Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:27 - ಕನ್ನಡ ಸಮಕಾಲಿಕ ಅನುವಾದ

27 ಅವನು ಅರಸನಿಗೆ ವಿರೋಧವಾಗಿ ದಂಗೆಯೆದ್ದ ಕಾರಣವೇನೆಂದರೆ, ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟಿಸಿ, ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಬಿದ್ದುಹೋದವುಗಳನ್ನು ಕಟ್ಟಿಸುತ್ತಿರುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವನು ತಿರುಗಿ ಬಿದ್ದದ್ದು ಹೇಗೆಂದರೆ, ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟಿಸಿ ತನ್ನ ತಂದೆಯಾದ ದಾವೀದನ ಪಟ್ಟಣದ ದುರ್ಬಲ ಸ್ಥಳಗಳನ್ನು ಭದ್ರಪಡಿಸುತ್ತಿರುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅವನು ದಂಗೆಯೆದ್ದ ವಿವರಣೆ ಹೀಗಿದೆ : ಸೊಲೊಮೋನನು ಮಿಲ್ಲೋಕೋಟೆಯನ್ನು ಕಟ್ಟಿಸಿ ತನ್ನ ತಂದೆ ದಾವೀದನ ಪಟ್ಟಣದ ದುರ್ಬಲ ಸ್ಥಳವನ್ನು ಭದ್ರಪಡಿಸುತ್ತಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವನು ತಿರುಗಿ ಬಿದ್ದದ್ದು ಹೇಗಂದರೆ - ಸೊಲೊಮೋನನು ವಿುಲ್ಲೋ ಕೋಟೆಯನ್ನು ಕಟ್ಟಿಸಿ ತನ್ನ ತಂದೆಯಾದ ದಾವೀದನ ಪಟ್ಟಣದ ದುರ್ಬಲಸ್ಥಳವನ್ನು ಭದ್ರಪಡಿಸುತ್ತಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯಾರೊಬ್ಬಾಮನು ರಾಜನ ವಿರುದ್ಧ ಏಕೆ ತಿರುಗಿ ಬಿದ್ದನೆಂಬ ಕಥೆಯು ಹೀಗಿದೆ: ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟುತ್ತಿದ್ದನು ಮತ್ತು ತನ್ನ ತಂದೆಯಾದ ದಾವೀದನ ನಗರದ ಗೋಡೆಯನ್ನು ಭದ್ರಪಡಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:27
12 ತಿಳಿವುಗಳ ಹೋಲಿಕೆ  

ಆದರೆ ಫರೋಹನ ಮಗಳು ದಾವೀದನ ಪಟ್ಟಣದಿಂದ ತನಗೋಸ್ಕರ ಸೊಲೊಮೋನನು ಕಟ್ಟಿಸಿದ ಪಟ್ಟಣಕ್ಕೆ ಬಂದಳು. ಆಗ ಅವನು ಮಿಲ್ಲೋವನ್ನು ಕಟ್ಟಿಸಿದನು.


ಅರಸನಾದ ಸೊಲೊಮೋನನು ದಾಸರನ್ನು ಕೂಡಿಸಿದ ಕಾರಣವೇನೆಂದರೆ, ಯೆಹೋವ ದೇವರ ಮಂದಿರವನ್ನೂ, ತನ್ನ ಅರಮನೆಯನ್ನೂ, ಮಿಲ್ಲೋವನ್ನೂ, ಯೆರೂಸಲೇಮಿನ ಗೋಡೆಯನ್ನೂ, ಹಾಚೋರನ್ನೂ, ಮೆಗಿದ್ದೋವನ್ನೂ, ಗೆಜೆರನ್ನೂ ಕಟ್ಟುವುದಕ್ಕೋಸ್ಕರವೇ.


ಆ ದಿನದಲ್ಲಿ, ಬಿದ್ದುಹೋದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಮುರಿದ ಗೋಡೆಗಳನ್ನು ಸರಿಪಡಿಸುತ್ತೇನೆ. ಮತ್ತು ಅದರ ಅವಶೇಷಗಳನ್ನು ಪುನಃಸ್ಥಾಪಿಸಿ ಮತ್ತು ಅದನ್ನು ಮೊದಲಿನಂತೆ ಪುನಃ ನಿರ್ಮಿಸುವೆನು.


ಯೆಹೋವ ದೇವರ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ಇಸ್ರಾಯೇಲ್ ಮನೆತನದವರ ಸುತ್ತಲೂ ಗೋಡೆಯನ್ನು ಕಟ್ಟಲಿಲ್ಲ, ನೀವು ಪೌಳಿಯ ಒಡಕುಗಳನ್ನೇರಲಿಲ್ಲ.


ಯೆಹೋವ ದೇವರೇ, ನಿಮ್ಮ ಕೈ ಮೇಲಕ್ಕೆ ಎತ್ತಲಾಗಿದೆ. ಆದರೆ ಅವರು ಅದನ್ನು ಕಾಣುವುದಿಲ್ಲ. ನಿಮ್ಮ ಜನರಿಗಾಗಿ ನಿಮ್ಮ ಉತ್ಸಾಹವನ್ನು ಅವರು ನೋಡಲಿ ಮತ್ತು ನಾಚಿಕೆಪಡಲಿ; ನಿನ್ನ ವಿರೋಧಿಗಳಿಗಾಗಿದ್ದ ಅಗ್ನಿಯು ಅದನ್ನು ದಹಿಸಿಬಿಡಲಿ.


ದಾವೀದನ ಪಟ್ಟಣದ ಕೋಟೆಯ ಒಡಕುಗಳನ್ನು ಬಹಳವೆಂದು ಸಹ ನೋಡುತ್ತೀರಿ. ಕೆಳಗಿನ ಕೊಳಕ್ಕೆ ನೀರನ್ನು ತುಂಬಿಸುತ್ತೀರಿ.


“ನೀನು ಹೆಮ್ಮೆಪಟ್ಟು ಮೂರ್ಖನಾಗಿ ನಡೆದಿದ್ದರೆ, ಇಲ್ಲವೆ ಕೆಟ್ಟದ್ದಾಗಿ ಆಲೋಚಿಸಿದ್ದರೆ, ನಿನ್ನ ಬಾಯಿಯ ಮೇಲೆ ಕೈಯಿಟ್ಟುಕೊ.


ದೇಶವು ಕಂಪನಗೊಂಡು ಒಡೆದುಹೋಗಿದೆ. ಅದರ ಬಿರುಕುಗಳನ್ನು ಸ್ವಸ್ಥಮಾಡಿರಿ, ಅದು ನಡುಗುತ್ತಿದೆ.


ಯೆರೂಸಲೇಮಿನ ಗೋಡೆಯ ದುರಸ್ತಿಕಾರ್ಯ ಮುಂದುವರಿದಿದೆ ಹಾಗು ಅದರ ಸಂದುಗಳು ಮತ್ತೆ ಮುಚ್ಚಿಕೊಳ್ಳುತ್ತಿವೆ ಎಂದು ಸನ್ಬಲ್ಲಟನೂ ಟೋಬೀಯನೂ ಅರಬಿಯರೂ ಅಮ್ಮೋನ್ಯರೂ ಅಷ್ಡೋದ್ಯರೂ ಕೇಳಿದಾಗ ಬಹು ಕೋಪಗೊಂಡರು.


ಕಾರ್ಯವು ಹಾಗಲ್ಲ. ಏಕೆಂದರೆ ಬಿಕ್ರಿಯ ಮಗನಾದ ಶೆಬನೆಂಬ ಹೆಸರುಳ್ಳ ಎಫ್ರಾಯೀಮ್ ಬೆಟ್ಟದವನಾದ ಒಬ್ಬ ಮನುಷ್ಯನು, ಅರಸನಾದ ದಾವೀದನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ್ದಾನೆ. ನೀವು ಅವನೊಬ್ಬನನ್ನೇ ಒಪ್ಪಿಸಿಕೊಡಿರಿ. ಆಗ ನಾನು ಪಟ್ಟಣವನ್ನು ಬಿಟ್ಟು ಹೋಗುವೆನು,” ಎಂದನು. ಆ ಸ್ತ್ರೀಯು ಯೋವಾಬನಿಗೆ, “ಅವನ ತಲೆಯು ಗೋಡೆಯ ಮೇಲಿನಿಂದ ನಿನ್ನ ಕಡೆಗೆ ಎಸೆಯಲಾಗುವುದು,” ಎಂದಳು.


ಆದರೂ ದಾವೀದನು ಚೀಯೋನಿನ ಕೋಟೆಯನ್ನು ವಶಪಡಿಸಿಕೊಂಡನು. ಅದೇ ದಾವೀದನ ಪಟ್ಟಣವು.


ಯೋವಾಷನ ಸೇವಕರು ಎದ್ದು ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಸಿಲ್ಲಾ ಊರಿಗೆ ಇಳಿದು ಹೋಗುವ ಮಾರ್ಗವಾದ ಬೇತ್ ಮಿಲ್ಲೋ ಎಂಬ ಸ್ಥಳದಲ್ಲಿ ಯೋವಾಷನನ್ನು ಕೊಂದುಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು