Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 10:25 - ಕನ್ನಡ ಸಮಕಾಲಿಕ ಅನುವಾದ

25 ಅವರೆಲ್ಲರೂ ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ, ಬಂಗಾರದ ಪಾತ್ರೆಗಳನ್ನೂ, ವಸ್ತ್ರಗಳನ್ನೂ, ಆಯುಧಗಳನ್ನೂ, ಸುಗಂಧಗಳನ್ನೂ, ಕುದುರೆಗಳನ್ನೂ, ಹೇಸರಗತ್ತೆಗಳನ್ನೂ, ವರುಷ ವರುಷವೂ ನೇಮಕವಾದ ಪ್ರಕಾರ ತರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರೆಲ್ಲರೂ ಅವನಿಗೆ ವರ್ಷ ವರ್ಷ ಬೆಳ್ಳಿಬಂಗಾರದ ಸಾಮಾನು, ಉಡುಪು, ಯುದ್ಧಕ್ಕೆ ಬೇಕಾದ ಆಯುಧಗಳು, ಸುಗಂಧದ್ರವ್ಯ, ಕುದುರೆ ಮತ್ತು ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅವರೆಲ್ಲರೂ ಅವನಿಗೆ ವರ್ಷ ವರ್ಷ ಬೆಳ್ಳಿ ಬಂಗಾರದ ಸಾಮಾನು, ಉಡುಪು, ಯುದ್ಧಾಯುಧ, ಸುಗಂಧದ್ರವ್ಯ, ಕುದುರೆ, ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರೆಲ್ಲರೂ ಅವನಿಗೆ ವರುಷ ವರುಷ ಬೆಳ್ಳಿಬಂಗಾರದ ಸಾಮಾನು, ಉಡುಪು, ಯುದ್ಧಾಯುಧ, ಸುಗಂದದ್ರವ್ಯ, ಕುದುರೆ, ಹೇಸರಕತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಪ್ರತಿವರ್ಷವೂ ರಾಜನನ್ನು ನೋಡಲು ಜನರು ಬರುತ್ತಿದ್ದರು. ಪ್ರತಿಯೊಬ್ಬನೂ ಕಾಣಿಕೆಯನ್ನು ತರುತ್ತಿದ್ದನು. ಅವರು ಬೆಳ್ಳಿಬಂಗಾರದಿಂದ ಮಾಡಿದ ವಸ್ತುಗಳನ್ನು, ಆಯುಧಗಳನ್ನು, ಉಡುಪುಗಳನ್ನು, ಸಾಂಬಾರ ಪದಾರ್ಥಗಳನ್ನು, ಕುದುರೆಗಳನ್ನು ಮತ್ತು ಹೇಸರಕತ್ತೆಗಳನ್ನು ತರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 10:25
23 ತಿಳಿವುಗಳ ಹೋಲಿಕೆ  

ಜ್ಞಾನಿಗಳು ಮನೆಯನ್ನು ಪ್ರವೇಶಿಸಿ, ಮಗುವನ್ನು ತಾಯಿ ಮರಿಯಳ ಬಳಿ ಕಂಡು, ಮಗುವಿಗೆ ಅಡ್ಡಬಿದ್ದು ಆರಾಧಿಸಿದರು. ತಮ್ಮ ಬೊಕ್ಕಸಗಳನ್ನು ತೆರೆದು ಮಗುವಿಗೆ ಚಿನ್ನ, ಧೂಪ ಮತ್ತು ರಕ್ತಬೋಳಗಳನ್ನು ಕಾಣಿಕೆಯಾಗಿ ಸಮರ್ಪಿಸಿದರು.


“ ‘ತೋಗರ್ಮದ ಮನೆತನದವರು ಕುದುರೆಗಳಿಂದಲೂ ಕುದುರೆ ಸವಾರಿಗಳಿಂದಲೂ ಹೇಸರಗತ್ತೆಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.


ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥಗಳಲ್ಲಿಯೂ ಪಲ್ಲಕ್ಕಿಗಳಲ್ಲಿಯೂ ಹೇಸರಗತ್ತೆಗಳ ಮೇಲೆಯೂ ಒಂಟೆಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಯೆಹೋವ ದೇವರಿಗೆ ಕಾಣಿಕೆಯಾಗಿ ಇಸ್ರಾಯೇಲರು ಕಾಣಿಕೆಯನ್ನು ಶುದ್ಧಪಾತ್ರೆಯಲ್ಲಿ ಯೆಹೋವ ದೇವರು ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸಲೇಮಿಗೆ ತರುವರೆಂದು ಯೆಹೋವ ದೇವರು ಹೇಳುತ್ತಾರೆ.


“ಹಿಜ್ಕೀಯನ ಮಾತುಗಳಿಗೆ ಕಿವಿಗೊಡಬೇಡಿರಿ. ಏಕೆಂದರೆ ಅಸ್ಸೀರಿಯದ ಅರಸನು ಹೇಳುವುದೇನೆಂದರೆ, ನನ್ನ ಸಂಗಡ ಒಡಂಬಡಿಕೆ ಮಾಡಿಕೊಂಡು, ನನ್ನ ಬಳಿಗೆ ಹೊರಟುಬನ್ನಿರಿ, ಆಗ ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ತನ್ನ ದ್ರಾಕ್ಷಾಫಲವನ್ನೂ, ಅಂಜೂರದ ಫಲವನ್ನೂ ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.


ಅರಸನು ಬಾಳಲಿ. ಆತನಿಗೆ ಶೆಬದ ಚಿನ್ನವನ್ನು ಕೊಡಲಿ. ಆತನಿಗೋಸ್ಕರ ಯಾವಾಗಲೂ ಪ್ರಾರ್ಥನೆ ಮಾಡಲಿ. ಇಡೀ ದಿನ ಆತನಿಗೆ ಆಶೀರ್ವಾದಗಳು ಉಂಟಾಗಲಿ.


ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ಅರಸನಿಗೆ ಸಲ್ಲಿಸಲಿ. ಶೆಬ ಮತ್ತು ಸೆಬದ ಅರಸರು ದಾನಗಳನ್ನು ತಂದೊಪ್ಪಿಸಲಿ.


ಆಗ ಯೋಬನ ಎಲ್ಲಾ ಸಹೋದರರು, ಸಹೋದರಿಯರು, ಹಿಂದಿನ ಪರಿಚಿತರೆಲ್ಲರೂ ಅವನ ಬಳಿಗೆ ಬಂದರು. ಅವರು ಯೋಬನ ಸಂಗಡ ಅವನ ಮನೆಯಲ್ಲಿ ಊಟಮಾಡಿ, ಯೆಹೋವ ದೇವರು ಅವನ ಮೇಲೆ ಬರಮಾಡಿದ ಎಲ್ಲಾ ಆಪತ್ತಿಗಾಗಿ ಸಂತಾಪ ವ್ಯಕ್ತಪಡಿಸಿ ಅವನನ್ನು ಸಂತೈಸಿದರು. ಪ್ರತಿಯೊಬ್ಬರೂ ಒಂದೊಂದು ಬೆಳ್ಳಿ ನಾಣ್ಯವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಯೋಬನಿಗೆ ಕೊಟ್ಟರು.


ಅಂಚೆಯವರು ಅರಸನ ಆಜ್ಞೆಯಿಂದ ಪ್ರೇರಿತರಾಗಿ ಅರಮನೆಯ ಕುದುರೆಗಳ ಮೇಲೆ ಅತಿ ಶೀಘ್ರವಾಗಿ ಹೊರಟರು. ಈ ಆಜ್ಞೆಯು ಶೂಷನ್ ನಗರದ ಅರಮನೆಯಲ್ಲಿ ಕೊಡಲಾಗಿತ್ತು.


ಮೊರ್ದೆಕೈ ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದ ಪತ್ರಗಳಿಗೆ ಅರಸನ ಉಂಗುರದಿಂದ ಮುದ್ರೆಹಾಕಿ, ಸವಾರಿ ಕುದುರೆಗಳನ್ನು ಹತ್ತಿಕೊಂಡಿದ್ದ ಅಂಚೆಯವರ ಮೂಲಕ ವೇಗವಾಗಿ ಕಳುಹಿಸಿದನು.


ಅವರ 736 ಕುದುರೆಗಳು, ಅವರ 245 ಹೇಸರಕತ್ತೆಗಳು,


ಅಮ್ಮೋನ್ಯರು ಉಜ್ಜೀಯನಿಗೆ ಕಪ್ಪವನ್ನು ಕೊಟ್ಟರು. ಆದ್ದರಿಂದ ಅವನ ಹೆಸರು ಈಜಿಪ್ಟಿನ ಪ್ರದೇಶದವರೆಗೂ ಬಹಳವಾಗಿ ಹಬ್ಬಿತು. ಅವನು ಬಹಳವಾಗಿ ಬಲಪಡಿಸಿಕೊಂಡಿದ್ದನು.


ಅವರೆಲ್ಲರೂ ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ, ಬಂಗಾರದ ಪಾತ್ರೆಗಳನ್ನೂ, ವಸ್ತ್ರಗಳನ್ನೂ, ಆಯುಧಗಳನ್ನೂ, ಸುಗಂಧಗಳನ್ನೂ, ಕುದುರೆಗಳನ್ನೂ, ಹೇಸರಗತ್ತೆಗಳನ್ನೂ ವರುಷ ವರುಷವೂ ನೇಮಕವಾದ ಪ್ರಕಾರ ತರುತ್ತಿದ್ದರು.


ಆದರೆ ಅಸ್ಸೀರಿಯದ ಅರಸನು ಹೋಶೇಯನಲ್ಲಿ ಒಳಸಂಚನ್ನು ಕಂಡುಹಿಡಿದನು. ಏನೆಂದರೆ, ಹೋಶೇಯನು ಅಸ್ಸೀರಿಯದ ಅರಸನಿಗೆ ವರ್ಷ ವರ್ಷಕ್ಕೂ ಕೊಡುವ ಕಪ್ಪವನ್ನು ಕೊಡದೆ, ಈಜಿಪ್ಟಿನ ಅರಸನಾದ ಸೋ ಎಂಬವನ ಬಳಿಗೆ ದೂತರನ್ನು ಕಳುಹಿಸಿದನು. ಆದ್ದರಿಂದ ಅಸ್ಸೀರಿಯದ ಅರಸನು ಅವನನ್ನು ಕಟ್ಟಿ, ಸೆರೆಮನೆಯಲ್ಲಿ ಬಂಧಿಸಿದನು.


ಅಹಾಬನು ಓಬದ್ಯನಿಗೆ, “ನೀನು ದೇಶದಲ್ಲಿರುವ ಎಲ್ಲಾ ನೀರಿನ ಬುಗ್ಗೆಗಳ ಬಳಿಗೂ, ಎಲ್ಲಾ ಹಳ್ಳಗಳ ಬಳಿಗೂ ಹೋಗು. ನಾವು ಸಮಸ್ತ ಪಶುಗಳನ್ನು ಕಳೆದುಕೊಳ್ಳದ ಹಾಗೆ ಕುದುರೆಗಳನ್ನೂ, ಹೇಸರಗತ್ತೆಗಳನ್ನೂ ಜೀವದಿಂದ ಇರಿಸುವುದಕ್ಕೆ ನಮಗೆ ಒಂದು ವೇಳೆ ಹುಲ್ಲು ದೊರಕಬಹುದು. ಆಗ ನಾವು ಅವುಗಳನ್ನು ಕೊಲ್ಲುವ ಅವಶ್ಯಕತೆ ಇರುವುದಿಲ್ಲ,” ಎಂದನು.


ಅವಳು ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂ ತೂಕ ಬಂಗಾರವನ್ನೂ, ಬಹು ಸಮೃದ್ಧಿಯಾದ ಸುಗಂಧದ್ರವ್ಯಗಳನ್ನೂ, ಅಮೂಲ್ಯವಾದ ರತ್ನಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಅಪರಿಮಿತವಾದ ಸುಗಂಧದ್ರವ್ಯಗಳ ಹಾಗೆ ಬೇರೆ ಯಾರೂ ಕೊಟ್ಟಿರಲಿಲ್ಲ.


ಅರಸನು ಅವರಿಗೆ, “ನೀವು ನಿಮ್ಮ ಯಜಮಾನನ ಸೇವಕರನ್ನು ಕರೆದುಕೊಂಡು ಹೋಗಿ ನನ್ನ ಮಗ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಅವನನ್ನು ಕರೆದುಕೊಂಡು ಹೋಗಿರಿ.


ಅವನು ಅರಸನಾದ ದಾವೀದನ ಕ್ಷೇಮಸಮಾಚಾರವನ್ನು ವಿಚಾರಿಸಲೂ, ಹದದೆಜೆರನ ವಿರುದ್ಧ ಯುದ್ಧಮಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಅವನನ್ನು ಅಭಿನಂದಿಸಿ, ಹರಸುವಂತೆ, ತೋವು ತನ್ನ ಪುತ್ರನಾದ ಯೋರಾಮನನ್ನು ಬೆಳ್ಳಿ, ಬಂಗಾರ, ಕಂಚಿನ ಪಾತ್ರೆಗಳ ಸಹಿತವಾಗಿ ದಾವೀದನ ಬಳಿಗೆ ಕಳುಹಿಸಿದನು; ಏಕೆಂದರೆ ಹದದೆಜೆರನಿಗೆ ತೋವಿಯ ಸಂಗಡ ಯುದ್ಧಗಳಿದ್ದವು.


ಹಾಗೆಯೇ ದಾವೀದನು ಮೋವಾಬ್ಯರನ್ನು ಸಹ ಸೋಲಿಸಿದನು. ಸೆರೆಯಾಳುಗಳನ್ನು ನೆಲದ ಮೇಲೆ ಹಗ್ಗದಿಂದ ಅಳತೆ ಮಾಡಿಸಿ, ಎರಡು ಪಾಲು ಜನರನ್ನು ಕೊಲ್ಲಿಸಿ, ಒಂದು ಪಾಲನ್ನು ಉಳಿಸಿದನು. ಹೀಗೆ ಮೋವಾಬ್ಯರು ದಾವೀದನಿಗೆ ಅಧೀನರಾಗಿ ಕಪ್ಪಕೊಡುವವರಾದರು.


ಆದರೆ ಕೆಲವು ಪುಂಡಪೋಕರಿಗಳು, “ಇವನು ನಮ್ಮನ್ನು ರಕ್ಷಿಸುವುದೇನು?” ಎಂದು ಅವನನ್ನು ತಿರಸ್ಕರಿಸಿದರು. ಅವರು ಅವನಿಗೆ ಕಾಣಿಕೆಯನ್ನು ತೆಗೆದುಕೊಂಡು ಬರಲಿಲ್ಲ. ಅವನು ಕೇಳದ ಹಾಗೆ ಇದ್ದನು.


ಆದರೆ ಇಸ್ರಾಯೇಲರು ಯೆಹೋವ ದೇವರನ್ನು ಕೂಗಿದಾಗ, ಯೆಹೋವ ದೇವರು ಅವರಿಗೆ ಬೆನ್ಯಾಮೀನನಾದ ಗೇರನ ಮಗ ಏಹೂದನನ್ನು ರಕ್ಷಿಸುವುದಕ್ಕೆ ಎಬ್ಬಿಸಿದರು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲರು ಮೋವಾಬಿನ ಅರಸನಾದ ಎಗ್ಲೋನನಿಗೆ ಕಪ್ಪವನ್ನು ಕಳುಹಿಸಿದರು.


ಸಿಬೆಯೋನನ ಮಕ್ಕಳು: ಅಯ್ಯಾಹ ಮತ್ತು ಅನಾಹ ಎಂಬುವರು. ತನ್ನ ತಂದೆ ಸಿಬೆಯೋನನ ಕತ್ತೆಗಳನ್ನು ಕಾಯುವಾಗ ಕಾಡಿನಲ್ಲಿ ಬಿಸಿನೀರಿನ ಒರತೆಗಳನ್ನು ಕಂಡುಕೊಂಡವನೂ ಅರಣ್ಯದಲ್ಲಿ ಹೇಸರಗತ್ತೆಗಳನ್ನು ಕಂಡುಕೊಂಡವನು ಈ ಅನಾಹನೇ.


ಯೆರೂಸಲೇಮಿನ ನಿಮ್ಮ ಮಂದಿರದ ನಿಮಿತ್ತ ಅರಸರು ನಿಮಗೆ ಕಾಣಿಕೆಗಳನ್ನು ಸಮರ್ಪಿಸಲಿ.


ಸೊಲೊಮೋನನು ತನ್ನ ತಂದೆಗೆ ಬದಲಾಗಿ ಅರಸನಾಗಲು ಅಭಿಷೇಕ ಪಡೆದಿದ್ದಾನೆಂದು ಟೈರಿನ ಅರಸನಾದ ಹೀರಾಮನು ಕೇಳಿದಾಗ, ಅವನು ತನ್ನ ರಾಜದೂತರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು. ಏಕೆಂದರೆ ಹೀರಾಮನು ಯಾವಾಗಲೂ ದಾವೀದನಿಗೆ ಆಪ್ತಮಿತ್ರನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು