಅವರ ಮೇಲೆ ತನ್ನ ರೋಷಾಗ್ನಿಯನ್ನೂ ಯುದ್ಧದ ರೌದ್ರವನ್ನೂ ಸುರಿಸಿದನು. ಎಲ್ಲಾ ಕಡೆಯಿಂದಲೂ ಅವರಿಗೆ ಉರಿಹತ್ತಿತು, ಆದರೆ ಅವರು ತಿಳಿಯಲಿಲ್ಲ; ದಹಿಸಿತು, ಲಕ್ಷ್ಯಕ್ಕೆ ತರಲಿಲ್ಲ.


ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಆಶಾಭಂಗಪಟ್ಟು ಕಳವಳಗೊಂಡರು; ಅವರು ಹೊಲದ ಕಾಯಿಪಲ್ಯಕ್ಕೂ ಎಳೆಗರಿಕೆಗೂ ಮಾಳಿಗೆಯ ಮೇಲಣ ಹುಲ್ಲಿಗೂ ಹೊಡೆಹಾಯುವದಕ್ಕಿಂತ ಮೊದಲೇ [ಒಣಗಿ ಹೋದ] ಪೈರಿಗೂ ಸಮಾನರಾದರು.


ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ.


ಅವರ ಬೆಳೆಗಳನ್ನು ಜಿಟ್ಟೆಹುಳಗಳಿಗೂ ಕಷ್ಟಫಲವನ್ನು ವಿುಡಿತೆಗಳಿಗೂ ಕೊಟ್ಟುಬಿಟ್ಟನು.


ಭ್ರಷ್ಟಹೃದಯವುಳ್ಳವರಾದರೋ ಸಿಟ್ಟುಗೊಂಡಿರುವರು, ಆತನು ಅವರನ್ನು ಬಂಧಿಸುವಾಗಲೂ [ಆತನಿಗೆ] ಮೊರೆಯಿಡುವದಿಲ್ಲ.


ಕಷ್ಟ ಬಂದಾಗ ಅರಸನಾದ ಆಹಾಜನು ಯೆಹೋವನಿಗೆ ಮತ್ತಷ್ಟು ದ್ರೋಹಿಯಾದನು.


ದೇಶಕ್ಕೆ ಕ್ಷಾಮ, ಘೋರವ್ಯಾದಿ, [ಬೆಳೆಗೆ] ಬಿಸಿಗಾಳಿ, ಬೂದಿ, ವಿುಡಿತೆ, ಜಿಟ್ಟೇಹುಳ, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ ಅಂತು ಯಾವ ಉಪದ್ರವದಿಂದಾಗಲಿ ವ್ಯಾಧಿಯಿಂದಾಗಲಿ ಬಾಧೆಯುಂಟಾಗುವಲ್ಲಿ


ದಾರಿಯಲ್ಲಿ ಅವರು ಒಂದು ಸ್ಥಳದಲ್ಲಿ ಇಳಿದುಕೊಂಡಾಗ ಅವರಲ್ಲಿ ಒಬ್ಬನು ತನ್ನ ಕತ್ತೆಗೆ ದಾಣಕೊಡಬೇಕೆಂದು ತನ್ನ ಚೀಲವನ್ನು ಬಿಚ್ಚಿದಾಗ ಅದರ ಬಾಯಲ್ಲೇ ತಾನು ತಂದಿದ್ದ ಹಣವನ್ನು ಕಂಡನು.


ಯೋಸೇಫನು ದ್ವಿಭಾಷಿಯ ಮುಖಾಂತರ ಅವರ ಸಂಗಡ ಮಾತಾಡಿದದರಿಂದ, ಅವರು ತಮ್ಮ ಮಾತು ಅವನಿಗೆ ಗೊತ್ತಾಗುವದೆಂದು ನೆನಸಲೇ ಇಲ್ಲ.


ಐಗುಪ್ತದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರಿಸುವವನು ಯೋಸೇಫನೇ. ಹೀಗಿರುವದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.


ಆಹಾ, ಕರ್ತನು ಒಬ್ಬ ಮಹಾ ಬಲಿಷ್ಠನನ್ನು ನೇವಿುಸಿದ್ದಾನೆ; ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ ನಾಶಕವಾದ ಬಿರುಗಾಳಿಯೋಪಾದಿಯಲ್ಲಿಯೂ ಮುಣುಗಿಸುವ ಅತಿಧಾರಾವೃಷ್ಟಿಯ ಹಾಗೂ ಬಲಾತ್ಕಾರದಿಂದ [ಆ ಪಟ್ಟಣವನ್ನು] ನೆಲಕ್ಕೆ ಬೀಳಿಸುವನು.


ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ; ನೀನು ಧನ್ಯನು, ನಿನಗೆ ಶುಭವಿರುವದು.


ನೀವು ಬಿತ್ತಿದ ಬೀಜವು ಬಹಳ, ತಂದ ಫಲವು ಸ್ವಲ್ಪ; ತಿನ್ನುತ್ತೀರಿ, ತೃಪ್ತಿಯಾಗದು, ಕುಡಿಯುತ್ತೀರಿ, ಆನಂದವಾಗದು; ಹೊದಿಯುತ್ತೀರಿ, ಬೆಚ್ಚಗಾಗದು; ಸಂಬಳಗಾರನು ಸಂಬಳಹಾಕುವ ಚೀಲವು ತೂತಿನದು.


ಆ ಕಾಲದಲ್ಲೆಲ್ಲಾ ಒಬ್ಬನು ಇಪ್ಪತ್ತು ಸೇರಿನ ಮೆದೆಗೆ ಬಂದಾಗ ಹತ್ತು ಸೇರು ಧಾನ್ಯ ಮಾತ್ರ ಸಿಕ್ಕುತ್ತಿತ್ತಲ್ಲವೇ; ಐವತ್ತು ಸೇರು ದ್ರಾಕ್ಷಾರಸವನ್ನು ಮೊಗೆಯಬೇಕೆಂದು ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆಯುತ್ತಿತ್ತಷ್ಟೆ.


ನುಂಗುವ ಹುಳವನ್ನು ನಾನು ನಿಮಗಾಗಿ ತಡೆಯುವೆನು, ಅದು ನಿಮ್ಮ ಭೂವಿುಯ ಫಲವನ್ನು ನಾಶಮಾಡದು; ನಿಮ್ಮ ದ್ರಾಕ್ಷೆಯ ಹಣ್ಣು ತೋಟದಲ್ಲಿ ಉದುರಿಹೋಗದು; ಇದು ಸೇನಾಧೀಶ್ವರ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು