Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:26 - ಕನ್ನಡ ಸಮಕಾಲಿಕ ಅನುವಾದ

26 ಅವನನ್ನು ಮಾರ್ಗದಿಂದ ಹಿಂದಕ್ಕೆ ಕರೆತಂದ ಪ್ರವಾದಿಯು ಆ ವರ್ತಮಾನವನ್ನು ಕೇಳಿ, “ಇವನೇ ಯೆಹೋವ ದೇವರ ಮಾತಿಗೆ ಅವಿಧೇಯನಾದ ದೇವರ ಮನುಷ್ಯನು, ಯೆಹೋವ ದೇವರು ಅವನನ್ನು ಸಿಂಹಕ್ಕೆ ಒಪ್ಪಿಸಿದ್ದಾರೆ, ಅದು ಅವನನ್ನು ಸೀಳಿ ಕೊಂದುಹಾಕಿತು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನನ್ನು ಹಿಂದಕ್ಕೆ ಕರೆದುಕೊಂಡು ಹೋಗಿದ್ದ ಪ್ರವಾದಿಯು ಈ ಸುದ್ದಿಯನ್ನು ಕೇಳಿ ಅವರಿಗೆ, “ಆ ಶವವು ದೇವರ ಮನುಷ್ಯನದೇ ಆಗಿರಬೇಕು. ಅವನು ಯೆಹೋವನ ಆಜ್ಞೆಗೆ ಅವೀಧೆಯನಾದ್ದರಿಂದ ಯೆಹೋವನು ಅವನ ವಿಷಯದಲ್ಲಿ ತಾನು ಹೇಳಿದ ಮಾತು ನೆರವೇರುವಂತೆ ಅವನನ್ನು ಸಿಂಹದ ಬಾಯಿಗೆ ಒಪ್ಪಿಸಿದನು. ಅದು ಅವನ ಮೇಲೆ ಹಾರಿ ಅವನನ್ನು ಕೊಂದುಬಿಟ್ಟಿತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅವನನ್ನು ಹಿಂದಕ್ಕೆ ಕರೆದುಕೊಂಡು ಹೋಗಿದ್ದ ಪ್ರವಾದಿ, ಈ ಸುದ್ದಿಯನ್ನು ಕೇಳಿ, “ಆ ಶವವು ದೈವಭಕ್ತನದೇ ಆಗಿರಬೇಕು. ಅವನು ಸರ್ವೇಶ್ವರನ ಆಜ್ಞೆಗೆ ಅವಿಧೇಯನಾದುದರಿಂದ ಸರ್ವೇಶ್ವರ ಅವನ ವಿಷಯದಲ್ಲಿ ತಾವು ಹೇಳಿದ ಮಾತು ನೆರವೇರುವಂತೆ ಅವನನ್ನು ಸಿಂಹದ ಬಾಯಿಗೆ ಒಪ್ಪಿಸಿದರು. ಅದು ಅವನ ಮೇಲೆ ಹಾರಿ ಅವನನ್ನು ಕೊಂದುಬಿಟ್ಟಿತು,” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವನನ್ನು ಹಿಂದಕ್ಕೆ ಕರಕೊಂಡು ಹೋಗಿದ್ದ ಪ್ರವಾದಿಯು ಈ ಸುದ್ದಿಯನ್ನು ಕೇಳಿ - ಆ ಶವವು ದೇವರ ಮನುಷ್ಯನದೇ ಆಗಿರಬೇಕು; ಅವನು ಯೆಹೋವನ ಆಜ್ಞೆಗೆ ಅವಿಧೇಯನಾದದರಿಂದ ಯೆಹೋವನು ಅವನ ವಿಷಯದಲ್ಲಿ ತಾನು ಹೇಳಿದ ಮಾತು ನೆರವೇರುವಂತೆ ಅವನನ್ನು ಸಿಂಹದ ಬಾಯಿಗೆ ಒಪ್ಪಿಸಿದನು. ಅದು ಅವನ ಮೇಲೆ ಹಾರಿ ಅವನನ್ನು ಕೊಂದುಬಿಟ್ಟಿತು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆ ಪ್ರವಾದಿಯು ಆ ಮನುಷ್ಯನನ್ನು ಮೋಸದಿಂದ ಕರೆದು ತಂದಿದ್ದನು. ಅವನಿಗೆ ಸಂಭವಿಸಿದ್ದನ್ನು ಕೇಳಿದಾಗ ಅವನು, “ಯೆಹೋವನ ಆಜ್ಞೆಗಳನ್ನು ಅನುಸರಿಸದಿದ್ದ ದೇವಮನುಷ್ಯನೇ ಅವನಾಗಿರಬೇಕು. ಅವನನ್ನು ಕೊಲ್ಲಲು ಯೆಹೋವನು ಸಿಂಹವನ್ನು ಕಳುಹಿಸಿದನು. ಹೀಗೆ ಮಾಡುವುದಾಗಿ ಯೆಹೋವನೇ ಹೇಳಿದ್ದನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:26
11 ತಿಳಿವುಗಳ ಹೋಲಿಕೆ  

ವೃದ್ಧ, ಯುವಕ, ಯುವತಿಯರನ್ನು ಮತ್ತು ಎಳೆಗೂಸುಗಳನ್ನು ಮತ್ತು ಹೆಂಗಸರನ್ನು ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ, ಅವನನ್ನು ಮುಟ್ಟಬೇಡಿರಿ. ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ” ಎಂದಾಗ, ಅವರು ಆಲಯದ ಮುಂದೆ ಇದ್ದ ಹಿರಿಯರಿಂದ ಪ್ರಾರಂಭಿಸಿದರು.


ಇದರಿಂದ ನಿಮ್ಮಲ್ಲಿ ಬಹುಮಂದಿ ಬಲಹೀನರೂ, ರೋಗಿಗಳೂ ಆಗಿದ್ದಾರೆ, ಕೆಲವರು ನಿದ್ರೆ ಹೋಗಿದ್ದಾರೆ.


ಇಗೋ, ಭೂಮಿಯ ಮೇಲೆ ನೀತಿವಂತರು ತಮ್ಮ ಫಲವನ್ನು ಹೊಂದಲಿಕ್ಕಿರುವಾಗ, ದುಷ್ಟರು ಮತ್ತು ಪಾಪಿಗಳು ಎಷ್ಟೋ ಹೆಚ್ಚಾಗಿ ತಮ್ಮ ಫಲವನ್ನು ಹೊಂದುತ್ತಾರೆ.


ನಿಮ್ಮ ಭಯದಿಂದ ನನ್ನ ಶರೀರವು ನಡುಗುತ್ತದೆ; ನಿಮ್ಮ ನಿಯಮಗಳಿಗೆ ನಾನು ಭಯಭಕ್ತಿಯುಳ್ಳವನಾಗಿದ್ದೇನೆ.


ಹೇಗಿದ್ದರೂ ಈ ಕಾರ್ಯದಿಂದ ನೀನು ಯೆಹೋವ ದೇವರ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ, ನಿನಗೆ ಹುಟ್ಟಿದ ಮಗುವು ಖಂಡಿತವಾಗಿ ಸಾಯುವುದು,” ಎಂದನು.


ಈಗ ನೀನು ನನ್ನನ್ನು ತಿರಸ್ಕರಿಸಿ, ಹಿತ್ತಿಯನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡದ್ದರಿಂದ, ಖಡ್ಗವು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ತೊಲಗದು.


ತರುವಾಯ ಮೋಶೆಯು ಆರೋನನಿಗೆ, “ಯೆಹೋವ ದೇವರು ಹೇಳಿದ್ದು ಇದೇ. ಅದೇನೆಂದರೆ: “ ‘ನನ್ನನ್ನು ಸಮೀಪಿಸುವವರ ಮುಖಾಂತರ ನನ್ನ ಪರಿಶುದ್ಧತೆಯನ್ನು ತೋರಿಸುವೆನು ಮತ್ತು ಜನರೆಲ್ಲರ ಮುಂದೆ ನನ್ನ ಮಹಿಮೆಯನ್ನು ತೋರ್ಪಡಿಸುವೆನು,’ ” ಎಂದನು. ಆಗ ಆರೋನನು ಮಾತನಾಡದೆ ಸುಮ್ಮನಿದ್ದನು.


ಏಕೆಂದರೆ ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯತೀರ್ಪಿನ ಸಮಯವು ಬಂದಿದೆ. ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರಬಹುದು?


ಆಗ ಮನುಷ್ಯರು ಹಾದು ಹೋಗಿ ಮಾರ್ಗದಲ್ಲಿ ಬಿದ್ದಿರುವ ಹೆಣವನ್ನೂ, ಹೆಣದ ಬಳಿಯಲ್ಲಿ ನಿಂತಿರುವ ಸಿಂಹವನ್ನೂ ಕಂಡು, ವೃದ್ಧ ಪ್ರವಾದಿಯು ವಾಸವಾಗಿರುವ ಪಟ್ಟಣಕ್ಕೆ ಬಂದು ತಿಳಿಸಿದರು.


ತನ್ನ ಮಕ್ಕಳಿಗೆ, “ಕತ್ತೆಗೆ ತಡಿ ಹಾಕಿರಿ,” ಎಂದನು. ಅವರು ತಡಿ ಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು