Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:25 - ಕನ್ನಡ ಸಮಕಾಲಿಕ ಅನುವಾದ

25 ಏಕೆಂದರೆ ಈ ಹೊತ್ತು ಅವನು ಇಳಿದು ಹೋಗಿ, ಎತ್ತುಗಳನ್ನೂ, ಕೊಬ್ಬಿದ ಪಶುಗಳನ್ನೂ, ಕುರಿಗಳನ್ನೂ ಕೊಲ್ಲಿಸಿ, ಅರಸನ ಮಕ್ಕಳೆಲ್ಲರನ್ನೂ, ಸೈನ್ಯಾಧಿಪತಿಗಳನ್ನೂ, ಯಾಜಕನಾದ ಅಬಿಯಾತರನನ್ನೂ ಕರೆದಿದ್ದಾನೆ. ಅವರು ಅವನ ಮುಂದೆ ತಿಂದು, ಕುಡಿದು, ‘ಅರಸನಾದ ಅದೋನೀಯನು ಚಿರಂಜೀವಿಯಾಗಿರಲಿ,’ ಎಂದು ಹೇಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವನು ಗಟ್ಟಾ ಇಳಿದು ಹೋಗಿ ಹೋರಿ, ಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ, ಎಲ್ಲಾ ರಾಜಪುತ್ರರನ್ನೂ, ಸೇನಾಧಿಪತಿಗಳನ್ನೂ, ಯಾಜಕನಾದ ಎಬ್ಯಾತಾರನನ್ನೂ ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು, ‘ಅರಸನಾದ‍ ಅದೋನೀಯನು ಚಿರಂಜೀವಿಯಾಗಿರಲಿ’ ಎಂದು ಕೂಗುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅವನು ಇಲ್ಲಿಂದ ಇಳಿದುಹೋಗಿ ಹೋರಿ, ಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಬಲಿಯಾಗಿ ಅರ್ಪಿಸಿದ್ದಾನೆ. ರಾಜಪುತ್ರರೆಲ್ಲರನ್ನು, ಸೇನಾಪತಿಗಳನ್ನು ಹಾಗು ಯಾಜಕ ಎಬ್ಯಾತಾರನನ್ನು ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲೇ ಅನ್ನಪಾನಗಳನ್ನು ತೆಗೆದುಕೊಂಡು ಅರಸನಾದ ಅದೋನೀಯನು ಚಿರಂಜೀವಿಯಾಗಿ ಇರಲಿ!’ ಎಂದು ಕೂಗುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವನು ಗಟ್ಟಾ ಇಳಿದು ಹೋಗಿ ಹೋರಿಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ ಎಲ್ಲಾ ರಾಜಪುತ್ರರನ್ನೂ ಸೇನಾಪತಿಗಳನ್ನೂ ಯಾಜಕನಾದ ಎಬ್ಯಾತಾರನನ್ನೂ ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ಅರಸನಾದ ಅದೋನೀಯನು ಚಿರಂಜೀವಿಯಾಗಿರಲಿ ಎಂದು ಕೂಗುತ್ತಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಈ ದಿನ ಅವನು ಅನೇಕ ಹೋರಿಗಳನ್ನು ಮತ್ತು ಕುರಿಗಳನ್ನು ಸಮಾಧಾನಯಜ್ಞವಾಗಿ ಅರ್ಪಿಸಿದನು. ಅವನು ನಿನ್ನ ಇತರ ಗಂಡುಮಕ್ಕಳನ್ನು, ಸೇನಾಧಿಪತಿಗಳನ್ನು ಮತ್ತು ಯಾಜಕನಾದ ಎಬ್ಯಾತಾರನನ್ನು ಆಹ್ವಾನಿಸಿದ್ದನು. ಅವರು ಈಗ ಅವನೊಡನೆ ತಿನ್ನುತ್ತಾ ಕುಡಿಯುತ್ತಾ ಇದ್ದಾರೆ. ‘ರಾಜನಾದ ಅದೋನೀಯನು ಚಿರಾಯುವಾಗಿರಲಿ’ ಎಂದು ಅವರು ಹೇಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:25
19 ತಿಳಿವುಗಳ ಹೋಲಿಕೆ  

ಆಗ ಸಮುಯೇಲನು, “ಯೆಹೋವ ದೇವರು ಆಯ್ದುಕೊಂಡವನನ್ನು ನೋಡಿರಿ, ಸಮಸ್ತ ಜನರಿಗೆ ಎಲ್ಲಾ ಜನರಲ್ಲಿ ಇವನಿಗೆ ಸಮಾನವಾದವನು ಯಾವನೂ ಇಲ್ಲವಲ್ಲ,” ಎಂದನು. ಜನರೆಲ್ಲರು ಆರ್ಭಟಿಸಿ, “ಅರಸ ಬಾಳಲಿ,” ಎಂದರು.


ಇದಲ್ಲದೆ ಅವನು ಎತ್ತುಗಳನ್ನೂ, ಕೊಬ್ಬಿದ ಪಶುಗಳನ್ನೂ, ಕುರಿಗಳನ್ನೂ ಬಲಿಯಾಗಿ ಅರ್ಪಿಸಿದ್ದಾನೆ, ಅರಸನ ಮಕ್ಕಳೆಲ್ಲರನ್ನೂ, ಯಾಜಕನಾದ ಅಬಿಯಾತರನನ್ನೂ, ಸೇನಾಧಿಪತಿ ಯೋವಾಬನನ್ನೂ ಔತಣಕ್ಕೆ ಕರೆದಿದ್ದಾನೆ. ಆದರೆ ನಿನ್ನ ಸೇವಕನಾದ ಸೊಲೊಮೋನನನ್ನು ಅವನು ಕರೆಯಲಿಲ್ಲ.


ಅದೋನೀಯನು ಏನ್ ರೋಗೆಲಿನ ಬಳಿಯಲ್ಲಿರುವ ಚೋಹೆಲೆತ್ ಎಂಬ ಕಲ್ಲಿನ ಹತ್ತಿರ ಕುರಿಗಳನ್ನೂ, ಎತ್ತುಗಳನ್ನೂ, ಕೊಬ್ಬಿದ ಪಶುಗಳನ್ನೂ ಕೊಲ್ಲಿಸಿ, ಅರಸನ ಮಕ್ಕಳಾದ ತನ್ನ ಸಮಸ್ತ ಸಹೋದರರನ್ನೂ, ಅರಸನ ಸೇವಕರಾದ ಸಮಸ್ತ ಯೆಹೂದದ ಜನರನ್ನೂ ಔತಣಕ್ಕೆ ಕರೆದನು.


“ಕರ್ತದೇವರ ಹೆಸರಿನಲ್ಲಿ ಬರುವ ಅರಸನು ಆಶೀರ್ವಾದ ಹೊಂದಲಿ!” “ಪರಲೋಕದಲ್ಲಿ ಸಮಾಧಾನ, ಅತ್ಯುನ್ನತದಲ್ಲಿ ಮಹಿಮೆ!”


ಯೇಸುವಿನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು, “ದಾವೀದನ ಪುತ್ರನಿಗೆ ಹೊಸನ್ನ!” “ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ!” “ಮಹೋನ್ನತದಲ್ಲಿ ಜಯ!” ಎಂದು ಘೋಷಿಸಿದರು.


ಆಗ ಯೆಹೋಯಾದಾವನು ಅವನ ಮಕ್ಕಳೂ ರಾಜಪುತ್ರನನ್ನು ಹೊರಗೆ ಕರೆತಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ದೇವರ ನಿಯಮ ಗ್ರಂಥವನ್ನು ಕೊಟ್ಟು, ಅವನನ್ನು ಅರಸನನ್ನಾಗಿ ಘೋಷಿಸಿ, ಅವನನ್ನು ಅಭಿಷೇಕಿಸಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು.


ಮಾರನೆಯ ದಿವಸದಲ್ಲಿ ಅವರು ಯೆಹೋವ ದೇವರಿಗೆ ಬಲಿಗಳನ್ನು ವಧಿಸಿ, ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಿದರು. ಸಾವಿರ ಹೋರಿಗಳನ್ನೂ, ಸಾವಿರ ಟಗರುಗಳನ್ನೂ, ಸಾವಿರ ಕುರಿಮರಿಗಳನ್ನೂ, ಅವುಗಳ ಪಾನದ ಅರ್ಪಣೆಗಳನ್ನೂ, ಸಮಸ್ತ ಇಸ್ರಾಯೇಲರಿಗೋಸ್ಕರ ಬಹಳವಾಗಿ ಬಲಿಗಳನ್ನು ಅರ್ಪಿಸಿದರು.


ಆದ್ದರಿಂದ ನಮ್ಮ ದೇವರೇ, ನಾವು ನಿಮ್ಮನ್ನು ಸ್ತುತಿಸಿ, ನಿಮ್ಮ ಮಹಿಮೆಯುಳ್ಳ ನಾಮವನ್ನು ಕೊಂಡಾಡುತ್ತೇವೆ.


ಆಗ ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರೆತಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ದೇವರ ನಿಯಮ ಗ್ರಂಥವನ್ನು ಕೊಟ್ಟು, ಅರಸನನ್ನಾಗಿ ಮಾಡಿ ಅವನನ್ನು ಅಭಿಷೇಕಿಸಿದರು. ಕೂಡಲೆ ಜನರು ಚಪ್ಪಾಳೆ ಹೊಡೆದು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು.


ಅಲ್ಲಿ ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ ಅವನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಲಿ. ತುತೂರಿಯನ್ನು ಊದಿ, ‘ಅರಸ ಸೊಲೊಮೋನನು ಚಿರಂಜೀವಿಯಾಗಿರಲಿ!’ ಎಂದು ಘೋಷಿಸಿರಿ.


ಅರ್ಕಿಯನಾದ ಹೂಷೈಯು ಎಂಬ ದಾವೀದನ ಸ್ನೇಹಿತನು ಅಬ್ಷಾಲೋಮನ ಬಳಿಗೆ ಬಂದಾಗ, ಹೂಷೈ ಅಬ್ಷಾಲೋಮನಿಗೆ, “ಅರಸನು ಬಾಳಲಿ, ಅರಸನು ಬಾಳಲಿ,” ಎಂದನು.


“ಅವನು ಪುನಃ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ, ‘ಇಗೋ ಔತಣವು ಸಿದ್ಧವಾಗಿದೆ. ಶ್ರೇಷ್ಠ ಔತಣ ಮಾಡಿಸಿದ್ದೇನೆ: ಎಲ್ಲವೂ ಸಿದ್ಧವಾಗಿವೆ. ಮದುವೆಗೆ ಬನ್ನಿರಿ ಎಂದು ಆಹ್ವಾನಿತರಿಗೆ ಹೇಳಿರಿ,’ ಎಂದನು.


ಆಗ ನಾತಾನನು, “ಅರಸನಾದ ನನ್ನ ಒಡೆಯನೇ, ಅದೋನೀಯನು, ನನ್ನ ತರುವಾಯ ಆಳುವನೆಂದೂ, ನನ್ನ ಸಿಂಹಾಸನ ಮೇಲೆ ಕುಳಿತುಕೊಳ್ಳುವನೆಂದೂ, ನೀವು ಹೇಳಿದ್ದು ಹೌದೋ?


ಆಗ ಯಾಜಕನಾದ ಚಾದೋಕನು ಗುಡಾರದೊಳಗಿಂದ ತೈಲದ ಕೊಂಬನ್ನು ತಂದು ಸೊಲೊಮೋನನನ್ನು ಅಭಿಷೇಕಿಸಿದನು. ಅವರು ತುತೂರಿಯನ್ನು ಊದಿದರು. ಆಗ ಜನರೆಲ್ಲರು, “ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ,” ಎಂದರು.


ಆಗ ಅವನು, “ರಾಜ್ಯವು ನನ್ನದಾಗಿತ್ತೆಂದೂ, ನಾನು ಆಳುವ ಸಮಸ್ತ ಇಸ್ರಾಯೇಲರು ನನ್ನ ಮೇಲೆ ಕಣ್ಣಿಟ್ಟಿದ್ದರೆಂದೂ ನೀನು ಬಲ್ಲೆ. ಆದರೆ ಎಲ್ಲವೂ ಬದಲಾಗಿ, ರಾಜ್ಯವು ನನ್ನ ಸಹೋದರನಿಗೆ ದೊರಕಿತು. ಏಕೆಂದರೆ ಅದು ಅವನಿಗೆ ಯೆಹೋವ ದೇವರಿಂದ ಉಂಟಾಯಿತು.


ಆಗ ಅವರು ತ್ವರೆಪಟ್ಟು ಪ್ರತಿಯೊಬ್ಬರು ತಮ್ಮ ಹೊರ ಉಡುಪುಗಳನ್ನು ತೆಗೆದು, ಮೆಟ್ಟಿಲುಗಳ ಮೇಲೆ ಹಾಸಿ, ಇವನನ್ನು ಕುಳ್ಳಿರಿಸಿ, ತುತೂರಿಗಳನ್ನು ಊದಿ, “ಯೇಹುವು ಅರಸನಾಗಿದ್ದಾನೆ,” ಎಂದು ಆರ್ಭಟಿಸಿದರು.


ಅಲ್ಲಿ ಅರಸನು ಪದ್ಧತಿಯ ಪ್ರಕಾರ ಕಂಬದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು