Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 14:2 - ಕನ್ನಡ ಸತ್ಯವೇದವು J.V. (BSI)

2 [ಪಶ್ಚಾತ್ತಾಪದ] ಮಾತುಗಳನ್ನು ತೆಗೆದುಕೊಂಡು ಯೆಹೋವನ ಬಳಿಗೆ ಹಿಂದಿರುಗಿ ಆತನಿಗೆ - ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ [ನಮ್ಮಲ್ಲಿನ] ಒಳ್ಳೆಯದನ್ನು ಅಂಗೀಕರಿಸು; ನಮ್ಮ ಸ್ತೋತ್ರಗಳೆಂಬ ಹೋರಿಗಳನ್ನು ಅರ್ಪಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು ಆತನಿಗೆ, “ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು; ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆದುದರಿಂದ ಪಶ್ಚಾತ್ತಾಪದ ಮಾತುಗಳೊಂದಿಗೆ ದೇವರಿಗೆ ಅಭಿಮುಖವಾಗಿ, “ಪ್ರಭುವೇ, ನಮ್ಮ ಅಪರಾಧವನ್ನು ತೊಡೆದುಹಾಕು. ನಮ್ಮಲ್ಲಿ ಒಳಿತಾದುದನ್ನೇ ಅಂಗೀಕರಿಸು. ನಿನಗೆ ಸ್ತುತಿಬಲಿಯನ್ನು ಸಮರ್ಪಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀನು ಹೇಳಬೇಕಾದ ವಿಷಯಗಳ ಕುರಿತು ನೀನು ಆಲೋಚಿಸು ಮತ್ತು ಯೆಹೋವನ ಬಳಿಗೆ ಹಿಂದಿರುಗಿ ಬಾ ಮತ್ತು ಆತನಿಗೆ ಹೀಗೆ ಹೇಳು: “ನಮ್ಮ ಪಾಪಗಳನ್ನು ನಮ್ಮಿಂದ ತೆಗೆ. ನಾವು ಮಾಡುವ ಒಳ್ಳೆಯ ಕಾರ್ಯಗಳನ್ನು ಸ್ವೀಕರಿಸು. ಆಗ ನಮ್ಮ ತುಟಿಗಳಿಂದ ನಿನಗೆ ಸ್ತೋತ್ರವೆಂಬ ಕಾಣಿಕೆಯನ್ನು ಸಮರ್ಪಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು, ಯೆಹೋವ ದೇವರ ಕಡೆಗೆ ತಿರುಗಿಕೊಂಡು, ಅವರಿಗೆ ಹೇಳಿರಿ: “ನಮ್ಮ ಪಾಪಗಳನ್ನೆಲ್ಲಾ ಕ್ಷಮಿಸಿ, ನಮ್ಮಲ್ಲಿ ಒಳ್ಳೆಯದನ್ನು ಸ್ವೀಕರಿಸಿರಿ. ಆಗ ನಮ್ಮ ಸ್ತೋತ್ರ ಬಲಿಯನ್ನು ನಿಮಗೆ ಅರ್ಪಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 14:2
39 ತಿಳಿವುಗಳ ಹೋಲಿಕೆ  

ಆದದರಿಂದ ಆತನ ಮೂಲಕವಾಗಿಯೇ ದೇವರಿಗೆ ಸ್ತೋತ್ರಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಆತನು ಕರ್ತನೆಂದು ಬಾಯಿಂದ ಪ್ರತಿಜ್ಞೆಮಾಡುವದೇ ನಾವು ಅರ್ಪಿಸುವ ಯಜ್ಞವಾಗಿದೆ.


ನೀನು ನನ್ನ ಅಪರಾಧವನ್ನು ಕ್ಷವಿುಸಿ ನನ್ನ ದೋಷವನ್ನು ಏಕೆ ಪರಿಹರಿಸುವದಿಲ್ಲ? ನಾನು ಈಗ ಮಣ್ಣಿನಲ್ಲಿ ಮಲಗಿಕೊಳ್ಳುವೆನು; ನೀನು ನನ್ನನ್ನು ಹುಡುಕುವಾಗ ನಾನು ಇಲ್ಲದೆ ಹೋಗಿರುವೆನು.


ಪಾಪಗಳನ್ನು ಹೋಗಲಾಡಿಸುವದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮ ಸಂಬಂಧವಾದ ಮಂದಿರವಾಗಲಿಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಯಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕವರ್ಗದವರಾಗಿದ್ದೀರಿ.


ಆತನು ನಮ್ಮಲ್ಲಿ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವದಕ್ಕೆ ಕರೆದನು.


ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ಎದೆಯನ್ನು ಬಡುಕೊಳ್ಳುತ್ತಾ - ದೇವರೇ, ಪಾಪಿಯಾದ ನನ್ನನ್ನು ಕರುಣಿಸು ಅಂದನು.


ಯೆಹೋವನ ಸೇವಕರಾದ ಯಾಜಕರು ದ್ವಾರಮಂಟಪಕ್ಕೂ ಯಜ್ಞವೇದಿಗೂ ನಡುವೆ ಅಳುತ್ತಾ - ಯೆಹೋವನೇ, ನಿನ್ನ ಜನರನ್ನು ಕರುಣಿಸು; ಅನ್ಯಜನಾಂಗಗಳು ಅವರ ಹೆಸರನ್ನು ಕಟ್ಟುಗಾದೆಯಾಗಿ ಎತ್ತುವ ನಿಂದೆಗೆ ನಿನ್ನ ಸ್ವಾಸ್ತ್ಯದವರನ್ನು ಗುರಿಮಾಡಬೇಡ; ಅವರ ದೇವರು ಎಲ್ಲಿ ಎಂಬ ಮಾತು ಮ್ಲೇಚ್ಫರಲ್ಲಿ ಏಕೆ ಸಲ್ಲಬೇಕು ಎಂದು ವಿಜ್ಞಾಪಿಸಲಿ.


ಖಾನೇಷುಮಾರಿ ಮಾಡಿಸಿದನಂತರ ದಾವೀದನನ್ನು ಮನಸ್ಸಾಕ್ಷಿಯು ಹಂಗಿಸತೊಡಗಿತು. ಆದದರಿಂದ ಅವನು ಯೆಹೋವನನ್ನು - ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು; ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷವಿುಸು ಎಂದು ಪ್ರಾರ್ಥಿಸಿದನು.


ಆಗ ದಾವೀದನು ನಾತಾನನಿಗೆ - ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇನೆ ಎಂದು ಹೇಳಿದನು. ನಾತಾನನು ಅವನಿಗೆ - ಯೆಹೋವನು ನಿನ್ನ ಪಾಪವನ್ನು ಕ್ಷವಿುಸಿದ್ದಾನೆ, ನೀನು ಸಾಯುವದಿಲ್ಲ;


ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ಹೋರಿಗಳ ಮತ್ತು ಹೋತಗಳ ರಕ್ತದಿಂದ ಪಾಪಗಳು ಪರಿಹಾರವಾಗುವದು ಅಸಾಧ್ಯವಾಗಿದೆಯಲ್ಲಾ.


ನಾನು ಅವರ ಸಂಗಡ ಮಾಡಿಕೊಂಡ ಈ ಒಡಂಬಡಿಕೆಯು ನಾನು ಅವರ ಪಾಪಗಳನ್ನು ಪರಿಹರಿಸುವಾಗ ನೆರವೇರುವದು ಎಂದು ಬರೆದದೆ.


ಮರುದಿನ ಯೋಹಾನನು ತನ್ನ ಕಡೆಗೆ ಬರುವ ಯೇಸುವನ್ನು ನೋಡಿ - ಅಗೋ [ಯಜ್ಞಕ್ಕೆ] ದೇವರು ನೇವಿುಸಿದ ಕುರಿ, ಲೋಕದ ಪಾಪವನ್ನು ನಿವಾರಣೆ ಮಾಡುವವನು.


ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೇ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವರವನ್ನು ಕೊಡುವನಲ್ಲವೇ ಅಂದನು.


ದೇವದೂತನು ತನ್ನ ಸೇವಕರಿಗೆ - ಇವನ ಕೊಳೆಬಟ್ಟೆಗಳನ್ನು ತೆಗೆದುಬಿಡಿರಿ ಎಂದು ಅಪ್ಪಣೆಕೊಟ್ಟು ಅವನಿಗೆ - ಇಗೋ, ನಿನ್ನ ದೋಷವನ್ನು ನಿನ್ನಿಂದ ತೊಲಗಿಸಿದ್ದೇನೆ, ನಿನಗೆ ಶ್ರೇಷ್ಠವಸ್ತ್ರಗಳನ್ನು ತೊಡಿಸುವೆನು ಎಂದು ಹೇಳಿದನು.


ನನ್ನ ಬಾಯಿಗೆ ಮುಟ್ಟಿಸಿ - ಇಗೋ, ಇದು ನಿನ್ನ ತುಟಿಗಳಿಗೆ ತಗಲಿತು; ನಿನ್ನ ದೋಷವು ನೀಗಿತು, ನಿನ್ನ ಪಾಪಕ್ಕೆ ಪ್ರಾಯಶ್ಚಿತ್ತವಾಯಿತು ಅಂದನು.


ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವು ಬೆಳಕಿನಲ್ಲಿ ನಡೆದರೆ ನಾವು ಒಬ್ಬರಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಮತ್ತು ಆತನ ಮಗನಾದ ಯೇಸುವಿನ ರಕ್ತವು ಸಕಲಪಾಪವನ್ನು ನಿವಾರಣಮಾಡಿ ನಮ್ಮನ್ನು ಶುದ್ಧಿಮಾಡುತ್ತದೆ.


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ಮಾಡಿದ ಹರಕೆಗಳನ್ನು ಪರಾತ್ಪರನಿಗೆ ಸಲ್ಲಿಸಿರಿ.


ನಿನಗೆ ಯಜ್ಞಗಳಲ್ಲಿ ಅಪೇಕ್ಷೆಯಿಲ್ಲ, ಇದ್ದರೆ ಸಮರ್ಪಿಸೇನು; ಸರ್ವಾಂಗಹೋಮಗಳಲ್ಲಿ ನಿನಗೆ ಸಂತೋಷವಿಲ್ಲ.


ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟಯಜ್ಞ; ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವದಿಲ್ಲ.


ಯೆಹೋವನೇ, ನನ್ನ ಮನಃಪೂರ್ವಕವಾದ ಸ್ತುತಿ ಸಮರ್ಪಣೆಗಳನ್ನು ದಯವಿಟ್ಟು ಅಂಗೀಕರಿಸು; ನಿನ್ನ ವಿಧಿಗಳನ್ನು ನನಗೆ ಕಲಿಸು.


ನನಗೆ ಯಜ್ಞವು ಬೇಡ, ಕರುಣೆಯೇ ಬೇಕು; ಹೋಮಗಳಿಗಿಂತ ದೇವಜ್ಞಾನವೇ ಇಷ್ಟ.


ನಾನಾದರೋ ಸ್ತೋತ್ರಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು, ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು. ರಕ್ಷಣೆಯು ಯೆಹೋವನಿಂದಲೇ ಉಂಟಾಗುವದು.


ನಿನ್ನ ದ್ರೋಹಗಳನ್ನು ಮಂಜಿನಂತೆ ಪರಿಹರಿಸಿದ್ದೇನೆ, ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ.


ನೀನು ಹೋಗಿ ಉತ್ತರದಿಕ್ಕಿಗೆ ಈ ಮಾತುಗಳನ್ನು ಸಾರು - ಯೆಹೋವನು ಹೀಗನ್ನುತ್ತಾನೆ, ಭ್ರಷ್ಟಳಾದ ಇಸ್ರಾಯೇಲೇ, ಹಿಂದಿರುಗು; ನಾನು ಕೋಪ ಮುಖದಿಂದ ನಿನ್ನನ್ನು ನೋಡೆನು, ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.


ಇಸ್ರಾಯೇಲಿಗೆ ಅದರ ಹೆಮ್ಮೆಯೇ ವಿರುದ್ಧಸಾಕ್ಷಿಯಾಗಿದೆ; ಇಸ್ರಾಯೇಲೂ ಎಫ್ರಾಯೀಮೂ ತಮ್ಮ ದುರ್ಮಾರ್ಗದಲ್ಲಿ ಎಡವಿ ಬೀಳುವವು; ಯೆಹೂದವೂ ಅವುಗಳೊಂದಿಗೆ ಬೀಳುವದು.


ಕಾನಾನು! ಅದರ ಕೈಯಲ್ಲಿ ಮೋಸದ ತ್ರಾಸು ಇದೆ; ಕಸಕೊಳ್ಳಬೇಕೆಂಬದೇ ಅದರ ಆಶೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು