Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:22 - ಕನ್ನಡ ಸಮಕಾಲಿಕ ಅನುವಾದ

22 ಆದರೆ ದೇವರ ವಾಕ್ಯವು ದೇವರ ಮನುಷ್ಯನಾಗಿರುವ ಶೆಮಾಯನಿಗೆ ಉಂಟಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ದೇವರ ಮನುಷ್ಯನಾದ ಶೆಮಾಯನಿಗೆ ದೈವೋತ್ತರವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಗ ದೈವಪುರುಷನಾದ ಶೆಮಾಯನಿಗೆ ಈ ದೈವವಾಣಿ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಗ ದೇವರ ಮನುಷ್ಯನಾದ ಶೆಮಾಯನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ಯೆಹೋವನು ದೇವರ ಮನುಷ್ಯನೊಬ್ಬನೊಡನೆ ಮಾತನಾಡಿದನು. ಅವನ ಹೆಸರು ಶೆಮಾಯ. ಯೆಹೋವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:22
17 ತಿಳಿವುಗಳ ಹೋಲಿಕೆ  

ಆದರೆ ಯೆಹೋವ ದೇವರ ವಾಕ್ಯವು ದೇವರ ಮನುಷ್ಯನಾಗಿರುವ ಶೆಮಾಯನಿಗೆ ಉಂಟಾಗಿ,


ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ಓಡಿಹೋಗು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತ್ವ ಇವುಗಳನ್ನು ಹಿಂಬಾಲಿಸು.


ಅವಳು ಬೆಟ್ಟಕ್ಕೆ ದೇವರ ಮನುಷ್ಯನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು. ಆದರೆ ಅವಳನ್ನು ತಳ್ಳಿ ಹಾಕಲು ಗೇಹಜಿಯು ಹತ್ತಿರ ಬಂದದ್ದರಿಂದ ದೇವರ ಮನುಷ್ಯನು, “ಅವಳನ್ನು ಬಿಡು. ಏಕೆಂದರೆ ಅವಳ ಹೃದಯವು ಬಹಳ ನೋವಿನಿಂದ ತುಂಬಿದೆ. ಯೆಹೋವ ದೇವರು ಅದನ್ನು ನನಗೆ ತಿಳಿಸದೆ ಮರೆಮಾಡಿದ್ದಾರೆ,” ಎಂದನು.


ಕರ್ಮೆಲ್ ಬೆಟ್ಟದಲ್ಲಿರುವ ದೇವರ ಮನುಷ್ಯನ ಬಳಿಗೆ ಬಂದಳು. ಆಗ ದೇವರ ಮನುಷ್ಯನು ದೂರದಿಂದ ಅವಳು ಬರುವುದನ್ನು ಕಂಡನು. ಅವನು ತನ್ನ ಸೇವಕನಾದ ಗೇಹಜಿಗೆ, “ಇಗೋ, ಆ ಶೂನೇಮ್ಯಳು ಬರುತ್ತಿದ್ದಾಳೆ.


ತನ್ನ ಗಂಡನನ್ನು ಕರೆದು, “ನಾನು ದೇವರ ಮನುಷ್ಯನ ಬಳಿಗೆ ಬೇಗನೆ ಹೋಗಿ ತಿರುಗಿ ಬರುವ ಹಾಗೆ, ನೀನು ದಯಮಾಡಿ ಸೇವಕನನ್ನೂ ಒಂದು ಕತ್ತೆಯನ್ನೂ ಕಳುಹಿಸು,” ಎಂದಳು.


ಆಗ ಅವನು, “ಮುಂದಿನ ವರ್ಷ ಈ ಸಮಯದಲ್ಲಿ ನಿನ್ನ ಕೈಯಲ್ಲಿ ಒಬ್ಬ ಮಗನನ್ನು ಎತ್ತಿಕೊಂಡಿರುವೆ,” ಎಂದನು. ಅದಕ್ಕವಳು, “ಹಾಗಲ್ಲ, ದೇವರ ಮನುಷ್ಯನೇ, ನನ್ನ ಒಡೆಯನೇ, ನಿನ್ನ ಸೇವಕಿಗೆ ನೀನು ಸುಳ್ಳು ಹೇಳಬೇಡ,” ಎಂದಳು.


ಸ್ತ್ರೀಯು ಎಲೀಯನಿಗೆ, “ನೀನು ದೇವರ ಮನುಷ್ಯನೆಂದೂ, ನಿನ್ನ ಬಾಯಲ್ಲಿರುವ ಯೆಹೋವ ದೇವರ ವಾಕ್ಯವು ಸತ್ಯವೆಂದೂ ಇದರಿಂದ ಈಗ ತಿಳಿದಿದ್ದೇನೆ,” ಎಂದಳು.


ಆಗ ಅವಳು ಎಲೀಯನಿಗೆ, “ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವುದಕ್ಕೂ, ನನ್ನ ಮಗನು ಸಾಯುವುದಕ್ಕೂ ನನ್ನ ಬಳಿಗೆ ಬಂದಿಯೋ?” ಎಂದಳು.


ಬೇತೇಲಿನಲ್ಲಿ ಒಬ್ಬ ವೃದ್ಧ ಪ್ರವಾದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ಆ ದಿನದಲ್ಲಿ ಬೇತೇಲಿನಲ್ಲಿ ದೇವರ ಮನುಷ್ಯನು ಮಾಡಿದ ಸಮಸ್ತ ಕ್ರಿಯೆಗಳನ್ನು ಮತ್ತು ಅರಸನಿಗೆ ಹೇಳಿದ ಮಾತುಗಳನ್ನು ತಮ್ಮ ತಂದೆಗೆ ತಿಳಿಸಿದರು.


ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ, ಯೆಹೂದದಿಂದ ಬೇತೇಲಿಗೆ ಯೆಹೋವ ದೇವರ ಮಾತಿನಂತೆ ಒಬ್ಬ ದೇವರ ಮನುಷ್ಯ ಬಂದನು.


ದೇವರ ಮನುಷ್ಯನಾದ ಮೋಶೆಯು ಮರಣ ಹೊಂದುವದಕ್ಕಿಂತ ಮುಂಚೆ ಇಸ್ರಾಯೇಲರಿಗೆ ಕೊಟ್ಟ ಆಶೀರ್ವಾದ:


ಅವಳು ಬಂದು ದೇವರ ಮನುಷ್ಯನಿಗೆ ತಿಳಿಸಿದಳು. ಅವನು, “ನೀನು ಹೋಗಿ ಆ ಎಣ್ಣೆಯನ್ನು ಮಾರಿ ನಿನ್ನ ಸಾಲವನ್ನು ತೀರಿಸಿ, ಮಿಕ್ಕದ್ದರಿಂದ ನೀನೂ, ನಿನ್ನ ಮಕ್ಕಳು ಜೀವನ ಮಾಡಿರಿ,” ಎಂದನು.


ಇಸ್ರಾಯೇಲಿನ ಅರಸನು ತನ್ನ ವಸ್ತ್ರಗಳನ್ನು ಹರಿದುಕೊಂಡನೆಂದು ದೇವರ ಮನುಷ್ಯನಾದ ಎಲೀಷನು ಕೇಳಿದಾಗ, “ನೀನು ನಿನ್ನ ವಸ್ತ್ರಗಳನ್ನು ಹರಿದುಕೊಂಡದ್ದೇನು? ಇಸ್ರಾಯೇಲಿನಲ್ಲಿ ಪ್ರವಾದಿ ಇದ್ದಾನೆಂದು ನಾಮಾನನು ತಿಳಿದುಕೊಳ್ಳುವಂತೆ ಅವನು ನನ್ನ ಬಳಿಗೆ ಬರಲಿ,” ಎಂದು ಅರಸನಿಗೆ ಹೇಳಿ ಕಳುಹಿಸಿದನು.


ಕರೆದುಕೊಂಡು ಯೆಹೋವ ದೇವರ ಆಲಯಕ್ಕೆ ದ್ವಾರಪಾಲಕನಾದ ಶಲ್ಲೂಮನ ಮಗನಾದ ಮಾಸೇಯನ ಕೊಠಡಿಯ ಮೇಲಿರುವ ಪ್ರಧಾನರ ಕೊಠಡಿಯ ಬಳಿಯಲ್ಲಿರುವ ದೇವರ ಮನುಷ್ಯನಾದ ಇಗ್ದಲ್ಯನ ಮಗನಾದ ಹಾನಾನನ ಪುತ್ರರ ಕೊಠಡಿಗೆ ತಂದು,


ರೆಹಬ್ಬಾಮನು ಅರಸನಾಗಿದ್ದಾಗ ತನ್ನ ಆಳ್ವಿಕೆಯ ಮೊದಲಿನಿಂದ ಕಡೆಯವರೆಗೆ ಮಾಡಿದ ಕಾರ್ಯಗಳು ಪ್ರವಾದಿಯಾದ ಶೆಮಾಯನ ಪುಸ್ತಕದಲ್ಲಿಯೂ, ವಂಶಾವಳಿಗಳನ್ನು ಕುರಿತು ಬರೆದ ದರ್ಶಿಯಾದ ಇದ್ದೋವನ ಪುಸ್ತಕದಲ್ಲಿಯೂ ಬರೆದಿರುತ್ತವೆ. ಇದಲ್ಲದೆ ರೆಹಬ್ಬಾಮನಿಗೂ, ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧಗಳಾಗುತ್ತಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು