Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:14 - ಕನ್ನಡ ಸಮಕಾಲಿಕ ಅನುವಾದ

14 ಯುವಕರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ ಅವರಿಗೆ, “ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗಿ ಮಾಡಿದನು. ನಾನು ಅದನ್ನು ಇನ್ನೂ ಹೆಚ್ಚು ಭಾರ ಮಾಡುತ್ತೇನೆ. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಶಿಕ್ಷಿಸಿದನು. ಆದರೆ ನಾನು ಮುಳ್ಳು ಕೊರಡೆಗಳಿಂದ ಶಿಕ್ಷಿಸುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹಾಕಿರುವುದು ನಿಜ. ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ, ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ. ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು” ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ನನ್ನ ತಂದೆ ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುವೆನು; ಅವರು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ಮುಳ್ಳುಕೊರಡೆಗಳಿಂದ ದಂಡಿಸುವೆನು,” ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ - ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುವೆನು; ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ಮುಳ್ಳುಕೊರಡೆಗಳಿಂದ ದಂಡಿಸುವೆನು ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ತನ್ನ ಸ್ನೇಹಿತರು ತಿಳಿಸಿದಂತೆಯೇ ಅವನು ಮಾಡಿದನು. ರೆಹಬ್ಬಾಮನು, “ನನ್ನ ತಂದೆಯು ಕಷ್ಟದ ಕೆಲಸಗಳನ್ನು ಮಾಡಲು ನಿಮ್ಮನ್ನು ಬಲಾತ್ಕರಿಸಿದನು. ನಾನು ನಿಮಗೆ ಮತ್ತಷ್ಟು ಹೆಚ್ಚು ಕೆಲಸವನ್ನು ಕೊಡುತ್ತೇನೆ. ನನ್ನ ತಂದೆಯು ಬಾರುಕೋಲಿನಿಂದ ನಿಮ್ಮನ್ನು ಹೊಡೆಸಿದನು. ಆದರೆ ನಾನು ನಿಮ್ಮನ್ನು ಮತ್ತಷ್ಟು ಕಠಿಣವಾಗಿ ಮುಳ್ಳುಕೋಲುಗಳಿಂದ ಹೊಡೆಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:14
20 ತಿಳಿವುಗಳ ಹೋಲಿಕೆ  

ನಿಮ್ಮ ಹೃದಯದೊಳಗೆ ಕಹಿಯಾದ ಹಗೆತನವನ್ನೂ ಸ್ವಾರ್ಥ ಉದ್ದೇಶವನ್ನು ಕೂಡಿಟ್ಟು ಕೊಂಡಿರುವಲ್ಲಿ, ನೀವು ಜ್ಞಾನದ ಕುರಿತು ಹೊಗಳಿಕೊಳ್ಳಬೇಡಿರಿ ಮತ್ತು ಸತ್ಯವನ್ನು ನಿರಾಕರಿಸಬೇಡಿರಿ.


ರಾಜ್ಯದ ಎಲ್ಲಾ ದೇಶಾಧಿಪತಿಗಳೂ, ರಾಜ್ಯಪಾಲರೂ, ನಾಯಕರೂ, ಉಪರಾಜರೂ, ಆಲೋಚನೆಗಾರರೂ ಒಟ್ಟುಗೂಡಿ ಆಲೋಚಿಸಿದ್ದೇನೆಂದರೆ ಅರಸನೇ, ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ, ಮನುಷ್ಯರಿಗಾಗಲಿ ಪ್ರಾರ್ಥನೆ ಮಾಡಿದ್ದಾದರೆ ಅಂಥವರು ಸಿಂಹಗಳ ಗವಿಗೆ ಹಾಕಲಾಗುವುದು ಎಂಬ ರಾಜಾಜ್ಞೆಯನ್ನು ವಿಧಿಸಿ, ಸ್ಥಿರ ಕಟ್ಟಳೆಯನ್ನು ಕೊಡತಕ್ಕದ್ದು.


ಪ್ರಾರಂಭಕ್ಕಿಂತ ಅದರ ಅಂತ್ಯವೇ ಲೇಸು. ಗರ್ವಿಷ್ಠನಿಗಿಂತ ತಾಳ್ಮೆಯುಳ್ಳವನೇ ಉತ್ತಮ.


ಕಲಹದ ಪ್ರಾರಂಭವು ಆಣೆಕಟ್ಟು ಒಡೆದಂತೆ ಇರುವುದು; ಆದಕಾರಣ ಆ ಕಲಹಕ್ಕೆ ಕೈಹಾಕುವುದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.


ನಾಶನಕ್ಕೆ ಮುಂದಾಗಿ ಗರ್ವ ಹೋಗುತ್ತದೆ. ಬೀಳುವಿಕೆಯ ಮುಂಚೆ ಜಂಬದ ಆತ್ಮ.


ಎಲ್ಲಿ ಗರ್ವವೋ ಅಲ್ಲಿ ಕಲಹ; ಆದರೆ ಒಳ್ಳೆಯ ಸಲಹೆಯನ್ನು ತೆಗೆದುಕೊಳ್ಳುವವರಲ್ಲಿ ಜ್ಞಾನವು ಕಂಡುಬರುತ್ತದೆ.


ನೀತಿವಂತರ ಯೋಜನೆಗಳು ನ್ಯಾಯವಾಗಿವೆ; ದುಷ್ಟರ ಸಲಹೆ ಮೋಸಭರಿತ.


ಮಣ್ಣು ಅಗೆಯುವ, ಇಟ್ಟಿಗೆಯನ್ನು ಮಾಡುವ ಮತ್ತು ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಈಜಿಪ್ಟಿನವರು ಅವರಿಂದ ಮಾಡಿಸಿದ ಎಲ್ಲಾ ಕೆಲಸವು ಕಠೋರವಾಗಿತ್ತು.


ಆದ್ದರಿಂದ ಈಜಿಪ್ಟಿನವರು ಇಸ್ರಾಯೇಲರನ್ನು ಕ್ರೂರವಾಗಿ ನಡೆಸಿಕೊಳ್ಳುತ್ತಾ ಸೇವೆ ಮಾಡಿಸಿಕೊಂಡರು.


ಆದರೆ ಅರಸನು ಜನರಿಗೆ ಕಠಿಣವಾದ ಉತ್ತರವನ್ನು ಕೊಟ್ಟು, ಹಿರಿಯರು ಅವನಿಗೆ ಕೊಟ್ಟ ಆಲೋಚನೆಯನ್ನು ನಿರಾಕರಿಸಿ,


ಒಬ್ಬ ಅಧಿಕಾರಿಯು ಸುಳ್ಳಿಗೆ ಕಿವಿಗೊಟ್ಟರೆ, ಅವನ ಸೇವಕರೆಲ್ಲರೂ ದುಷ್ಟರಾಗುತ್ತಾರೆ.


ನನ್ನ ಬೋಧಕರ ಸ್ವರಕ್ಕೆ ನಾನು ವಿಧೇಯನಾಗದೆ ಹೋದೆ. ನನ್ನ ಉಪದೇಶಕರಿಗೆ ನಾನು ಕಿವಿಗೊಡದೆ ಹೋದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು