Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:24 - ಕನ್ನಡ ಸಮಕಾಲಿಕ ಅನುವಾದ

24 ‘ನೀವು ಇಸ್ರಾಯೇಲರಾಗಿರುವ ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡಲು ಹೋಗಬೇಡಿರಿ. ಪ್ರತಿ ಮನುಷ್ಯನು ತನ್ನ ಮನೆಗೆ ಹಿಂದಿರುಗಲಿ.’ ಏಕೆಂದರೆ ಈ ಕಾರ್ಯವು ತಮ್ಮಿಂದ ಉಂಟಾಯಿತೆಂದು ಯೆಹೋವ ದೇವರು ಹೇಳುತ್ತಾರೆ,” ಎಂದನು. ಆದ್ದರಿಂದ ಅವರು ಯೆಹೋವ ದೇವರ ವಾಕ್ಯವನ್ನು ಕೇಳಿ, ಯೆಹೋವ ದೇವರ ವಾಕ್ಯದ ಪ್ರಕಾರವೇ ಹಿಂದಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ‘ಯೆಹೋವನ ಮಾತನ್ನು ಕೇಳಿರಿ, ನೀವು ನಿಮ್ಮ ಸಹೋದರರಾದ ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೆ ಹೋಗಬಾರದು. ಎಲ್ಲರೂ ಹಿಂತಿರುಗಿ ಹೋಗಿರಿ. ಈ ಕಾರ್ಯವು ಯೆಹೋವನಿಂದಾಗಿದೆ’ ಎಂದು ಹೇಳಬೇಕು” ಎಂಬ ಯೆಹೋವನ ಮಾತನ್ನು ಜನರಿಗೆ ಹೇಳಿದನು. ಆಗ ಅವರು ಯೆಹೋವನ ಮಾತನ್ನು ಕೇಳಿ ವಿಧೇಯರಾಗಿ ಹಿಂದಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನೀವು ನಿಮ್ಮ ಸಹೋದರರಾದ ಇಸ್ರಯೇಲರೊಡನೆ ಯುದ್ಧಮಾಡಲು ಹೋಗಬಾರದು; ಎಲ್ಲರೂ ಹಿಂದಿರುಗಿ ಹೋಗಿರಿ; ಈ ವಿಭಜನಾಕಾರ್ಯ ಸರ್ವೇಶ್ವರನಿಂದಾಗಿದೆ, ಎಂದು ಹೇಳಬೇಕು.” ಅಂತೆಯೇ ಆ ಜನರು ಸರ್ವೇಶ್ವರನ ಮಾತನ್ನು ಕೇಳಿ ಹಿಂದಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಉಳಿದ ಜನರಿಗೂ - ಯೆಹೋವನ ಮಾತನ್ನು ಕೇಳಿರಿ, ನೀವು ನಿಮ್ಮ ಸಹೋದರರಾದ ಇಸ್ರಾಯೇಲ್ಯರೊಡನೆ ಯುದ್ಧಮಾಡುವದಕ್ಕೆ ಹೋಗಬಾರದು; ಎಲ್ಲರೂ ಹಿಂದಿರುಗಿ ಹೋಗಿರಿ; ಈ ಕಾರ್ಯವು ಯೆಹೋವನಿಂದಾಗಿದೆ ಎಂದು ಹೇಳಬೇಕು ಎಂಬ ದೈವೋತ್ತರ ಉಂಟಾಗಲು ಅವರು ಯೆಹೋವನ ಮಾತನ್ನು ಕೇಳಿ ಹಿಂದಿರುಗಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನೀನು ಅವರಿಗೆ, ‘ನಿಮ್ಮ ಸೋದರರಾದ ಇಸ್ರೇಲರ ವಿರುದ್ಧ ನೀವು ಯುದ್ಧಕ್ಕೆ ಹೋಗಲೇಬಾರದೆಂದು ಯೆಹೋವನು ಹೇಳುತ್ತಾನೆ. ನಿಮ್ಮಲ್ಲಿ ಪ್ರತಿಯೊಬ್ಬನು ಮನೆಗೆ ಹೋಗಬೇಕು. ಈ ಸಂಗತಿಗಳೆಲ್ಲ ಸಂಭವಿಸುವಂತೆ ನಾನೇ ಮಾಡಿದೆನು’ ಎಂದು ಹೇಳು” ಎಂಬುದಾಗಿ ತಿಳಿಸಿದನು. ಆದ್ದರಿಂದ ರೆಹಬ್ಬಾಮನ ಸೈನ್ಯದಲ್ಲಿನ ಜನರೆಲ್ಲರೂ ಯೆಹೋವನ ಆಜ್ಞೆಯನ್ನು ಅನುಸರಿಸಿದರು. ಅವರು ತಮ್ಮ ಮನೆಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:24
13 ತಿಳಿವುಗಳ ಹೋಲಿಕೆ  

ಅರಸನು ಜನರ ಮಾತನ್ನು ಕೇಳದೆಹೋದದ್ದು ಯೆಹೋವ ದೇವರಿಂದಲೇ. ಹೀಗೆ ಯೆಹೋವ ದೇವರು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ಈಡೇರುವುದಕ್ಕೆ ಕಾರಣವಾಯಿತು.


ಅವರು ಅರಸರನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ. ಅವರು ನನ್ನ ಅನುಮತಿಯಿಲ್ಲದೆ ರಾಜಕುಮಾರರನ್ನು ಆಯ್ಕೆ ಮಾಡಿದ್ದಾರೆ. ಅವರು ತಾವು ನಾಶವಾಗುವಂತೆ ತಮ್ಮ ಬೆಳ್ಳಿಯಿಂದಲೂ, ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ.


ಆಗ ಅಮಚ್ಯನು ಎಫ್ರಾಯೀಮಿನಿಂದ ತನ್ನ ಬಳಿಗೆ ಬಂದ ಸೈನಿಕರು ತಮ್ಮ ಸ್ಥಳಕ್ಕೆ ತಿರುಗಿ ಹೋಗುವಹಾಗೆ ಅವರನ್ನು ಕಳುಹಿಸಿಬಿಟ್ಟನು. ಆದಕಾರಣ ಅವರ ಕೋಪವು ಯೆಹೂದದ ಮೇಲೆ ಬಹಳವಾಗಿ ಉರಿಯಿತು. ಅವರು ಕೋಪಗೊಂಡವರಾಗಿ ತಮ್ಮ ಮನೆಗೆ ತಿರುಗಿದರು.


‘ನೀವು ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡಲು ಹೋಗಬೇಡಿರಿ. ಪ್ರತಿ ಮನುಷ್ಯನು ತನ್ನ ಮನೆಗೆ ಹಿಂದಿರುಗಲಿ. ಏಕೆಂದರೆ ಈ ಕಾರ್ಯವು ತಮ್ಮಿಂದ ಉಂಟಾಯಿತೆಂದು ಯೆಹೋವ ದೇವರು ಹೇಳುತ್ತಾರೆ,’ ” ಎಂದನು. ಆದ್ದರಿಂದ ಅವರು ಯೆಹೋವ ದೇವರ ವಾಕ್ಯವನ್ನು ಕೇಳಿ, ಯಾರೊಬ್ಬಾಮನ ಮೇಲೆ ಹೋಗದೆ ಹಿಂದಿರುಗಿ ಹೋದರು.


ಯೆಹೋವ ದೇವರು ನಿಮ್ಮ ಸಂಗಡ ಇಲ್ಲ ಅದಕ್ಕಾಗಿ ನಿಮ್ಮ ಶತ್ರುಗಳು ನಿಮ್ಮನ್ನು ಪರಾಜಯಗೊಳಿಸದಂತೆ ಏರಿ ಹೋಗಬೇಡಿರಿ.


ಯಾರೊಬ್ಬಾಮನು ಎಫ್ರಾಯೀಮನ ಬೆಟ್ಟದಲ್ಲಿ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ, ಅದರಲ್ಲಿ ವಾಸಿಸಿದನು. ಅಲ್ಲಿಂದ ಹೊರಟುಹೋಗಿ ಪೆನೀಯೇಲ್ ಪಟ್ಟಣವನ್ನು ಭದ್ರಪಡಿಸಿದನು.


ಅದಕ್ಕೆ ಲಾಬಾನನು ಮತ್ತು ಬೆತೂಯೇಲನು, “ಈ ಕಾರ್ಯವು ಯೆಹೋವ ದೇವರಿಂದಲೇ ಉಂಟಾಯಿತು. ನಾವಂತೂ ಹೌದೆಂದೂ ಅಲ್ಲವೆಂದೂ ಹೇಳಲಾರೆವು


ಇದು ಯೆಹೋವ ದೇವರಿಂದ ಉಂಟಾಯಿತೆಂದು ಅವನ ತಂದೆತಾಯಂದಿರು ಅರಿಯದೆ ಇದ್ದರು. ಏಕೆಂದರೆ ಫಿಲಿಷ್ಟಿಯರಿಗೆ ವಿರೋಧವಾಗಿ ಅವನು ಕಾರಣವನ್ನು ಹುಡುಕಿದನು. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರನ್ನು ಆಳುತ್ತಿದ್ದರು.


ಇದಲ್ಲದೆ ರೆಹಬ್ಬಾಮನಿಗೂ, ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧಗಳಾಗುತ್ತಿದ್ದವು.


ಯೋರಾಮನ ಬಳಿಗೆ ಅಹಜ್ಯನು ಬಂದಿದ್ದರಿಂದ ಅವನಿಗೆ ಉಂಟಾದ ನಷ್ಟವು ದೇವರಿಂದ ಆಯಿತು. ಹೇಗೆಂದರೆ, ಅಹಜ್ಯನು ಬಂದ ತರುವಾಯ ಯೆಹೋವ ದೇವರು ಅಹಾಬನ ಮನೆಯನ್ನು ಕಡಿದು ಬಿಡಲು ಅಭಿಷೇಕಿಸಿದ ನಿಂಷಿಯ ಮಗ ಯೇಹುವಿಗೆ ವಿರೋಧವಾಗಿ ಯೆಹೋರಾಮನ ಸಂಗಡ ಹೊರಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು