Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:7 - ಕನ್ನಡ ಸಮಕಾಲಿಕ ಅನುವಾದ

7 ಅದೋನೀಯನು ಚೆರೂಯಳ ಮಗ ಯೋವಾಬ, ಯಾಜಕ ಅಬಿಯಾತರನ ಜೊತೆ ಸೇರಿ ಮಾತುಕತೆ ಮಾಡಿದನು. ಅವರು ಅದೋನೀಯನನ್ನು ಹಿಂಬಾಲಿಸಿ, ಅವನಿಗೆ ಸಹಾಯಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನು ಚೆರೂಯಳ ಮಗನಾದ ಯೋವಾಬನನ್ನು ಮತ್ತು ಯಾಜಕನಾದ ಎಬ್ಯಾತಾರನನ್ನೂ ತನ್ನ ಕಡೆಗೆ ಒಲಿಸಿಕೊಂಡನು. ಇವರು ಅವನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಜೆರೂಯಳ ಮಗ ಯೋವಾಬನನ್ನೂ ಯಾಜಕ ಎಬ್ಯಾತಾರನನ್ನೂ ತನ್ನ ಕಡೆಗೆ ಒಲಿಸಿಕೊಂಡಿದ್ದನು. ಇವರು ಅವನಿಗೆ ಬೆಂಬಲ ವ್ಯಕ್ತಪಡಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನು ಚೆರೂಯಳ ಮಗನಾದ ಯೋವಾಬನನ್ನೂ ಯಾಜಕನಾದ ಎಬ್ಯಾತಾರನನ್ನೂ ತನ್ನ ಕಡೆಗೆ ಒಲಿಸಿಕೊಂಡನು. ಇವರು ಅವನಿಗೆ ಸಹಾಯಕರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅದೋನೀಯನು ಚೆರೂಯಳ ಮಗನಾದ ಯೋವಾಬ ಮತ್ತು ಯಾಜಕನಾದ ಎಬ್ಯಾತಾರನೊಂದಿಗೆ ಮಾತನಾಡಿದನು. ತಾನು ರಾಜನಾಗಬೇಕೆಂಬ ಅದೋನೀಯನ ಯೋಜನೆಗೆ ಅವರು ಬೆಂಬಲ ನೀಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:7
12 ತಿಳಿವುಗಳ ಹೋಲಿಕೆ  

ಶೆವನು ಕಾರ್ಯದರ್ಶಿಯಾಗಿದ್ದನು. ಚಾದೋಕನೂ ಅಬಿಯಾತರನೂ ಯಾಜಕರಾಗಿದ್ದರು.


ಅರಸನಾದ ಸೊಲೊಮೋನನು ತನ್ನ ತಾಯಿಗೆ ಉತ್ತರವಾಗಿ, “ಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ನೀನು ಕೇಳುವುದೇಕೆ? ರಾಜ್ಯವನ್ನೂ ಕೇಳು. ಏಕೆಂದರೆ ಅವನು ನನ್ನ ಅಣ್ಣನಾಗಿದ್ದಾನೆ. ಯಾಜಕ ಅಬಿಯಾತರನಿಗೋಸ್ಕರವೂ, ಚೆರೂಯಳ ಮಗ ಯೋವಾಬನಿಗೋಸ್ಕರವೂ ಕೇಳು,” ಎಂದನು.


ಯೆಹೋವ ದೇವರಿಗೂ ಅವರ ಅಭಿಷಿಕ್ತನಿಗೂ ವಿರೋಧವಾಗಿ, ಭೂಲೋಕದ ಅರಸರು ನಿಂತುಕೊಳ್ಳುತ್ತಾರೆ. ಅಧಿಪತಿಗಳೂ ಒಂದಾಗಿ ಕೂಡಿಕೊಳ್ಳುತ್ತಿರುವರು.


“ಯೆಬೂಸಿಯರಲ್ಲಿ ಒಬ್ಬನನ್ನು ಯಾರು ಮೊದಲು ಕೊಲ್ಲುವನೋ, ಅವನು ನನ್ನ ದಳಪತಿಯಾಗುವನು,” ಎಂದು ದಾವೀದ ಪ್ರಕಟಿಸಿದ್ದನು. ಹಾಗೆಯೇ ಚೆರೂಯಳ ಮಗ ಯೋವಾಬನು ಮೊದಲು ಹೋಗಿ ದಳಪತಿಯಾದನು.


ಯೋವಾಬನು ಇಸ್ರಾಯೇಲಿನ ಸಮಸ್ತ ಸೈನ್ಯದ ಅಧಿಪತಿಯಾಗಿದ್ದನು. ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಮುಖ್ಯಸ್ಥನಾಗಿದ್ದನು.


ಅಲ್ಲಿ ಯಾಜಕರಾದ ಚಾದೋಕನೂ, ಅಬಿಯಾತರನೂ ನಿನ್ನ ಬಳಿಯಲ್ಲಿ ಇಲ್ಲವೋ? ಆದ್ದರಿಂದ ನೀನು ಅರಸನ ಮನೆಯಲ್ಲಿ ಯಾವ ವರ್ತಮಾನವನ್ನು ಕೇಳುತ್ತೀಯೋ, ಅದನ್ನು ಯಾಜಕರಾದ ಚಾದೋಕನಿಗೂ, ಎಬ್ಯಾತಾರನಿಗೂ ತಿಳಿಸು.


ಅಬ್ಷಾಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ, ದಾವೀದನ ಆಲೋಚನಾಗಾರನಾಗಿರುವ ಗಿಲೋವಿನ ಅಹೀತೋಫೆಲನನ್ನು ಗಿಲೋವೆಂಬ ಅವನ ಪಟ್ಟಣದಿಂದ ಕರೆಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ, ಒಳಸಂಚಿನ ಗುಂಪು ಬಲವಾಯಿತು.


ಚೆರೂಯಳ ಮಗ ಯೋವಾಬನು ಸೈನ್ಯದ ಅಧಿಪತಿಯಾಗಿದ್ದನು. ಅಹೀಲೂದನ ಮಗ ಯೆಹೋಷಾಫಾಟನು ಆಸ್ಥಾನದ ಆಗುಹೋಗುಗಳನ್ನು ದಾಖಲಿಸುವವನಾಗಿದ್ದನು.


ಅಹೀತೋಫೆಲನ ತರುವಾಯ ಬೆನಾಯನ ಮಗನಾದ ಯೆಹೋಯಾದಾವನೂ, ಅಬಿಯಾತರನೂ ಅರಸನ ಆಲೋಚನೆಗಾರರಾಗಿದ್ದರು. ಯೋವಾಬನು ಅರಸನ ಸೈನ್ಯಾಧಿಪತಿಯಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು