Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 13:15 - ಕನ್ನಡ ಸತ್ಯವೇದವು J.V. (BSI)

15 ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವದು, ಅದರ ಒರತೆಯು ಒಣಗುವದು; [ಶತ್ರುವು] ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಗೊಂಬುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ, ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವುದು, ಅದರ ಒರತೆಯು ಒಣಗುವುದು. ಶತ್ರುವು ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಎಫ್ರಯಿಮ್ ಕಳೆಗಳ ನಡುವೆ ಸೊಂಪಾಗಿ ಬೆಳೆದ ಜೊಂಡಿನಂತಿದೆ. ಆದರೆ ಸರ್ವೇಶ್ವರ ಮರುಭೂಮಿಯಿಂದ ಮೂಡಣಗಾಳಿ ಬೀಸುವಂತೆ ಮಾಡುವರು. ಅದರ ಬುಗ್ಗೆ ಬತ್ತಿಹೋಗುವುದು. ಅದರ ಒರತೆ ಒಣಗಿಹೋಗುವುದು. ಅದರ ಸಿರಿಸಂಪತ್ತಿನ ನಿಧಿಯನ್ನು ಶತ್ರುಗಳು ಸೂರೆಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇಸ್ರೇಲ್ ತನ್ನ ಸಹೋದರರ ಮಧ್ಯದಲ್ಲಿ ಬೆಳೆಯುವನು. ಒಂದು ಬಲವಾದ ಪೂರ್ವದಿಕ್ಕಿನ ಗಾಳಿಯು ಬರುವದು. ಯೆಹೋವನ ಗಾಳಿಯು ಮರುಭೂಮಿಯಿಂದ ಬೀಸುವದು. ಅವನ ನೀರಿನ ಒರತೆಯು ಒಣಗಿಹೋಗುವದು, ಆ ಗಾಳಿಯು ಇಸ್ರೇಲರ ಐಶ್ವರ್ಯವನ್ನೆಲ್ಲಾ ಎತ್ತಿಕೊಂಡು ಹೋಗಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಎಫ್ರಾಯೀಮು ತನ್ನ ಸಹೋದರರಲ್ಲಿ ಫಲ ಸಮೃದ್ಧವಾಗಿದ್ದರೂ, ಕಾಡಿನಿಂದ ಯೆಹೋವ ದೇವರು ಬೀಸಮಾಡುವ ಪೂರ್ವ ಗಾಳಿಯು ಬರಲು, ಅವನ ಬುಗ್ಗೆಯು ಬತ್ತುವುದು. ಅವನ ಒರತೆಯು ಒಣಗುವುದು. ಅವನ ಬೊಕ್ಕಸಗಳ ನಿಧಿಯನ್ನು ಶತ್ರುಗಳು ಸೂರೆಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 13:15
27 ತಿಳಿವುಗಳ ಹೋಲಿಕೆ  

ಆ ಲತೆಯನ್ನು ಕ್ರೋಧಿಗಳು ಕಿತ್ತು ನೆಲದ ಮೇಲೆ ಬಿಸಾಟುಬಿಟ್ಟರು, ಮೂಡಣ ಗಾಳಿಯು ಅದರ ಫಲವನ್ನು ಬಾಡಿಸಿತು, ಅದರ ಗಟ್ಟಿಕೊಂಬೆಗಳು ಮುರಿದು ಒಣಗಿಹೋದವು, ಬೆಂಕಿಯು ಅವುಗಳನ್ನು ನುಂಗಿತು.


ಆಹಾ, ನಾಟಿಕೊಂಡಿದ್ದ ಆ ಲತೆಯು ಸಮೃದ್ಧವಾಗಿಯೇ ಇರುವದೋ? ಮೂಡಣ ಗಾಳಿಯು ಬಡಿಯುವಾಗ ಬಾಡೇ ಬಾಡುವದಲ್ಲವೆ; ಬೆಳೆದ ಪಾತಿಯಲ್ಲಿಯೇ ಒಣಗಿ ಹೋಗುವದು.


ಆ ಕಾಲದಲ್ಲಿ ಈ ಜನರಿಗೂ ಯೆರೂಸಲೇವಿುಗೂ ಈ ಮಾತಾಗುವದು - ಬಿಸಿಗಾಳಿಯು ಅರಣ್ಯದ ಬೋಳು ಗುಡ್ಡಗಳಿಂದ ನನ್ನ ಪ್ರಜೆಯೆಂಬ ಯುವತಿಯ ಮೇಲೆ ಬೀಸುತ್ತದೆ; ಅದು ತೂರುವದಕ್ಕೂ ಶೋಧಿಸುವದಕ್ಕೂ ಆಗದು.


ಯೋಸೇಫನು ಬಹುಫಲವನ್ನು ಬಿಡುವ ವೃಕ್ಷಕ್ಕೆ ಸಮಾನನಾಗಿದ್ದಾನೆ, ಒರತೆಯ ಬಳಿಯಲ್ಲಿ ಬೆಳೆದು ರೆಂಬೆಗಳನ್ನು ಗೋಡೆಯ ಆಚೆಗೆ ಚಾಚಿರುವ ಫಲವೃಕ್ಷದಂತಿದ್ದಾನೆ.


ಎರಡನೆಯ ಮಗನು ಹುಟ್ಟಿದಾಗ ಅವನು - ನನಗೆ ಸಂಕಟ ಬಂದ ದೇಶದಲ್ಲೇ ದೇವರು ಅಭಿವೃದ್ಧಿಯನ್ನು ದಯಪಾಲಿಸಿದ್ದಾನೆಂದು ಹೇಳಿ ಆ ಮಗನಿಗೆ ಎಫ್ರಾಯೀಮ್ ಎಂದು ಹೆಸರಿಟ್ಟನು.


ಬೆಳ್ಳಿಯನ್ನು ಸೂರೆಮಾಡಿರಿ, ಬಂಗಾರವನ್ನು ಕೊಳ್ಳೆಹೊಡೆಯಿರಿ; ಕೂಡಿಸಿಟ್ಟ ಧನಕ್ಕೂ ಸಕಲ ವಿಧ ಶ್ರೇಷ್ಠವಸ್ತುಗಳ ನಿಧಿಗೂ ಪಾರವೇ ಇಲ್ಲ.


ಇಸ್ರಾಯೇಲು ಸೊಂಪಾಗಿ ಬೆಳೆದ ದ್ರಾಕ್ಷಾಲತೆಯಾಗಿದೆ; ಹಣ್ಣು ಬಿಟ್ಟುಕೊಂಡಿದೆ; ಅದರ ಹಣ್ಣುಗಳು ಹೆಚ್ಚಿದಷ್ಟೂ ಯಜ್ಞವೇದಿಗಳನ್ನು ಹೆಚ್ಚಿಸಿಕೊಂಡಿದೆ; ಅದರ ಭೂವಿುಯು ಎಷ್ಟು ಒಳ್ಳೆಯದೋ ಅಷ್ಟು ಒಳ್ಳೆಯ ವಿಗ್ರಹಸ್ತಂಭಗಳನ್ನು ಮಾಡಿಕೊಂಡಿದೆ.


ಎಫ್ರಾಯೀಮ್ಯರ ಮಹಿಮೆಯು ಪಕ್ಷಿಯಂತೆ ಹಾರಿಹೋಗುವದು; ಯಾರೂ ಹೆರರು, ಗರ್ಭಿಣಿಯಾಗಿರರು, ಗರ್ಭಧರಿಸರು.


ಗಾಳಿಯು ಅವರನ್ನು ತನ್ನ ರೆಕ್ಕೆಗಳಲ್ಲಿ ಸುತ್ತಿಕೊಂಡು ಹೋಗುವದು; ತಾವು ಮಾಡುತ್ತಿದ್ದ ಯಜ್ಞಗಳಿಗೆ ನಾಚಿಕೆಪಡುವರು.


ಅವನ ದೇವರುಗಳನ್ನೂ ಎರಕದ ಬೊಂಬೆಗಳನ್ನೂ ಒಳ್ಳೊಳ್ಳೆ ಬೆಳ್ಳಿಬಂಗಾರದ ಪಾತ್ರೆಗಳನ್ನೂ ಸೂರೆಮಾಡಿಕೊಂಡು ಐಗುಪ್ತಕ್ಕೆ ಬಂದು ಕೆಲವು ವರುಷಗಳ ತನಕ ಉತ್ತರರಾಜನ ತಂಟೆಗೆ ಹೋಗುವದಿಲ್ಲ.


ಆದದರಿಂದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನ್ನ ಪಕ್ಷವಾಗಿ ವ್ಯಾಜ್ಯವಾಡಿ ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು; ಅದರ ಸರೋವರವು ಬತ್ತುವಂತೆಯೂ ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು.


ಮತ್ತು ಈ ಪಟ್ಟಣದ ಎಲ್ಲಾ ಆಸ್ತಿಯನ್ನೂ ಆದಾಯವನ್ನೂ ಸಂಪತ್ತನ್ನೂ ಯೆಹೂದದ ಅರಸರ ಸಕಲ ನಿಧಿನಿಕ್ಷೇಪಗಳನ್ನೂ ಅವರ ಶತ್ರುಗಳ ಕೈವಶಮಾಡುವೆನು; ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬೆಲಿಗೆ ತೆಗೆದುಕೊಂಡು ಹೋಗುವರು.


ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವದು; ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತು ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾವಿುಯಲ್ಲಿ ಹೆಚ್ಚಳಪಡುವಿ.


ಹೌದು, ಮಹಾ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತಿವೆ! ಆದರೆ ಆತನು ಅವರನ್ನು ಗದರಿಸುವಾಗ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿಯಾಡುವ ದೂಳಿನಂತೆಯೂ ಅಟ್ಟಲ್ಪಡುವರು. ಇಗೋ, ಸಂಜೆಯಲ್ಲಿ ದಿಗಿಲುಬಿದ್ದು ಉದಯದೊಳಗಾಗಿ ಇಲ್ಲವಾಗುವರು!


ಪಿತೃಗಳ ಅಧರ್ಮದ ನಿವಿುತ್ತ ಇವನ ಮಕ್ಕಳಿಗೂ ವಧ್ಯಸ್ಥಾನವನ್ನು ಸಿದ್ಧಮಾಡಿರಿ! ಅವರು ತಲೆಯೆತ್ತಿ ಲೋಕವನ್ನು ವಶಪಡಿಸಿಕೊಂಡು ಭೂಮಂಡಲದ ಮೇಲೆಲ್ಲಾ ಪಟ್ಟಣಗಳನ್ನು ಕಟ್ಟಿಕೊಳ್ಳದಿರಲಿ!


ಅವನ ಸಂತತಿಯು ನಿರ್ಮೂಲವಾಗಲಿ. ಎರಡನೆಯ ತಲೆಯಲ್ಲಿಯೇ ಅದು ನಿರ್ನಾಮವಾಗಿ ಹೋಗಲಿ.


ದುಷ್ಟರೋ ಹಾಗಲ್ಲ; ಗಾಳಿ ಬಡುಕೊಂಡು ಹೋಗುವ ಹೊಟ್ಟಿನಂತಿದ್ದಾರೆ.


ಅವನ ಬುಡವು ಕೆಳಗೆ ಒಣಗುವದು, ಅವನ ರೆಂಬೆಯು ಮೇಲೆ ಬಾಡುವದು.


ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು; ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು [ಬಲವುಳ್ಳವು]; ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೋಟ್ಯಾಂತರ ಜನರೂ ಮನಸ್ಸೆಕುಲದ ಲಕ್ಷಾಂತರ ಮಂದಿಯೂ ಇಂಥವರೇ.


ಅದರೆ ಅವನ ತಂದೆ ಒಪ್ಪದೆ - ಮಗನೇ, ನಾನು ಬಲ್ಲೆ, ಬಲ್ಲೆ; ಇವನಿಂದಲೂ ಜನಾಂಗವುಂಟಾಗುವದು; ಇವನೂ ಬಲಿಷ್ಠನಾಗುವನು; ಆದರೂ ಇವನಿಗಿಂತಲೂ ಇವನ ತಮ್ಮನು ಬಲಿಷ್ಠನಾಗುವನು; ತಮ್ಮನ ಸಂತತಿಯಲ್ಲಿಯೇ ಜನರು ಹೇರಳವಾಗಿ ಹುಟ್ಟುವರು ಎಂದು ಹೇಳಿದನು.


ಅವುಗಳ ಹಿಂದೆ ಮೂಡಣ ಗಾಳಿಯಿಂದ ಕೆಟ್ಟು ಬತ್ತಿಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು;


ನಿನ್ನ ಪ್ರಜೆಯನ್ನು ಕಳುಹಿಸಿಬಿಡುವದರ ಮೂಲಕ ಅದರೊಡನೆ ವಿುತಿಮೀರದೆ ಹೋರಾಡುತ್ತಿದ್ದೀ; ಮೂಡಣ ಗಾಳಿಯು ಬೀಸಿದ ದಿನದಲ್ಲಿ ಅದರ ಕ್ರೂರವಾದ ಬಡಿತದಿಂದ ನಿನ್ನ ಜನವನ್ನು ತೊಲಗಿಸಿದಿ.


ಇಂಥಾ ಕೆಲಸಗಳಿಗೆ ಅನುಕೂಲಿಸದಂತೆ ನನ್ನ ಅಪ್ಪಣೆಯ ಮೇರೆಗೆ ಬಿರುಸಾಗಿ ಹೊಡೆಯುತ್ತದೆ; ಈಗ ನನ್ನ ಜನರಿಗೆ ನ್ಯಾಯದಂಡನೆಗಳನ್ನು ವಿಧಿಸುವೆನು;


ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಬಾಬೆಲಿನ ಮೇಲೂ ಲೇಬ್‍ಕಾಮೈ ದೇಶದವರ ಮೇಲೂ ನಾಶನದ ಗಾಳಿಯನ್ನು ಬೀಸಮಾಡುವೆನು.


ಇಲ್ಲವಾದರೆ ನಾನು ಅವಳ ಬಟ್ಟೆಯನ್ನು ಕಿತ್ತು ಅವಳನ್ನು ಹುಟ್ಟಿದಾಗ ಇದ್ದಂತೆ ಬೆತ್ತಲೆಯಾಗಿ ನಿಲ್ಲಿಸಿಬಿಟ್ಟು ಕಾಡನ್ನಾಗಿ ಮಾಡಿ ಮರುಭೂವಿುಯ ಸ್ಥಿತಿಗೆ ತಂದು ನೀರಡಿಕೆಯಿಂದ ಸಾಯಿಸುವೆನು;


ಸೂರ್ಯನು ಹುಟ್ಟಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆ ಹೋಗುವವನಾಗಿ ನಾನು ಬದುಕುವದಕ್ಕಿಂತ ಸಾಯುವದೇ ಲೇಸು ಎಂದು ಮರಣವನ್ನು ಕೇಳಿಕೊಂಡನು.


ಅವುಗಳ ಹಿಂದೆ ಮೂಡಣ ಗಾಳಿಯಿಂದ ಕೆಟ್ಟು ಬತ್ತಿ ಒಣಗಿಹೋಗಿದ್ದ ಬೇರೆ ಏಳು ತೆನೆಗಳು ಮೊಳೆತುಬಂದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು