Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 12:11 - ಕನ್ನಡ ಸತ್ಯವೇದವು J.V. (BSI)

11 ಗಿಲ್ಯಾದು ಅಧರ್ಮಮಯವೋ? ಅದು ಶೂನ್ಯದ ಗತಿಗೆ ಬರುವದು; ಗಿಲ್ಗಾಲಿನಲ್ಲಿ ಗೋಮೇಧವು ನಡೆಯುವದೋ? ಅಲ್ಲಿನ ಯಜ್ಞವೇದಿಗಳು ಹೊಲದ ನೇಗಿಲ ಗೆರೆಗಳಲ್ಲಿ ಕಲ್ಲುಕುಪ್ಪೆಗಳಾಗಿ ಸಿಕ್ಕುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಗಿಲ್ಯಾದು ಅಧರ್ಮಮಯವೋ? ಅದು ಶೂನ್ಯದ ಗತಿಗೆ ಬರುವುದು; ಗಿಲ್ಗಾಲಿನಲ್ಲಿ ಗೋಮೇಧವು ನಡೆಯುವುದೋ? ಅಲ್ಲಿನ ಯಜ್ಞವೇದಿಗಳು ಹೊಲದ ನೇಗಿಲ ಗೆರೆಗಳಲ್ಲಿ ಕಲ್ಲುಕುಪ್ಪೆಗಳಾಗಿ ಸಿಕ್ಕುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆದರೂ ಗಿಲ್ಯಾದಿನಲ್ಲಿ ಅಧರ್ಮ ನೆಲೆಗೊಂಡಿದೆ. ಅದಕ್ಕೆ ದುರ್ಗತಿ ಕಾದಿದೆ. ಗಿಲ್ಗಾಲಿನಲ್ಲಿ ಬಸವನಿಗೆ ಯಜ್ಞಗಳನ್ನು ಅರ್ಪಿಸಲಾಗುತ್ತಿದೆ. ಅಲ್ಲಿನ ಯಜ್ಞವೇದಿಗಳು ಪುಡಿಪುಡಿಯಾಗುವುವು; ಉಳುವ ನೇಗಿಲಿಗೆ ಸಿಕ್ಕುವ ಕಲ್ಲುಕುಪ್ಪೆಗಳಾಗುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ಗಿಲ್ಯಾದಿನ ಜನರು ಪಾಪ ಮಾಡಿದ್ದಾರೆ. ಅವರ ಬಳಿಯಲ್ಲಿ ಅನೇಕ ಭಯಂಕರವಾದ ವಿಗ್ರಹಗಳಿವೆ. ಗಿಲ್ಗಾಲಿನಲ್ಲಿ ಬಸವನ ವಿಗ್ರಹಗಳಿಗೆ ಜನರು ಯಜ್ಞವನ್ನರ್ಪಿಸುತ್ತಾರೆ. ಅವರಲ್ಲಿ ಅನೇಕ ಯಜ್ಞವೇದಿಕೆಗಳಿವೆ. ಹೇಗೆ ಉಳಿಮೆ ಮಾಡಿದ ಹೊಲದಲ್ಲಿ ಮಣ್ಣಿನ ಸಾಲುಗಳಿರುತ್ತದೋ ಅದೇ ರೀತಿಯಲ್ಲಿ ಅವರ ಬಳಿಯಲ್ಲಿ ವಿಗ್ರಹಗಳ ಸಾಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಗಿಲ್ಯಾದಿನಲ್ಲಿ ದುಷ್ಟತನ ಇದೆಯೋ? ಅಲ್ಲಿನ ಜನರು ಅಯೋಗ್ಯರೇ? ಅವರು ಗಿಲ್ಗಾಲಿನಲ್ಲಿ ಹೋರಿಗಳನ್ನು ಅರ್ಪಿಸುತ್ತಾರೆಯೇ? ಅವರ ಬಲಿಪೀಠಗಳು ಹೊಲದ ಸಾಲುಗಳಲ್ಲಿರುವ ಕಲ್ಲು ಕುಪ್ಪೆಯ ಹಾಗಿವೆ, ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 12:11
18 ತಿಳಿವುಗಳ ಹೋಲಿಕೆ  

ಎಫ್ರಾಯೀಮು ಯಜ್ಞವೇದಿಗಳನ್ನು ಹೆಚ್ಚೆಚ್ಚಾಗಿ ಕಟ್ಟಿ ಪಾಪಮಾಡಿದೆ; ಕಟ್ಟಿದ ಯಜ್ಞವೇದಿಗಳೇ ಅದಕ್ಕೆ ಪಾಪವಾಗಿ ಪರಿಣವಿುಸಿವೆ.


ಗಿಲ್ಯಾದು ಅಧರ್ಮಿಗಳು ತುಂಬಿದ ಪಟ್ಟಣ, ಅಲ್ಲಿ ಹೆಜ್ಜೆಜಾಡುಗಳು ರಕ್ತಮಯವೇ.


ಇಸ್ರಾಯೇಲೇ, ನೀನು ಸೂಳೆಯಾಗಿ ನಡೆದರೂ ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ; [ಯೆಹೂದ್ಯರೇ,] ಗಿಲ್ಗಾಲಿಗೆ ನೆರೆಯದಿರಿ, ಬೇತಾವೆನಿಗೆ ಯಾತ್ರೆ ಹೋಗಬೇಡಿರಿ, ಯೆಹೋವನ ಜೀವದಾಣೆ ಎಂದು ಶಪಥಮಾಡಬಾರದು.


ಅವರ ದುಷ್ಟತನವು ಗಿಲ್ಗಾಲಿನಲ್ಲಿ ತುಂಬಿದೆ; ಅಲ್ಲೇ ನನ್ನ ದ್ವೇಷಕ್ಕೆ ಗುರಿಯಾಗಿದ್ದಾರೆ; ಅವರ ದುಷ್ಕೃತ್ಯಗಳ ನಿವಿುತ್ತ ನಾನು ಅವರನ್ನು ನನ್ನ ನಿವಾಸದೊಳಗಿಂದ ಓಡಿಸಿಬಿಡುವೆನು; ಅವರನ್ನು ಇನ್ನು ಪ್ರೀತಿಸೆನು; ಅವರ ಅಧಿಕಾರಿಗಳೆಲ್ಲರೂ ದ್ರೋಹಿಗಳೇ ಸರಿ.


ಇಸ್ರಾಯೇಲು ಸೊಂಪಾಗಿ ಬೆಳೆದ ದ್ರಾಕ್ಷಾಲತೆಯಾಗಿದೆ; ಹಣ್ಣು ಬಿಟ್ಟುಕೊಂಡಿದೆ; ಅದರ ಹಣ್ಣುಗಳು ಹೆಚ್ಚಿದಷ್ಟೂ ಯಜ್ಞವೇದಿಗಳನ್ನು ಹೆಚ್ಚಿಸಿಕೊಂಡಿದೆ; ಅದರ ಭೂವಿುಯು ಎಷ್ಟು ಒಳ್ಳೆಯದೋ ಅಷ್ಟು ಒಳ್ಳೆಯ ವಿಗ್ರಹಸ್ತಂಭಗಳನ್ನು ಮಾಡಿಕೊಂಡಿದೆ.


ಸುಳ್ಳು ವಿಗ್ರಹಗಳನ್ನು ಅವಲಂಬಿಸಿದವರು ತಮ್ಮ ಕರುಣಾನಿಧಿಯನ್ನು ತೊರೆದುಬಿಡುವರು.


ಬೇತೇಲನ್ನು ಆಶ್ರಯಿಸಬೇಡಿರಿ, ಗಿಲ್ಗಾಲನ್ನು ಸೇರಬಾರದು, ಬೇರ್ಷೆಬಕ್ಕೆ ಯಾತ್ರೆಹೋಗದಿರಿ; ಗಿಲ್ಗಾಲು ಗಡೀಪಾರಾಗುವದು, ಬೇತೇಲು ಬೈಲಾಗುವದು.


ಬೇತೇಲಿಗೆ ಬಂದು ದ್ರೋಹಮಾಡಿರಿ, ಗಿಲ್ಗಾಲಿನಲ್ಲಿ ನೆರೆದು ದ್ರೋಹವನ್ನು ಇನ್ನೂ ಹೆಚ್ಚಿಸಿರಿ; ಪ್ರತಿದಿನ ಬೆಳಿಗ್ಗೆ ನಿಮ್ಮ ಯಜ್ಞಗಳನ್ನು ಅರ್ಪಿಸಿರಿ, ಮೂರು ದಿನಕ್ಕೆ ಒಂದು ಸಲ ದಶಮಾಂಶವನ್ನು ಸಲ್ಲಿಸಿರಿ,


ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದು ಹೋಗುವವು;


ಅವರೆಲ್ಲರೂ ಪಶುಪ್ರಾಯರು, ಮಂದರು; ಬೊಂಬೆಗಳಿಂದಾಗುವ ಶಿಕ್ಷಣವು ಮರದಂತೆ ಮೊದ್ದು.


ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ನಿನ್ನನ್ನುದ್ಧರಿಸಲು ಶಕ್ತರಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು.


ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು ಕಣ್ಣಿಗಳನ್ನು ಕಿತ್ತು ನಾನು ಸೇವೆ ಮಾಡುವದಿಲ್ಲವೆಂದು ಅಂದುಕೊಳ್ಳುತ್ತಿದ್ದೀ; ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಸೂಳೆಯಾಗಿ ನಡೆದಿದ್ದೀ.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ - ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್‍ದೇವರಾದ ಯೆಹೋವನಾಣೆ, ನಾನು ಸೂಚಿಸಿದ ಹೊರತು ಇಂದಿನಿಂದ ಕೆಲವು ವರುಷಗಳವರೆಗೆ ಮಳೆಯಾಗಲಿ ಮಂಜಾಗಲಿ ಬೀಳುವದಿಲ್ಲ ಅಂದನು.


ಇಸ್ರಾಯೇಲ್ಯರ ಮನಸ್ಸು ನುಣುಚಿಕೊಳ್ಳುತ್ತದೆ; ಈಗ ದಂಡನೆಗೆ ಈಡಾಗಿದ್ದಾರೆ; ಯೆಹೋವನೇ ಅವರ ಯಜ್ಞವೇದಿಗಳನ್ನು ಮುರಿದುಬಿಡುವನು. ಅವರ ವಿಗ್ರಹಸ್ತಂಭಗಳನ್ನು ಹಾಳುಮಾಡುವನು.


ಅವರು ಬಂದಾಗ ಆತನು - ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಕಾಣಿಸಿಕೊಳ್ಳುವೆನು, ಇಲ್ಲವೆ ಸ್ವಪ್ನದಲ್ಲಿ ಅವನ ಸಂಗಡ ಮಾತಾಡುವೆನು.


ಯೆಹೋವನು ದರ್ಶಿಗಳೆನಿಸಿಕೊಂಡ ತನ್ನ ಪ್ರವಾದಿಗಳ ಮುಖಾಂತರವಾಗಿ ಇಸ್ರಾಯೇಲ್ಯ ಯೆಹೂದ್ಯರಿಗೆ - ನೀವು ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪಿತೃಗಳಿಗೂ ನನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ನಿಮಗೂ ಕೊಟ್ಟಂಥ ನನ್ನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯಿರಿ ಎಂದು ಖಂಡಿತವಾಗಿ ಹೇಳಿದಾಗ


ನರಪುತ್ರನೇ, ನೀನು ಇಸ್ರಾಯೇಲ್ ವಂಶದವರಿಗೆ ಈ ಸಾಮ್ಯವನ್ನು ಒಗಟಾಗಿ ಹೇಳು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು