Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:48 - ಕನ್ನಡ ಸಮಕಾಲಿಕ ಅನುವಾದ

48 ‘ಕಣ್ಣುಗಳು ನೋಡುತ್ತಿರುವಾಗ ಇಂದು ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವ ಉತ್ತರಾಧಿಕಾರಿಯನ್ನು ನನಗೆ ಕೊಟ್ಟಿರುವ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ,’ ಎಂದು ಹೇಳಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಅರಸನು ತನ್ನ ಹಾಸಿಗೆಯ ಮೇಲೆ ಬಾಗಿಕೊಂಡು, ‘ನಾನು ಕಣ್ಣಾರೆ ಕಾಣುವಂತೆ ಇಂದು ನನ್ನ ಸಿಂಹಾಸನಕ್ಕೆ ಒಬ್ಬ ಉತ್ತರಾಧಿಕಾರಿಯನ್ನು ದಯಪಾಲಿಸಿದ ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ’ ಎಂದು ಹೇಳಿದ್ದಾನೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ‘ನಾನು ಕಣ್ಣಾರೆ ಕಾಣುವಂತೆ ಇಂದು ನನ್ನ ಸಿಂಹಾಸನಕ್ಕೆ ಒಬ್ಬ ಉತ್ತರಾಧಿಕಾರಿಯನ್ನು ದಯಪಾಲಿಸಿದ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!’ ಎಂದು ಹೇಳಿದ್ದಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ನಾನು ಕಣ್ಣಾರೆ ಕಾಣುವಂತೆ ಇಂದು ನನ್ನ ಸಿಂಹಾಸನಕ್ಕೆ ಒಬ್ಬ ಉತ್ತರಾಧಿಕಾರಿಯನ್ನು ದಯಪಾಲಿಸಿದ ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ ಎಂದು ಹೇಳಿದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ‘ನಾನು ಕಣ್ಣಾರೆ ಕಾಣುವಂತೆ ನನ್ನ ಮಕ್ಕಳಲ್ಲಿ ಒಬ್ಬನನ್ನು ಇಂದು ಸಿಂಹಾಸನದ ಮೇಲೆ ಕುಳ್ಳಿರಿಸಿದ ಇಸ್ರೇಲಿನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ’ ಎಂದು ಹೇಳಿದ್ದಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:48
26 ತಿಳಿವುಗಳ ಹೋಲಿಕೆ  

ಅದಕ್ಕೆ ಸೊಲೊಮೋನನು, “ನನ್ನ ತಂದೆಯಾಗಿರುವ ನಿಮ್ಮ ಸೇವಕನಾದ ದಾವೀದನು ನಿಮ್ಮ ಮುಂದೆ ನೀತಿಯಿಂದಲೂ, ಯಥಾರ್ಥವಾದ ಹೃದಯವುಳ್ಳವನಾಗಿಯೂ ನಡೆದದ್ದರಿಂದ, ನೀವು ಅವನಿಗೆ ಮಹಾಕರುಣೆಯನ್ನು ತೋರಿಸಿದ್ದೀರಿ. ಈ ಮಹಾಕರುಣೆಯನ್ನು ಮುಂದುವರೆಸುತ್ತಾ ಈ ದಿನ ಅವನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಮಗನನ್ನು ಕೊಟ್ಟಿದ್ದೀರಿ.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ತಂದೆಯೂ ದೇವರೂ ಆಗಿರುವವರಿಗೆ ಸ್ತೋತ್ರವಾಗಲಿ. ಅವರು ಕ್ರಿಸ್ತ ಯೇಸುವನ್ನು ತಮ್ಮ ಮಹಾ ಕರುಣಾನುಸಾರವಾಗಿ, ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದರಿಂದ ಜೀವಕರವಾದ ನಿರೀಕ್ಷೆಗೆ ನಮ್ಮನ್ನು ತಿರುಗಿ ಹುಟ್ಟಿಸಿದ್ದಾರೆ.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ದೇವರೂ ತಂದೆಯೂ ಆಗಿರುವವರಿಗೆ ಸ್ತೋತ್ರ, ದೇವರು ಕ್ರಿಸ್ತನಲ್ಲಿ ಪರಲೋಕದ ಎಲ್ಲಾ ಆತ್ಮಿಕ ಆಶೀರ್ವಾದಗಳಿಂದ ನಮ್ಮನ್ನು ಆಶೀರ್ವದಿಸಿದ್ದಾರೆ.


ಆ ಸಮಯದ ಅಂತ್ಯದಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರಲೋಕದ ಕಡೆಗೆ ಎತ್ತಿದೆನು. ನನ್ನ ತಿಳುವಳಿಕೆ ನನಗೆ ತಿರುಗಿ ಬಂತು. ಆಗ ನಾನು ಮಹೋನ್ನತರನ್ನು ಕೊಂಡಾಡಿದೆನು. ಸದಾಕಾಲಕ್ಕೂ ಇರುವವರಾದ ಅವರನ್ನು ಗೌರವಿಸಿ, ಮಹಿಮೆ ಪಡಿಸಿದೆನು. ಅವರ ಆಡಳಿತವು ನಿತ್ಯವಾದ ಆಡಳಿತವಾಗಿದೆ. ಅವರ ರಾಜ್ಯವು ತಲತಲಾಂತರಕ್ಕೂ ಇರುವುದು.


ಮಕ್ಕಳ ಮಕ್ಕಳು ವೃದ್ಧರಿಗೆ ಕಿರೀಟ; ಮಕ್ಕಳ ಭೂಷಣವು ಅವರ ತಂದೆತಾಯಿಗಳೇ.


ಪ್ರತಿದಿನ ನಿಮ್ಮನ್ನು ಸ್ತುತಿಸುವೆನು; ಎಂದೆಂದಿಗೂ ಸ್ತುತಿಸುವೆನು.


ಇಸ್ರಾಯೇಲರ ದೇವರಾಗಿರುವ ಯೆಹೋವ ದೇವರಿಗೆ, ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಆಮೆನ್.


ನಾನು ಎಲ್ಲಾ ಕಾಲಗಳಲ್ಲಿ ಯೆಹೋವ ದೇವರನ್ನು ಸ್ತುತಿಸುವೆನು; ಅವರ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು.


ಲೇವಿಯರಾದ ಯೇಷೂವ, ಕದ್ಮಿಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು ಜನರಿಗೆ: “ಏಳಿರಿ, ಎಂದೆಂದಿಗೂ ಏಕರೀತಿಯಾಗಿರುವ ನಿಮ್ಮ ದೇವರಾಗಿರುವ ಯೆಹೋವ ದೇವರನ್ನು ಸ್ತುತಿಸಿರಿ,” ಎಂದರು. ಅನಂತರ ಅವರು, “ಯೆಹೋವ ದೇವರೇ, ಸಕಲ ಸ್ತುತಿ ಆಶೀರ್ವಾದಗಳಿಗೆ ಉನ್ನತವಾದದ್ದು ನಿಮ್ಮ ಮಹಿಮೆಯುಳ್ಳ ಹೆಸರು.


ತರುವಾಯ ದಾವೀದನು ಸಮಸ್ತ ಸಭೆಗೆ, “ಈಗ ನಿಮ್ಮ ದೇವರಾದ ಯೆಹೋವ ದೇವರನ್ನು ಸ್ತುತಿಸಿರಿ,” ಎಂದನು. ಆಗ ಜನರೆಲ್ಲರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಸ್ತುತಿಸುತ್ತಾ, ತಮ್ಮ ತಲೆಗಳನ್ನು ಬಾಗಿಸಿ ಯೆಹೋವ ದೇವರನ್ನೂ, ಅರಸನನ್ನೂ ವಂದಿಸಿದರು.


ದಾವೀದನು ಸಮಸ್ತ ಕೂಟದ ಮುಂದೆ ಯೆಹೋವ ದೇವರನ್ನು ಕೊಂಡಾಡಿ ಹೇಳಿದ್ದೇನೆಂದರೆ, “ನಮ್ಮ ತಂದೆಯಾದ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನೀವು ಯುಗಯುಗಾಂತರಗಳಿಂದ ಯುಗಯುಗಾಂತರಗಳಿಗೂ ಸ್ತುತಿಗೆ ಪಾತ್ರರಾಗಿದ್ದೀರಿ.


ಯೆಹೋವ ದೇವರೇ, ಇದು ನಿಮ್ಮ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದರೂ ನೀವು ನಿಮ್ಮ ಸೇವಕನ ಸಂತಾನದ ಭವಿಷ್ಯದ ಕುರಿತೂ ವಾಗ್ದಾನಮಾಡಿರುವಿರಿ. ಯೆಹೋವ ದೇವರೇ, ನೀವು ನನ್ನನ್ನು ಮನುಷ್ಯರಲ್ಲಿ ಅತ್ಯುನ್ನತ ವ್ಯಕ್ತಿಯಂತೆ ನೋಡಿರುವಿರಿ.


ಆಗ ಯೋವಾಬನು ಅರಸನಿಗೆ, “ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ಕಾಣುವ ಹಾಗೆ ನಿನ್ನ ದೇವರಾದ ಯೆಹೋವ ದೇವರು ತಮ್ಮ ಜನರನ್ನು ಈಗ ಇರುವುದಕ್ಕಿಂತ ನೂರರಷ್ಟಾಗಿ ಹೆಚ್ಚಿಸಲಿ; ಆದರೆ ನನ್ನ ಒಡೆಯನಾದ ಅರಸನು ಈ ಕಾರ್ಯವನ್ನು ಮಾಡಲು ಅಪೇಕ್ಷಿಸುವುದು ಏಕೆ?” ಎಂದನು.


ನಿನ್ನ ಆಯುಷ್ಕಾಲವು ಮುಗಿದ ಮೇಲೆ ನೀನು ನಿನ್ನ ಪಿತೃಗಳ ಜೊತೆ ವಿಶ್ರಮಿಸುವಾಗ, ನಾನು ನಿನ್ನ ಸಂತತಿಯಲ್ಲಿ ಒಬ್ಬನನ್ನು ನಿನ್ನ ಉತ್ತರಾಧಿಕಾರಿಯನ್ನಾಗಿ ನೇಮಿಸಿ, ಅವನ ರಾಜ್ಯವನ್ನು ಸ್ಥಿರಮಾಡುವೆನು.


ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ ಮಹೋನ್ನತ ದೇವರು ಸ್ತುತಿಹೊಂದಲಿ.” ಅಬ್ರಾಮನು ಎಲ್ಲವುಗಳಲ್ಲಿ ಅವನಿಗೆ ಹತ್ತನೆಯ ಒಂದು ಭಾಗವನ್ನು ಕೊಟ್ಟನು.


ಆಗ ದಾವೀದನು ಅಬೀಗೈಲಳಿಗೆ, “ನನ್ನನ್ನು ಎದುರುಗೊಳ್ಳುವುದಕ್ಕೆ ಈ ಹೊತ್ತು ನಿನ್ನನ್ನು ಕಳುಹಿಸಿದ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ.


ಆಗ ಅದೋನೀಯನ ಸಂಗಡ ಔತಣಕ್ಕೆ ಬಂದಿದ್ದ ಎಲ್ಲರೂ ಹೆದರಿಕೊಂಡು ಎದ್ದು, ತಮ್ಮ ತಮ್ಮ ಸ್ಥಳಗಳಿಗೆ ಹೊರಟು ಹೋದರು.


ಯೆಹೋವ ದೇವರು, ‘ನಿನ್ನ ಮಕ್ಕಳು ತಾವು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ನನ್ನ ಮುಂದೆ ನಂಬಿಗಸ್ತರಾಗಿ ನಡೆದುಕೊಳ್ಳುವ ಹಾಗೆ ತಮ್ಮ ಮಾರ್ಗವನ್ನು ಕಾದುಕೊಂಡರೆ ಅವರು ಇಸ್ರಾಯೇಲಿನ ಸಿಂಹಾಸನದ ಮೇಲೆ ತಪ್ಪದೇ ಕುಳಿತುಕೊಳ್ಳುವರು,’ ಎಂದು ನನಗೆ ಹೇಳಿದ ತಮ್ಮ ವಾಕ್ಯವನ್ನು ಸ್ಥಿರಪಡಿಸುವರು.


“ಈಗ ಯೆಹೋವ ದೇವರು ತಾವು ಹೇಳಿದ ವಾಗ್ದಾನವನ್ನು ನೆರವೇರಿಸಿದ್ದಾರೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಯೆಹೋವ ದೇವರು ಮಾತುಕೊಟ್ಟ ಪ್ರಕಾರ, ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ದೇವರಾದ ಯೆಹೋವ ದೇವರ ಹೆಸರಿಗೋಸ್ಕರ ಈ ಆಲಯವನ್ನು ಕಟ್ಟಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು