Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 3:13 - ಕನ್ನಡ ಸತ್ಯವೇದವು J.V. (BSI)

13 ನಿನ್ನ ಪ್ರಜೆಯ ರಕ್ಷಣೆಗೆ, ನಿನ್ನ ಅಭಿಷಿಕ್ತನ ಉದ್ಧಾರಕ್ಕೆ ಹೊರಟಿದ್ದೀ; ತಲೆಯನ್ನು ಕುತ್ತಿಗೆಯ ಬುಡದವರೆಗೆ ಹೊಡೆದುಹಾಕಿದ ಹಾಗೆ ತಳಾದಿಯು ಬೈಲಾಗುವಷ್ಟರ ಮಟ್ಟಿಗೆ ನೀನು ದುಷ್ಟನ ಮನೆಯನ್ನು ಹೊಡೆದಿದ್ದೀ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿನ್ನ ಅಭಿಷಿಕ್ತನಿಗಾಗಿಯೂ ಮತ್ತು ನಿನ್ನ ಪ್ರಜೆಯ ರಕ್ಷಣೆಗಾಗಿಯೂ ನೀನು ಯಾವಾಗಲೂ ಮುಂದಾಗಿರುತ್ತಿ; ದುಷ್ಟರ ಮನೆಯ ಮುಖ್ಯಸ್ಥರನ್ನು ಸದೆಬಡೆದು ಅವರ ಕುಟುಂಬಗಳನ್ನು ಬುಡಸಮೇತವಾಗಿ ಜನರ ಮುಂದೆ ಬೆತ್ತಲೆಯಾಗಿ ಮಾಡುವಿ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹೊರಟಿರುವೆ ನಿನ್ನ ಪ್ರಜೆಗಳ ರಕ್ಷಣೆಗೆ ನಿನ್ನ ಅಭಿಷಿಕ್ತನ ಜೀವೋದ್ಧಾರಕೆ. ಬಡಿದುಹಾಕಿರುವೆ ದುರುಳನ ಬುರುಡೆಯನು ನೆಲಸಮಮಾಡಿರುವೆ ಅವನ ಮನೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿನ್ನ ಜನರನ್ನು ರಕ್ಷಿಸಲು ನೀನು ಬಂದೆ. ನೀನು ಆರಿಸಿದ್ದ ರಾಜನನ್ನು ಜಯದ ಕಡೆಗೆ ನಡಿಸುವುದಕ್ಕಾಗಿ ಬಂದೆ. ಪ್ರತೀ ದುಷ್ಟ ಕುಟುಂಬದ ನಾಯಕನನ್ನು ನೀನು ಸಂಹರಿಸಿದೆ. ಭೂಲೋಕದಲ್ಲಿದ್ದ ಪ್ರಮುಖನಿಂದಿಡಿದು ಪ್ರಮುಖನಲ್ಲದವನವರೆಗೂ ನೀನು ಹತಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿನ್ನ ಜನರ ರಕ್ಷಣೆಗೋಸ್ಕರವೂ, ನಿನ್ನ ಅಭಿಷಿಕ್ತನ ರಕ್ಷಣೆಗೋಸ್ಕರವೂ ಹೊರಗೆ ಹೊರಟು ಬಂದಿ. ದುಷ್ಟ ದೇಶದ ನಾಯಕನನ್ನು ನೀನು ತುಳಿದುಬಿಟ್ಟಿ. ತಲೆಯಿಂದ ಪಾದದವರೆಗೆ ಅವನನ್ನು ಬೆತ್ತಲೆ ಮಾಡಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 3:13
26 ತಿಳಿವುಗಳ ಹೋಲಿಕೆ  

ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ ಹೆಣಗಳಿಂದ ಅದನ್ನು ತುಂಬಿಸುವನು.


ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು, ನನ್ನ ಪ್ರವಾದಿಗಳಿಗೆ ಯಾವ ಕೇಡನ್ನೂ ಮಾಡಬಾರದು ಎಂದು ಹೇಳಿದನು.


ಆಗ ಆತನು ತನ್ನ ಸೇವಕನಾದ ಮೋಶೆಯನ್ನೂ ತಾನು ಆರಿಸಿಕೊಂಡ ಆರೋನನನ್ನೂ ಕಳುಹಿಸಿದನು.


ಆತನ ಯಾಜಕರಲ್ಲಿ ಮೋಶೆ ಆರೋನರೂ ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿಕೊಂಡಾಗೆಲ್ಲಾ ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು.


ಕುರುಬನು ಕುರಿಹಿಂಡನ್ನು ಹೇಗೋ ಹಾಗೆ ನೀನು ಮೋಶೆ ಆರೋನರ ಮುಖಾಂತರ ನಿನ್ನ ಪ್ರಜೆಯನ್ನು ಕರೆದೊಯ್ದಿ.


ದೇವರೇ, ನೀನು ನಿನ್ನ ಪ್ರಜೆಯ ಮುಂಗಡೆಯಲ್ಲಿ ಹೊರಟು ಅರಣ್ಯಮಾರ್ಗವಾಗಿ ಪಯಣಮಾಡುತ್ತಾ ಬರುವಾಗ ಸೆಲಾ.


ಯೆಹೋವನು ತನ್ನ ಜನರಿಗೆ ಬಲವೂ ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ.


ಯೆಹೋವನು ತಾನು ಅಭಿಷೇಕಿಸಿದ ಅರಸನಿಗೆ ಜಯವನ್ನು ಅನುಗ್ರಹಿಸುವನೆಂದು ಈಗ ನನಗೆ ಗೊತ್ತಾಯಿತು. ಆತನು ತನ್ನ ಪವಿತ್ರಲೋಕದಿಂದ ಅವನ ಪ್ರಾರ್ಥನೆಗೆ ಸದುತ್ತರವನ್ನು ಕೊಡುವನು; ತನ್ನ ಭುಜಬಲದಿಂದ ಅವನಿಗೆ ವಿಜಯವನ್ನುಂಟು ಮಾಡುವನು.


ಮತ್ತು ಯೆಹೋಶುವನು ಆ ಬೇರೆ ಅರಸರನ್ನೂ ಅವರ ಎಲ್ಲಾ ಪಟ್ಟಣಗಳನ್ನೂ ಹಿಡಿದು ಯೆಹೋವನ ಸೇವಕನಾದ ಮೋಶೆಯ ಆಜ್ಞೆಯಂತೆ ಅವರನ್ನು ಕತ್ತಿಯಿಂದ ಸಂಹರಿಸಿದನು.


ಯೆಹೋವನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದನು. ಇವರು ಅವರನ್ನು ದೊಡ್ಡ ಚೀದೋನ್, ವಿುಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ವಿುಚ್ಪೆಯ ಬೈಲಿನವರೆಗೂ ಹಿಂದಟ್ಟಿ ಹೊಡೆದರು. ಒಬ್ಬನಾದರೂ ಉಳಿಯದಂತೆ ಎಲ್ಲರನ್ನೂ ಸಂಹರಿಸಿದರು.


ಇಸ್ರಾಯೇಲ್ ದೇವರಾದ ಯೆಹೋವನು ಅವರ ಪಕ್ಷದಲ್ಲಿ ಯುದ್ಧಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿಯೇ ವಶಮಾಡಿಕೊಂಡನು.


ಅವರನ್ನು ತನ್ನ ಬಳಿಗೆ ತಂದಮೇಲೆ ಯೆಹೋಶುವನು ಎಲ್ಲಾ ಇಸ್ರಾಯೇಲ್ಯರನ್ನು ಕರಿಸಿ ತನ್ನ ಜೊತೆಯಲ್ಲಿ ಬಂದಿದ್ದ ಸೈನ್ಯಾಧಿಪತಿಗಳಿಗೆ - ಹತ್ತಿರ ಬಂದು ಈ ಅರಸರ ಕೊರಳಿನ ಮೇಲೆ ಪಾದಗಳನ್ನಿಡಿರಿ ಎಂದು ಹೇಳಲು ಅವರು ಹತ್ತಿರ ಬಂದು ಅವರ ಕುತ್ತಿಗೆಯ ಮೇಲೆ ಕಾಲಿಟ್ಟರು.


ಅವರು ಇಸ್ರಾಯೇಲ್ಯರಿಗೆ ಬೆಂಗೊಟ್ಟು ಬೇತ್‍ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ಮುಟ್ಟುವವರೆಗೂ ಯೆಹೋವನು ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿ ಅನೇಕರನ್ನು ಸಾಯಿಸಿದನು. ಇಸ್ರಾಯೇಲ್ಯರ ಕತ್ತಿಯಿಂದ ಸಂಹೃತರಾದವರಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚು ಮಂದಿ.


ಆಗ ಆತನ ಜನರು ಪುರಾತನವಾದ ಮೋಶೆಯ ಕಾಲವನ್ನು ಜ್ಞಾಪಕಮಾಡಿಕೊಂಡು ಹೀಗಂದರು - ತನ್ನ ಜನವೆಂಬ ಮಂದೆಯನ್ನು ಕುರುಬರ ಸಹಿತ ಸಮುದ್ರದೊಳಗಿಂದ ಮೇಲಕ್ಕೆ ಬರಮಾಡಿದಾತನು ಎಲ್ಲಿ?


ಅವನು ಹೋಗಿ ಅವರನ್ನು ಸೋಲಿಸಿ ಯೆಹೋವನು ಕಟ್ಟೆಯೊಡೆದ ಪ್ರವಾಹದಂತೆ ತನ್ನ ಶತ್ರುಗಳ ಮೇಲೆ ಬಿದ್ದು ಅವರನ್ನು ನನ್ನ ಕಣ್ಣ ಮುಂದೆಯೇ ನಾಶಮಾಡಿದ್ದಾನೆಂದು ಹೇಳಿ ಆ ಯುದ್ಧಸ್ಥಳಕ್ಕೆ ಬಾಳ್‍ಪೆರಾಚೀಮೆಂದು ಹೆಸರಿಟ್ಟನು.


ಯೆಹೋವನೇ, ಎದೋಮ್ಯರ ಹಾನಿಗಾಗಿ ಯೆರೂಸಲೇವಿುನ ನಾಶನದಿನವನ್ನು ನೆನಪುಮಾಡಿಕೋ. ಅವರು - ಅದನ್ನು ಹಾಳುಮಾಡಿರಿ, ಅಸ್ತಿವಾರಸಹಿತ ಹಾಳುಮಾಡಿರಿ ಎಂದು ಹೇಳಿದರಲ್ಲಾ.


ಆಹಾ, ನೀನು ಆಕಾಶವನ್ನು ಸೀಳಿ ಇಳಿದು ಬರಬಾರದೇ! ನಿನ್ನ ದರ್ಶನವು ಉಂಟಾಗಿ ಪರ್ವತಗಳು ಅಲುಗಿದರೆ ಎಷ್ಟೋ ಒಳ್ಳೇದು!


ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಹೀಗೆ ಕೆಡವಿ ನೆಲಸಮಮಾಡಿ ಅದರ ಅಸ್ತಿವಾರವನ್ನು ಬೈಲುಪಡಿಸುವೆನು; ಅದು ಬಿದ್ದು ಹೋಗುವದು, ಮತ್ತು ನೀವು ಅದರೊಳಗೆ ಸಿಕ್ಕಿಕೊಂಡು ನಾಶವಾಗುವಿರಿ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಕರ್ತನು ಯಜ್ಞವೇದಿಯ ಪಕ್ಕದಲ್ಲಿ ನಿಂತಿರುವದನ್ನು ಕಂಡೆನು; ಆತನು ಹೀಗೆ ಅಪ್ಪಣೆಕೊಟ್ಟನು - ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗಳನ್ನು ಬಲವಾಗಿ ಹೊಡೆ; ಅವುಗಳನ್ನು ಒಡೆದುಬಿಟ್ಟು ಎಲ್ಲರ ತಲೆಯ ಮೇಲೆ ಬೀಳಿಸು; ಉಳಿದವರನ್ನು ಖಡ್ಗದಿಂದ ಸಂಹರಿಸುವೆನು; ಅವರಲ್ಲಿ ಯಾರೂ ಓಡಿಹೋಗರು, ಯಾರೂ ತಪ್ಪಿಸಿಕೊಳ್ಳರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು