Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 10:2 - ಕನ್ನಡ ಸತ್ಯವೇದವು J.V. (BSI)

2 ಇಸ್ರಾಯೇಲ್ಯರ ಮನಸ್ಸು ನುಣುಚಿಕೊಳ್ಳುತ್ತದೆ; ಈಗ ದಂಡನೆಗೆ ಈಡಾಗಿದ್ದಾರೆ; ಯೆಹೋವನೇ ಅವರ ಯಜ್ಞವೇದಿಗಳನ್ನು ಮುರಿದುಬಿಡುವನು. ಅವರ ವಿಗ್ರಹಸ್ತಂಭಗಳನ್ನು ಹಾಳುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಸ್ರಾಯೇಲರ ಮನಸ್ಸು ನುಣುಚಿಕೊಳ್ಳುತ್ತದೆ; ಈಗ ದಂಡನೆಗೆ ಈಡಾಗಿದ್ದಾರೆ. ಯೆಹೋವನೇ ಅವರ ಯಜ್ಞವೇದಿಗಳನ್ನು ಮುರಿದುಬಿಡುವನು. ಅವರ ವಿಗ್ರಹ ಸ್ತಂಭಗಳನ್ನು ಹಾಳುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವರದು ವಂಚನೆಯ ಮನಸ್ಸು. ಈಗ ಅವರು ತಮ್ಮ ಪಾಪಕ್ಕೆ ತಕ್ಕ ದಂಡನೆಯನ್ನು ಅನುಭವಿಸಲೇಬೇಕು. ಸರ್ವೇಶ್ವರಸ್ವಾಮಿ ಅವರ ಯಜ್ಞವೇದಿಗಳನ್ನು ಕೆಡವುವರು. ಅವರ ಪೂಜಾಸ್ತಂಭಗಳನ್ನು ಒಡೆದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಇಸ್ರೇಲ್ ಜನರು ದೇವರನ್ನು ಮೋಸಪಡಿಸಲು ನೋಡಿದರು. ಆದರೆ ಈಗ ಅವರು ತಮ್ಮ ತಪ್ಪನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಯೆಹೋವನು ಅವರು ಯಜ್ಞವೇದಿಕೆಗಳನ್ನು ನಾಶಮಾಡುವನು. ಅವರ ಸ್ಮಾರಕಕಲ್ಲುಗಳನ್ನು ಆತನು ಪುಡಿ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರ ಹೃದಯವು ವಂಚಕವಾದದ್ದು. ಈಗ ಅವರು ಅಪರಾಧಗಳನ್ನು ಹೊರಬೇಕು. ಯೆಹೋವ ದೇವರು ಅವರ ಬಲಿಪೀಠಗಳನ್ನು ಕೆಡವಿ, ಅವರ ವಿಗ್ರಹಗಳನ್ನು ನಾಶಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 10:2
24 ತಿಳಿವುಗಳ ಹೋಲಿಕೆ  

ನಿನ್ನ ಮೂರ್ತಿಗಳನ್ನೂ ಕಲ್ಲುಕಂಬಗಳನ್ನೂ ನಿನ್ನಲ್ಲಿ ನಿಲ್ಲದಂತೆ ಒಡೆದುಹಾಕುವೆನು, ನಿನ್ನ ಕೈ ರೂಪಿಸಿದ್ದನ್ನು ಇನ್ನು ಪೂಜಿಸದಿರುವಿ.


ಎಲೀಯನು ಎಲ್ಲಾ ಜನರ ಹತ್ತಿರ ಹೋಗಿ ಅವರಿಗೆ - ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ? ಯೆಹೋವನು ದೇವರಾಗಿದ್ದರೆ ಆತನನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವದನ್ನು ಕಂಡು


ವ್ಯಭಿಚಾರಿಗಳು ನೀವು; ಇಹಲೋಕಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.


ಅವನು ಎರಡು ಮನಸ್ಸುಳ್ಳವನೂ ತನ್ನ ನಡತೆಯಲ್ಲೆಲ್ಲಾ ಚಂಚಲನೂ ಆಗಿದ್ದಾನೆ.


ಮಾಳಿಗೆಗಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆ ಪೂಜಿಸುವವರನ್ನೂ ಯೆಹೋವನ ಭಕ್ತರೆಂದು ಪ್ರತಿಜ್ಞೆಮಾಡಿಕೊಂಡು ಆರಾಧಿಸಿ ಮಲ್ಕಾಮನ ಮೇಲೆ ಆಣೆಯಿಡುವವರನ್ನೂ


ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಕೂಡ ಸೇವಿಸಲಾರಿರಿ ಅಂದನು.


ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಕೂಡ ಸೇವಿಸಲಾರಿರಿ.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬಾರವು; ಅಲ್ಲದೆ ಪ್ರವಾದಿಗಳನ್ನೂ ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು.


ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದದರಿಂದ ತನ್ನ ದೋಷಫಲವನ್ನು ಅನುಭವಿಸಲೇಬೇಕು; ಅದರ ಜನರು ಖಡ್ಗಹತರಾಗುವರು; ವೈರಿಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.


ಎಫ್ರಾಯೀಮು ಜನಾಂಗಗಳಲ್ಲಿ ಕಲೆತುಕೊಳುತ್ತದೆ; ಎಫ್ರಾಯೀಮು ತಿರುವಿಹಾಕದ ಚಪಾತಿ.


ಐಗುಪ್ತದೇಶದಲ್ಲಿರುವ ಸೂರ್ಯಪುರಿಯ ಸ್ತಂಭಗಳನ್ನು ಒಡೆದುಹಾಕಿ ಐಗುಪ್ತದ ದೇವಾಲಯಗಳನ್ನು ಬೆಂಕಿಯಿಂದ ಸುಟ್ಟುಬಿಡುವನು.


ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು; ಅವರ ಕಣ್ಣು ಕಾಣದಂತೆಯೂ ಹೃದಯ ಗ್ರಹಿಸದಂತೆಯೂ ಯೆಹೋವನು ಅಂಟು ಬಳಿದಿದ್ದಾನಲ್ಲಾ.


ಮುಂದಿನ ದಿನ ಬೆಳಿಗ್ಗೆ ನೋಡುವಾಗ ದಾಗೋನನ ತಲೆಯೂ ಕೈಗಳೂ ಕಡಿಯಲ್ಪಟ್ಟು ಹೊಸ್ತಲಿನ ಮೇಲೆ ಬಿದ್ದಿದ್ದವು; ಮುಂಡ ಮಾತ್ರ ಯೆಹೋವನ ಮಂಜೂಷದ ಮುಂದೆ ಬಿದ್ದಿತ್ತು;


ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಣ ಪ್ರೀತಿಯು ಅವನಲ್ಲಿಲ್ಲ.


ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹ, ಇವುಗಳಿಲ್ಲದೆ ಇಸ್ರಾಯೇಲ್ಯರು ಬಹು ದಿವಸ ತಾಳಿಕೊಂಡಿರುವರು;


ಗಿಲ್ಯಾದು ಅಧರ್ಮಮಯವೋ? ಅದು ಶೂನ್ಯದ ಗತಿಗೆ ಬರುವದು; ಗಿಲ್ಗಾಲಿನಲ್ಲಿ ಗೋಮೇಧವು ನಡೆಯುವದೋ? ಅಲ್ಲಿನ ಯಜ್ಞವೇದಿಗಳು ಹೊಲದ ನೇಗಿಲ ಗೆರೆಗಳಲ್ಲಿ ಕಲ್ಲುಕುಪ್ಪೆಗಳಾಗಿ ಸಿಕ್ಕುವವು.


ಅವರ ದೇವತೆಗಳನ್ನು ನೀವು ನಮಸ್ಕರಿಸಲೂಬಾರದು, ಪೂಜಿಸಲೂಬಾರದು; ಅವರ ಆಚರಣೆಗಳನ್ನು ಅನುಸರಿಸಲೇಬಾರದು. ಆ ಜನಗಳನ್ನು ನಿರ್ಮೂಲ ಮಾಡಿ ವಿಗ್ರಹಸ್ತಂಭಗಳನ್ನು ನಾಶನ ಮಾಡಬೇಕು.


ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದು ಹಾಕುವೆನು; ನಿಮ್ಮ ಬೊಂಬೆಗಳ ಮುಂಡಗಳ ಮೇಲೆ ನಿಮ್ಮ ಮುಂಡಗಳನ್ನು ಬೀಸಾಡುವೆನು; ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.


ಅಧರ್ಮಿಯ ಸಂಬಳವು ಜೊಳ್ಳು; ಧರ್ಮವನ್ನು ಬಿತ್ತುವವನ ಲಾಭವು ಗಟ್ಟಿ.


ಇಸ್ರಾಯೇಲ್ ವಂಶದವರೆಲ್ಲರೂ ತಮ್ಮ ಬೊಂಬೆಗಳ ನಿವಿುತ್ತ ನನ್ನನ್ನು ತೊರೆದದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲಿ ಸಿಕ್ಕಿಸಿ ಹಿಡಿಯುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು