Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 8:13 - ಕನ್ನಡ ಸತ್ಯವೇದವು J.V. (BSI)

13 ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳಿಗೆ ಮೆಚ್ಚನು; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳನ್ನು ಮೆಚ್ಚುವುದಿಲ್ಲ; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಎಫ್ರಯಿಮಿನವರು ಬಲಿಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸುತ್ತಾರೆ, ವಧಿಸಿದ್ದನ್ನು ಭುಜಿಸುತ್ತಾರೆ. ಆದರೆ ಆ ಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಅಧರ್ಮವನ್ನು ನೆನಪಿಗೆ ತಂದುಕೊಂಡು ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವೆನು. ಆ ಜನರು ಈಜಿಪ್ಟಿಗೆ ಹಿಂದಿರುಗಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇಸ್ರೇಲರು ಯಜ್ಞವನ್ನು ಪ್ರೀತಿಸುತ್ತಾರೆ. ಅವರು ಮಾಂಸವನ್ನು ಯಜ್ಞಮಾಡಿ ತಿನ್ನುತ್ತಾರೆ. ಯೆಹೋವನು ಅವರ ಯಜ್ಞವನ್ನು ಸ್ವೀಕರಿಸುವುದಿಲ್ಲ. ಅವರ ಪಾಪಗಳನ್ನು ತನ್ನ ನೆನಪಿಗೆ ತಂದು ಅವರನ್ನು ಶಿಕ್ಷಿಸುವನು. ಅವರು ಈಜಿಪ್ಟಿಗೆ ಸೆರೆಯಾಳುಗಳಾಗಿ ಒಯ್ಯಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ, ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ. ಆದರೆ ಯೆಹೋವ ದೇವರು ಅವುಗಳಿಗೆ ಮೆಚ್ಚುವುದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕಮಾಡಿಕೊಂಡು, ಅವರ ಪಾಪಗಳನ್ನು ಶಿಕ್ಷಿಸಿದರು. ಅವರು ಈಜಿಪ್ಟಿಗೆ ಹಿಂದಿರುಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 8:13
30 ತಿಳಿವುಗಳ ಹೋಲಿಕೆ  

ಪೂರ್ವದಲ್ಲಿ ಗಿಬ್ಯದವರು ಕೆಡಿಸಿಕೊಂಡಂತೆ ಎಫ್ರಾಯೀಮ್ಯರು ತಮ್ಮನ್ನು ತೀರಾ ಕೆಡಿಸಿಕೊಂಡಿದ್ದಾರೆ; ದೇವರು ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗೆ ಪ್ರತಿದಂಡನೆಮಾಡುವನು.


ಆಹಾ, ಅವರು ಹಾಳಾದ ದೇಶವನ್ನು ಬಿಟ್ಟುಹೋಗುವರು; ಐಗುಪ್ತವು ಅವರಿಗೆ ಶ್ಮಶಾನವಾಗುವದು, ಮೋಫ್ ಪಟ್ಟಣವು ಅವರನ್ನು ಹೂಣಿಡುವದು; ಅವರ ಇಷ್ಟದ ಬೆಳ್ಳಿಯ ಒಡವೆಗಳು ದಬ್ಬೆಗಳ್ಳಿಗಳ ಪಾಲಾಗುವವು; ಮುಳ್ಳುಗಿಡಗಳು ಅವರ ಗುಡಾರಗಳಲ್ಲಿ ಹುಟ್ಟಿಕೊಳ್ಳುವವು.


ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ - ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವದನ್ನೂ ಎಂದಿಗೂ ಮರೆತುಬಿಡೆನು.


ನೀವು ನನಗೆ ಸರ್ವಾಂಗಹೋಮಗಳನ್ನೂ ಧಾನ್ಯನೈವೇದ್ಯಗಳನ್ನೂ ಅರ್ಪಿಸಿದರೂ ಸ್ವೀಕರಿಸೆನು; ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸುವ ಕೊಬ್ಬಿದ ಪಶುಗಳನ್ನು ನೋಡೆನು.


ಇಸ್ರಾಯೇಲು ಐಗುಪ್ತದೇಶಕ್ಕೆ ಹಿಂದಿರುಗದು; ಅದು [ನನ್ನ ಕಡೆಗೆ] ಹಿಂದಿರುಗಲು ಒಪ್ಪದ ಕಾರಣ ಅಶ್ಶೂರವೇ ಅದಕ್ಕೆ ರಾಜನಾಗಬೇಕು.


ಅವು ತಮ್ಮ ದನಕುರಿಗಳ ಸಂಗಡ ಯೆಹೋವನನ್ನು ಶರಣುಹೊಗಲು ಹೊರಡುವವು; ಆತನು ಸಿಕ್ಕನು, ಅವುಗಳ ಕಡೆಯಿಂದ ಮರೆಯಾಗಿದ್ದಾನೆ.


ಯೆಹೋವನು ಈ ಜನರನ್ನು ಕುರಿತು - ಇವರು [ನನ್ನನ್ನು ಪ್ರಯಾಣಿಕನು ಎಂದ] ಹಾಗೆಯೇ ಅಲೆಯುವದಕ್ಕೆ ಇಷ್ಟಪಟ್ಟಿದ್ದಾರೆ, ಕಾಲನ್ನು ಹಿಂದೆಗೆಯಲಿಲ್ಲ; ಆದಕಾರಣ ಯೆಹೋವನಾದ ನಾನು ಇವರನ್ನು ಕಟಾಕ್ಷಿಸೆನು; ಈಗಲೇ ಇವರ ಅಪರಾಧವನ್ನು ಮನಸ್ಸಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು ಎಂದು ಹೇಳಿದ್ದಾನೆ.


ಯೆಹೋವನು ಹೀಗೆನ್ನುತ್ತಾನೆ - ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿಕುರಿಹೋತಗಳ ರಕ್ತಕ್ಕೆ ನಾನು ಒಲಿಯೆನು.


ನೀವು ಐಗುಪ್ತದೇಶವನ್ನು ತಿರಿಗಿ ಎಂದಿಗೂ ನೋಡುವದಿಲ್ಲವೆಂದು ಯೆಹೋವನು ಹೇಳಿದ್ದರೂ ಆತನು ನಿಮ್ಮನ್ನು ಹಡಗುಗಳನ್ನೇರಿಸಿ ಅಲ್ಲಿಗೆ ತಿರಿಗಿ ಹೋಗಮಾಡುವನು. ಅಲ್ಲಿ ನೀವು ಶತ್ರುಗಳಿಗೆ ನಿಮ್ಮನ್ನು ದಾಸದಾಸಿಯರನ್ನಾಗಿ ಮಾರಿಕೊಳ್ಳಬೇಕೆಂದು ಅಪೇಕ್ಷಿಸಿದರೂ ಯಾರೂ ನಿಮ್ಮನ್ನು ಕೊಂಡುಕೊಳ್ಳುವದಿಲ್ಲ.


ಮಹಾ ಪಟ್ಟಣವು ಮೂರು ಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು. ಇದಲ್ಲದೆ ದೇವರು ದೊಡ್ಡ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಅವಳಿಗೆ ಕುಡಿಯಲು ಕೊಟ್ಟನು.


ಯಾಕಂದರೆ ಕರ್ತನ ದೇಹವೆಂದು ವಿವೇಚಿಸದೆ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವದರಿಂದ ನ್ಯಾಯತೀರ್ಪಿಗೊಳಗಾಗುವನು.


ಪರಂತು ನೀವೆಲ್ಲರು ಕೂಡಿಬರುವಾಗ ನೀವು ಮಾಡುವ ಭೋಜನವು ಕರ್ತನ ಭೋಜನವಲ್ಲ.


ಗಿಲ್ಯಾದು ಅಧರ್ಮಮಯವೋ? ಅದು ಶೂನ್ಯದ ಗತಿಗೆ ಬರುವದು; ಗಿಲ್ಗಾಲಿನಲ್ಲಿ ಗೋಮೇಧವು ನಡೆಯುವದೋ? ಅಲ್ಲಿನ ಯಜ್ಞವೇದಿಗಳು ಹೊಲದ ನೇಗಿಲ ಗೆರೆಗಳಲ್ಲಿ ಕಲ್ಲುಕುಪ್ಪೆಗಳಾಗಿ ಸಿಕ್ಕುವವು.


ಅತ್ತಿತ್ತ ತಿರುಗಿಕೊಳ್ಳುತ್ತಾರೆ, ಮೇಲಕ್ಕೆ ಮಾತ್ರ ತಿರುಗಿಕೊಳ್ಳುವದಿಲ್ಲ; ಮೋಸದ ಬಿಲ್ಲಿಗೆ ಸಮಾನರಾಗಿದ್ದಾರೆ; ಅವರ ಮುಖಂಡರು ತಮ್ಮ ನಾಲಿಗೆಯ ಸೊಕ್ಕಿನ ನಿವಿುತ್ತ ಖಡ್ಗಹತರಾಗಿ ಬೀಳುವರು; ಅವರ ಪತನವು ಐಗುಪ್ತದೇಶದ ಹಾಸ್ಯಕ್ಕೆ ಆಸ್ಪದವಾಗುವದು.


ತಮ್ಮ ದುರ್ಮಾರ್ಗವೆಲ್ಲಾ ಯೆಹೋವನ ಜ್ಞಾಪಕದಲ್ಲಿರುತ್ತದೆ ಎಂದು ಅವರು ಮಂದಟ್ಟುಮಾಡಿಕೊಳ್ಳುವದಿಲ್ಲ; ಅವರ ದುಷ್ಕೃತ್ಯಗಳು ಈಗ ಅವರನ್ನು ಮುತ್ತಿಕೊಂಡಿವೆ, ನನ್ನ ಕಣ್ಣೆದುರಿಗಿವೆ.


ಜನರೂ ಯಾಜಕರೂ ಒಂದೇ; ಅವರ ದುಷ್ಕಾರ್ಯಗಳಿಗೆ ಅವರನ್ನು ದಂಡಿಸುವೆನು, ಅವರ ದುಷ್ಕೃತ್ಯಗಳನ್ನು ಅವರಿಗೆ ಕಟ್ಟುವೆನು. ಅವರು ಉಣ್ಣುತ್ತಿದ್ದರೂ ತೃಪ್ತಿ ದೊರೆಯದು,


ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವದು ಮತ್ತೂ ಅಸಹ್ಯ.


ಅದಕ್ಕೆ ಸಮುವೇಲನು - ಯೆಹೋವನು ವಿಧೇಯತ್ವಕ್ಕೆ ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವದಕ್ಕಿಂತ ಮಾತು ಕೇಳುವದು ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತ್ವವು ವಿಶೇಷವಾಗಿದೆ.


ನೀನು ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ದೇಶಕ್ಕೆ ಈ ಜನರನ್ನು ನಡಿಸಿಕೊಂಡು ಹೋಗು. ನನ್ನ ದೂತನು ನಿನ್ನ ಮುಂದುಗಡೆಯಲ್ಲಿ ನಡೆಯುವನು. ಆದರೂ ನಾನು ಅವರನ್ನು ಶಿಕ್ಷಿಸುವಾಗ ಅವರ ಪಾಪಕ್ಕೆ ತಕ್ಕಂತೆ ಶಿಕ್ಷಿಸುವೆನು.


ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಬಾರದು.


ಮರೆಯಾಗಿರುವ ಯಾವದೂ ವ್ಯಕ್ತವಾಗದೆ ಇರುವದಿಲ್ಲ; ಹೊರಪಡದ ರಹಸ್ಯವೂ ಇಲ್ಲ.


ಆದದರಿಂದ ಕಾಲಕ್ಕೆ ಮೊದಲು ಯಾವದನ್ನು ಕುರಿತೂ ತೀರ್ಪುಮಾಡಬೇಡಿರಿ; ಕರ್ತನು ಬರುವ ತನಕ ತಡೆಯಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು, ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವದು.


ನೀವು ಶೆಬದ ಧೂಪವನ್ನೂ ದೂರದೇಶದ ಒಳ್ಳೆ ಬಜೆಯನ್ನೂ ನನಗೆ ಅರ್ಪಿಸುವದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಲ್ಲ.


ಐಗುಪ್ತವು ಇನ್ನು ಇಸ್ರಾಯೇಲ್ ವಂಶದವರ ಭರವಸವಾಗದು; ಮತ್ತು ಅದರ ಕಡೆಗೆ ಕಣ್ಣೆತ್ತುವ ದೇವದ್ರೋಹದ ನೆನಪು ಇಸ್ರಾಯೇಲ್ಯರಲ್ಲಿ ಐಗುಪ್ತದಿಂದ ಇನ್ನು ಹುಟ್ಟದು. ನಾನೇ ಯೆಹೋವನು ಎಂದು ಅವರಿಗೆ ಮನದಟ್ಟಾಗುವದು.


ಎಫ್ರಾಯೀಮು ಬುದ್ಧಿವಿವೇಕಗಳಿಲ್ಲದ ಪಾರಿವಾಳದಂತಿದೆ; ಅದರ ಜನರು ಐಗುಪ್ತವನ್ನು ಕೂಗುತ್ತಾರೆ, ಅಶ್ಶೂರಕ್ಕೆ ಹೊರಡುತ್ತಾರೆ;


ದಂಡನೆಯ ದಿನಗಳು ಹತ್ತರಿಸಿವೆ, ಮುಯ್ಯಿತೀರಿಸುವ ದಿವಸಗಳು ಸಮೀಪಿಸಿವೆ; ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; [ಇಸ್ರಾಯೇಲೇ,] ನಿನ್ನ ಅಧರ್ಮವು ಬಹಳವಾಗಿರುವದರಿಂದಲೂ ವಿರೋಧವು ಹೆಚ್ಚಾಗಿರುವದರಿಂದಲೂ ಪ್ರವಾದಿಯು ಮೂರ್ಖನು, ದೇವರಾತ್ಮಾವಿಷ್ಟನು ಹುಚ್ಚನು [ಅಂದುಕೊಳ್ಳುತ್ತಿ].


ನನಗೆ ಯಜ್ಞವು ಬೇಡ, ಕರುಣೆಯೇ ಬೇಕು; ಹೋಮಗಳಿಗಿಂತ ದೇವಜ್ಞಾನವೇ ಇಷ್ಟ.


ಭೂವಿುಯ ಸಕಲಕುಲಗಳೊಳಗೆ ನಿಮ್ಮನ್ನು ಮಾತ್ರ ನನ್ನವರೆಂದು ಅರಿತುಕೊಂಡಿದ್ದೇನೆ; ಆದಕಾರಣ ನಿಮ್ಮ ಎಲ್ಲಾ ಪಾಪಗಳ ಫಲವನ್ನು ನಿಮಗೆ ತಿನ್ನಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು