ಹೋಶೇಯ 9:4 - ಕನ್ನಡ ಸತ್ಯವೇದವು J.V. (BSI)4 ಯೆಹೋವನಿಗೆ ದ್ರಾಕ್ಷಾರಸವನ್ನು ನೈವೇದ್ಯವಾಗಿ ಸುರಿಯರು, ಅವರ ಯಜ್ಞಗಳು ಆತನಿಗೆ ಮೆಚ್ಚಿಕೆಯಾಗವು; ಅವರ ಆಹಾರವು ಹೆಣದ ಮನೆಯ ಆಹಾರದಂತಿರುವದು, ಅದನ್ನು ತಿನ್ನುವವರೆಲ್ಲರೂ ಅಶುದ್ಧರಾಗುವರು, ಅದು ಹೊಟ್ಟೆತುಂಬುವದಕ್ಕೆ ಮಾತ್ರ ಅನುಕೂಲಿಸುವದು. ಅದು ಯೆಹೋವನ ಆಲಯಕ್ಕೆ ಬಂದಿಲ್ಲವಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವನಿಗೆ ದ್ರಾಕ್ಷಾರಸವನ್ನು ನೈವೇದ್ಯವಾಗಿ ಸುರಿಯರು, ಅವರ ಯಜ್ಞಗಳು ಆತನಿಗೆ ಮೆಚ್ಚಿಕೆಯಾಗುವುದಿಲ್ಲ. ಅವರ ಆಹಾರವು ಸತ್ತವರ ಮನೆಯ ಆಹಾರದಂತಿರುವುದು; ಅದನ್ನು ತಿನ್ನುವವರೆಲ್ಲರೂ ಅಶುದ್ಧರಾಗುವರು, ಅದು ಅವರ ಹೊಟ್ಟೆತುಂಬುವುದಕ್ಕೆ ಮಾತ್ರ ಅನುಕೂಲವಾಗುವುದು, ಅದು ಯೆಹೋವನ ಆಲಯಕ್ಕೆ ಬರಲು ಯೋಗ್ಯವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇನ್ನವರು ಸರ್ವೇಶ್ವರಸ್ವಾಮಿಗೆ ನೈವೇದ್ಯವಾಗಿ ದ್ರಾಕ್ಷಾರಸವನ್ನು ಸುರಿಯರು. ಅವರ ಯಜ್ಞಗಳು ಆ ಸ್ವಾಮಿಗೆ ಮೆಚ್ಚುಗೆಯಾಗುವುದಿಲ್ಲ. ಅವರ ಆಹಾರ ಹೆಣದ ಮನೆಯ ಆಹಾರದಂತಿರುವುದು. ಅದನ್ನು ತಿನ್ನುವವರೆಲ್ಲರು ಅಶುದ್ಧರಾಗುವರು. ಅದು ಹೊಟ್ಟೆತುಂಬಲು ಮಾತ್ರ ಸರಿಯೇ ಹೊರತು ದೇವಾಲಯದಲ್ಲಿ ಮಾಡುವ ಅರ್ಪಣೆಗೆ ಸಲ್ಲದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಇಸ್ರೇಲರು ಯೆಹೋವನಿಗೆ ದ್ರಾಕ್ಷಾರಸದ ಸಮರ್ಪಣೆ ಮಾಡುವದಿಲ್ಲ. ಆತನಿಗೆ ಯಜ್ಞವನ್ನರ್ಪಿಸುವದಿಲ್ಲ. ಅವರ ಯಜ್ಞಗಳು ಸಮಾಧಿಗಳಲ್ಲಿ ಉಣ್ಣುವ ಆಹಾರದಂತಿರುವದು. ಅದನ್ನು ಯಾವನಾದರೂ ಉಂಡಲ್ಲಿ ಅವನು ಅಶುದ್ಧನಾಗುವನು. ಅವರ ರೊಟ್ಟಿಯು ದೇವರ ಆಲಯದೊಳಗೆ ಇಡಲ್ಪಡುವದಿಲ್ಲ. ಅವರೇ ಅದನ್ನು ತಿನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರು ದ್ರಾಕ್ಷಾರಸವನ್ನು ಕಾಣಿಕೆಯಾಗಿ ಯೆಹೋವ ದೇವರಿಗೆ ಅರ್ಪಿಸುವುದಿಲ್ಲ. ಅವರ ಬಲಿಗಳು ಆತನಿಗೆ ಮೆಚ್ಚಿಗೆಯಾಗಿರುವುದಿಲ್ಲ. ಅವರ ಬಲಿಗಳು ಅವರಿಗೆ ದುಃಖಿಸುವವರ ರೊಟ್ಟಿಯ ಹಾಗಿರುವುವು. ಅದನ್ನು ತಿನ್ನುವವರೆಲ್ಲರೂ ಅಪವಿತ್ರರಾಗುವರು. ಏಕೆಂದರೆ ಅದು ಅವರ ಹೊಟ್ಟೆ ತುಂಬುವುದಕ್ಕೆ ಮಾತ್ರ ಸರಿಯೇ ಹೊರತು, ಯೆಹೋವ ದೇವರ ಆಲಯಕ್ಕೆ ಸಲ್ಲುವುದಿಲ್ಲ. ಅಧ್ಯಾಯವನ್ನು ನೋಡಿ |