Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 6:3 - ಕನ್ನಡ ಸತ್ಯವೇದವು J.V. (BSI)

3 ಯೆಹೋವನನ್ನು ತಿಳಿದುಕೊಳ್ಳೋಣ, ಹುಡುಕಿ ಹುಡುಕಿ ತಿಳಿದುಕೊಳ್ಳೋಣ; ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ ಭೂವಿುಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು [ಅಂದುಕೊಂಡು ನನ್ನನ್ನು ಮರೆಹೊಗುವರು].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನನ್ನು ತಿಳಿದುಕೊಳ್ಳೋಣ, ನಿರಂತರವಾಗಿ ಹುಡುಕಿ ತಿಳಿದುಕೊಳ್ಳೋಣ, ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ, ಭೂಮಿಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು” ಅಂದುಕೊಂಡು ನನ್ನನ್ನು ಮೊರೆಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಿರಂತರವಾಗಿ ಹುಡುಕಿ ಅವರನ್ನು ಕಂಡುಕೊಳ್ಳೋಣ; ಸರ್ವೇಶ್ವರಸ್ವಾಮಿಯನ್ನು ಅರಿತುಕೊಳ್ಳೋಣ; ಅವರ ಆಗಮನ ಸೂರ್ಯೋದಯದಂತೆ ನಿಶ್ಚಯ. ಭೂಮಿಯನ್ನು ತಣಿಸುವ ಮುಂಗಾರು ಹಿಂಗಾರು ಮಳೆಗಳಂತೆ ಅವರು ನಮ್ಮ ಬಳಿಗೆ ಬಂದೇ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನ ವಿಷಯವಾಗಿ ನಾವು ಕಲಿಯೋಣ. ಆತನನ್ನು ಅರಿತುಕೊಳ್ಳಲು ಅತಿಯಾಗಿ ಪ್ರಯತ್ನಿಸೋಣ. ಸೂರ್ಯೋದಯ ಆಗುತ್ತದೆಯೆಂಬುದು ನಮಗೆ ಗೊತ್ತಿರುವಂತೆಯೇ ಆತನು ಬರುವುದೂ ನಮಗೆ ಗೊತ್ತಿದೆ. ವಸಂತಕಾಲದ ಮಳೆಯಂತೆ ಯೆಹೋವನು ಬರುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾವು ಯೆಹೋವ ದೇವರನ್ನು ತಿಳಿದುಕೊಳ್ಳಲು, ಅವರನ್ನು ಹಿಂಬಾಲಿಸಿದರೆ ತಿಳಿದುಕೊಳ್ಳುವೆವು. ಅವರ ಆಗಮನವು ಅರುಣೋದಯದಂತೆ ನಿಶ್ಚಯ. ಅವರು ಮಳೆಯಂತೆಯೂ ಮುಂಗಾರಿನಂತೆಯೂ, ಭೂಮಿಯನ್ನು ತಂಪು ಮಾಡುವ ಹಿಂಗಾರಿನಂತೆಯೂ ಬಳಿಗೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 6:3
36 ತಿಳಿವುಗಳ ಹೋಲಿಕೆ  

ನಾನು ಇಸ್ರಾಯೇಲಿಗೆ ಇಬ್ಬನಿಯಂತಾಗುವೆನು; ಅದು ತಾವರೆಯಂತೆ ಒಡೆಯುವದು; ಲೆಬನೋನಿನ [ದೇವದಾರುಗಳ] ಹಾಗೆ ಬೇರುಬಿಟ್ಟುಕೊಳ್ಳುವದು.


ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು.


ಹುಲ್ಲು ಕೊಯಿದ ಮೇಹುಗಾಡಿನ ಮೇಲೆ ಸುರಿಯುವ ವೃಷ್ಟಿಯಂತೆಯೂ ಭೂವಿುಯನ್ನು ನೆನಸುವ ಹದಮಳೆಯಂತೆಯೂ ಅವನು ಇರಲಿ.


ಯೇಸುವೆಂಬ ನಾನು ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ವಿಷಯದಲ್ಲಿ ನಿಮಗೆ ಸಾಕ್ಷಿಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದವಂಶವೆಂಬ ಬುಡದಿಂದ ಹುಟ್ಟಿದ ಚಿಗುರೂ ಅವನ ಸಂತತಿಯೂ ಉದಯಸೂಚಕವಾದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.


ಅದಕ್ಕಾತನು ಅವರಿಗೆ - ಪರಲೋಕರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೇ ಕೊಟ್ಟದೆ; ಅವರಿಗೆ ಕೊಟ್ಟಿಲ್ಲ.


ಮಳೆಯಾಗುವಂತೆ ಹಿಂಗಾರಿನಲ್ಲಿ ಯೆಹೋವನನ್ನು ಬೇಡಿಕೊಳ್ಳಿರಿ; ಯೆಹೋವನೇ ವಿುಂಚುಗಳನ್ನು ಉಂಟುಮಾಡುತ್ತಾನೆ, ಮನುಷ್ಯರಿಗೆ ಸಮೃದ್ಧಿಯಾದ ಮಳೆಯನ್ನು ದಯಪಾಲಿಸುತ್ತಾನೆ, ಎಲ್ಲರಿಗೂ ಹೊಲದ ಪೈರನ್ನು ಅನುಗ್ರಹಿಸುತ್ತಾನೆ.


ಇದಲ್ಲದೆ ಪ್ರವಾದನವಾಕ್ಯವು ನಮಗೆ ಮತ್ತೂ ದೃಢವಾಗಿದೆ. ನಿಮ್ಮ ಹೃದಯದೊಳಗೆ ಬೆಳ್ಳಿಯು ಮೂಡಿ ಅರುಣೋದಯವಾಗುವ ಪರ್ಯಂತರ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಡುವದೇ ಒಳ್ಳೇದು.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ [ದೇವರ] ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ;


ಹೊರಟುಬಂದ ಬಹು ದೇಶಗಳವರು - ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ! ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು. ಏಕಂದರೆ ಚೀಯೋನಿನಿಂದ ಧರ್ಮೋಪದೇಶವೂ ಯೆರೂಸಲೇವಿುನಿಂದ ಯೆಹೋವನ ವಾಕ್ಯವೂ ಹೊರಡುವವು.


ಮೊದಲಿಂದಿರುವ ಭರವಸವನ್ನು ಅಂತ್ಯದವರೆಗೂ ದೃಢವಾಗಿ ಹಿಡಿದುಕೊಳ್ಳುವ ಪಕ್ಷಕ್ಕೆ ಕ್ರಿಸ್ತನಲ್ಲಿ ಪಾಲುಗಾರರಾಗಿದ್ದೇವಲ್ಲಾ!


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವದೇ ನಿತ್ಯಜೀವವು.


ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ, ಗೆಯ್ಯದ ನಿಮ್ಮ ಭೂವಿುಯನ್ನು ಗೆಯ್ಯಿರಿ; ಯೆಹೋವನು ಬಂದು ನಮ್ಮ ಮೇಲೆ ನೀತಿಯನ್ನು ವರ್ಷಿಸಲೆಂದು ಆತನನ್ನು ಶರಣುಹೊಗುವ ಸಮಯವು ಒದಗಿದೆ.


ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವದು.


ಆ ಸಭೆಯವರು ಥೆಸಲೋನಿಕದವರಿಗಿಂತ ಸದ್ಗುಣವುಳ್ಳವರಾಗಿದ್ದು ದೇವರ ವಾಕ್ಯವನ್ನು ಶುದ್ಧಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಏನೋ ಎಂಬ ವಿಷಯದಲ್ಲಿ ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದರು.


ನಾನು ನಿನ್ನನ್ನು ನಂಬಿಕೆಯಿಂದ ವರಿಸಲು ನೀನು ಯೆಹೋವನಾದ ನನ್ನನ್ನು ತಿಳಿದುಕೊಳ್ಳುವಿ.


ಬತ್ತಿದ ಭೂವಿುಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು, ಸುರಿಸುವೆನು.


ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವದು; ಆಗ ಅರಣ್ಯವು ತೋಟವಾಗುವದು, [ಈಗಿನ] ತೋಟವು [ಆಗಿನವರಿಗೆ] ಅರಣ್ಯವಾಗಿ ಕಾಣಿಸುವದು.


ನೀನು ನಮ್ಮ ದೇಶವನ್ನು ಕಟಾಕ್ಷಿಸಿ ಅದರ ಮೇಲೆ ಮಳೆಸುರಿಸಿ ಚೆನ್ನಾಗಿ ಹದಗೊಳಿಸುತ್ತೀ; ದೇವರೇ, ನಿನ್ನ ಕಾಲುವೆಗಳಲ್ಲಿ ನೀರಿಗೆ ಕೊರತೆ ಇಲ್ಲ. ಹೀಗೆ ಭೂವಿುಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತೀ.


ನನ್ನ ಉಪದೇಶವು ಹಸಿಹುಲ್ಲಿನ ಮೇಲೆ ಮೆಲ್ಲಗೆ ಸುರಿಯುವ ಮಳೆಯ ತುಂತುರುಗಳಂತೆ [ತಣ್ಣಗಿರುವದು;] ನನ್ನ ಬೋಧನೆಯು ಮಂಜಿನಂತೆಯೂ ಕಾಯಿಪಲ್ಯಗಳ ಮೇಲೆ ಬೀಳುವ ಹದಮಳೆಯಂತೆಯೂ [ಹಿತವಾಗಿರುವದು].


ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು; ಆತನ ಹೊರಡೋಣದ ಮೂಲವು ಪುರಾತನವೂ ಅನಾದಿಯೂ ಆದದ್ದು.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಅದನ್ನು ಹಾಳುಮಾಡುವೆನು, ಯಾರೂ ಕುಡಿಕತ್ತರಿಸಿ ಅಗತೆಮಾಡುವದಿಲ್ಲ; ಅದರಲ್ಲಿ ಮುಳ್ಳುಗಿಳ್ಳು ಬೆಳೆದುಹೋಗುವದು; ಮತ್ತು ಅದರ ಮೇಲೆ ಮಳೆಸುರಿಸಬಾರದೆಂದು ಮೇಘಗಳಿಗೆ ಅಪ್ಪಣೆಮಾಡುವೆನು.


ನೀತಿವಂತರ ಮಾರ್ಗವು ಮಧ್ಯಾಹ್ನದವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.


ಮಳೆಯನ್ನು ಹೇಗೋ ಹಾಗೆಯೇ ನನ್ನನ್ನು ಎದುರು ನೋಡುತ್ತಾ ಮುಂಗಾರಿಗೋ ಎಂಬಂತೆ ಬಾಯ್ದೆರೆಯುತ್ತಿದ್ದರು.


ಯೆಹೋವನ ವರವಾದ ಇಬ್ಬನಿಯೂ ಹುಲ್ಲನ್ನು ಬೆಳೆಯಿಸುವ ಹದಮಳೆಗಳೂ ಹೇಗೆ ಮನುಷ್ಯರನ್ನು ಎದುರುನೋಡದೆ ಮಾನವರನ್ನು ನಿರೀಕ್ಷಿಸದೆ ಹಿತಕರವಾಗಿರುವವೋ ಹಾಗೆಯೇ ಯಾಕೋಬಿನ ಜನಶೇಷವು ಬಹು ಜನಾಂಗಗಳ ಮಧ್ಯದಲ್ಲಿ ಹಿತಕರವಾಗಿರುವದು.


ಆದರೂ ಅವುಗಳ ಪ್ರಭುತ್ವವು ಭೂವಿುಯಲ್ಲೆಲ್ಲಾ ಪ್ರಸರಿಸಿದೆ; ಅವುಗಳ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿರುತ್ತವೆ. ಅಲ್ಲಿ ದೇವರು ಸೂರ್ಯನಿಗೋಸ್ಕರ ಗುಡಾರವನ್ನು ಏರ್ಪಡಿಸಿದ್ದಾನೆ.


ಆತನ ಚಿತ್ತದಂತೆ ನಡೆಯುವದಕ್ಕೆ ಯಾರಿಗೆ ಮನಸ್ಸದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದದ್ದೋ ನಾನೇ ಕಲ್ಪಿಸಿ ಹೇಳಿದ್ದೋ ಗೊತ್ತಾಗುವದು.


ಮೋಡಗಳಿಲ್ಲದ ಪ್ರಾತಃಕಾಲದಲ್ಲಿ ತೇಜೋಮಯನಾಗಿ ಉದಯಿಸಿ ಮೋಡಗಳನ್ನು ಚದರಿಸಿಬಿಟ್ಟು ಮಳೆಬಿದ್ದ ಭೂವಿುಯಿಂದ ಹುಲ್ಲನ್ನು ಮೊಳಿಸುವ ಸೂರ್ಯನಿಗೆ ಸಮಾನನಾಗಿದ್ದಾನೆ.


ಆಕಾಶದ ಒಂದು ಕಡೆಯಿಂದ ಹೊರಟು ಮತ್ತೊಂದು ಕಡೆಗೆ ಬರುತ್ತಾನೆ; ಅವನ ಬಿಸಲಿಗೆ ಮರೆಯಾದದ್ದು ಒಂದೂ ಇಲ್ಲ.


ನನ್ನ ಆತ್ಮವು ನಿನ್ನನ್ನು ಅಂಟಿಕೊಂಡು ಹಿಂಬಾಲಿಸಿರುವದು; ನಿನ್ನ ಬಲಗೈ ನನಗೆ ಆಧಾರವಾಗಿರುವದು.


ಹೊರಟುಬಂದ ಬಹು ಜನಾಂಗದವರು - ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ, ಹೋಗೋಣ! ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು. ಏಕಂದರೆ ಚೀಯೋನಿನಿಂದ ಧರ್ಮೋಪದೇಶವೂ ಯೆರೂಸಲೇವಿುನಿಂದ ಯೆಹೋವನ ವಾಕ್ಯವೂ ಹೊರಡುವವು.


ಅದರ ರೆಂಬೆಗಳು ಹರಡುವವು, ಅದರ ಅಂದವು ಒಲೀವ ಮರದಂತೆ ಕಂಗೊಳಿಸುವದು, ಅದರ ಪರಿಮಳವು ಲೆಬನೋನಿನ ಹಾಗೆ ಮನೋಹರವಾಗಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು