Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:40 - ಕನ್ನಡ ಸಮಕಾಲಿಕ ಅನುವಾದ

40 ಇದಲ್ಲದೆ ಜನರೆಲ್ಲರೂ ಅವನನ್ನು ಹಿಂಬಾಲಿಸಿದರು. ಜನರು ಕೊಳಲು ಊದಿ ಮಹಾ ಆನಂದದಿಂದ ಸಂತೋಷಿಸಿದರು. ಅವರ ಶಬ್ದದಿಂದ ಭೂಮಿಯು ಕಂಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ತರುವಾಯ ಅವರೆಲ್ಲರೂ ಅವನನ್ನು ಹಿಂಬಾಲಿಸಿ ಕೊಳಲೂದುತ್ತಾ, ಬಹುಸಂತೋಷದಿಂದ ಜಯಘೋಷಮಾಡುತ್ತಾ ಹಿಂತಿರುಗಿ ಬಂದರು. ಅವರ ಕೂಗಿನಿಂದ ಭೂಮಿಯು ನಡುಗಿತೋ ಎಂಬಂತೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ತರುವಾಯ ಅವರೆಲ್ಲರು ಅವನನ್ನು ಹಿಂಬಾಲಿಸಿ, ಕೊಳಲೂದುತ್ತಾ ಹರ್ಷಾನಂದದಿಂದ ಆರ್ಭಟಿಸುತ್ತಾ, ಹಿಂದಿರುಗಿ ಬಂದರು. ಅವರ ಜಯಕಾರದ ಕೂಗು ಭೂಮಿಯನ್ನೇ ನಡುಗಿಸುವಂತಿತ್ತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ತರುವಾಯ ಅವರೆಲ್ಲರೂ ಅವನನ್ನು ಹಿಂಬಾಲಿಸಿ ಕೊಳಲೂದುತ್ತಾ ಬಹುಸಂತೋಷದಿಂದ ಆರ್ಭಟಿಸುತ್ತಾ ತಿರಿಗಿ ಬಂದರು. ಅವರ ಕೂಗಿನಿಂದ ಭೂವಿುಯು ಸೀಳಿಹೋಗುತ್ತದೋ ಎಂಬಂತೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಜನರೆಲ್ಲರೂ ಸೊಲೊಮೋನನನ್ನು ಹಿಂಬಾಲಿಸುತ್ತಾ ನಗರಕ್ಕೆ ಬಂದರು. ಅವರು ಕೊಳಲುಗಳನ್ನು ಊದುತ್ತಾ ಸಂತಸದಿಂದ ಕೂಗಾಡುತ್ತಾ ಬಂದರು. ಅವರು ಮಾಡಿದ ಶಬ್ದವು ಭೂಮಿಯನ್ನೇ ನಡುಗಿಸುವಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:40
13 ತಿಳಿವುಗಳ ಹೋಲಿಕೆ  

ಇದಲ್ಲದೆ ಯೇಸು ಓಲಿವ್ ಗುಡ್ಡದಿಂದ ಇಳಿಜಾರನ್ನು ಸಮೀಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ಕಂಡ ಎಲ್ಲ ಮಹತ್ಕಾರ್ಯಗಳಿಗಾಗಿ ಸಂತೋಷಪಡುತ್ತಾ, ಮಹಾ ಸ್ವರದಿಂದ ದೇವರನ್ನು ಹೀಗೆ ಕೊಂಡಾಡಲಾರಂಭಿಸಿದರು:


ಚೀಯೋನ್ ಪುತ್ರಿಯೇ, ಮಹಾ ಉಲ್ಲಾಸಪಡು. ಯೆರೂಸಲೇಮಿನ ಪುತ್ರಿಯೇ ಆರ್ಭಟಿಸು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ. ಆತನು ನೀತಿವಂತನಾಗಿಯೂ ಜಯಹೊಂದಿದವನಾಗಿಯೂ, ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ.


ನೀವು ಕೊಂಬು, ಪಿಳ್ಳಂಗೋವಿ, ತಂಬೂರಿ, ವೀಣೆ, ಕಿನ್ನರಿ, ನಾಗಸ್ವರ ಮೊದಲಾದ ವಾದ್ಯಗಳ ಶಬ್ದವನ್ನು ಕೇಳಿದ ಕೂಡಲೇ, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯ ಮುಂದೆ ಅಡ್ಡಬಿದ್ದು ಆರಾಧಿಸಬೇಕು.


ಯೆಹೋವ ದೇವರು ಆಳಿಕೆ ಮಾಡುತ್ತಾರೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋಷಪಡಲಿ.


ಅತಲ್ಯಳನ್ನು ಅರಮನೆಯ ಬಳಿಯಲ್ಲಿ ಖಡ್ಗದಿಂದ ಕೊಂದುಹಾಕಿದ್ದರಿಂದ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.


ಅಲ್ಲಿ ಅರಸನು ಪದ್ಧತಿಯ ಪ್ರಕಾರ ಕಂಬದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.


ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ, ಆ ಸ್ಥಳದಲ್ಲಿ ಯೆಹೋವ ದೇವರ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ, ಯೆಹೋವ ದೇವರಿಗೆ ಸಮಾಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲರೂ ಬಹಳವಾಗಿ ಸಂತೋಷಪಟ್ಟರು.


ಆಗ ಯಾಜಕನಾದ ಚಾದೋಕನು ಗುಡಾರದೊಳಗಿಂದ ತೈಲದ ಕೊಂಬನ್ನು ತಂದು ಸೊಲೊಮೋನನನ್ನು ಅಭಿಷೇಕಿಸಿದನು. ಅವರು ತುತೂರಿಯನ್ನು ಊದಿದರು. ಆಗ ಜನರೆಲ್ಲರು, “ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ,” ಎಂದರು.


ಆಗ ಅದೋನೀಯನೂ, ಅವನ ಸಂಗಡ ಕರೆಹೊಂದಿದವರೂ ತಿಂದು, ತೀರಿಸಿದಾಗ ಅದನ್ನು ಕೇಳಿದರು. ಯೋವಾಬನು ತುತೂರಿಯ ಶಬ್ದವನ್ನು ಕೇಳಿದಾಗ, “ಪಟ್ಟಣದಲ್ಲಿ ಗದ್ದಲದ ಶಬ್ದವೇಕೆ?” ಎಂದನು.


ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ ಸೊಲೊಮೋನನನ್ನು ಗೀಹೋನಿನಲ್ಲಿ ಅರಸನಾಗಿರಲು ಅಭಿಷೇಕಿಸಿದ್ದಾರೆ. ಅವರು ಸಂತೋಷಪಡುತ್ತಾ ಅಲ್ಲಿಂದ ಬಂದ ಕಾರಣ ಪಟ್ಟಣವು ಗದ್ದಲವಾಯಿತು. ನೀವು ಕೇಳುವ ಆರ್ಭಟವು ಇದೇ.


ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ, ಇಸ್ರಾಯೇಲರೆಲ್ಲಾ ಮಹಾ ಆರ್ಭಟವಾಗಿ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು