Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:42 - ಕನ್ನಡ ಸಮಕಾಲಿಕ ಅನುವಾದ

42 ಅವನು ಇನ್ನೂ ಮಾತನಾಡುತ್ತಿರುವಾಗ, ಯಾಜಕನಾಗಿರುವ ಅಬಿಯಾತರನ ಮಗ ಯೋನಾತಾನನು ಬಂದನು. ಅದೋನೀಯನು ಅವನಿಗೆ, “ಒಳಗೆ ಬಾ. ಏಕೆಂದರೆ ನೀನು ಯೋಗ್ಯ ಮನುಷ್ಯನೂ, ಒಳ್ಳೆಯ ಸಮಾಚಾರ ತರುವವನೂ ಆಗಿರುತ್ತೀ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಆಗ ಯಾಜಕನಾದ ಎಬ್ಯಾತಾರನ ಮಗನಾದ ಯೋನಾತಾನನು ಅಲ್ಲಿಗೆ ಬಂದನು. ಅದೋನೀಯನು ಅವನಿಗೆ, “ಬಾ ನೀನು ಯೋಗ್ಯ ಪುರುಷನೂ, ಶುಭವರ್ತಮಾನವನ್ನು ತರುವವನೂ ಆಗಿರುತ್ತೀ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಯಾಜಕ ಎಬ್ಯಾತಾರನ ಮಗ ಯೋನಾತಾನನು ಅಲ್ಲಿಗೆ ಬಂದನು. ಅದೋನೀಯನು ಅವನಿಗೆ, “ನಿನ್ನಂಥ ಯೋಗ್ಯಪುರುಷ ಶುಭಸಮಾಚಾರವನ್ನೇ ತಂದಿರಬೇಕು, ಒಳಗೆ ಬಾ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಯಾಜಕನಾದ ಎಬ್ಯಾತಾರನ ಮಗ ಯೋನಾತಾನನು ಅಲ್ಲಿಗೆ ಬಂದನು. ಅದೋನೀಯನು ಅವನಿಗೆ - ಬಾ, ನೀನು ಯೋಗ್ಯಪುರುಷನೂ ಶುಭವರ್ತಮಾನತರುವವನೂ ಆಗಿರುತ್ತೀ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಯೋವಾಬನು ಮಾತನಾಡುತ್ತಿದ್ದಂತೆ, ಯಾಜಕನಾದ ಎಬ್ಯಾತಾರನ ಮಗನಾದ ಯೋನಾತಾನನು ಅಲ್ಲಿಗೆ ಬಂದನು. ಅದೋನೀಯನು, “ಇಲ್ಲಿಗೆ ಬಾ! ನೀನು ಒಬ್ಬ ಒಳ್ಳೆಯ ಮನುಷ್ಯ. ಆದ್ದರಿಂದ ನೀನು ನನಗೆ ಶುಭ ಸಮಾಚಾರವನ್ನೇ ತಂದಿರುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:42
10 ತಿಳಿವುಗಳ ಹೋಲಿಕೆ  

ಅಲ್ಲಿ ಅವರ ಸಂಗಡ ಅವರ ಇಬ್ಬರು ಮಕ್ಕಳು ಇದ್ದಾರೆ. ಚಾದೋಕನ ಮಗ ಅಹೀಮಾಚನೂ, ಅಬಿಯಾತರನ ಮಗ ಯೋನಾತಾನನೂ. ನೀವು ಕೇಳಿದ ವರ್ತಮಾನವನ್ನೆಲ್ಲಾ ಅವರ ಕೈಯಿಂದ ನನಗೆ ಹೇಳಿ ಕಳುಹಿಸಬೇಕು,” ಎಂದನು.


ಕಾವಲುಗಾರನು, “ಮೊದಲನೆಯವನ ಓಟವು ಚಾದೋಕನ ಮಗ ಅಹೀಮಾಚನ ಓಟದ ಹಾಗೆ ಇರುವುದೆಂದು ನನಗೆ ಕಾಣುತ್ತದೆ,” ಎಂದನು. ಅದಕ್ಕೆ ಅರಸನು, “ಅವನು ಒಳ್ಳೆಯವನು, ಒಳ್ಳೆಯ ಸಮಾಚಾರ ತರುತ್ತಾನೆ,” ಎಂದನು.


ಯೋನಾತಾನನೂ, ಅಹೀಮಾಚನೂ ಏನ್ ರೋಗೆಲ್ ಎಂಬಲ್ಲಿ ಇದ್ದರು. ಒಬ್ಬ ಸೇವಕಿ ಹೋಗಿ ಅವರಿಗೆ ತಿಳಿಸಬೇಕಾಗಿತ್ತು. ಅನಂತರ ಅವರು ಹೋಗಿ ಅರಸನಾದ ದಾವೀದನಿಗೆ ಹೇಳಬೇಕಾಗಿತ್ತು. ಏಕೆಂದರೆ ಪಟ್ಟಣದಲ್ಲಿ ಪ್ರವೇಶಿಸುವುದನ್ನು ಬೇರೆಯವರು ನೋಡುವ ಗಂಡಾಂತರಕ್ಕೆ ಒಳಗಾಗಲು ಅಪೇಕ್ಷಿಸಿರಲಿಲ್ಲ.


ಅರಸನು ಯಾಜಕನಾದ ಚಾದೋಕನಿಗೆ, “ನೀನು ದರ್ಶಿಯಲ್ಲವೇ? ನೀನು ಸಮಾಧಾನದಿಂದ ಪಟ್ಟಣಕ್ಕೆ ತಿರುಗಿ ಹೋಗು; ಇದಲ್ಲದೆ ನಿನ್ನ ಇಬ್ಬರು ಮಕ್ಕಳು ಅಹೀಮಾಚನೂ, ಅಬಿಯಾತರನ ಮಗ ಯೋನಾತಾನನೂ ನಿನ್ನ ಸಂಗಡ ಹೋಗಲಿ.


“ದುಷ್ಟರಿಗೆ ಸಮಾಧಾನವೇ ಇಲ್ಲ,” ಎಂದು ನನ್ನ ದೇವರು ಹೇಳುತ್ತಾರೆ.


ಯೋರಾಮನು ಯೇಹುವನ್ನು ಕಂಡಾಗ, “ಯೇಹುವೇ, ಸಮಾಧಾನದಿಂದ ಬಂದಿರುವೆಯೋ?” ಎಂದನು. ಅದಕ್ಕವನು, “ನಿನ್ನ ತಾಯಿಯಾದ ಈಜೆಬೆಲಳ ಜಾರತ್ವವೂ, ಅವಳ ಮಾಟಮಂತ್ರಗಳೂ ಅಧಿಕವಾಗಿರುವಾಗ ಸಮಾಧಾನವೆಲ್ಲಿ?” ಎಂದನು.


ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ಇವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ?” ಎಂದನು.


ಆಗ ಅದೋನೀಯನೂ, ಅವನ ಸಂಗಡ ಕರೆಹೊಂದಿದವರೂ ತಿಂದು, ತೀರಿಸಿದಾಗ ಅದನ್ನು ಕೇಳಿದರು. ಯೋವಾಬನು ತುತೂರಿಯ ಶಬ್ದವನ್ನು ಕೇಳಿದಾಗ, “ಪಟ್ಟಣದಲ್ಲಿ ಗದ್ದಲದ ಶಬ್ದವೇಕೆ?” ಎಂದನು.


ಆಗ ಯೋನಾತಾನನು ಅದೋನೀಯನಿಗೆ, ನಿಶ್ಚಯವಾಗಿ ಒಳ್ಳೆಯ ಸಮಾಚಾರವಲ್ಲ! “ನಮ್ಮ ಒಡೆಯನೂ ಅರಸನೂ ಆಗಿರುವ ದಾವೀದನು ಸೊಲೊಮೋನನನ್ನು ಅರಸನಾಗಿ ಮಾಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು