Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 8:7 - ಕನ್ನಡ ಸತ್ಯವೇದವು J.V. (BSI)

7 ಅವರು ಗಾಳಿಯನ್ನು ಬಿತ್ತುತ್ತಾರೆ, ಬಿರುಗಾಳಿಯನ್ನು ಕೊಯ್ದುಕೊಳ್ಳುವರು. ಇಸ್ರಾಯೇಲಿಗಾಗಿ ಪೈರು ತೆನೆಗೆ ಬಾರದು; ಬೀಜ ಮೊಳೆತರೂ ಹಿಟ್ಟುಸಿಕ್ಕದು; ಒಂದು ವೇಳೆ ಸಿಕ್ಕಿದರೂ ಅನ್ಯರು ಅದನ್ನು ನುಂಗಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಗಾಳಿಯನ್ನು ಬಿತ್ತುತ್ತಾರೆ, ಬಿರುಗಾಳಿಯನ್ನು ಕೊಯ್ದುಕೊಳ್ಳುವರು. ಇಸ್ರಾಯೇಲರ ಪೈರು ತೆನೆಗೆ ಬಾರದು; ಬೀಜ ಮೊಳೆತರೂ ಹಿಟ್ಟು ಸಿಕ್ಕದು; ಒಂದು ವೇಳೆ ಸಿಕ್ಕಿದರೂ ಅನ್ಯರು ಅದನ್ನು ನುಂಗಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇವರು ಗಾಳಿಯನ್ನು ಬಿತ್ತುತ್ತಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅವರ ಪೈರು ತೆನೆಗೆ ಬಾರದು. ಕಾಳು ಮೊಳೆತರೂ ಕೂಳು ದೊರಕದು. ಒಂದು ವೇಳೆ ದೊರಕಿದರೂ ಅನ್ಯಜನರು ಅದನ್ನು ಕಬಳಿಸಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇಸ್ರೇಲರು ಅಜ್ಞಾನದ ಕಾರ್ಯ ಮಾಡಿದರು. ಅವರು ಗಾಳಿಯನ್ನು ನೆಡಲು ಪ್ರಯತ್ನಿಸಿದರು. ಆದರೆ ಅವರಿಗೆ ತೊಂದರೆಗಳೇ ಪ್ರಾಪ್ತವಾಗುವದು. ಅವರು ಸುಂಟರಗಾಳಿಯನ್ನು ಕೊಯ್ಯುವರು. ಹೊಲದಲ್ಲಿ ಧಾನ್ಯವು ಬೆಳೆಯುವದು. ಆದರೆ ಅವು ಆಹಾರವನ್ನು ಕೊಡುವದಿಲ್ಲ. ಒಂದುವೇಳೆ ಅದು ಕೊಟ್ಟರೂ ಅಪರಿಚಿತರು ಅದನ್ನು ತಿನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಅವರು ಗಾಳಿಯನ್ನು ಬಿತ್ತಿದ್ದಾರೆ. ಬಿರುಗಾಳಿಯನ್ನು ಕೊಯ್ಯುತ್ತಾರೆ. ಇಸ್ರಾಯೇಲರ ಪೈರು ತೆನೆಗೆ ಬಾರದು. ಮೊಳಕೆಯು ಆಹಾರವನ್ನು ಕೊಡುವುದಿಲ್ಲ. ಒಂದು ವೇಳೆ ಅದು ಕೊಟ್ಟರೂ ವಿದೇಶಿಯರು ಅದನ್ನು ನುಂಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 8:7
22 ತಿಳಿವುಗಳ ಹೋಲಿಕೆ  

ಕೆಟ್ಟತನವನ್ನು ಬಿತ್ತುವವನು ಕೇಡನ್ನೇ ಕೊಯ್ಯುವನು; ಹೆಮ್ಮೆಯಿಂದ ಹಿಡಿದ ದಂಡವು ಅವನ ಕೈಯಿಂದ ಬಿದ್ದುಹೋಗುವದು.


ನಾನು ನೋಡಿರುವ ಮಟ್ಟಿಗೆ ಅಧರ್ಮವನ್ನು ಉತ್ತು ಕೇಡನ್ನು ಬಿತ್ತುವವರು ಕೇಡನ್ನೇ ಕೊಯ್ಯುವರು.


ಮೋಸಹೋಗಬೇಡಿರಿ; ದೇವರು ತಿರಸ್ಕಾರ ಸಹಿಸುವವನಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.


ಯೆಹೋವನು ದೀರ್ಘಶಾಂತನಾಗಿದ್ದರೂ ಆತನ ಶಕ್ತಿಯು ಅಪಾರ, ಅಪರಾಧಿಗಳನ್ನು ಶಿಕ್ಷಿಸದೆ ಬಿಡನು; ಯೆಹೋವನು ಬಿರುಗಾಳಿಯಲ್ಲಿಯೂ ತುಫಾನಿನಲ್ಲಿಯೂ ನಡೆಯುತ್ತಾನೆ; ಮೋಡಗಳು ಆತನ ಹೆಜ್ಜೆಯಿಂದೇಳುವ ದೂಳು.


ಅನ್ಯರು ಅದರ ಶಕ್ತಿಯನ್ನು ಹೀರಿಬಿಟ್ಟಿದ್ದರೂ ಅದಕ್ಕೆ ತಿಳಿಯದು; ಅದರ ತಲೆಯ ಮೇಲೆ ಅಲ್ಲಲ್ಲಿ ನರೆಯು ಕಾಣಿಸಿದರೂ ಅದಕ್ಕೆ ಗೊತ್ತಿಲ್ಲ.


ಆದಕಾರಣ ನಾನು ನನ್ನ ಧಾನ್ಯದ್ರಾಕ್ಷಾರಸಗಳನ್ನು ಆಯಾ ಕಾಲದಲ್ಲಿ ಹಿಂದಕ್ಕೆ ತೆಗೆದುಕೊಳ್ಳುವೆನು, ಅವಳ ಮಾನವನ್ನು ಮರೆಮಾಡುವದಕ್ಕೆ ನಾನು ಕೊಟ್ಟ ಉಣ್ಣೆನಾರುಗಳನ್ನು ಕಿತ್ತುಬಿಡುವೆನು.


ಗೋದಿಯನ್ನು ಬಿತ್ತಿ ಮುಳ್ಳನ್ನು ಕೊಯ್ದಿದ್ದಾರೆ; ಕ್ಷೇಮ ಕೆಡುವಷ್ಟು ಪ್ರಯಾಸಪಟ್ಟರೂ ಯಾವ ಲಾಭವನ್ನೂ ಹೊಂದಲಿಲ್ಲ; ಯೆಹೋವನ ರೋಷಾಗ್ನಿಯ ನಿವಿುತ್ತ ನಿಮ್ಮ ಬೆಳೆಯ ವಿಷಯವಾಗಿ ನಿಮಗೆ ನಾಚಿಕೆಯಾಗುವದು.


ಆಹಾ, ಯೆಹೋವನು ಬೆಂಕಿಯನ್ನು ಕಟ್ಟಿಕೊಂಡು ಬರುವನು; ಆತನ ರಥಗಳು ಬಿರುಗಾಳಿಯಂತಿರುವವು; ರೌದ್ರಾವೇಶದಿಂದ ತನ್ನ ಸಿಟ್ಟನ್ನು ತೀರಿಸುವನು, ಅಗ್ನಿಜ್ವಾಲೆಯಿಂದ ಖಂಡಿಸುವನು.


ಬೀಜವನ್ನು ನೆಟ್ಟ ದಿವಸದಲ್ಲಿಯೇ ಬೇಲಿಕಟ್ಟಿ, ಮಾರಣೆಯ ಬೆಳಿಗ್ಗೆ ಮೊಳೆಯುವಂತೆ ಮಾಡಿದ್ದೀ; ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತವ್ಯಥೆಯ ದಿವಸವೇ.


ಬಂದಂತೆಯೇ ಗತಿಸುವನು; ಗಾಳಿಗಾಗಿ ಪಟ್ಟ ಪ್ರಯಾಸದಿಂದ ಅವನಿಗೆ ಲಾಭವೇನು? ಇದೇ ಕೇವಲ ದುರ್ದಶೆ.


ಇಸ್ರಾಯೇಲ್ಯರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಗಿಲ್ಯಾದ್, ಗಲಿಲಾಯ ಪ್ರಾಂತಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡುಹೋದನು.


ಅಶ್ಶೂರ್‍ದೇಶದ ಅರಸನಾದ ಪೂಲನೆಂಬವನು ಇಸ್ರಾಯೇಲ್‍ದೇಶಕ್ಕೆ ವಿರೋಧವಾಗಿ ಬಂದಾಗ ಮೆನಹೇಮನು ಅವನ ಮುಖಾಂತರವಾಗಿ ತನ್ನ ಅರಸುತನವನ್ನು ದೃಢಪಡಿಸಿಕೊಳ್ಳುವದಕ್ಕೋಸ್ಕರ ಅವನಿಗೆ ಸಾವಿರ ತಲಾಂತು ಬೆಳ್ಳಿಯನ್ನು ಕೊಟ್ಟನು.


ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು.


ತನ್ನ ಶರೀರಭಾವವನ್ನು ಕುರಿತು ಬಿತ್ತುವವನು ಆ ಭಾವದಿಂದ ನಾಶನವನ್ನು ಕೊಯ್ಯುವನು. ಆತ್ಮನನ್ನು ಕುರಿತು ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.


ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ರಯಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೇದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.


ನಮ್ಮ ಸ್ವಾಸ್ತ್ಯವು ಪರರ ಪಾಲಾಗಿದೆ, ನಮ್ಮ ಮನೆಗಳು ಹೆರರ ಕೈಗೆ ಸಿಕ್ಕಿವೆ.


ಎಪ್ರಾಯೀಮ್ಯರಿಗೆ ಘಾತವಾಗಿದೆ; ಅವರ ವಂಶಮೂಲವು ಒಣಗಿಹೋಗಿದೆ; ಅವರು ಫಲಹೀನರಾಗುವರು; ಹೌದು, ಅವರು ಮಕ್ಕಳನ್ನು ಹೆತ್ತರೂ ಅವರ ಗರ್ಭದ ಪ್ರಿಯಫಲವನ್ನು ಸಾಯಿಸುವೆನು.


ನೀವು ಬಿತ್ತಿದ ಬೀಜವು ಬಹಳ, ತಂದ ಫಲವು ಸ್ವಲ್ಪ; ತಿನ್ನುತ್ತೀರಿ, ತೃಪ್ತಿಯಾಗದು, ಕುಡಿಯುತ್ತೀರಿ, ಆನಂದವಾಗದು; ಹೊದಿಯುತ್ತೀರಿ, ಬೆಚ್ಚಗಾಗದು; ಸಂಬಳಗಾರನು ಸಂಬಳಹಾಕುವ ಚೀಲವು ತೂತಿನದು.


ಅವುಗಳ ಹಿಂದೆ ಮೂಡಣ ಗಾಳಿಯಿಂದ ಕೆಟ್ಟು ಬತ್ತಿ ಒಣಗಿಹೋಗಿದ್ದ ಬೇರೆ ಏಳು ತೆನೆಗಳು ಮೊಳೆತುಬಂದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು