Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 10:26 - ಕನ್ನಡ ಸಮಕಾಲಿಕ ಅನುವಾದ

26 ಇದಲ್ಲದೆ ಸೊಲೊಮೋನನು ರಥಗಳನ್ನೂ, ರಾಹುತರನ್ನೂ ಕೂಡಿಸಿದನು. ಸಾವಿರದ ನಾನೂರು ರಥಗಳು, ಹನ್ನೆರಡು ಸಾವಿರ ಕುದುರೆಯ ರಾಹುತರು ಇದ್ದರು. ಇವುಗಳಲ್ಲಿ ಕೆಲವನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೇ ಇರಿಸಿದನು, ಉಳಿದವುಗಳನ್ನು ರಥಗಳ ಪಟ್ಟಣಗಳಲ್ಲಿಯೂ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಸೊಲೊಮೋನನು ರಥಗಳನ್ನೂ ಮತ್ತು ರಾಹುತರನ್ನೂ ಸಂಗ್ರಹಿಸಿದನು. ಅವನ ರಥಗಳು ಸಾವಿರದ ನಾನೂರು. ರಾಹುತರು ಹನ್ನೆರಡು ಸಾವಿರ. ಇವುಗಳಲ್ಲಿ ಕೆಲವನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೂ, ಉಳಿದವುಗಳನ್ನು ರಥಗಳಿಗೋಸ್ಕರ ನೇಮಿಸಿದ ಪಟ್ಟಣಗಳಲ್ಲಿಯೂ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಸೊಲೊಮೋನನು ರಥಗಳನ್ನೂ ರಾಹುತರನ್ನೂ ಸಂಗ್ರಹಿಸುತ್ತಿದ್ದನು. ಅವನ ರಥಗಳು ಸಾವಿರದ ನಾನೂರು; ರಾಹುತರು ಹನ್ನೆರಡು ಸಾವಿರ. ಇವುಗಳಲ್ಲಿ ಕೆಲವನ್ನು ಜೆರುಸಲೇಮಿನಲ್ಲಿ ತನ್ನ ಬಳಿಯಲ್ಲೇ ಇರಿಸಿದ್ದನು; ಉಳಿದವುಗಳನ್ನು ರಥಗಳಿಗಾಗಿಯೇ ನೇಮಿಸಿದ್ದ ಪಟ್ಟಣಗಳಲ್ಲಿ ಇರಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಸೊಲೊಮೋನನು ರಥಗಳನ್ನೂ ರಾಹುತರನ್ನೂ ಸಂಗ್ರಹಿಸಿದನು. ಅವನ ರಥಗಳು ಸಾವಿರದ ನಾನೂರು; ರಾಹುತರು ಹನ್ನೆರಡು ಸಾವಿರ. ಇವುಗಳಲ್ಲಿ ಕೆಲವನ್ನು ಯೆರೂಸಲೇವಿುನಲ್ಲಿ ತನ್ನ ಬಳಿಯಲ್ಲಿಯೂ ಉಳಿದವುಗಳನ್ನು ರಥಗಳಿಗೋಸ್ಕರ ನೇವಿುಸಿದ ಪಟ್ಟಣಗಳಲ್ಲಿಯೂ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದ್ದರಿಂದ ಅಸಂಖ್ಯವಾದ ರಥಗಳೂ ಕುದುರೆಗಳೂ ಸೊಲೊಮೋನನಲ್ಲಿದ್ದವು. ಅವನಲ್ಲಿ ಒಂದು ಸಾವಿರದ ನಾನೂರು ರಥಗಳು ಮತ್ತು ಹನ್ನೆರಡು ಸಾವಿರ ಕುದುರೆಗಳಿದ್ದವು. ಸೊಲೊಮೋನನು ಈ ರಥಗಳಿಗಾಗಿ ವಿಶೇಷವಾದ ನಗರಗಳನ್ನು ಕಟ್ಟಿಸಿದನು. ಆ ನಗರಗಳಲ್ಲಿ ರಥಗಳನ್ನು ಇರಿಸಿದನು. ರಾಜನಾದ ಸೊಲೊಮೋನನು ಕೆಲವು ರಥಗಳನ್ನು ಜೆರುಸಲೇಮಿನಲ್ಲಿ ತನ್ನ ಹತ್ತಿರ ಇಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 10:26
7 ತಿಳಿವುಗಳ ಹೋಲಿಕೆ  

ಸೊಲೊಮೋನನಿಗೆ ನಾಲ್ಕು ಸಾವಿರ ಕುದುರೆ ಲಾಯಗಳು ಮತ್ತು ರಥಗಳು ಇದ್ದವು. ಇದಲ್ಲದೆ ಹನ್ನೆರಡು ಸಾವಿರ ರಾಹುತರಿದ್ದರು. ಅವರನ್ನು ರಥಗಳ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ಇರಿಸಿದನು.


ಸೊಲೊಮೋನನಿಗೆ ತನ್ನ ರಥಗಳಿಗೋಸ್ಕರ ನಲವತ್ತು ಸಾವಿರ ಕುದುರೆಗಳಿಗೆ ಸ್ಥಳವಿತ್ತು, ಹನ್ನೆರಡು ಸಾವಿರ ರಾಹುತರೂ ಇದ್ದರು.


ಇದಲ್ಲದೆ ಸೊಲೊಮೋನನು ಉಗ್ರಾಣದ ಪಟ್ಟಣಗಳನ್ನೂ, ತನ್ನ ರಾಹುತರಿಗೋಸ್ಕರ ಮತ್ತು ರಥಗಳಿಗೋಸ್ಕರ ಪಟ್ಟಣಗಳನ್ನೂ ಕಟ್ಟಿಸಿದನು. ಯೆರೂಸಲೇಮಿನಲ್ಲಿಯೂ, ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತಗಳಲ್ಲಿಯೂ ತನಗೆ ಇಷ್ಟವಾದವುಗಳನ್ನೆಲ್ಲಾ ಕಟ್ಟಿಸಿದನು.


ಅರಸನು ತನಗಾಗಿ ಕುದುರೆಗಳನ್ನು ಹೆಚ್ಚಿಸಿಕೊಳ್ಳಬಾರದು. ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನರನ್ನು ಈಜಿಪ್ಟ್ ದೇಶಕ್ಕೆ ಕಳುಹಿಸಬಾರದು. “ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗಬಾರದು,” ಎಂದು ಯೆಹೋವ ದೇವರು ನಿಮಗೆ ಹೇಳಿದ್ದಾರೆ.


ಅವರ ದೇಶವು ಬೆಳ್ಳಿ ಬಂಗಾರಗಳಿಂದ ತುಂಬಿದೆ. ಅವರ ಬೊಕ್ಕಸಗಳಿಗೆ ಮಿತಿಯಿಲ್ಲ. ಅವರ ದೇಶವು ಕುದುರೆಗಳಿಂದ ತುಂಬಿದೆ, ಅವರ ರಥಗಳಿಗೆ ಮಿತಿಯೇ ಇಲ್ಲ.


“ಆದ್ದರಿಂದ ನೀನು ನನಗೋಸ್ಕರ ಲೆಬನೋನಿನಲ್ಲಿ ದೇವದಾರು ಮರಗಳನ್ನು ಕಡಿಯಲು ಆಜ್ಞಾಪಿಸು. ನನ್ನ ಸೇವಕರೂ, ನಿನ್ನ ಸೇವಕರೂ ಕೂಡ ಇರಲಿ. ನೀನು ಹೇಳಿದ ಪ್ರಕಾರ, ನಿನ್ನ ಸೇವಕರ ಕೂಲಿಯನ್ನು ಕೊಡುತ್ತೇನೆ. ಏಕೆಂದರೆ ನಮ್ಮಲ್ಲಿ ಸೀದೋನ್ಯರ ಹಾಗೆ ಮರವನ್ನು ಕಡಿಯಲು ತಿಳಿದವರಿಲ್ಲ ಎಂದು ನೀನು ಬಲ್ಲೆ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು