Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:21 - ಕನ್ನಡ ಸಮಕಾಲಿಕ ಅನುವಾದ

21 ಆದರೆ ದಾವೀದನು ಮರಣ ಹೊಂದಿದನೆಂದೂ, ಸೇನಾಧಿಪತಿಯಾದ ಯೋವಾಬನು ಸತ್ತು ಹೋದನೆಂದೂ, ಹದದನು ಈಜಿಪ್ಟಿನಲ್ಲಿ ಕೇಳಿದಾಗ, ಹದದನು ಫರೋಹನಿಗೆ, “ನಾನು ನನ್ನ ದೇಶಕ್ಕೆ ಹೋಗುವಹಾಗೆ ನನ್ನನ್ನು ಕಳುಹಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ದಾವೀದನು ಪೂರ್ವಿಕರ ಬಳಿಗೆ ಸೇರಿದನೆಂದೂ ಸೇನಾಧಿಪತಿಯಾದ ಯೋವಾಬನು ಮೃತನಾದನೆಂದೂ ಐಗುಪ್ತದಲ್ಲಿದ್ದ ಹದದನು ಕೇಳಿ ಫರೋಹನನಿಗೆ, “ನಾನು ಸ್ವದೇಶಕ್ಕೆ ಹೋಗಬೇಕೆಂದಿರುತ್ತೇನೆ, ನನಗೆ ಅಪ್ಪಣೆ ಕೊಡು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದಾವೀದನು ಸತ್ತು ಪಿತೃಗಳ ಬಳಿಗೆ ಸೇರಿದನೆಂದೂ ಸೇನಾಪತಿಯಾದ ಯೋವಾಬನು ಮೃತನಾದನೆಂದೂ ಈಜಿಪ್ಟಿನಲ್ಲಿದ್ದ ಹದದನು ಕೇಳಿದನು. ಫರೋಹನಿಗೆ ಅವನು, “ನಾನು ಸ್ವದೇಶಕ್ಕೆ ಹೋಗಬೇಕೆಂದಿರುತ್ತೇನೆ; ಅಪ್ಪಣೆಕೊಡಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದಾವೀದನು ಪಿತೃಗಳ ಬಳಿಗೆ ಸೇರಿದನೆಂದೂ ಸೇನಾಪತಿಯಾದ ಯೋವಾಬನು ಮೃತನಾದನೆಂದೂ ಐಗುಪ್ತದಲ್ಲಿದ್ದ ಹದದನು ಕೇಳಿ ಫರೋಹನಿಗೆ - ನಾನು ಸ್ವದೇಶಕ್ಕೆ ಹೋಗಬೇಕೆಂದಿರುತ್ತೇನೆ; ನನಗೆ ಅಪ್ಪಣೆಕೊಡು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದಾವೀದನು ಸತ್ತುಹೋದನೆಂಬುದು ಹದದನಿಗೆ ಈಜಿಪ್ಟಿನಲ್ಲಿ ತಿಳಿಯಿತು. ಸೈನ್ಯದ ಸೇನಾಪತಿಯಾದ ಯೋವಾಬನು ಸತ್ತನೆಂಬುದೂ ಅವನಿಗೆ ತಿಳಿಯಿತು. ಆದ್ದರಿಂದ ಹದದನು ಫರೋಹನಿಗೆ, “ಸ್ವದೇಶದ ನನ್ನ ಮನೆಗೆ ನನಗೆ ಹೋಗಲು ಬಿಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:21
10 ತಿಳಿವುಗಳ ಹೋಲಿಕೆ  

ಹೀಗೆಯೇ ದಾವೀದನು ಮರಣಹೊಂದಿ ತನ್ನ ಪಿತೃಗಳ ಜೊತೆ ಸೇರಿದನು. ದಾವೀದನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು.


“ಎದ್ದೇಳು, ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಹಿಂದಿರುಗು, ಮಗುವಿನ ಪ್ರಾಣ ತೆಗೆಯಬೇಕೆಂದಿದ್ದವರು ಸತ್ತುಹೋದರು,” ಎಂದು ಹೇಳಿದನು.


ಹಾಗೆಯೇ ಯೆಹೋಯಾದಾವನ ಮಗ ಬೆನಾಯನು ಹೋಗಿ ಯೋವಾಬನನ್ನು ಕೊಂದುಹಾಕಿದನು. ಅವನ ಶವಕ್ಕೆ ಮರುಭೂಮಿಯಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಯಾಯಿತು.


ಆಗ ಅಬ್ನೇರನು ದಾವೀದನಿಗೆ, “ಸಮಸ್ತ ಇಸ್ರಾಯೇಲರು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವ ಹಾಗೆಯೂ, ನಿನ್ನ ಪ್ರಾಣವು ಇಚ್ಛೈಸುವ ಹಾಗೆ ಎಲ್ಲರ ಮೇಲೆ ಆಳುವ ಹಾಗೆಯೂ ನಾನು ಎದ್ದು ಹೋಗಿ, ಸಮಸ್ತ ಇಸ್ರಾಯೇಲರನ್ನು ಅರಸನಾದ ನನ್ನ ಒಡೆಯನ ಬಳಿಗೆ ಕೂಡಿಸಿಕೊಂಡು ಬರುವೆನು,” ಎಂದನು. ದಾವೀದನು ಅಬ್ನೇರನಿಗೆ ಅಪ್ಪಣೆ ಕೊಟ್ಟದ್ದರಿಂದ ಅವನು ಸಮಾಧಾನವಾಗಿ ಹೋದನು.


ಅವರು ಉದಯಕಾಲದಲ್ಲಿ ಸೂರ್ಯೋದಯದಲ್ಲಿ ಎದ್ದಾಗ, ಸಮುಯೇಲನು ಸೌಲನನ್ನು ಮಾಳಿಗೆಗೆ ಕರೆದು, “ಏಳು, ನಾನು ನಿನ್ನನ್ನು ಕಳುಹಿಸುತ್ತೇನೆ,” ಎಂದನು. ಹಾಗೆಯೇ ಸೌಲನು ಎದ್ದನು, ಆಗ ಸೌಲನೂ, ಸಮುಯೇಲನೂ ಇಬ್ಬರೂ ಹೊರಗೆ ಹೊರಟರು.


ಅದಕ್ಕೆ ಆಕೆಯು, “ನಿಮ್ಮ ಮಾತುಗಳ ಪ್ರಕಾರವೇ ಆಗಲಿ,” ಎಂದು ಹೇಳಿದಳು. ಅನಂತರ ಅವರನ್ನು ಕಳುಹಿಸಿಬಿಟ್ಟಳು. ಅವರು ಹೋದಾಗ, ಆ ಕಡುಗೆಂಪು ಹಗ್ಗವನ್ನು ಕಿಟಿಕಿಯಲ್ಲಿ ಕಟ್ಟಿದಳು.


ಯೆಹೋವ ದೇವರು ಮಿದ್ಯಾನಿನಲ್ಲಿ ಮೋಶೆಗೆ, “ಈಜಿಪ್ಟಿಗೆ ಹಿಂದಿರುಗಿ ಹೋಗು. ಏಕೆಂದರೆ ನಿನ್ನನ್ನು ಕೊಲ್ಲಬೇಕೆಂದಿದ್ದ ಜನರೆಲ್ಲಾ ಸತ್ತಿದ್ದಾರೆ,” ಎಂದರು.


ಯೋಸೇಫನು ಅವರಿಗೆ, “ಮಾರ್ಗದಲ್ಲಿ ಜಗಳವಾಡಬೇಡಿರಿ,” ಎಂದು ಹೇಳಿ ಕಳುಹಿಸಿದನು.


ತಪ್ನೆಸ್ ಸಹೋದರಿಯು ಅವನಿಗೆ ಗೆನುಬತ್ ಎಂಬ ಮಗನನ್ನು ಹೆತ್ತಳು. ತಪ್ನೆಸ್ ಇವನನ್ನು ಫರೋಹನ ಮನೆಯಲ್ಲಿ ಬೆಳೆಸಿದಳು. ಗೆನುಬತನು ಫರೋಹನ ಮನೆಯಲ್ಲಿ ಫರೋಹನ ಮಕ್ಕಳ ಸಂಗಡ ಇದ್ದನು.


ಫರೋಹನು ಅವನಿಗೆ, “ನೀನು ನಿನ್ನ ದೇಶಕ್ಕೆ ಹೋಗಬೇಕೆನ್ನುವ ಹಾಗೆ ನಿನಗೆ ನನ್ನ ಸಂಗಡ ಇರುವಾಗ ಏನು ಕೊರತೆಯಾಯಿತು?” ಎಂದು ಕೇಳಿದನು. ಅವನು, “ಏನೂ ಇಲ್ಲ, ಆದರೆ ನಾನು ಅಲ್ಲಿಗೆ ಹೋಗಲು ಅಪ್ಪಣೆಯಾಗಬೇಕು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು