Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:33 - ಕನ್ನಡ ಸಮಕಾಲಿಕ ಅನುವಾದ

33 ಹೀಗೆ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೆಯ ತಿಂಗಳ ಹದಿನೈದನೆಯ ದಿವಸದಲ್ಲಿ ಅವನು ಬೇತೇಲಿನಲ್ಲಿ ಕಟ್ಟಿಸಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ, ಇಸ್ರಾಯೇಲರಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಇಸ್ರಾಯೇಲರು ಎಂಟನೆಯ ತಿಂಗಳ ಹದಿನೈದನೆಯ ದಿನದಲ್ಲಿ ಹಬ್ಬವನ್ನಾಚರಿಸಬೇಕೆಂದು ಯಾರೊಬ್ಬಾಮನು ಸ್ವ ಇಚ್ಛೆಯಿಂದ ಗೊತ್ತುಮಾಡಿ ಆ ಸಮಯಕ್ಕೆ ತಾನೂ ಬೇತೇಲಿನ ಯಜ್ಞವೇದಿಯ ಬಳಿಗೆ ಹೋಗಿ ಧೂಪಹಾಕುವುದಕ್ಕಾಗಿ ಅದರ ಮೆಟ್ಟಲುಗಳನ್ನು ಹತ್ತುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಎಂಟನೆಯ ತಿಂಗಳ ಹದಿನೈದನೆಯ ದಿನ ಇಸ್ರಯೇಲರು ಹಬ್ಬವನ್ನಾಚರಿಸಬೇಕೆಂದು ಯಾರೊಬ್ಬಾಮನು ಸ್ವೇಚ್ಛೆಯಿಂದ ಗೊತ್ತುಮಾಡಿದನು. ಆ ಸಮಯಕ್ಕೆ ತಾನೂ ಬೇತೇಲಿನ ಬಲಿಪೀಠದ ಬಳಿಗೆ ಹೋಗಿ ಧೂಪಾರತಿ ಎತ್ತಲು ಅದರ ಮೆಟ್ಟಲುಗಳನ್ನು ಹತ್ತುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಇಸ್ರಾಯೇಲ್ಯರು ಎಂಟನೆಯ ತಿಂಗಳ ಹದಿನೈದನೆಯ ದಿವಸದಲ್ಲಿ ಹಬ್ಬವನ್ನಾಚರಿಸಬೇಕೆಂದು ಯಾರೊಬ್ಬಾಮನು ಸ್ವೇಚ್ಫೆಯಿಂದ ಗೊತ್ತುಮಾಡಿ ಆ ಸಮಯಕ್ಕೆ ತಾನೂ ಬೇತೇಲಿನ ಯಜ್ಞವೇದಿಯ ಬಳಿಗೆ ಹೋಗಿ ಧೂಪಸುಡುವದಕ್ಕಾಗಿ ಅದರ ಮೆಟ್ಲುಗಳನ್ನು ಹತ್ತುತ್ತಿರುವಾಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ರಾಜನಾದ ಯಾರೊಬ್ಬಾಮನು ಇಸ್ರೇಲರಿಗೆ ತನ್ನದೇ ಆದ ಹಬ್ಬದ ದಿನವನ್ನು ಆರಿಸಿಕೊಂಡನು. ಅದು ಎಂಟನೆಯ ತಿಂಗಳ ಹದಿನೈದನೆಯ ದಿವಸವಾಗಿತ್ತು. ಆ ಸಮಯದಲ್ಲಿ ಅವನು ತಾನು ನಿರ್ಮಿಸಿದ ಯಜ್ಞವೇದಿಕೆಯ ಮೇಲೆ ಯಜ್ಞಗಳನ್ನು ಮತ್ತು ಧೂಪವನ್ನು ಅರ್ಪಿಸಿದನು. ಇದು ಬೇತೇಲ್ ನಗರದಲ್ಲಿ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:33
11 ತಿಳಿವುಗಳ ಹೋಲಿಕೆ  

ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ, ಯೆಹೂದದಿಂದ ಬೇತೇಲಿಗೆ ಯೆಹೋವ ದೇವರ ಮಾತಿನಂತೆ ಒಬ್ಬ ದೇವರ ಮನುಷ್ಯ ಬಂದನು.


ಅದನ್ನು ನೀವು ಗೊಂಡೆಯಾಗಿ ಇಟ್ಟುಕೊಂಡು, ಅದನ್ನು ನೋಡುವಾಗ, ಯೆಹೋವ ದೇವರ ಸಕಲ ಆಜ್ಞೆಗಳನ್ನು ನೆನಸಿ ಅವುಗಳ ಪ್ರಕಾರಮಾಡಿ, ನಿಮ್ಮ ಹೃದಯ ಹಾಗೂ ಇಚ್ಛೆಗನುಸಾರ ನಿಮ್ಮ ಕಣ್ಣುಗಳು ಜಾರತ್ವ ಮಾಡುವಂತೆ ಹಿಂಬಾಲಿಸದೆ ಇರುವಿರಿ.


ಹೀಗೆ ನೀವು ಮಾಡುತ್ತಾ ಬಂದಿರುವ ಸಂಪ್ರದಾಯಗಳ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ. ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ,” ಎಂದು ಹೇಳಿದರು.


‘ಅವನು ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಗೌರವಿಸಬೇಕಾಗಿಲ್ಲ’ ಎಂದು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ.


ಕರ್ತರು ಹೇಳುವುದೇನೆಂದರೆ: “ಈ ಜನರು ಬಾಯಿಂದ ನನ್ನನ್ನು ಸಮೀಪಿಸಿ, ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.


ಹೀಗೆ ತಮ್ಮ ದುಷ್ಕೃತ್ಯಗಳಿಂದ ತಮ್ಮನ್ನು ಅಪವಿತ್ರ ಮಾಡಿಕೊಂಡು, ತಮ್ಮ ಕ್ರಿಯೆಗಳಿಂದ ದುರಾಚಾರಿಗಳಾದರು.


ಅವನು ಹೊರಟುಹೋಗಿ ಫಿಲಿಷ್ಟಿಯರ ಮೇಲೆ ಯುದ್ಧಮಾಡಿ, ಗತ್‌ನ ಗೋಡೆಯನ್ನೂ, ಯಬ್ನೆಯ ಗೋಡೆಯನ್ನೂ, ಅಷ್ಡೋದಿನ ಗೋಡೆಯನ್ನೂ ಕೆಡವಿಬಿಟ್ಟು, ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.


ಆಗ ನಾನು ನನ್ನಲ್ಲಿಯೇ ಯೋಚಿಸುತ್ತಾ, ‘ಫಿಲಿಷ್ಟಿಯರು ಗಿಲ್ಗಾಲಿಗೆ ಬಂದು ನನ್ನ ಮೇಲೆ ದಾಳಿಮಾಡುವುದು ಖಚಿತ ಮತ್ತು ನಾನು ಎಂದಿಗೂ ಯೆಹೋವ ದೇವರ ಸಹಾಯವನ್ನು ಕೇಳಲಿಲ್ಲ.’ ಆದ್ದರಿಂದ ನನ್ನಲ್ಲಿಯೇ ಆದ ಒತ್ತಡದಿಂದ ದಹನಬಲಿಯನ್ನು ಅರ್ಪಿಸಿದೆನು,” ಎಂದನು.


ಅರಸನು ದಮಸ್ಕದಿಂದ ಬಂದ ಮೇಲೆ ಬಲಿಪೀಠವನ್ನು ಕಂಡನು. ಅರಸನು ಬಲಿಪೀಠದ ಬಳಿಗೆ ಹೋಗಿ,


ಅವರು ಯೆಹೋವ ದೇವರಿಗೆ ಆರಾಧನೆ ಸಲ್ಲಿಸಿದರು. ಆದರೂ ತಮ್ಮಲ್ಲಿರುವ ಪೂಜಾಸ್ಥಳಗಳ ಯಾಜಕರನ್ನು ನೇಮಿಸಿಕೊಂಡರು. ಇವರು ಪೂಜಾಸ್ಥಳಗಳ ಮೇಲಿರುವ ಮಂದಿರಗಳಲ್ಲಿ ಅವರಿಗೋಸ್ಕರ ಬಲಿಗಳನ್ನು ಅರ್ಪಿಸುತ್ತಾ ಇದ್ದರು.


ತನ್ನ ತಂದೆಯ ದೇವರನ್ನು ಹುಡುಕಿ, ಇಸ್ರಾಯೇಲಿನ ಕ್ರಿಯೆಗಳ ಪ್ರಕಾರ ನಡೆಯದೆ, ದೇವರ ಆಜ್ಞೆಗಳಲ್ಲಿ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು