Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 14:9 - ಕನ್ನಡ ಸತ್ಯವೇದವು J.V. (BSI)

9 ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು; ಯೆಹೋವನ ಮಾರ್ಗಗಳು ರುಜುವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಎಡವಿಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು. ಯೆಹೋವನ ಮಾರ್ಗಗಳು ಸತ್ಯವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬುದ್ಧಿವಂತ ಮನುಷ್ಯನು ಇವುಗಳನ್ನು ಅರ್ಥಮಾಡಿಕೊಳ್ಳುತ್ತಾನೆ. ಜಾಣನು ಇದನ್ನು ಕಲಿತುಕೊಳ್ಳುತ್ತಾನೆ. ಯೆಹೋವನ ಮಾರ್ಗವು ಸರಿಯಾದದ್ದು. ಒಳ್ಳೆಯ ಜನರು ಅವರೊಂದಿಗೆ ಜೀವಿಸುವರು. ಪಾಪಿಗಳು ಅವುಗಳಿಂದ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯಾರು ಬುದ್ಧಿವಂತರು? ಅವರು ಈ ಸತ್ಯಗಳನ್ನು ಅರ್ಥಮಾಡಿಕೊಳ್ಳಲಿ. ಯಾರು ವಿವೇಚನೆಯುಳ್ಳವರು? ಅವರು ಇವುಗಳನ್ನು ತಿಳಿದುಕೊಳ್ಳಲಿ. ಏಕೆಂದರೆ, ಯೆಹೋವ ದೇವರ ಮಾರ್ಗಗಳು ನ್ಯಾಯವಾಗಿವೆ. ನೀತಿವಂತರು ಅದರಲ್ಲಿ ನಡೆಯುವರು. ಆದರೆ ಅಕ್ರಮಗಾರರು ಅವುಗಳಿಂದ ಎಡವಿಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 14:9
46 ತಿಳಿವುಗಳ ಹೋಲಿಕೆ  

ಯೆಹೋವನು ಸನ್ಮಾರ್ಗಿಗೆ ಆಶ್ರಯ, ಕೆಡುಕನಿಗೆ ನಾಶನ.


ಜ್ಞಾನಿಗಳು ಈ ಸಂಗತಿಗಳನ್ನು ಗಮನಿಸಿ ಯೆಹೋವನ ಕೃಪಾಕಾರ್ಯಗಳನ್ನು ಗ್ರಹಿಸಿಕೊಳ್ಳಲಿ.


ದೇವರಿಂದ ಹುಟ್ಟಿದವನು ದೇವರ ಮಾತುಗಳನ್ನು ಕೇಳುತ್ತಾನೆ. ನೀವು ದೇವರಿಂದ ಹುಟ್ಟದ ಕಾರಣ ಅವುಗಳನ್ನು ಕೇಳುವದಿಲ್ಲ ಎಂದು ಹೇಳಿದನು.


ಅನೇಕರು ತಮ್ಮನ್ನು ಶುದ್ಧೀಕರಿಸಿ ಶುಭ್ರಮಾಡಿಕೊಂಡು ಶೋಧಿತರಾಗುವರು; ದುಷ್ಟರು ದುಷ್ಟರಾಗಿಯೇ ನಡೆಯುವರು, ಅವರಲ್ಲಿ ಯಾರಿಗೂ ವಿವೇಕವಿರದು; ಜ್ಞಾನಿಗಳಿಗೆ ವಿವೇಕವಿರುವದು.


ಅದರ ಮಧ್ಯೆ ನೆಲೆಗೊಂಡಿರುವ ಯೆಹೋವನು ನ್ಯಾಯಸ್ವರೂಪನು; ಎಂದಿಗೂ ಅನ್ಯಾಯವನ್ನು ಮಾಡನು; ಬೆಳಬೆಳಿಗ್ಗೆ ತನ್ನ ನ್ಯಾಯವನ್ನು ತಪ್ಪದೆ ಪ್ರಕಾಶಗೊಳಿಸುವನು; ಅನ್ಯಾಯಗಾರನೋ ನಾಚಿಕೆಪಡನು.


ಯಾರೂ ದಾಟದ ಹಾಗೆ ದೇಶವು ಹಾಳಾಗಿ ಕಾಡಿನಂತೆ ಸುಟ್ಟುಹೋದದ್ದು ಏಕೆ? ಈ ವಿಚಾರವನ್ನು ಗ್ರಹಿಸತಕ್ಕ ಜ್ಞಾನಿಯು ಯಾರು? ಅದನ್ನು ಯೆಹೋವನ ಬಾಯಿಂದಲೇ ಕೇಳಿ ತಿಳಿಸಬಲ್ಲವನು ಯಾರು?


ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡಿಸುವದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಯಥಾರ್ಥನೂ ಆಗಿದ್ದಾನೆ.


ಅದಕ್ಕೆ ಪಿಲಾತನು - ಹಾಗಾದರೆ ನೀನು ಅರಸನು ಹೌದಲ್ಲವೇ ಅಂದನು. ಯೇಸು ಅವನಿಗೆ - ನನ್ನನ್ನು ಅರಸನೆಂದು ನೀನೇ ಹೇಳಿದ್ದೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಹೇಳುವದಕ್ಕೋಸ್ಕರ ಹುಟ್ಟಿದವನು, ಅದಕ್ಕೋಸ್ಕರವೇ ಈ ಲೋಕಕ್ಕೆ ಬಂದಿದ್ದೇನೆ. ಸತ್ಯಪರರೆಲ್ಲರು ನನ್ನ ಮಾತಿಗೆ ಕಿವಿಕೊಡುತ್ತಾರೆ ಎಂದು ಉತ್ತರಕೊಟ್ಟನು.


ಶಿಷ್ಟನ ಮಾರ್ಗವು ನೇರವಾಗಿದೆ; ನೀನು ಅವನ ದಾರಿಯನ್ನು ಸರಿಪಡಿಸಿ ಸಮಮಾಡುತ್ತಿ.


ನಿಜವಾಗಿ ನಿನ್ನ ಎಲ್ಲಾ ನೇಮಗಳು ನ್ಯಾಯವಾಗಿವೆ ಎಂದು ಒಪ್ಪಿಕೊಂಡಿದ್ದೇನೆ; ಎಲ್ಲಾ ವಿುಥ್ಯಾಮಾರ್ಗಗಳನ್ನು ಹಗೆಮಾಡುತ್ತೇನೆ.


ಯೆಹೋವನೇ, ನಿನ್ನ ವಿಧಿಗಳು ನೀತಿಯುಳ್ಳವುಗಳಾಗಿವೆ ಎಂದೂ ನೀನು ನಂಬಿಕೆಯಿಂದಲೇ ನನ್ನನ್ನು ಕುಗ್ಗಿಸಿದ್ದೀ ಎಂದೂ ತಿಳಿದುಕೊಂಡಿದ್ದೇನೆ.


ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ ಎಂದು ಹೇಳಲು ಯೆಹೋವನು -


ಹೀಗಿರಲಾಗಿ ಧರ್ಮಶಾಸ್ತ್ರವು ಪರಿಶುದ್ಧವಾದದ್ದು. ಮತ್ತು ಆಜ್ಞೆಯು ಪರಿಶುದ್ಧವೂ ನ್ಯಾಯವೂ ಹಿತವೂ ಆಗಿರುವಂಥದು ಸರಿ.


ಮತ್ತಾರೂ ನಡಿಸದ ಕ್ರಿಯೆಗಳನ್ನು ನಾನು ಅವರಲ್ಲಿ ನಡಿಸದೆ ಇದ್ದರೆ ಅವರಿಗೆ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರು ನೋಡಿದ್ದಾರೆ, ಆದರೂ ನನ್ನ ಮೇಲೆಯೂ ನನ್ನ ತಂದೆಯ ಮೇಲೆಯೂ ದ್ವೇಷಮಾಡಿದ್ದಾರೆ.


ಆಗ ಯೇಸು - ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ; ಆ ತೀರ್ಪು ಏನಂದರೆ, ಕಣ್ಣಿಲ್ಲದವರಿಗೆ ಕಣ್ಣುಬರುವವು. ಕಣ್ಣಿದ್ದವರು ಕುರುಡರಾಗುವರು ಅಂದನು.


ನನ್ನ ವಿಷಯದಲ್ಲಿ ಸಂಶಯ ಪಡದವನೇ ಧನ್ಯನು ಎಂದು ಹೇಳಿದನು.


ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ - ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವದಕ್ಕೂ ಅನೇಕರು ಏಳುವದಕ್ಕೂ ಕಾರಣನಾಗಿರುವನು; ಮತ್ತು ಜನರು ಎದುರು ಮಾತಾಡುವದಕ್ಕೆ ಗುರುತಾಗಿರುವನು; ಹೀಗೆ ಬಹುಜನರ ಅಂತರಂಗದ ವಿಚಾರಗಳು ಬೈಲಿಗೆ ಬಂದಾವು; ಇದಕ್ಕೆ ಈತನು ಹುಟ್ಟಿದ್ದು.


ಮನುಷ್ಯಕುಮಾರನು ಬಂದನು, ಅವನು ಅನ್ನಪಾನಗಳನ್ನು ತೆಗೆದುಕೊಳ್ಳುವವನಾಗಿದ್ದಾನೆ; ಅವರು - ಇಗೋ, ಇವನು ಹೊಟ್ಟೆಬಾಕನು, ಕುಡುಕನು, ಭ್ರಷ್ಟರ ಮತ್ತು ಪಾಪಿಷ್ಠರ ಗೆಳೆಯನು ಅನ್ನುತ್ತಾರೆ. ಆದರೆ ಜ್ಞಾನವು ತನ್ನ ಕೆಲಸಗಳಿಂದ ಜ್ಞಾನವೇ ಎಂದು ಗೊತ್ತಾಗುವದು ಅಂದನು.


ಆದರೆ ನೀವು - ಕರ್ತನ ಕ್ರಮವು ಸಮವಲ್ಲ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸಮವಲ್ಲವೋ? ನಿಮ್ಮ ಕ್ರಮವೇ ಸಮವಲ್ಲವಷ್ಟೆ.


ಆದರೆ ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ ನಾಶನವಾಗುವರು; ಹೌದು, ಯೆಹೋವನನ್ನು ತೊರೆದವರು ನಿರ್ಮೂಲರಾಗುವರು.


ನೀತಿವಂತರ ಮಾರ್ಗವು ಮಧ್ಯಾಹ್ನದವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.


ಅವರು ಹೆಚ್ಚುಹೆಚ್ಚಾಗಿ ಬಲಹೊಂದಿ ಚೀಯೋನ್‍ಗಿರಿಯಲ್ಲಿ ದೇವರ ಸನ್ನಿಧಿಯನ್ನು ಸೇರಿ -


ನಿನ್ನಲ್ಲಿ ಬಲವನ್ನು ಹೊಂದುವ ಮನುಷ್ಯರು ಧನ್ಯರು. ಅವರು ಯಾತ್ರಾಪರರಾಗಿ


ಹೀಗಾದರೂ ಶಿಷ್ಟನು ತನ್ನ ಮಾರ್ಗವನ್ನೇ ಹಿಡಿದು ನಡೆಯುವನು, ಶುದ್ಧಹಸ್ತನು ಬಲಗೊಳ್ಳುತ್ತಲೇ ಇರುವನು.


ಎಲೋ, ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕುಮಾಡುವದನ್ನು ಬಿಡುವದಿಲ್ಲವೋ?


ದೇವರ ದಾಸನಾದ ಮೋಶೆಯ ಹಾಡನ್ನೂ ಯಜ್ಞದ ಕುರಿಯಾದಾತನ ಹಾಡನ್ನೂ ಹಾಡುತ್ತಾ - ದೇವರಾದ ಕರ್ತನೇ, ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಸರ್ವಜನಾಂಗಗಳ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ;


ಜ್ಞಾನಹೃದಯರಿಗೆ ಜಾಣರೆಂಬ ಬಿರುದು ಬರುವದು; ಸವಿತುಟಿಯಿಂದ ಉಪದೇಶಶಕ್ತಿಯು ಹೆಚ್ಚುವದು.


ತಮ್ಮ ಸೃಷ್ಟಿಕರ್ತನನ್ನೇ ಲಕ್ಷಿಸಿ ಇಸ್ರಾಯೇಲ್ಯರ ಸದಮಲಸ್ವಾವಿುಯ ಕಡೆಗೇ ಕಣ್ಣಿಡುವರು.


ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಹೋಗುವಿರಿ; ನಾನು ಕಿವಿಗೊಡುವೆನು.


ಅವರು ಅಲ್ಲಿಗೆ ಸೇರಿ ಎಲ್ಲಾ ಅಸಹ್ಯವಸ್ತುಗಳನ್ನೂ ಸಮಸ್ತ ಹೇಯವಿಗ್ರಹಗಳನ್ನೂ ಅಲ್ಲಿಂದ ತೆಗೆದುಹಾಕುವರು.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ನಾನು ಯೆಹೂದ ವಂಶವನ್ನು ಬಲಗೊಳಿಸಿ ಯೋಸೇಫ ವಂಶವನ್ನು ಉದ್ಧರಿಸುವೆನು; ನನ್ನ ಕನಿಕರವು ಅವರ ಮೇಲೆ ಇರುವದರಿಂದ ಅವರನ್ನು ಹಿಂದಕ್ಕೆ ಬರಮಾಡುವೆನು; ಆಗ ನಾನು ಅವರನ್ನು ತಳ್ಳಿಬಿಟ್ಟದ್ದು ಇಲ್ಲದಂತಾಗುವದು; ನಾನು ಅವರ ದೇವರಾದ ಯೆಹೋವನಾಗಿದ್ದೇನಲ್ಲಾ, ಅವರ ಮೊರೆಯನ್ನು ಲಾಲಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು