Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 1:15 - ಕನ್ನಡ ಸತ್ಯವೇದವು J.V. (BSI)

15 ಆಹಾ, ಅವರನ್ನೆಲ್ಲಾ ತನ್ನ ಗಾಳದಿಂದ ಮೇಲಕ್ಕೆಳೆಯುತ್ತಾನೆ, ತನ್ನ ಬಲೆಯಿಂದ ಬಾಚುತ್ತಾನೆ, ತನ್ನ ಜಾಲದಲ್ಲಿ ಗುಡ್ಡೆ ಮಾಡುತ್ತಾನೆ; ಇದಕ್ಕೆ ಹಿಗ್ಗುತ್ತಾನೆ, ಹೆಚ್ಚಳಪಡುತ್ತಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಲಿದಾಡುತ್ತಾ ಶತ್ರುಗಳು ನಮ್ಮನ್ನು ಗಾಳಗಳಿಂದ ಹಿಡಿದು ತಮ್ಮ ಬಲೆಗಳಲ್ಲಿ ರಾಶಿ ರಾಶಿಯಾಗಿ ಬಾಚಿಕೊಂಡು ಹೋಗಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಈ ಕಾರಣ ಆ ಬಾಬಿಲೋನಿಯರು ಮಾನವರನ್ನು ಗಾಳದಿಂದ ಸೆಳೆದುಕೊಳ್ಳುತ್ತಾರೆ; ಬಲೆಯಿಂದ ಬಾಚಿಕೊಳ್ಳುತ್ತಾರೆ; ತಮ್ಮ ಜಾಲದಲ್ಲಿ ರಾಶಿಹಾಕಿಕೊಳ್ಳುತ್ತಾರೆ; ಹಿರಿಹಿರಿ ಹಿಗ್ಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವೆಲ್ಲವನ್ನು ಗಾಳ, ಬಲೆಗಳಿಂದ ವೈರಿಯು ಹಿಡಿಯುತ್ತಾನೆ. ಬಲೆಯಲ್ಲಿ ಅವುಗಳನ್ನು ವೈರಿಯು ಹಿಡಿದು ಎಳೆಯುವನು. ತಾನು ಹಿಡಿದನೆಂದು ವೈರಿಯು ಹರ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದುಷ್ಟ ವೈರಿಯು ಅವುಗಳನ್ನು ಗಾಳದಿಂದ ಎತ್ತಿ, ತನ್ನ ಬಲೆಯಿಂದ ಅವುಗಳನ್ನು ಹಿಡಿದು, ತನ್ನ ಜಾಲದಿಂದ ಅವುಗಳನ್ನು ಕೂಡಿಸಿಡುತ್ತಾನೆ. ಅವನು ಹಿಗ್ಗುತ್ತಾನೆ, ಸಂತೋಷಪಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 1:15
18 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ತನ್ನ ಪರಿಶುದ್ಧತ್ವದ ಮೇಲೆ ಆಣೆಯಿಟ್ಟು - ಇಗೋ, ನಿಮ್ಮನ್ನು ಕೊಂಡಿಗಳಿಂದಲೂ ನಿಮ್ಮಲ್ಲಿ ಉಳಿದವರನ್ನು ಮೀನುಗಾಳಗಳಿಂದಲೂ ಎಳೆದುಕೊಂಡು ಹೋಗುವ ದಿನಗಳು ನಿಮಗೆ ಬರುತ್ತವೆ ಎಂದು ಪ್ರಮಾಣ ಮಾಡಿದ್ದಾನೆ.


ಯೆಹೋವನು ಹೀಗನ್ನುತ್ತಾನೆ - ಇಗೋ, ನನ್ನ ಜನರನ್ನು ಹಿಡಿಯುವದಕ್ಕೆ ಬಹುಮಂದಿ ಬೆಸ್ತರನ್ನು ಕರೆಯಿಸುವೆನು; ಆಮೇಲೆ ಎಲ್ಲಾ ಬೆಟ್ಟಗುಡ್ಡಗಳಿಂದಲೂ ಬಂಡೆಗಳ ಸಂದುಗೊಂದುಗಳಿಂದಲೂ ಅವರನ್ನು ಹೊರಡಿಸಿ ಬೇಟೆಯಾಡುವದಕ್ಕೆ ಬಹುಜನ ಬೇಡರನ್ನು ಕರೆಯಿಸುವೆನು.


ಗವಿಯಲ್ಲಿ ಅಡಗಿಕೊಂಡಿರುವ ಸಿಂಹದಂತೆ ಅವನು ಮರೆಯಾಗಿ ಹೊಂಚಿಕೊಂಡಿರುವನು. ಅವನು ಬಲೆಯೊಡ್ಡಿ ಕಾದಿದ್ದು ಕುಗ್ಗಿದವನನ್ನು ಹಿಡಿದು ಎಳೆದುಕೊಂಡು ಹೋಗುತ್ತಾನೆ.


ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಪೀಡಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.


ಆದರೂ ನಮ್ಮ ವಿಷಯವಾಗಿ ಅವರು ಬೇಸರಗೊಳ್ಳಬಾರದು; ನೀನು ಸಮುದ್ರಕ್ಕೆ ಹೋಗಿ ಗಾಳಾ ಹಾಕಿ ಮೊದಲು ಸಿಕ್ಕುವ ಮೀನನ್ನು ಎತ್ತು; ಅದರ ಬಾಯಿ ತೆರೆದು ನೋಡಿದರೆ ಅದರಲ್ಲಿ ಒಂದು ರೂಪಾಯಿ ಸಿಕ್ಕುವದು; ಅದನ್ನು ತೆಗೆದುಕೊಂಡು ನಮ್ಮಿಬ್ಬರದಂತ ಹೇಳಿ ಅವರಿಗೆ ಕೊಡು ಎಂದು ಹೇಳಿದನು.


ಇಸ್ರಾಯೇಲ್ಯರ ಸ್ವಾಸ್ತ್ಯದ ನಾಶನಕ್ಕೆ ನೀನು ಹೇಗೆ ಸಂತೋಷಪಟ್ಟಿಯೋ ಹಾಗೆಯೇ ನಿನ್ನ ನಾಶನಕ್ಕೆ ಲೋಕವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೇಯೀರ್ ಬೆಟ್ಟವೇ, ನೀನು ಹಾಳಾಗುವಿ; ಹೌದು, ಎದೋಮ್ ಸೀಮೆಯೆಲ್ಲಾ ತೀರಾ ಹಾಳಾಗುವದು; ಆಗ ನಾನೇ ಯೆಹೋವನು ಎಂದು ವ್ಯಕ್ತವಾಗುವದು.


ನರಪುತ್ರನೇ, ತೂರು ಯೆರೂಸಲೇವಿುನ ವಿಷಯವಾಗಿ - ಅಹಹ, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ, ನನ್ನ ಕಡೆಗೆ ತೆರೆದುಬಿಟ್ಟಿದೆ ; ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಅಂದುಕೊಂಡದರಿಂದ


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಚಪ್ಪಾಳೆಹೊಡೆದು ಕಾಲಿನಿಂದ ನೆಲವನ್ನು ಬಡಿದು ಇಸ್ರಾಯೇಲ್ ದೇಶವನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಅದರ ಗತಿಗೆ ಹಿಗ್ಗಿಕೊಂಡದರಿಂದ


ನನ್ನ ಸ್ವಾಸ್ತ್ಯವನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುವವರೂ ಕಣತುಳಿಯುವ ಕಡಸಿನ ಹಾಗೆ ಕುಣಿದಾಡುವವರೂ ಕೊಬ್ಬಿದ ಕುದುರೆಗಳಂತೆ ಹೇಕರಿಸುವವರೂ ಆಗಿರುವದರಿಂದ


ಬೆಸ್ತರು ಪ್ರಲಾಪಿಸುವರು, ನದಿಯಲ್ಲಿ ಗಾಳಹಾಕುವವರು ಶೋಕಪಡುವರು, ನೀರಿನ ಮೇಲೆ ಬಲೆಬೀಸುವವರು ಕುಗ್ಗುವರು, ನಯವಾದ ನಾರಿನ ಕೆಲಸದವರೂ


ನನ್ನ ಜನರಲ್ಲಿ ದುಷ್ಟರು ಕಂಡು ಬಂದಿದ್ದಾರೆ; ಬೇಡರು ಹೊಂಚುವ ಹಾಗೆ ಹೊಂಚುಹಾಕುತ್ತಾರೆ; ಬೋನೊಡ್ಡಿ ಮನುಷ್ಯರನ್ನು ಹಿಡಿಯುತ್ತಾರೆ.


ಮನುಷ್ಯರನ್ನು ಸಮುದ್ರದ ಮೀನುಗಳ ಸ್ಥಿತಿಗೆ ಏಕೆ ತಂದಿದ್ದೀ, ನಾಯಕನಿಲ್ಲದ ಕ್ರಿವಿುಕೀಟಗಳ ಗತಿಗೆ ಏಕೆ ಬರಮಾಡಿದ್ದೀ?


ಅಲ್ಲದೆ ದ್ರಾಕ್ಷಾರಸವು ಮೋಸಕರವಾದ ಕಾರಣ ದುಷ್ಟನು ಮದವೇರಿದ್ದಾನೆ, ಸ್ವಸ್ಥಳದಲ್ಲಿ ನಿಲ್ಲನು; ಪಾತಾಳದ ಹಾಗೆ ಅತ್ಯಾಶೆಪಡುತ್ತಾನೆ, ಮೃತ್ಯುವಿನಂತಿದ್ದಾನೆ, ತೃಪ್ತಿಯೇ ಇಲ್ಲ; ಸಕಲ ಜನಗಳನ್ನು ಎಳೆದುಕೊಳ್ಳುತ್ತಾನೆ, ಸಮಸ್ತ ಜನಾಂಗಗಳನ್ನು ರಾಶಿಮಾಡಿಕೊಳ್ಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು