Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 12:3 - ಕನ್ನಡ ಸತ್ಯವೇದವು J.V. (BSI)

3 ಯಾಕೋಬನು ಗರ್ಭದಲ್ಲಿ ಅಣ್ಣನನ್ನು ವಂಚಿಸಿದನು; ಪೂರ್ಣಪ್ರಾಯದಲ್ಲಿ ದೇವರೊಂದಿಗೆ ಹೋರಾಡಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಾಕೋಬನು ಗರ್ಭದಲ್ಲಿ ತನ್ನ ಅಣ್ಣನ ಹಿಮ್ಮಡಿಯನ್ನು ಎಳೆದನು, ಪೂರ್ಣಪ್ರಾಯದಲ್ಲಿ ದೇವರೊಂದಿಗೆ ಹೋರಾಡಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯಕೋಬನು ಅಣ್ಣನ ಜೊತೆ ತಾಯಿಯ ಗರ್ಭದಲ್ಲಿರುವಾಗಲೇ ಅವನ ಹಿಮ್ಮಡಿಯನ್ನು ಹಿಡಿದು ವಂಚಿಸಿದನು. ಪ್ರಾಯಕ್ಕೆ ಬಂದಮೇಲೆ ದೇವರೊಡನೆ ಹೋರಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ತನ್ನ ತಾಯಿಯ ಗರ್ಭದಲ್ಲಿರುವಾಗಲೇ ಯಾಕೋಬನು ತನ್ನ ಅಣ್ಣನಿಗೆ ಮೋಸ ಮಾಡಲು ಪ್ರಾರಂಭಮಾಡಿದ್ದನು. ಯಾಕೋಬನು ಬಲಶಾಲಿಯಾದ ಯೌವನಸ್ಥನು. ಆಗ ಅವನು ದೇವರೊಂದಿಗೆ ಹೋರಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಗರ್ಭದಲ್ಲಿ ಅವನು ತನ್ನ ಸಹೋದರನನ್ನು ಹಿಮ್ಮಡಿಯಿಂದ ಹಿಡಿದು, ಮನುಷ್ಯನಾಗಿಯೇ ದೇವರೊಂದಿಗೆ ಹೋರಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 12:3
14 ತಿಳಿವುಗಳ ಹೋಲಿಕೆ  

ಎರಡನೆಯ ಶಿಶುವು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡುಕೊಂಡು ಹುಟ್ಟಿದ್ದರಿಂದ ಅದಕ್ಕೆ ಯಾಕೋಬ ಎಂದು ಹೆಸರಿಟ್ಟರು. ಇವರು ಹುಟ್ಟಿದಾಗ ಇಸಾಕನು ಅರುವತ್ತು ವರುಷದವನಾಗಿದ್ದನು.


ಆ ಮಕ್ಕಳು ಒಬ್ಬ ತಂದೆಯ ಮಕ್ಕಳಾಗಿದ್ದರೂ ಅವರು ಇನ್ನು ಹುಟ್ಟದೆಯೂ ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದೆಯೂ ಇದ್ದಾಗ - ಹಿರಿಯನು ಕಿರಿಯನಿಗೆ ಸೇವೆ ಮಾಡುವನೆಂಬದಾಗಿ ಆಕೆಗೆ ಹೇಳಲ್ಪಟ್ಟಿತು. ಇದರಿಂದ ದೇವರು ತನಗೆ ಮನಸ್ಸಿದ್ದವರನ್ನು ಆರಿಸಿಕೊಳ್ಳುತ್ತಾನೆಂಬ ಸಂಕಲ್ಪವು ಸ್ಥಿರವಾಗಿರಬೇಕೆಂದು ತೋರಿಸಿದನು. ಆ ಸಂಕಲ್ಪವು ಪುಣ್ಯಕ್ರಿಯೆಗಳ ಮೇಲೆ ಆಧಾರಗೊಳ್ಳದೆ ಕರೆಯುವಾತನ ಚಿತ್ತದ ಮೇಲೆಯೇ ಆಧಾರಗೊಂಡಿದೆ.


ಅವರು ಈ ಪ್ರಕಾರ ನಡೆದದರಿಂದ ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡು ಯೆಹೂದಕುಲದವರ ಹೊರತು ಉಳಿದ ಎಲ್ಲಾ ಕುಲಗಳವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು.


ಆತನು ಇಸ್ರಾಯೇಲ್‍ಕುಲಗಳಲ್ಲಿ ಉಳಿದಿದ್ದ ಇವರನ್ನೂ ಹೇಸಿ ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು ಸೂರೆಮಾಡುವವರಿಗೆ ಒಪ್ಪಿಸಿ ಬಾಧಿಸಿದನು.


ದುರ್ಮಾರ್ಗದಲ್ಲಿ ನಡೆಯುವದನ್ನು ಬಿಡಲಿಲ್ಲವಾದದರಿಂದ ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲೇ ಇರುತ್ತಾರೆ.


ಆದಕಾರಣ ನಾನು ನಿಮ್ಮೊಂದಿಗೆ ಇನ್ನೂ ವ್ಯಾಜ್ಯವಾಡುವೆನು; ನಿಮ್ಮ ಸಂತಾನದವರೊಂದಿಗೂ ವ್ಯಾಜ್ಯವಾಡುವೆನು ಎಂದು ಯೆಹೋವನು ಅನ್ನುತ್ತಾನೆ.


ಈಗಲೇ ನಿನಗೆ ಪ್ರಳಯವು ಬಂದುಬಿಟ್ಟಿತು; ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ಉಣ್ಣಿಸುವೆನು.


ಇನ್ನು ಸ್ವಲ್ಪ ಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿದು ನನ್ನ ಕೋಪವನ್ನು ತೀರಿಸಿಕೊಂಡು ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ಉಣ್ಣಿಸುವೆನು.


ಇಸ್ರಾಯೇಲ್ಯರೇ, ಯೆಹೋವನ ವಾಕ್ಯವನ್ನು ಕೇಳಿರಿ; ಯೆಹೋವನು ದೇಶನಿವಾಸಿಗಳ ಮೇಲೆ ವಿವಾದಹಾಕಿದ್ದಾನೆ. ಏಕಂದರೆ ಪ್ರೀತಿ ಸತ್ಯತೆ ದೇವಜ್ಞಾನಗಳು ದೇಶದಲ್ಲಿಲ್ಲ;


ಜನರೂ ಯಾಜಕರೂ ಒಂದೇ; ಅವರ ದುಷ್ಕಾರ್ಯಗಳಿಗೆ ಅವರನ್ನು ದಂಡಿಸುವೆನು, ಅವರ ದುಷ್ಕೃತ್ಯಗಳನ್ನು ಅವರಿಗೆ ಕಟ್ಟುವೆನು. ಅವರು ಉಣ್ಣುತ್ತಿದ್ದರೂ ತೃಪ್ತಿ ದೊರೆಯದು,


ಯೆಹೋವನು ಇಂತೆನ್ನುತ್ತಾನೆ - ಯೆಹೂದವು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಯೆಹೂದ್ಯರು ಯೆಹೋವನ ಧರ್ಮೋಪದೇಶವನ್ನು ನಿರಾಕರಿಸಿ ಆತನ ವಿಧಿಗಳನ್ನು ಕೈಕೊಳ್ಳದೆ ಅವರ ಪಿತೃಗಳು ಹಿಂಬಾಲಿಸಿದ ಸುಳ್ಳುದೇವತೆಗಳ ಮೂಲಕ ಸನ್ಮಾರ್ಗವನ್ನು ತಪ್ಪಿದರಷ್ಟೆ;


ಬೆಟ್ಟಗಳೇ, ಯೆಹೋವನ ವ್ಯಾಜ್ಯವನ್ನು ಕೇಳಿರಿ! ಭೂವಿುಯ ಶಾಶ್ವತವಾದ ಅಸ್ತಿವಾರಗಳೇ, ಕಿವಿಗೊಡಿರಿ; ಯೆಹೋವನಿಗೆ ಆತನ ಪ್ರಜೆಯ ಮೇಲೆ ವ್ಯಾಜ್ಯವಿದೆ; ಆತನು ಇಸ್ರಾಯೇಲಿನೊಂದಿಗೆ ವಿವಾದಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು