Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 7:7 - ಕನ್ನಡ ಸತ್ಯವೇದವು J.V. (BSI)

7 ಎಲ್ಲರೂ ಒಲೆಯಂತೆ ಝಳವೇರಿ ತಮ್ಮ ನ್ಯಾಯಾಧೀಶ್ವರರನ್ನು ನುಂಗಿಬಿಡುತ್ತಾರೆ; ಅವರ ಸಕಲರಾಜರು ಬಿದ್ದಿರುತ್ತಾರೆ, ಅವರೊಳಗೆ ನನ್ನನ್ನು ಪ್ರಾರ್ಥಿಸುವವರೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಎಲ್ಲರೂ ಒಲೆಯಂತೆ ಝಳವೇರಿ ತಮ್ಮ ನ್ಯಾಯಾಧೀಶ್ವರರನ್ನು ನುಂಗಿಬಿಡುತ್ತಾರೆ; ಅವರ ಸಕಲ ರಾಜರು ಬಿದ್ದಿರುತ್ತಾರೆ, ಅವರೊಳಗೆ ನನ್ನನ್ನು ಪ್ರಾರ್ಥಿಸುವವರೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಎಲ್ಲರು ಒಲೆಯಂತೆ ಉರಿಯುತ್ತ ತಮ್ಮ ಅಧಿಕಾರಿಗಳನ್ನೇ ನುಂಗಿಬಿಡುತ್ತಾರೆ. ಅವರ ಅರಸರೆಲ್ಲ ಸತ್ತುಬಿದ್ದಿದ್ದಾರೆ. ನನಗೆ ಮೊರೆಯಿಡುವವರು ಅವರಲ್ಲಿ ಯಾರೂ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವರು ಬಿಸಿ ಮಾಡಲ್ಪಟ್ಟ ಕುಲುಮೆಯಂತಿರುವರು. ಅವರು ತಮ್ಮನ್ನು ಆಳುವವರನ್ನು ನಾಶಮಾಡಿದರು. ಅವರ ರಾಜರುಗಳೆಲ್ಲಾ ಬಿದ್ದುಹೋದರು. ಅವರಲ್ಲಿ ಒಬ್ಬರಾದಲೂ ಸಹಾಯಕ್ಕಾಗಿ ನನಗೆ ಮೊರೆಯಿಡಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರೆಲ್ಲರೂ ಒಲೆಯ ಹಾಗೆ ಬಿಸಿಯಾಗಿದ್ದಾರೆ. ಅವರು ತಮ್ಮ ನ್ಯಾಯಾಧಿಪತಿಗಳನ್ನು ನುಂಗಿಬಿಡುತ್ತಾರೆ. ಅವರ ಅರಸರೆಲ್ಲರು ಬಿದ್ದು ಹೋಗಿದ್ದಾರೆ. ಅವರಲ್ಲಿ ಒಬ್ಬನಾದರೂ ನನ್ನನ್ನು ಕರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 7:7
27 ತಿಳಿವುಗಳ ಹೋಲಿಕೆ  

ಆಗ ಏಲನ ಮಗನಾದ ಹೋಶೇಯನು ರೆಮಲ್ಯನ ಮಗನಾದ ಪೆಕಹನಿಗೆ ವಿರೋಧವಾಗಿ ಒಳಸಂಚುಮಾಡಿ ಇವನನ್ನು ಉಜ್ಜೀಯನ ಮಗನಾದ ಯೋತಾಮನ ಆಳಿಕೆಯ ಇಪ್ಪತ್ತನೆಯ ವರುಷದಲ್ಲಿ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.


ಇವನ ಸರದಾರನೂ ರೆಮಲ್ಯನ ಮಗನೂ ಆಗಿದ್ದ ಪೆಕಹನು ಗಿಲ್ಯಾದಿನ ಐವತ್ತು ಮಂದಿ ಜನರನ್ನು ಕೂಡಿಸಿಕೊಂಡು ಇವನಿಗೆ ವಿರೋಧವಾಗಿ ಒಳಸಂಚುಮಾಡಿ ಸಮಾರ್ಯದಲ್ಲಿರುವ ಅರಮನೆಯ ಗರ್ಭಗೃಹದಲ್ಲಿ ಇವನನ್ನೂ ಅರ್ಗೋಬ್, ಅರ್ಯೇ ಎಂಬವರನ್ನೂ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.


ಗಾದಿಯ ಮಗನಾದ ಮೆನಹೇಮನೆಂಬವನು ತಿರ್ಚದಿಂದ ಸಮಾರ್ಯಕ್ಕೆ ಬಂದು ಅಲ್ಲಿದ್ದ ಯಾಬೇಷನ ಮಗನಾದ ಶಲ್ಲೂಮನನ್ನು ಕೊಂದು ಅವನಿಗೆ ಬದಲಾಗಿ ತಾನು ಅರಸನಾದನು.


ಯಾಬೇಷನ ಮಗನಾದ ಶಲ್ಲೂಮನು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಪ್ರಜೆಗಳ ಮುಂದೆಯೇ ಅವನನ್ನು ಕೊಂದು ಅವನಿಗೆ ಬದಲಾಗಿ ತಾನು ಅರಸನಾದನು.


ನನ್ನ ಅಪ್ಪಣೆಯಿಲ್ಲದೆ ರಾಜರನ್ನು ಕಲ್ಪಿಸಿಕೊಂಡಿದ್ದಾರೆ; ನನಗೆ ತಿಳಿಯದೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ; ತಮ್ಮ ಬೆಳ್ಳಿ ಬಂಗಾರಗಳಿಂದ ಬೊಂಬೆಗಳನ್ನು ನಿರ್ಮಿಸಿಕೊಂಡಿದ್ದಾರೆ; ಅವರು ನಿರ್ಮಿಸಿದ್ದೆಲ್ಲಾ ನಾಶವಾಗತಕ್ಕದ್ದೇ.


ಇಸ್ರಾಯೇಲಿಗೆ ಅದರ ಹೆಮ್ಮೆಯೇ ವಿರುದ್ಧ ಸಾಕ್ಷಿಯಾಗಿದೆ; ಇದೆಲ್ಲಾ ಸಂಭವಿಸಿದರೂ ಅದು ತನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಲಿಲ್ಲ, ಆತನನ್ನು ಆಶ್ರಯಿಸಲಿಲ್ಲ.


ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದೀಯಲ್ಲಾ.


ಯಾಕೋಬೇ, ನೀನಾದರೋ ನನ್ನನ್ನು ಪ್ರಾರ್ಥಿಸಲಿಲ್ಲ, ಇಸ್ರಾಯೇಲೇ, ನೀನು ನನ್ನ ವಿಷಯದಲ್ಲಿ ಬೇಸರಗೊಂಡಿದ್ದೀ.


ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ.


ಭ್ರಷ್ಟಹೃದಯವುಳ್ಳವರಾದರೋ ಸಿಟ್ಟುಗೊಂಡಿರುವರು, ಆತನು ಅವರನ್ನು ಬಂಧಿಸುವಾಗಲೂ [ಆತನಿಗೆ] ಮೊರೆಯಿಡುವದಿಲ್ಲ.


ಅವರು ಹಾಸಿಗೆಯ ಮೇಲೆ ಬಿದ್ದುಕೊಂಡು ಧಾನ್ಯದ್ರಾಕ್ಷಾರಸಗಳಿಗೆ ಅರಚಿಕೊಳ್ಳುತ್ತಾರೆಯೇ ಹೊರತು ನನ್ನನ್ನು ಮನಃಪೂರ್ವಕವಾಗಿ ಎಂದೂ ಪ್ರಾರ್ಥಿಸಲಿಲ್ಲ; ನನ್ನನ್ನು ತೊರೆದುಬಿಟ್ಟು ತಮ್ಮ ದೇಹಗಳನ್ನು ಗಾಯಮಾಡಿಕೊಳ್ಳುತ್ತಾರೆ.


ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗಿರುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೇ ನನ್ನನ್ನು ಆಶ್ರಯಿಸುವರು.


ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ; ಆದರೂ ನಾವು ನಮ್ಮ ದುರ್ಮಾರ್ಗಗಳನ್ನು ತೊರೆದುಬಿಟ್ಟು ನಿನ್ನ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಯೆಹೋವನೆಂಬ ನಿನ್ನ ದಯೆಯನ್ನು ಬೇಡಿಕೊಳ್ಳಲಿಲ್ಲ.


ನಾನು ದೇಶವನ್ನು ಹಾಳುಮಾಡದಂತೆ ನನ್ನೆದುರಿಗೆ ದೇಶರಕ್ಷಣೆಗಾಗಿ ಪೌಳಿಯ ಒಡಕಿನಲ್ಲಿ ನಿಲ್ಲುವದಕ್ಕೂ ಗೋಡೆಯನ್ನು ಗಟ್ಟಿಮಾಡುವದಕ್ಕೂ ತಕ್ಕವನನ್ನು ನಾನು ಹುಡುಕಲು ಯಾರೂ ಸಿಕ್ಕಲಿಲ್ಲ.


ಆಗ ಯೇಹುವು ತನ್ನ ಸೇವಕರಿಗೆ - ಅವರನ್ನು ಸಜೀವಿಗಳಾಗಿ ಹಿಡಿಯಿರಿ ಎಂದು ಆಜ್ಞಾಪಿಸಿದನು. ಅವರು ಅವರನ್ನು ಹಿಡಿದು ವಧಿಸಿ ಆ ಛತ್ರದ ಬಾವಿಯಲ್ಲಿ ಹಾಕಿದರು. ಅವರು ನಾಲ್ವತ್ತೆರಡು ಮಂದಿಯಿದ್ದರು; ಅವರಲ್ಲಿ ಒಬ್ಬನನ್ನೂ ಬಿಡಲಿಲ್ಲ.


ಪ್ರಧಾನ ಪುರುಷರು ಪತ್ರವನ್ನು ಓದಿದೊಡನೆ ಆ ಎಪ್ಪತ್ತು ಮಂದಿಯನ್ನು ಹಿಡಿದು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿ ಹಾಕಿ ಇಜ್ರೇಲಿನಲ್ಲಿದ್ದ ಯೇಹುವಿಗೆ ಕಳುಹಿಸಿದರು.


ಅವನು ಅವರಿಗೆ - ಆಕೆಯನ್ನು ಕೆಳಗೆ ದೊಬ್ಬಿರಿ ಎಂದು ಆಜ್ಞಾಪಿಸಲು ಅವರು ದೊಬ್ಬಿದರು. ಆಕೆಯ ರಕ್ತವು ಗೋಡೆಗೂ ಕುದುರೆಗಳಿಗೂ ಸಿಡಿಯಿತು. ಅವನು ಆಕೆಯ ಶವವನ್ನು ತುಳಿಸಿಬಿಟ್ಟನು.


ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ಯೋರಾಮನ ಬೆನ್ನಿಗೆ ಬಾಣವನ್ನೆಸೆದನು; ಅದು ಅವನ ಹೃದಯದಿಂದ ಹೊರಗೆ ಬಂದಿತು. ಅವನು ಮುದುರಿಕೊಂಡು ರಥದಲ್ಲಿ ಬಿದ್ದನು.


ಪಟ್ಟಣವು ಅವರ ವಶವಾದದ್ದನ್ನು ಜಿಮ್ರಿಯು ಕಂಡು ಅರಮನೆಯ ಗರ್ಭಗೃಹವನ್ನು ಹೊಕ್ಕು ಅರಮನೆಗೆ ಬೆಂಕಿಹೊತ್ತಿಸಿ ಸುಟ್ಟುಕೊಂಡು ಸತ್ತನು.


ಆದರೆ ಒಮ್ರಿಯ ಪಕ್ಷದವರು ಗೀನತನ ಮಗನಾದ ತಿಬ್ನಿಯ ಪಕ್ಷದವರನ್ನು ಸೋಲಿಸಿದರು. ತಿಬ್ನಿಯು ಸಾಯಲಾಗಿ ಒಮ್ರಿಯೇ ಆಳುವವನಾದನು.


ಬಾಷನು ಯೆಹೂದದ ಅರಸನಾದ ಆಸನ ಆಳಿಕೆಯ ಮೂರನೆಯ ವರುಷದಲ್ಲಿ ಇವನನ್ನು ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು;


ಈಗ ನಿನ್ನ ಅರಸನು ಎಲ್ಲಿ? ನಿನ್ನ ಪಟ್ಟಣಗಳಲ್ಲೆಲ್ಲಾ ನಿನ್ನವರನ್ನು ಉದ್ಧರಿಸುವನೋ? ನನಗೆ ರಾಜನನ್ನೂ ರಾಜ್ಯಾಧಿಕಾರಿಗಳನ್ನೂ ದಯಪಾಲಿಸು ಎಂದು ನನ್ನನ್ನು ಕೇಳಿಕೊಂಡಿಯಷ್ಟೆ; ಆ ಪಾಲಕರು ಎಲ್ಲಿ?


ತಮ್ಮ ಹಾಸಿಗೆಗಳಲ್ಲೇ ಅನ್ಯಾಯವನ್ನು ಯೋಚಿಸಿ ಕೇಡನ್ನು ಕಲ್ಪಿಸುವವರ ಗತಿಯನ್ನು ಏನು ಹೇಳಲಿ! ಉದಯದ ಬೆಳಕಿನಲ್ಲಿ ಅದನ್ನು ನಡಿಸುವರು, ಅದು ಅವರ ಕೈವಶವಷ್ಟೆ.


ದುಷ್ಟತ್ವವನ್ನು ನಡಿಸುವವರೆಲ್ಲರು ತಿಳಿಯುವದಿಲ್ಲವೋ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ಯೆಹೋವನನ್ನು ಸ್ಮರಿಸುವದಿಲ್ಲ.


ನಿನ್ನನ್ನು ಬಿಟ್ಟರೆ ನಿರೀಕ್ಷಿಸುವವನಿಗೆ ಕಾರ್ಯಕರ್ತನಾದ ಯಾವ ದೇವರನ್ನೂ ಆದಿಯಿಂದ ಯಾರೂ ಕೇಳಲಿಲ್ಲ, ಯಾರ ಕಿವಿಗೂ ಬೀಳಲಿಲ್ಲ, ಯಾರ ಕಣ್ಣೂ ಕಾಣಲಿಲ್ಲ.


ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ತರಗೆಲೆಯೋಪಾದಿಯಲ್ಲಿ ಒಣಗಿ ಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು