Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 5:1 - ಕನ್ನಡ ಸತ್ಯವೇದವು J.V. (BSI)

1 ಯಾಜಕರೇ, ಇದನ್ನು ಕೇಳಿರಿ, ಇಸ್ರಾಯೇಲ್ ಕುಲದವರೇ, ಆಲಿಸಿರಿ; ರಾಜವಂಶದವರೇ, ಕಿವಿಗೊಡಿರಿ; ನೀವು ವಿುಚ್ಪದಲ್ಲಿ ಉರುಲಾಗಿಯೂ ತಾಬೋರಿನಲ್ಲಿ ಬಲೆಯಾಗಿಯೂ ಇದ್ದ ಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯಾಜಕರೇ, ಇದನ್ನು ಕೇಳಿರಿ, ಇಸ್ರಾಯೇಲ್ ಕುಲದವರೇ, ಆಲಿಸಿರಿ; ರಾಜವಂಶದವರೇ, ಕಿವಿಗೊಡಿರಿ; ನೀವು ಮಿಚ್ಪದಲ್ಲಿ ಉರುಲಾಗಿಯೂ, ತಾಬೋರಿನಲ್ಲಿ ಬಲೆಯಾಗಿಯೂ ಇದ್ದ ಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಯಾಜಕರೇ, ಕೇಳಿ: ಇಸ್ರಯೇಲ್ ಮನೆತನದವರೇ, ಗಮನಿಸಿ. ರಾಜವಂಶದವರೇ ಕಿವಿಗೊಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಯಾಜಕರೇ, ಇಸ್ರೇಲ್ ಜನಾಂಗವೇ, ಅರಸನ ಪರಿವಾರದವರೇ, ನನ್ನ ಮಾತುಗಳಿಗೆ ಕಿವಿಗೊಡಿರಿ. ಯಾಕೆಂದರೆ ನಿಮಗೆ ನ್ಯಾಯತೀರ್ಪು ಬಂದಿದೆ. “ಮಿಚ್ಪದಲ್ಲಿ ನೀವು ಉರುಲಿನಂತೆ ಇದ್ದಿರಿ. ತಾಬೋರಿನಲ್ಲಿ ನೆಲದ ಮೇಲೆ ಹರಡಿಸಿದ್ದ ಬಲೆಯಂತೆ ಇದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಯಾಜಕರೇ, ಇದನ್ನು ನೀವು ಕೇಳಿರಿ; ಇಸ್ರಾಯೇಲಿನ ಮನೆತನದವರೇ ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರುಲಾಗಿಯೂ, ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದ ಕಾರಣ ನಿಮಗೆ ವಿರುದ್ಧವಾಗಿ ಈ ನ್ಯಾಯತೀರ್ಪು ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 5:1
29 ತಿಳಿವುಗಳ ಹೋಲಿಕೆ  

ಎಫ್ರಾಯೀಮು ನನ್ನ ದೇವರ ವಿಷಯವಾಗಿ ಹೊಂಚುಹಾಕುತ್ತದೆ; ಪ್ರವಾದಿಯ ಮಾರ್ಗಗಳಲ್ಲೆಲ್ಲಾ ಬೇಟೆಯ ಬಲೆಯು ಒಡ್ಡಿದೆ, ಅವನ ದೇವರ ಆಲಯದಲ್ಲಿಯೂ ಶತ್ರುವಿರೋಧವು ಕಾದಿದೆ.


ಸದ್ಭಕ್ತರು ದೇಶದೊಳಗಿಂದ ನಾಶವಾಗಿದ್ದಾರೆ, ಜನರಲ್ಲಿ ಸತ್ಯವಂತರೇ ಇಲ್ಲ. ಸರ್ವರು ರಕ್ತಸುರಿಸಬೇಕೆಂದು ಹೊಂಚು ಹಾಕುತ್ತಾರೆ, ಒಬ್ಬರನ್ನೊಬ್ಬರು ಬಲೆಯೊಡ್ಡಿ ಬೇಟೆಯಾಡುತ್ತಾರೆ.


ನ್ಯಾಯಕ್ಕೆ ಅಸಹ್ಯಪಟ್ಟು ನೆಟ್ಟಗಿರುವದನ್ನು ಸೊಟ್ಟಗೆ ಮಾಡುವ ಯಾಕೋಬ್ ವಂಶದ ಮುಖಂಡರೇ, ಇಸ್ರಾಯೇಲ್ ಮನೆತನದ ಅಧ್ಯಕ್ಷರೇ,


ಡಕಾಯಿತಿಯವರು ಒಬ್ಬನಿಗೆ ಹೊಂಚುವಂತೆ ಯಾಜಕರು ಗುಂಪಾಗಿ ದಾರಿಯಲ್ಲಿ ಹೊಂಚಿಕೊಂಡಿದ್ದು ಶೆಕೆವಿುಗೆ ಹೋಗುವವರನ್ನು ಕೊಂದುಹಾಕುತ್ತಾರೆ; ಹೌದು, ಘೋರಕೃತ್ಯವನ್ನು ನಡಿಸುತ್ತಾರೆ.


ಆಕೆಯು ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನಿಗೆ - ನಿಶ್ಚಯವಾಗಿ ಇಸ್ರಾಯೇಲ್ಯರ ದೇವರಾದ ಯೆಹೋವನು ನಿನಗೆ - ಎದ್ದು ನಫ್ತಾಲಿ ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು;


ಯಾಜಕರೇ, ಈ ಅಪ್ಪಣೆಯು ಈಗ ನಿಮಗಾಗಿದೆ -


ಇಸಾಕನ ವಂಶದವರ ಪೂಜಾಸ್ಥಳಗಳು ಹಾಳಾಗುವವು, ಇಸ್ರಾಯೇಲಿನ ಪವಿತ್ರಾಲಯಗಳು ಬೀಡುಬೀಳುವವು; ನಾನು ಕತ್ತಿಹಿರಿದು ಯಾರೊಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು ಅಂದನು.


ನಿಮ್ಮ ದುಷ್ಟತನವು ಬಹಳವಾಗಿರುವದರಿಂದ ಬೇತೇಲು ಇಂಥ ದುರ್ಗತಿಯನ್ನು ನಿಮಗೆ ತರುವದು; ಬೆಳಗಾಗುವದರೊಳಗೆ ಇಸ್ರಾಯೇಲಿನ ರಾಜನು ತೀರಾ ಹಾಳಾಗುವನು.


ಇಸ್ರಾಯೇಲ್ಯರೇ, ಯೆಹೋವನ ವಾಕ್ಯವನ್ನು ಕೇಳಿರಿ; ಯೆಹೋವನು ದೇಶನಿವಾಸಿಗಳ ಮೇಲೆ ವಿವಾದಹಾಕಿದ್ದಾನೆ. ಏಕಂದರೆ ಪ್ರೀತಿ ಸತ್ಯತೆ ದೇವಜ್ಞಾನಗಳು ದೇಶದಲ್ಲಿಲ್ಲ;


ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಮಾನಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿತೋರಿಸುತ್ತಾನಷ್ಟೆ; ನಾನು ತಂದೆಯಾಗಿರಲು ನನಗೆ ಸಲ್ಲುವ ಮಾನವೆಲ್ಲಿ; ಧಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ ಎಂದು ಸೇನಾಧೀಶ್ವರ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು - ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ ಅನ್ನುತ್ತೀರಿ.


ನಾನು ಹೀಗೆ ಸಾರಿದೆನು - ಯಾಕೋಬಿನ ಮುಖಂಡರೇ, ಇಸ್ರಾಯೇಲ್ ವಂಶದ ಅಧ್ಯಕ್ಷರೇ, ಕೇಳಿರಿ, ಕೇಳಿರಿ! ನ್ಯಾಯವನ್ನು ಮಂದಟ್ಟುಮಾಡಿಕೊಳ್ಳುವದು ನಿಮ್ಮ ಧರ್ಮವಲ್ಲವೆ.


ಮರಿಗಳನ್ನು ಕಳಕೊಂಡ ಕರಡಿಯಂತೆ ಅವರಿಗೆ ಎದುರು ಬಿದ್ದು ಅವರ ಎದೆಯನ್ನು ಬಗಿದುಹಾಕುವೆನು; ಅಲ್ಲೇ ಮೃಗರಾಜನಂತೆ ಅವರನ್ನು ನುಂಗುವೆನು; ಭೂಜಂತುಗಳು ಅವರನ್ನು ಸೀಳಿಬಿಡುವವು.


ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ಇಗೋ, ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆಯೂ ಸಮುದ್ರದಿಂದೆದ್ದಿರುವ ಕರ್ಮೆಲ್ ಗುಡ್ಡದ ಹಾಗೂ ಉನ್ನತನಾದವನೊಬ್ಬನು ಬರುವನು.


ರಾಜನಿಗೂ ರಾಜಮಾತೆಗೂ - ನೆಲದಲ್ಲಿ ಕೂತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ ಎಂದು ಹೇಳಿರಿ.


ವೃದ್ಧರೇ, ಕೇಳಿರಿ! ದೇಶನಿವಾಸಿಗಳೇ, ನೀವೆಲ್ಲರೂ ಕಿವಿಗೊಡಿರಿ! ಇಂಥ ಬಾಧೆಯು ನಿಮ್ಮ ಕಾಲದಲ್ಲಿಯಾಗಲಿ ನಿಮ್ಮ ತಂದೆಗಳ ಕಾಲದಲ್ಲಿಯಾಗಲಿ ಸಂಭವಿಸಿತ್ತೋ?


ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿ ಬಂದಿದ್ದಾನೆಂಬ ವರ್ತಮಾನವು ಸೀಸೆರನಿಗೆ ಮುಟ್ಟಿದಾಗ


ಸಮುವೇಲನು ತಿರಿಗಿ ಅವರಿಗೆ - ಇಸ್ರಾಯೇಲ್ಯರೆಲ್ಲರೂ ವಿುಚ್ಪೆಯಲ್ಲಿ ಕೂಡಿ ಬರಲಿ; ನಾನು ನಿಮಗೋಸ್ಕರ ಯೆಹೋವನನ್ನು ಪ್ರಾರ್ಥಿಸುವೆನು ಅನ್ನಲು


ಅವರು ಅಲ್ಲಿ ಕೂಡಿಬಂದು ನೀರು ಸೇದಿ ಯೆಹೋವನ ಮುಂದೆ ಹೊಯ್ದು ಆ ದಿವಸ ಉಪವಾಸವಿದ್ದು - ನಿನಗೆ ದ್ರೋಹಿಗಳಾಗಿದ್ದೇವೆಂದು ಆತನಿಗೆ ಅರಿಕೆ ಮಾಡಿದರು. ಸಮುವೇಲನು ವಿುಚ್ಪೆಯಲ್ಲಿ ಇಸ್ರಾಯೇಲ್ಯರ ವ್ಯಾಜ್ಯಗಳನ್ನು ತೀರಿಸಿದನು.


ಅವನು ಇಸ್ರಾಯೇಲ್ಯರ ನ್ಯಾಯಗಳನ್ನು ತೀರಿಸುವದಕ್ಕೋಸ್ಕರ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್, ವಿುಚ್ಪೆ ಎಂಬ ಪಟ್ಟಣಗಳನ್ನು ಸುತ್ತಿ ರಾಮಕ್ಕೆ ತಿರಿಗಿ ಬರುತ್ತಿದ್ದನು.


ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಬರಮಾಡಿದಾರಭ್ಯ ಇಂದಿನವರೆಗೂ ನಾನು ಅವರಿಗೆ - ನನ್ನ ಮಾತನ್ನು ಕೇಳಿರಿ ಎಂದು ಸಾವಕಾಶಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದೆನಷ್ಟೆ.


ಇಸ್ರಾಯೇಲ್ಯರೇ, ಯೆಹೋವನು ನಿಮಗೆ ವಿರುದ್ಧವಾಗಿ, ಅಂದರೆ ತಾನು ಐಗುಪ್ತದೇಶದೊಳಗಿಂದ ಪಾರುಮಾಡಿದ ಪೂರ್ಣಕುಲಕ್ಕೆ ವಿರುದ್ಧವಾಗಿ ನುಡಿದಿರುವ ಈ ಮಾತನ್ನು ಕೇಳಿರಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು