Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 2:5 - ಕನ್ನಡ ಸತ್ಯವೇದವು J.V. (BSI)

5 ಅಲ್ಲದೆ ದ್ರಾಕ್ಷಾರಸವು ಮೋಸಕರವಾದ ಕಾರಣ ದುಷ್ಟನು ಮದವೇರಿದ್ದಾನೆ, ಸ್ವಸ್ಥಳದಲ್ಲಿ ನಿಲ್ಲನು; ಪಾತಾಳದ ಹಾಗೆ ಅತ್ಯಾಶೆಪಡುತ್ತಾನೆ, ಮೃತ್ಯುವಿನಂತಿದ್ದಾನೆ, ತೃಪ್ತಿಯೇ ಇಲ್ಲ; ಸಕಲ ಜನಗಳನ್ನು ಎಳೆದುಕೊಳ್ಳುತ್ತಾನೆ, ಸಮಸ್ತ ಜನಾಂಗಗಳನ್ನು ರಾಶಿಮಾಡಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಲ್ಲದೆ ಮದ್ಯಪಾನವು ಮೋಸಕರವಾದ ಕಾರಣ ದುಷ್ಟನನ್ನು ಮದವೇರಿಸುವುದು, ಸ್ವಸ್ಥಳದಲ್ಲಿ ನಿಲ್ಲಲು ಬಿಡುವುದಿಲ್ಲ; ಪಾತಾಳದಷ್ಟು ಅತಿ ಆಶೆಗೆ ಪ್ರೆರೇಪಿಸಿ ಮೃತ್ಯುವಿನಂತೆ ಅತೃಪ್ತನಾಗಿ ಜೀವಿಸುವನು. ಯೆಹೋವನ ಒಡಂಬಡಿಕೆಯ ವಿರುದ್ಧ ಜೀವಿಸುವವರನ್ನು ತನ್ನ ಕಡೆಗೆ ಆಕರ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಐಶ್ವರ್ಯ ಮೋಸಕರ, ಮದವೇರಿದವನು ಮತ್ತನಾದವನಂತೆ ಅಸ್ಥಿರ. ಅವನ ಅತಿಯಾಸೆ ಪಾತಾಳದಷ್ಟು ವಿಶಾಲ. ಮೃತ್ಯುವಿನಂತೆ ಅವನಿಗೆ ತೃಪ್ತಿಯೇ ಇಲ್ಲ. ಸಕಲ ಜನಾಂಗಗಳನ್ನು ಬಲೆಯೊಳಗೆ ಎಳೆದುಕೊಳ್ಳುತ್ತಾನೆ. ಸಮಸ್ತ ಜನಾಂಗಗಳನ್ನು ರಾಶಿಮಾಡಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನು ಹೇಳಿದ್ದು: “ಒಬ್ಬನನ್ನು ದ್ರಾಕ್ಷಾರಸವು ಮೋಸಪಡಿಸಬಹುದು. ಅದೇ ರೀತಿಯಲ್ಲಿ ಬಲಿಷ್ಠನ ಗರ್ವವು ಅವನನ್ನು ಮೋಸಪಡಿಸಬಹುದು. ಆದರೆ ಅವನಿಗೆ ಸಮಾಧಾನ ಸಿಕ್ಕುವುದಿಲ್ಲ. ಅವನು ಮರಣದಂತಿರುವನು. ಅವನಿಗೆ ಯಾವಾಗಲೂ ಹೆಚ್ಚೆಚ್ಚು ಬೇಕು. ಮರಣದಂತೆ ಅವನಿಗೆ ತೃಪ್ತಿಯೇ ಇರದು. ಅವನು ಜನಾಂಗಗಳನ್ನು ಸೋಲಿಸುತ್ತಲೇ ಇರುವನು. ಆ ಜನರನ್ನು ತನ್ನ ಕೈದಿಗಳನ್ನಾಗಿ ಮಾಡುತ್ತಲೇ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇದಲ್ಲದೆ ದ್ರಾಕ್ಷಾರಸವು ಮೋಸಕರ. ಅವನು ಅಹಂಕಾರಿ, ಎಂದಿಗೂ ವಿಶ್ರಾಂತಿ ಹೊಂದನು. ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಳ್ಳುತ್ತಾನೆ. ಮರಣದ ಹಾಗಿದ್ದಾನೆ, ತೃಪ್ತಿಯಾಗುವುದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನರನ್ನು ತನ್ನ ಸೆರೆಯಾಳುಗಳಾಗಿ ಮಾಡಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 2:5
33 ತಿಳಿವುಗಳ ಹೋಲಿಕೆ  

ಪಾತಾಳಕ್ಕೂ ನಾಶಲೋಕಕ್ಕೂ ಹೇಗೆ ತೃಪ್ತಿಯಿಲ್ಲವೋ ಹಾಗೆ ಮನುಷ್ಯನ ಕಣ್ಣುಗಳಿಗೆ ತೃಪ್ತಿಯಿಲ್ಲ.


ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ; ಇವುಗಳಿಂದ ಓಲಾಡುವವನು ಜ್ಞಾನಿಯಲ್ಲ.


ಔತಣಕ್ಕೆ ಸಿದ್ಧಪಡಿಸಿಕೊಂಡು ಚಾಪೆಗಳನ್ನು ಹಾಸಿಕೊಂಡು ಉಂಡು ಕುಡಿಯುತ್ತಿದ್ದಾರಲ್ಲಾ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಬಳಿಯಿರಿ!


ಮೋವಾಬ್ಯರಿಗೆ ಬಹು ಸೊಕ್ಕೇರಿದೆ ಎಂಬ ಅವರ ಹೆಮ್ಮೆಯ ಸುದ್ದಿಯೂ ಅವರ ಅಹಂಕಾರದಂಭ ಗರ್ವೋದ್ರೇಕ ಇವುಗಳ ಸಮಾಚಾರವೂ ನಮ್ಮ ಕಿವಿಗೆ ಬಿದ್ದಿವೆ. ಅವರು ಕೊಚ್ಚಿಕೊಳ್ಳುವದೆಲ್ಲಾ ಬರೀ ಬುರುಡೆಯೇ.


ಅಯ್ಯೋ, ಮನೆಗೆ ಮನೆಯನ್ನೂ ಹೊಲಕ್ಕೆ ಹೊಲವನ್ನೂ ಸೇರಿಸಿಕೊಳ್ಳುತ್ತಾ ಬಂದು ಇತರರಿಗೆ ಸ್ವಲ್ಪ ಸ್ಥಳವನ್ನೂ ಬಿಡದೆ ದೇಶದ ಮಧ್ಯದಲ್ಲಿ ತಾವೇ ತಾವಾಗಿ ವಾಸಿಸುವವರ ಗತಿಯನ್ನು ಏನು ಹೇಳಲಿ!


ಸಾಮಾನ್ಯರ ಗರ್ವವು ಕುಗ್ಗುವದು, ಮುಖಂಡರ ಅಹಂಕಾರವೂ ತಗ್ಗುವದು, ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಬೆಳ್ಳಿಯನ್ನು ಆಶಿಸುವವನಿಗೆ ಎಷ್ಟು ಬೆಳ್ಳಿಯಿಂದಲೂ ತೃಪ್ತಿಯಾಗದು; ಸಮೃದ್ಧಿಯನ್ನು ಬಯಸುತ್ತಲೇ ಇರುವವನಿಗೆ ಆದಾಯವೆಷ್ಟಾದರೂ ಸಾಲದು. ಇದು ಸಹ ವ್ಯರ್ಥ.


ಯೆಹೋವನು ಮಹೋನ್ನತನು; ಆದರೂ ದೀನರನ್ನು ಲಕ್ಷಿಸುತ್ತಾನೆ; ಗರ್ವಿಷ್ಠರನ್ನು ದೂರದಿಂದಲೇ ಗುರುತು ಹಿಡಿಯುತ್ತಾನೆ.


ನೀನು ಎದೋಮ್ಯರನ್ನು ಸೋಲಿಸಿದದರಿಂದ ಬಹಳವಾಗಿ ಉಬ್ಬಿಕೊಂಡಿದ್ದೀ; ಆ ಕೀರ್ತಿಯು ಸಾಕೆಂದು ನೆನಸಿ ಸುಮ್ಮನೆ ಮನೆಯಲ್ಲಿ ಕೂತುಕೋ. ನನ್ನನ್ನು ಕೆಣಕಿ ನಿನ್ನ ಮೇಲೆಯೂ ನಿನ್ನ ರಾಜ್ಯದ ಮೇಲೆಯೂ ಯಾಕೆ ಕೇಡನ್ನು ಬರಮಾಡಿಕೊಳ್ಳುತ್ತೀ ಎಂದು ಉತ್ತರಕೊಟ್ಟು ಕಳುಹಿಸಿದನು.


ಆತನು ನಮ್ಮ ಮೇಲೆ ಅತಿಶಯವಾದ ಕೃಪೆಯನ್ನು ಇಡುತ್ತಾನೆ. ಆದುದರಿಂದ - ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ ಎಂದು ಶಾಸ್ತ್ರವು ಹೇಳುತ್ತದೆ.


ಇದಲ್ಲದೆ ನಾನು ನಿಮಗೆ ಆಜ್ಞೆಕೊಟ್ಟ ಪ್ರಕಾರ ನೀವು ಮತ್ತೊಬ್ಬರ ಕಾರ್ಯದಲ್ಲಿ ತಲೆಹಾಕದೆ ಸುಮ್ಮಗಿದ್ದು ಸ್ವಂತ ಕಾರ್ಯವನ್ನೇ ನಡಿಸಿಕೊಂಡು ಕೈಯಾರೆ ಕೆಲಸಮಾಡುವದೇ ಮಾನವೆಂದೆಣಿಸಿರಿ.


ಇಗೋ, ಆ ದುಷ್ಟನ ಅಂತರಾತ್ಮವು ಉಬ್ಬಿಕೊಂಡಿದೆ, ಯಥಾರ್ಥವಲ್ಲ; ನೀತಿವಂತನೋ ತನ್ನ ನಂಬಿಕೆಯಿಂದಲೇ ಬದುಕುವನು.


ಅವರು ಉರಿಗೊಂಡಿರುವಾಗ ನಾನು ಅವರಿಗೆ ಔತಣವನ್ನು ಸಿದ್ಧಪಡಿಸಿ ಅವರು ಅದರಿಂದ ಸಂಭ್ರಮಪಟ್ಟು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವಂತೆ ತಲೆಗೇರ ಕುಡಿಸುವೆನು. ಇದು ಯೆಹೋವನ ನುಡಿ.


ಬಿಲ್ಲನ್ನು ಬೊಗ್ಗಿಸಿ ಬಾಣಬಿಡುವವರನ್ನೆಲ್ಲಾ ಬಾಬೆಲಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲ್ಯರ ಸದಮಲಸ್ವಾವಿುಯಾದ ಯೆಹೋವನನ್ನು ಅಸಡ್ಡೆಮಾಡಿತಲ್ಲಾ.


ಇಗೋ, ನಾನು ಬಡಗಣ ಜನಾಂಗಗಳನ್ನೆಲ್ಲಾ ಕರೆಯಿಸಿ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡಿ ಇವರೆಲ್ಲರನ್ನು ಈ ದೇಶದ ಮೇಲೂ ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ ಅವುಗಳನ್ನು ತುಂಬಾ ಹಾಳುಗೈದು ಬೆರಗಿನ ಸಿಳ್ಳಿಗೆ ಗುರಿಪಡಿಸಿ ನಿತ್ಯನಾಶನಕ್ಕೆ ಈಡುಮಾಡುವೆನು.


ಧರ್ಮನಿಂದಕನೆನಿಸಿಕೊಳ್ಳುವ ಸೊಕ್ಕೇರಿದ ಅಹಂಕಾರಿಯು ಗರ್ವಮದದಿಂದ ಪ್ರವರ್ತಿಸುವನು.


ಮತ್ತು ಪಾತಾಳವು ಹೆಚ್ಚು ಆತುರದಿಂದ ಅಪಾರವಾಗಿ ಬಾಯಿತೆರೆಯಲು ಅವರ ಮಹಿಮೆ, ಕೋಲಾಹಲ, ಗದ್ದಲ, ಉಲ್ಲಾಸ ಇವೆಲ್ಲಾ [ಅದರೊಳಗೆ] ಬಿದ್ದುಹೋಗುವವು.


ಆಳುತ್ತಿದ್ದ ದುಷ್ಟರ ಕೋಲನ್ನೂ ರಾಜರ ದಂಡವನ್ನೂ ಯೆಹೋವನು ಮುರಿದುಬಿಟ್ಟನು.


ಆಹಾ, ಅವರನ್ನೆಲ್ಲಾ ತನ್ನ ಗಾಳದಿಂದ ಮೇಲಕ್ಕೆಳೆಯುತ್ತಾನೆ, ತನ್ನ ಬಲೆಯಿಂದ ಬಾಚುತ್ತಾನೆ, ತನ್ನ ಜಾಲದಲ್ಲಿ ಗುಡ್ಡೆ ಮಾಡುತ್ತಾನೆ; ಇದಕ್ಕೆ ಹಿಗ್ಗುತ್ತಾನೆ, ಹೆಚ್ಚಳಪಡುತ್ತಾನೆ;


ಹೀಗಿರಲು ತನ್ನ ಬಲೆಗೆ ಸಿಕ್ಕಿದ್ದನ್ನು ಅವನು ನಿತ್ಯವೂ ಈಚೆಗೆ ಸುರಿಯುತ್ತಿರಲೋ, ಜನಾಂಗಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು