Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:23 - ಕನ್ನಡ ಸಮಕಾಲಿಕ ಅನುವಾದ

23 ಇದಲ್ಲದೆ ದೇವರು ಮತ್ತೊಬ್ಬ ಶತ್ರುವನ್ನು ಸೊಲೊಮೋನನ ಮೇಲೆ ಎಬ್ಬಿಸಿದರು. ಅವನು ಚೋಬದ ಅರಸನಾದ ತನ್ನ ಯಜಮಾನನಾಗಿರುವ ಹದದೆಜೆರನನ್ನು ಬಿಟ್ಟು ಓಡಿ ಹೋದ ಎಲ್ಯಾದಾವನ ಮಗನಾದ ರೆಜೋನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ದೇವರು ಸೊಲೊಮೋನನಿಗೆ ವಿರೋಧವಾಗಿ ಎಬ್ಬಿಸಿದ ಎರಡನೆಯ ವೈರಿಯು ಎಲ್ಯಾದಾವನ ಮಗನಾದ ರೆಜೋನ್ ಎಂಬುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸೊಲೊಮೋನನಿಗೆ ವಿರುದ್ಧ ದೇವರು ಎಬ್ಬಿಸಿದ ಎರಡನೆಯ ವೈರಿ ಎಲ್ಯಾದಾವನ ಮಗ ರೆಜೋನ್ ಎಂಬವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ದೇವರು ಸೊಲೊಮೋನನಿಗೆ ವಿರೋಧವಾಗಿ ಎಬ್ಬಿಸಿದ ಎರಡನೆಯ ವೈರಿಯು ಎಲ್ಯಾದಾವನ ಮಗನಾದ ರೆಜೋನ್ ಎಂಬವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಸೊಲೊಮೋನನಿಗೆ ವಿರುದ್ಧವಾಗಿ ಶತ್ರುವಾಗುವಂತೆ ಇನ್ನೊಬ್ಬ ಮನುಷ್ಯನನ್ನೂ ದೇವರು ಪ್ರೇರೇಪಿಸಿದನು. ಈ ಮನುಷ್ಯನು ಎಲ್ಯಾದಾವನ ಮಗನಾದ ರೆಜೋನ್ ಎಂಬವನು. ರೆಜೋನನು ತನ್ನ ಒಡೆಯನ ಹತ್ತಿರದಿಂದ ಓಡಿಹೋಗಿದ್ದನು. ಚೋಬದ ರಾಜನಾದ ಹದದೆಜೆರನು ಅವನ ಒಡೆಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:23
18 ತಿಳಿವುಗಳ ಹೋಲಿಕೆ  

ಆಗ ಯೆಹೋವ ದೇವರು ಎದೋಮ್ಯನಾದ ಹದದನನ್ನು ಸೊಲೊಮೋನನಿಗೆ ಎದುರಾಳಿಯಾಗಿ ಎಬ್ಬಿಸಿದರು.


ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಾಪಿಸುವದಕ್ಕೆ ಹೋಗುತ್ತಿರುವಾಗ, ಚೋಬದ ಅರಸನಾದ ರೆಹೋಬನ ಮಗ ಹದದೆಜೆರನನ್ನು ಸೋಲಿಸಿದನು.


ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲರಿಗೆ ವಿರೋಧವಾಗಿ ಅವರ ಮೇಲೆ ಬರುವೆ. ಇದು ನಡೆಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಇತರ ಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ವಿರೋಧವಾಗಿ ಬರಮಾಡುವೆನು.


ನಾನೇ ಯೆಹೋವ ದೇವರು, ಮತ್ತೊಬ್ಬನಿಲ್ಲ. ನನ್ನ ಹೊರತು ಯಾವ ದೇವರೂ ಇಲ್ಲ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನ್ನನ್ನು ಬಲಪಡಿಸುವೆನು.


“ಹೀಗಾಗಬೇಕೆಂದು ಬಹಳ ದಿನಗಳ ಹಿಂದೆಯೇ ನಿರ್ಣಯಿಸಿದ್ದನ್ನು ನೀನು ಕೇಳಲಿಲ್ಲವೋ? ಪುರಾತನ ದಿನಗಳಲ್ಲಿ ನಾನು ಯೋಚಿಸಿದ್ದನ್ನು, ಈಗ ನಾನು ಅದನ್ನು ನೆರವೇರಿಸಿದ್ದೇನೆ. ಆದ್ದರಿಂದಲೇ ನೀನು ಕೋಟೆಗಳುಳ್ಳ ಪಟ್ಟಣಗಳನ್ನು ಹಾಳಾದ ದಿಬ್ಬಗಳಾಗಿ ಮಾಡಿಬಿಟ್ಟಿರುವೆ


ಇಗೋ, ಬೆಳ್ಳಿಯನ್ನು ಲಕ್ಷಿಸದೆ, ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧವಾಗಿ ನಾನು ಎಬ್ಬಿಸುವೆನು.


ದೇವರೇ, ನನ್ನನ್ನು ಕೈಬಿಟ್ಟಿದ್ದೀರಾ? ನನ್ನನ್ನು ಚದರಿಸಿದ್ದೀರಾ? ನಮ್ಮ ಕಡೆಗೆ ಬೇಸರಗೊಂಡರೂ ನಮ್ಮನ್ನು ಪುನಃ ಸ್ಥಾಪಿಸಿರಿ.


ಆದರೆ ಪಾರಸಿಯ ಅರಸ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವ ದೇವರು ಯೆರೆಮೀಯನ ಮುಂಖಾತರ ಹೇಳಿದ ವಾಕ್ಯವು ಈಡೇರುವ ಹಾಗೆ ಯೆಹೋವ ದೇವರು ಪಾರಸಿಯ ಅರಸ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ, ಅವನು ತನ್ನ ಸಮಸ್ತ ರಾಜ್ಯದಲ್ಲಿ ಡಂಗುರದಿಂದಲೂ, ಪತ್ರಗಳಿಂದಲೂ ಸಾರಿ ಹೇಳಿದ್ದೇನೆಂದರೆ:


ತಾವು ದಾವೀದನಿಗೆ ಅಸಹ್ಯರಾದೆವೆಂದು ಹಾನೂನನಿಗೆ ಮತ್ತು ಅಮ್ಮೋನಿಯರಿಗೆ ತಿಳಿಯಿತು. ಆದ್ದರಿಂದ ಅರಾಮಿನಲ್ಲಿಯೂ, ಅರಾಮ್ ಮಾಕದಲ್ಲಿಯೂ, ಚೋಬದಲ್ಲಿಯೂ ರಥಗಳನ್ನೂ, ರಾಹುತರನ್ನೂ ಕೂಲಿಗೆ ತೆಗೆದುಕೊಳ್ಳಲು ಮೂವತ್ತು ನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕಳುಹಿಸಿದರು.


ದಾವೀದನು ಅಬೀಷೈಯನಿಗೂ, ತನ್ನ ಸಮಸ್ತ ಸೇವಕರಿಗೂ, “ನನ್ನ ಹೊಟ್ಟೆಯಲ್ಲಿ ಹುಟ್ಟಿದ ನನ್ನ ಮಗನು ನನ್ನ ಪ್ರಾಣವನ್ನು ಹುಡುಕಿದರೆ, ಎಷ್ಟೋ ಅಧಿಕವಾಗಿ ಬೆನ್ಯಾಮೀನನಾದವನು ಈಗ ಏನು ಮಾಡಿಯಾನು? ಅವನನ್ನು ಬಿಟ್ಟುಬಿಡಿರಿ. ಅವನು ದೂಷಿಸಲಿ. ಏಕೆಂದರೆ ಯೆಹೋವ ದೇವರು ಅವನಿಗೆ ಹಾಗೆಯೇ ಹೇಳಿದ್ದಾರೆ.


ಆಗ ಅಮ್ಮೋನಿಯರು ಹೊರಟು ಪಟ್ಟಣದ ದ್ವಾರದ ಹತ್ತಿರ ವ್ಯೂಹ ಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬಿನಿಂದಲೂ ಟೋಬಿನಿಂದಲೂ ಮಾಕಾನಿಂದಲೂ ಬಂದ ಅರಾಮ್ಯರು ಪ್ರತ್ಯೇಕವಾಗಿ ಬೈಲಿನಲ್ಲಿ ಇಳಿದುಕೊಂಡಿದ್ದರು.


ದಮಸ್ಕದ ಅರಾಮ್ಯರು ಚೋಬದ ಅರಸ ಹದದೆಜೆರನಿಗೆ ಸಹಾಯಮಾಡಲು ಬಂದಾಗ, ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಸಂಹರಿಸಿಬಿಟ್ಟನು.


ಫರೋಹನು ಅವನಿಗೆ, “ನೀನು ನಿನ್ನ ದೇಶಕ್ಕೆ ಹೋಗಬೇಕೆನ್ನುವ ಹಾಗೆ ನಿನಗೆ ನನ್ನ ಸಂಗಡ ಇರುವಾಗ ಏನು ಕೊರತೆಯಾಯಿತು?” ಎಂದು ಕೇಳಿದನು. ಅವನು, “ಏನೂ ಇಲ್ಲ, ಆದರೆ ನಾನು ಅಲ್ಲಿಗೆ ಹೋಗಲು ಅಪ್ಪಣೆಯಾಗಬೇಕು,” ಎಂದನು.


ಆಸನು ಯೆಹೋವ ದೇವರ ಆಲಯದ ಮತ್ತು ತನ್ನ ಅರಮನೆಯ ಬೊಕ್ಕಸಗಳಿಂದ ಮಿಕ್ಕ ಸಮಸ್ತ ಬೆಳ್ಳಿಬಂಗಾರವನ್ನು ತೆಗೆದು, ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ, ದಮಸ್ಕದಲ್ಲಿ ವಾಸವಾಗಿರುವ ಹೆಜ್ಯೋನನ ಮಗನೂ, ಟಬ್ರಿಮ್ಮೋನನ ಮಗನೂ ಆದ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿದನು.


ಇದಲ್ಲದೆ ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ, ಬೇರೋತೈಯಿಂದಲೂ ಅರಸನಾದ ದಾವೀದನು ಅತ್ಯಧಿಕವಾಗಿ ಕಂಚನ್ನು ತೆಗೆದುಕೊಂಡು ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು