Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:15 - ಕನ್ನಡ ಸಮಕಾಲಿಕ ಅನುವಾದ

15 ಅರಸನು ಜನರ ಮಾತನ್ನು ಕೇಳದೆಹೋದದ್ದು ಯೆಹೋವ ದೇವರಿಂದಲೇ. ಹೀಗೆ ಯೆಹೋವ ದೇವರು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ಈಡೇರುವುದಕ್ಕೆ ಕಾರಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನು ಜನರ ಮಾತನ್ನು ಕೇಳದೇ ಹೋದದ್ದು ಯೆಹೋವನಿಂದಲೇ. ಈ ಪ್ರಕಾರ ಯೆಹೋವನು ಶಿಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವನು ಜನರ ಮಾತನ್ನು ಕೇಳದೆಹೋದದ್ದು ಸರ್ವೇಶ್ವರನಿಂದಲೇ ಸಂಭವಿಸಿತ್ತು. ಹೀಗೆ ಸರ್ವೇಶ್ವರ ಶಿಲೋವಿನವನಾದ ಅಹೀಯನ ಮುಖಾಂತರ ನೆಬಾಟನ ಮಗ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವನು ಜನರ ಮಾತನ್ನು ಕೇಳದೆಹೋದದ್ದು ಯೆಹೋವನಿಂದಲೇ. ಈ ಪ್ರಕಾರ ಯೆಹೋವನು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ರಾಜನು ಜನರ ಅಪೇಕ್ಷೆಯನ್ನು ನೆರವೇರಿಸಲಿಲ್ಲ. ನೆಬಾಟನ ಮಗನಾದ ಯಾರೊಬ್ಬಾಮನಿಗೆ ತಾನು ಮಾಡಿದ್ದ ವಾಗ್ದಾನವನ್ನು ಈಡೇರಿಸಲು ಯೆಹೋವನೇ ಹೀಗೆ ಮಾಡಿದನು. ಯೆಹೋವನು ಪ್ರವಾದಿಯಾದ ಅಹೀಯನ ಮೂಲಕ ಈ ವಾಗ್ದಾನವನ್ನು ಮಾಡಿದ್ದನು. ಅಹೀಯನು ಶೀಲೋವಿನವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:15
27 ತಿಳಿವುಗಳ ಹೋಲಿಕೆ  

‘ನೀವು ಇಸ್ರಾಯೇಲರಾಗಿರುವ ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡಲು ಹೋಗಬೇಡಿರಿ. ಪ್ರತಿ ಮನುಷ್ಯನು ತನ್ನ ಮನೆಗೆ ಹಿಂದಿರುಗಲಿ.’ ಏಕೆಂದರೆ ಈ ಕಾರ್ಯವು ತಮ್ಮಿಂದ ಉಂಟಾಯಿತೆಂದು ಯೆಹೋವ ದೇವರು ಹೇಳುತ್ತಾರೆ,” ಎಂದನು. ಆದ್ದರಿಂದ ಅವರು ಯೆಹೋವ ದೇವರ ವಾಕ್ಯವನ್ನು ಕೇಳಿ, ಯೆಹೋವ ದೇವರ ವಾಕ್ಯದ ಪ್ರಕಾರವೇ ಹಿಂದಿರುಗಿ ಹೋದರು.


ಇದು ಯೆಹೋವ ದೇವರಿಂದ ಉಂಟಾಯಿತೆಂದು ಅವನ ತಂದೆತಾಯಂದಿರು ಅರಿಯದೆ ಇದ್ದರು. ಏಕೆಂದರೆ ಫಿಲಿಷ್ಟಿಯರಿಗೆ ವಿರೋಧವಾಗಿ ಅವನು ಕಾರಣವನ್ನು ಹುಡುಕಿದನು. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರನ್ನು ಆಳುತ್ತಿದ್ದರು.


ಆದರೆ ಹೆಷ್ಬೋನಿನ ಅರಸನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಸಮ್ಮತಿಸಲಿಲ್ಲ. ಏಕೆಂದರೆ ಅವನನ್ನು ನಿಮ್ಮ ಕೈಯಲ್ಲಿ ಒಪ್ಪಿಸುವ ಹಾಗೆ ನಿಮ್ಮ ದೇವರಾದ ಯೆಹೋವ ದೇವರು ಅವನ ಬುದ್ಧಿಯನ್ನು ಮಂಕುಮಾಡಿ, ಹೃದಯವನ್ನು ಕಠಿಣಪಡಿಸಿದರು. ಈಗಾಗಲೇ ಅದು ನೆರವೇರಿದೆ.


ಆದರೆ ಅಮಚ್ಯನು ಕೇಳದೆ ಹೋದನು. ಏಕೆಂದರೆ ಯೆಹೂದ್ಯರು ಎದೋಮ್ಯರ ದೇವರುಗಳನ್ನು ಹುಡುಕಿದ ನಿಮಿತ್ತ, ಅವರನ್ನು ಯೆಹೋವಾಷನ ಕೈಯಲ್ಲಿ ಒಪ್ಪಿಸುವಂತೆ ಇದು ದೇವರಿಂದ ಆಯಿತು.


ಯೋರಾಮನ ಬಳಿಗೆ ಅಹಜ್ಯನು ಬಂದಿದ್ದರಿಂದ ಅವನಿಗೆ ಉಂಟಾದ ನಷ್ಟವು ದೇವರಿಂದ ಆಯಿತು. ಹೇಗೆಂದರೆ, ಅಹಜ್ಯನು ಬಂದ ತರುವಾಯ ಯೆಹೋವ ದೇವರು ಅಹಾಬನ ಮನೆಯನ್ನು ಕಡಿದು ಬಿಡಲು ಅಭಿಷೇಕಿಸಿದ ನಿಂಷಿಯ ಮಗ ಯೇಹುವಿಗೆ ವಿರೋಧವಾಗಿ ಯೆಹೋರಾಮನ ಸಂಗಡ ಹೊರಟರು.


ಅರಸನು ಜನರ ಮಾತನ್ನು ಕೇಳದೆಹೋದದ್ದು ದೇವರಿಂದಲೇ. ಹೀಗೆ ಯೆಹೋವ ದೇವರು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ಈಡೇರುವುದಕ್ಕೆ ಕಾರಣವಾಯಿತು.


ಆದಕಾರಣ ಯೆಹೋವ ದೇವರು ಸೊಲೊಮೋನನಿಗೆ, “ನೀನು ಹೀಗೆ ನಡೆದು ನಾನು ನಿನಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನೂ, ನನ್ನ ಕಟ್ಟಳೆಗಳನ್ನೂ ಕೈಗೊಳ್ಳದೆ ಹೋದುದರಿಂದ ನಿಶ್ಚಯವಾಗಿ ನಾನು ರಾಜ್ಯವನ್ನು ನಿನ್ನಿಂದ ಕಸಿದುಕೊಂಡು ಅದನ್ನು ನಿನ್ನ ಸೇವಕನಿಗೆ ಕೊಡುವೆನು.


ನಿಮ್ಮ ಶಕ್ತಿಯೂ ಚಿತ್ತವೂ ಮುಂಚಿತವಾಗಿಯೇ ಏನಾಗಬೇಕೆಂದು ನಿರ್ಣಯಿಸಿದ್ದನ್ನೇ ಅವರು ಮಾಡಿದರು.


ದೇವರು ತಾವು ಮುಂಚಿತವಾಗಿ ನಿರ್ಣಯಿಸಿದ ಪ್ರಕಾರವೂ ತಾವು ಮೊದಲೇ ತಿಳಿದಿರುವಂತೆ ದೇವರು ಯೇಸುವನ್ನು ತಾವಾಗಿಯೇ ನಿಮಗೆ ಒಪ್ಪಿಸಿಕೊಟ್ಟರು. ನೀವಾದರೋ ದುಷ್ಟರ ಸಹಾಯದಿಂದ ಯೇಸುವನ್ನು ಶಿಲುಬೆಗೆ ಹಾಕಿ ಕೊಲೆಮಾಡಿದಿರಿ.


ಪಟ್ಟಣದಲ್ಲಿ ಕಹಳೆಯನ್ನು ಊದಿದರೆ, ಜನರು ಹೆದರುವುದಿಲ್ಲವೇ? ಯೆಹೋವ ದೇವರಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೇ?


ದೇವರ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರೂ ಯಾವ ಮಹತ್ವವಿಲ್ಲದೆ ಶೂನ್ಯರಾಗಿದ್ದಾರೆ. ದೇವರು ಪರಲೋಕದ ಸೈನ್ಯದಲ್ಲಿಯೂ, ಭೂನಿವಾಸಿಗಳಲ್ಲಿಯೂ ತಮ್ಮ ಚಿತ್ತದ ಪ್ರಕಾರವೇ ಮಾಡುತ್ತಾರೆ. ಯಾರೂ ಅವರ ಹಸ್ತವನ್ನು ಹಿಂತೆಗೆಯಲಾರರು. “ನೀವು ಏನು ಮಾಡುತ್ತಿರುವಿರಿ?” ಎಂದು ದೇವರನ್ನು ಯಾರೂ ಕೇಳಲಾರರು.


ಪ್ರವಾದಿಯು ಅರಸನ ಸಂಗಡ ಮಾತನಾಡುತ್ತಿರುವಾಗಲೇ ಅರಸನು ಅವನಿಗೆ, “ಅರಸನ ಆಲೋಚನಾ ಮಂತ್ರಿಯನ್ನಾಗಿ ನಿನ್ನನ್ನು ನೇಮಿಸಿದವರು ಯಾರು? ಸುಮ್ಮನಿರು! ನೀನು ಏಕೆ ಮರಣಹೊಂದಬೇಕೆಂದಿರುವೆ?” ಎಂದನು. ಆಗ ಪ್ರವಾದಿಯು, “ನೀನು ನನ್ನ ಯೋಚನೆಯನ್ನು ಕೇಳದೆ ಇದನ್ನು ಮಾಡಿದ್ದರಿಂದ, ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾರೆಂದು ನಾನು ಬಲ್ಲೆನು,” ಎಂದನು.


ಯೆಹೋವ ದೇವರು ಅಹಾಬನ ಮನೆಯನ್ನು ಕುರಿತು ಹೇಳಿದ ಯೆಹೋವ ದೇವರ ಮಾತುಗಳಲ್ಲಿ ಒಂದೂ ವ್ಯರ್ಥವಾಗುವುದಿಲ್ಲವೆಂದು ನೀವು ತಿಳಿದುಕೊಳ್ಳಿರಿ. ಯೆಹೋವ ದೇವರು ತಮ್ಮ ಸೇವಕನಾದ ಎಲೀಯನ ಮುಖಾಂತರ ಹೇಳಿದ್ದನ್ನು ನೆರವೇರಿಸಿದ್ದಾರೆ,” ಎಂದನು.


ಅದಕ್ಕವನು, “ಯೆಹೋವ ದೇವರು ತಮ್ಮ ಸೇವಕನಾಗಿರುವ ತಿಷ್ಬೀಯನಾದ ಎಲೀಯನ ಮುಖಾಂತರ ಹೇಳಿದ ವಾಕ್ಯವು ಇದೇ: ಇಜ್ರೆಯೇಲ್ ಊರಿನ ಹೊಲದಲ್ಲಿ ನಾಯಿಗಳು ಈಜೆಬೆಲಳ ಮಾಂಸವನ್ನು ತಿನ್ನುವುವು.


“ಆದ್ದರಿಂದ ಇಗೋ, ಯೆಹೋವ ದೇವರು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳನ್ನಾಡುವ ಆತ್ಮವನ್ನು ಇಟ್ಟಿದ್ದಾರೆ. ಇದಲ್ಲದೆ ಯೆಹೋವ ದೇವರು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾರೆ,” ಎಂದನು.


ಆಗ ಅಬ್ಷಾಲೋಮನೂ, ಇಸ್ರಾಯೇಲಿನ ಸಮಸ್ತ ಮನುಷ್ಯರೂ, “ಅಹೀತೋಫೆಲನ ಆಲೋಚನೆಗಿಂತ ಅರ್ಕಿಯನಾದ ಹೂಷೈಯ ಆಲೋಚನೆ ಒಳ್ಳೆಯದು,” ಎಂದರು. ಏಕೆಂದರೆ ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೆಯ ಆಲೋಚನೆಯನ್ನು ವ್ಯರ್ಥಮಾಡುವುದಕ್ಕೆ ಯೆಹೋವ ದೇವರು ಹಾಗೆ ನೇಮಿಸಿದ್ದರು.


“ಈಗ, ಪ್ರಿಯರೇ, ನೀವು ಅಜ್ಞಾನದಿಂದ ಹಾಗೆ ವರ್ತಿಸಿದಿರೆಂದು ನನಗೆ ಗೊತ್ತು. ಹಾಗೆಯೇ ನಿಮ್ಮ ನಾಯಕರೂ ಮಾಡಿದರು.


ಓ ದೇವರೇ! ಅವರನ್ನು ಅಪರಾಧಿಗಳೆಂದು ನಿರ್ಣಯಿಸಿರಿ, ಅವರು ತಮ್ಮ ಸ್ವಂತ ಕುತಂತ್ರಗಳಿಂದ ಬಿದ್ದುಹೋಗಲಿ. ಅವರ ಬಹು ಪಾಪಗಳ ನಿಮಿತ್ತ ಅವರನ್ನು ಬಹಿಷ್ಕರಿಸಿರಿ, ಏಕೆಂದರೆ ಅವರು ನಿಮಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.


ಇಸ್ರಾಯೇಲಿನ ಪ್ರತಾಪರು ಸುಳ್ಳು ಹೇಳುವವರಲ್ಲ, ಮಾತನ್ನು ಹಿಂತೆಗೆದುಕೊಳ್ಳುವವರಲ್ಲ. ಏಕೆಂದರೆ ಅವರು ಮನಸ್ಸು ಬದಲಾಯಿಸುವಂಥ ಮನುಷ್ಯರಲ್ಲ,” ಎಂದನು.


ಅದಕ್ಕೆ ಲಾಬಾನನು ಮತ್ತು ಬೆತೂಯೇಲನು, “ಈ ಕಾರ್ಯವು ಯೆಹೋವ ದೇವರಿಂದಲೇ ಉಂಟಾಯಿತು. ನಾವಂತೂ ಹೌದೆಂದೂ ಅಲ್ಲವೆಂದೂ ಹೇಳಲಾರೆವು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು