Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 13:2 - ಕನ್ನಡ ಸತ್ಯವೇದವು J.V. (BSI)

2 ಈಗ ಎಫ್ರಾಯೀಮ್ಯರು ಹೆಚ್ಚೆಚ್ಚಾಗಿ ಪಾಪಮಾಡುತ್ತಾರೆ, ತಮ್ಮ ಬೆಳ್ಳಿಯಿಂದ ಸ್ವಬುದ್ಧಿಗೆ ತಕ್ಕ ಎರಕದ ಬೊಂಬೆಗಳನ್ನು ರೂಪಿಸಿಕೊಂಡಿದ್ದಾರೆ; ಅವೆಲ್ಲಾ ಶಿಲ್ಪಿಗಳ ಕೈಕೆಲಸವೇ; ಇಂಥವುಗಳನ್ನು ಮಾತಾಡಿಸುತ್ತಾರೆ, ಮನುಷ್ಯರಾದ ಪೂಜಾರಿಗಳು ಪಶುವಿನ ಮೂರ್ತಿಗಳನ್ನು ಮುದ್ದಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಈಗ ಎಫ್ರಾಯೀಮ್ಯರು ಹೆಚ್ಚೆಚ್ಚಾಗಿ ಪಾಪಮಾಡುತ್ತಾರೆ, ತಮ್ಮ ಬೆಳ್ಳಿಯಿಂದ ಸ್ವಬುದ್ಧಿಗೆ ತಕ್ಕ ಎರಕದ ಬೊಂಬೆಗಳನ್ನು ರೂಪಿಸಿಕೊಂಡಿದ್ದಾರೆ; ಅವೆಲ್ಲಾ ಶಿಲ್ಪಿಗಳ ಕೈಕೆಲಸವೇ; ಇಂಥವುಗಳನ್ನು ಮಾತನಾಡಿಸುತ್ತಾರೆ, ಮನುಷ್ಯರಾದ ಪೂಜಾರಿಗಳು ಪಶುವಿನ ಮೂರ್ತಿಗಳನ್ನು ಮುದ್ದಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಈಗ ಎಫ್ರಯಿಮರ ಪಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅವರು ಬೆಳ್ಳಿಬಂಗಾರವನ್ನು ಕರಗಿಸಿ ಇಷ್ಟಬಂದಂತೆ ಬೊಂಬೆಗಳನ್ನು ಮಾಡಿಕೊಂಡಿದ್ದಾರೆ. ಅವೆಲ್ಲವು ಶಿಲ್ಪಿಗಳ ಕೈಕೆಲಸವೇ ಹೊರತು ಮತ್ತೇನು ಅಲ್ಲ. ಇಂಥ ವಿಗ್ರಹಗಳನ್ನು ಪೂಜೆಗಾಗಿ ಪ್ರತಿಷ್ಠಾಪನೆಮಾಡುತ್ತಾರೆ. ಬುದ್ಧಿಜೀವಿಗಳಾದ ಇವರು ಬಸವನಿಗೆ ಮುದ್ದಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈಗ ಇಸ್ರೇಲರು ಹೆಚ್ಚೆಚ್ಚಾಗಿ ಪಾಪ ಮಾಡುತ್ತಿರುತ್ತಾರೆ. ತಮಗಾಗಿ ವಿಗ್ರಹಗಳನ್ನು ಮಾಡಿಕೊಳ್ಳುತ್ತಾರೆ. ಅಕ್ಕಸಾಲಿಗರು ಬೆಳ್ಳಿಯಿಂದ ವಿಗ್ರಹಗಳನ್ನು ಮಾಡುವರು. ತಾವು ಮಾಡಿದ ಮೂರ್ತಿಗಳೊಂದಿಗೆ ಮಾತನಾಡುವರು. ಆ ವಿಗ್ರಹಗಳಿಗೆ ಯಜ್ಞವನ್ನರ್ಪಿಸುವರು. ಬಂಗಾರದ ಬಸವನ ವಿಗ್ರಹಕ್ಕೆ ಮುದ್ದು ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ. ಸ್ವಂತ ಬುದ್ಧಿಯ ಪ್ರಕಾರ ತಮ್ಮ ಬೆಳ್ಳಿಯಿಂದ ಎರಕದ ವಿಗ್ರಹಗಳನ್ನೂ, ಮೂರ್ತಿಗಳನ್ನೂ ಮಾಡಿಕೊಂಡಿದ್ದಾರೆ. ಅದೆಲ್ಲವೂ ಕಮ್ಮಾರರ ಕೈಕೆಲಸವೇ. ಅವರು ನರಬಲಿಯನ್ನು ಅರ್ಪಿಸುತ್ತಾರೆ, ಬಸವನ ವಿಗ್ರಹಕ್ಕೆ ಮುದ್ದಿಡುತ್ತಾರೆ,” ಎಂದು ಜನರು ಅವರ ಬಗ್ಗೆ ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 13:2
33 ತಿಳಿವುಗಳ ಹೋಲಿಕೆ  

ತನ್ನ ಧಾನ್ಯದ್ರಾಕ್ಷಾರಸತೈಲಗಳು ನನ್ನಿಂದ ದೊರೆತವುಗಳೆಂದೂ ಬಾಳನ ಪೂಜೆಗೆ ಉಪಯೋಗಿಸಿದ ಬೆಳ್ಳಿ ಬಂಗಾರಗಳು ನನ್ನ ಧಾರಾಳವಾದ ವರವೆಂದೂ ಅವಳಿಗೆ ತಿಳಿಯದು.


ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿನಲ್ಲಿ ಬೆಳ್ಳಿಯನ್ನು ತೂಗಿ ಅಕ್ಕಸಾಲಿಗನಿಗೆ ಕೊಟ್ಟು ಕೂಲಿಗೊತ್ತುಮಾಡಿ ದೇವರನ್ನು ಮಾಡಿಸಿ ಅದಕ್ಕೆ ಎರಗಿ ಪೂಜೆಮಾಡುವರು.


ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಮಂದಿ ಇಸ್ರಾಯೇಲ್ಯರನ್ನು ಉಳಿಸುವೆನು ಎಂದು ಹೇಳಿದನು.


ಅದನ್ನು ಬೆಳ್ಳಿಬಂಗಾರಗಳಿಂದ ಭೂಷಿಸುತ್ತಾರೆ, ಅಲುಗದಹಾಗೆ ಮೊಳೆಗಳಿಂದ ಸುತ್ತಿಗೆಯಿಂದ ಭದ್ರಪಡಿಸುತ್ತಾರೆ.


ಎಂದು ಇಸ್ರಾಯೇಲ್ಯರ ಮೇಲೆ ದೂರು ಹೇಳಿದ್ದಕ್ಕೆ ದೇವರ ಉತ್ತರವೇನಂದರೆ - ಬಾಳನ ವಿಗ್ರಹಕ್ಕೆ ಅಡ್ಡಬೀಳದೆ ಇರುವ ಏಳುಸಾವಿರ ಪುರುಷರನ್ನು ನನಗಾಗಿ ಉಳಿಸಿಕೊಂಡಿದ್ದೇನೆ ಎಂಬದೇ.


ಆದರೆ ದುಷ್ಟರೂ ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.


ನೀನು ನಿನ್ನ ಮೊಂಡತನವನ್ನೂ ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸುವದರಿಂದ ನಿನಗೋಸ್ಕರ ದೇವರ ಕೋಪವನ್ನು ಕೂಡಿಟ್ಟುಕೊಳ್ಳುತ್ತಾ ಇದ್ದೀ. ದೇವರ ಕೋಪವೂ ನ್ಯಾಯವಾದ ತೀರ್ಪು ಪ್ರಕಟವಾಗುವ ದಿವಸ ಬರುತ್ತದಷ್ಟೆ.


ಅದರ ದುರಾಲೋಚನೆಗಳ ನಿವಿುತ್ತ ಖಡ್ಗವು ಅದರ ಪಟ್ಟಣಗಳ ಮೇಲೆ ಬೀಸಲ್ಪಟ್ಟು ಅಲ್ಲಿನ ಲಾಳವಿಂಡಿಗೆಗಳನ್ನು ಧ್ವಂಸಮಾಡಿ ನುಂಗಿಬಿಡುವದು.


ಇಸ್ರಾಯೇಲು ಸೊಂಪಾಗಿ ಬೆಳೆದ ದ್ರಾಕ್ಷಾಲತೆಯಾಗಿದೆ; ಹಣ್ಣು ಬಿಟ್ಟುಕೊಂಡಿದೆ; ಅದರ ಹಣ್ಣುಗಳು ಹೆಚ್ಚಿದಷ್ಟೂ ಯಜ್ಞವೇದಿಗಳನ್ನು ಹೆಚ್ಚಿಸಿಕೊಂಡಿದೆ; ಅದರ ಭೂವಿುಯು ಎಷ್ಟು ಒಳ್ಳೆಯದೋ ಅಷ್ಟು ಒಳ್ಳೆಯ ವಿಗ್ರಹಸ್ತಂಭಗಳನ್ನು ಮಾಡಿಕೊಂಡಿದೆ.


ಆ ಬಸವನೂ ಇಸ್ರಾಯೇಲಿನ ಕೈಕೆಲಸ; ಶಿಲ್ಪಿಯು ಅದನ್ನು ರೂಪಿಸಿದನು; ಅದು ದೇವರಲ್ಲ; ಸಮಾರ್ಯದ ಬಸವನು ಚೂರುಚೂರಾಗುವನು.


ನನ್ನ ಅಪ್ಪಣೆಯಿಲ್ಲದೆ ರಾಜರನ್ನು ಕಲ್ಪಿಸಿಕೊಂಡಿದ್ದಾರೆ; ನನಗೆ ತಿಳಿಯದೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ; ತಮ್ಮ ಬೆಳ್ಳಿ ಬಂಗಾರಗಳಿಂದ ಬೊಂಬೆಗಳನ್ನು ನಿರ್ಮಿಸಿಕೊಂಡಿದ್ದಾರೆ; ಅವರು ನಿರ್ಮಿಸಿದ್ದೆಲ್ಲಾ ನಾಶವಾಗತಕ್ಕದ್ದೇ.


ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು ಗಮನಿಸಿ ಮನುಷ್ಯರಿಗೆ ತಕ್ಕಂತೆ ನಡೆಯಿರಿ!


ತಪ್ಪಿಸಿಕೊಂಡ ಅನ್ಯಜನರೇ, ನೆರೆದು ಬನ್ನಿರಿ, ಒಟ್ಟಿಗೆ ಸಮೀಪಿಸಿರಿ! ತಮ್ಮ ಮರದ ಬೊಂಬೆಯನ್ನು ಹೊತ್ತುಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನಯಿಸುವವರು ಏನೂ ತಿಳಿಯದವರಾಗಿದ್ದಾರೆ.


ಯೆಹೋವನು ಹೀಗೆ ನುಡಿಯುತ್ತಾನೆ :- ದ್ರೋಹಿಗಳಾದ [ನನ್ನ] ಮಕ್ಕಳ ಗತಿಯನ್ನು ಏನು ಹೇಳಲಿ! ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಸಾಗಿಸಿ ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೆಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ;


ಏಕೆ ದ್ರೋಹವನ್ನು ಹೆಚ್ಚಿಸಿ ಹೆಚ್ಚಿಸಿ ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.


ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಆತನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಆತನ ಮರೆಹೊಕ್ಕವರೆಲ್ಲರು ಧನ್ಯರು.


ಆಮೋನನ ತಂದೆಯಾದ ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಿದ್ದನಷ್ಟೆ. ಆಮೋನನಾದರೋ ತನ್ನನ್ನು ತಗ್ಗಿಸಿಕೊಳ್ಳದೆ ಮಹಾಪರಾಧಿಯಾದನು.


ನೀವು ಸೆರೆಹಿಡಿದವರನ್ನು ಇಲ್ಲಿಗೆ ತರಬೇಡಿರಿ; ನೀವು ನಮ್ಮ ಪಾಪಾಪರಾಧಗಳ ಜೊತೆಯಲ್ಲಿ ಯೆಹೋವನಿಗೆ ವಿರುದ್ಧವಾದ ಮತ್ತೊಂದು ಅಪರಾಧವನ್ನು ಸೇರಿಸಬೇಕೆಂದಿರುತ್ತೀರಾ? ನಮ್ಮ ಅಪರಾಧವು ದೊಡ್ಡದು; ಇಸ್ರಾಯೇಲ್ಯರ ಮೇಲಿರುವ ದೇವಕೋಪವು ಉಗ್ರವಾಗಿದೆ ಎಂದು ಹೇಳಿದರು.


ಆ ಆಳು ಮುಂದೆ ಹೋದಾಗ ಸಮುವೇಲನು ಎಣ್ಣೇ ಕುಪ್ಪಿಯಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ - ಯೆಹೋವನು ತನ್ನ ಸ್ವಾಸ್ತ್ಯದ ಮೇಲೆ ಪ್ರಭುವಾಗಿರುವದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ.


ಈಗ ದುಷ್ಟ ಸಂತತಿಯವರಾದ ನೀವು ನಿಮ್ಮ ತಂದೆಗಳಿಗೆ ಬದಲಾಗಿ ಬಂದು ಇಸ್ರಾಯೇಲ್ಯರ ಮೇಲಿದ್ದ ಯೆಹೋವನ ರೋಷಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತೀರಲ್ಲಾ.


ಅವರೆಲ್ಲರೂ ಪಶುಪ್ರಾಯರು, ಮಂದರು; ಬೊಂಬೆಗಳಿಂದಾಗುವ ಶಿಕ್ಷಣವು ಮರದಂತೆ ಮೊದ್ದು.


ಎಫ್ರಾಯೀಮು ವಿಗ್ರಹಗಳಲ್ಲಿ ಬೆರತುಹೋಗಿದೆ; ಅದನ್ನು ಬಿಟ್ಟುಬಿಡಿರಿ.


ಸಮಾರ್ಯವೇ, ನಾನು ನಿನ್ನ ಬಸವನನ್ನು ತಳ್ಳಿಬಿಟ್ಟಿದ್ದೇನೆ; ನನ್ನ ರೋಷಾಗ್ನಿಯು ನಿನ್ನವರ ಮೇಲೆ ಉರಿಯುತ್ತದೆ; ಅವರು ನಿರ್ಮಲರಾಗುವದಕ್ಕೆ ಇನ್ನೆಷ್ಟು ಕಾಲ ಹಿಡಿಯುವದೋ?


ಸಮಾರ್ಯದ ನಿವಾಸಿಗಳು ಬೇತಾವೆನಿನ ಬಸವನ ವಿಷಯದಲ್ಲಿ ದಿಗಿಲುಪಡುವರು; ಅದರ ಭಕ್ತಜನರು ಅದಕ್ಕಾಗಿ ಎದೆಬಡಿದುಕೊಳ್ಳುವರು; ಅದರ ಮಹಿಮೆಯು ಅದರಿಂದ ತೊಲಗಿತಲ್ಲಾ ಎಂದು ಅದರ ಪೂಜಾರಿಗಳು ಅದಕ್ಕಾಗಿ ನಡುಗುವರು.


ಅಶ್ಶೂರವು ನಮ್ಮನ್ನು ರಕ್ಷಿಸುವದೆಂದು ನಂಬೆವು; [ಐಗುಪ್ತದ] ಕುದುರೆಗಳನ್ನು ಹತ್ತೆವು; ನಮ್ಮ ಕೈಕೆಲಸದ ಬೊಂಬೆಗಳಿಗೆ - ನೀವು ನಮ್ಮ ದೇವರುಗಳು ಎಂದು ಇನ್ನು ಹೇಳೆವು; ನೀನೇ ಅನಾಥರನ್ನು ಕರುಣಿಸುವಿ ಎಂಬದಾಗಿ ಅರಿಕೆಮಾಡಿಕೊಳ್ಳಿರಿ.


ವಿಗ್ರಹಶರಣರೆಲ್ಲಾ ಆಶಾಭಂಗಪಡುವರು; ಅದನ್ನು ಕೆತ್ತಿದವರು ಮನುಷ್ಯಮಾತ್ರದವರೇ; ಅವರೆಲ್ಲರು ಕೂಡಿ ನಿಲ್ಲಲಿ, ಒಟ್ಟಿಗೆ ಹೆದರಿಕೊಂಡು ಲಜ್ಜೆಪಡುವರು.


ಈ ಯೆರೂಸಲೇವಿುನವರು ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರಿಗಿ ಬರಲೊಲ್ಲರು.


[ಪ್ರವಾದಿಗಳು ] ಕರೆಕರೆದ ಹಾಗೆಲ್ಲಾ ನನ್ನ ಜನರು ದೂರದೂರ ಹೋಗುತ್ತಲೇ ಬಂದರು; ಬಾಳ್‍ದೇವತೆಗಳಿಗೆ ಯಜ್ಞಮಾಡಿ ಬೊಂಬೆಗಳಿಗೆ ಧೂಪಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು