Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:3 - ಕನ್ನಡ ಸಮಕಾಲಿಕ ಅನುವಾದ

3 ಅದೇ ದಿವಸದಲ್ಲಿ ಅವನು ಗುರುತನ್ನು ಕೊಟ್ಟು ಅವರಿಗೆ, “ಯೆಹೋವ ದೇವರು ಇದಕ್ಕೆ ಹೇಳಿದ ಗುರುತೇನೆಂದರೆ, ಇಗೋ, ಬಲಿಪೀಠವು ಸೀಳಿಹೋಗಿ, ಅದರ ಮೇಲೆ ಇರುವ ಬೂದಿಯು ಬಿದ್ದುಹೋಗುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇದಲ್ಲದೆ ಅವನು, “ನನ್ನ ಮಾತು ಯೆಹೋವನದು ಎಂಬುವುದಕ್ಕೆ ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಗುವುದೇ ಗುರುತಾಗಿರುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇದಲ್ಲದೆ, “ನನ್ನ ಮಾತು ಸರ್ವೇಶ್ವರನದು ಎಂಬುದಕ್ಕೆ ಈ ಪೀಠವು ಸೀಳಿ ಅದರ ಮೇಲಿನ ಬೂದಿ ಬಿದ್ದುಹೋಗುವುದೇ ಗುರುತಾಗಿರುವುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇದಲ್ಲದೆ ಅವನು - ನನ್ನ ಮಾತು ಯೆಹೋವನದೆಂಬದಕ್ಕೆ ವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದು ಹೋಗುವದೇ ಗುರುತಾಗಿರುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇದಲ್ಲದೆ ದೇವಮನುಷ್ಯನು ಜನರಿಗೆ, “ಯೆಹೋವನು ಇದರ ಬಗ್ಗೆ ನನಗೆ ಹೇಳಿರುವ ಗುರುತೇನೆಂದರೆ, ‘ಯಜ್ಞವೇದಿಕೆಯು ಒಡೆದುಹೋಳಾಗುವುದು, ಬೂದಿಯು ನೆಲದ ಮೇಲೆ ಚೆಲ್ಲಿಹೋಗುವುದು’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:3
16 ತಿಳಿವುಗಳ ಹೋಲಿಕೆ  

ಯೆಹೂದ್ಯರು ಆಶ್ಚರ್ಯಕರವಾದ ಗುರುತುಗಳನ್ನು ಹುಡುಕುತ್ತಾರೆ. ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ.


ಆಗ ಯೆಹೂದ್ಯರು ಯೇಸುವಿಗೆ, “ಇವುಗಳನ್ನು ಮಾಡುವ ಅಧಿಕಾರ ನಿನಗಿದೆ ಎಂಬುದಕ್ಕೆ ಯಾವ ಸೂಚಕಕಾರ್ಯವನ್ನು ತೋರಿಸುತ್ತೀ?” ಎಂದು ಕೇಳಿದರು.


ಅದಕ್ಕವನು, “ಈಗ ನಿಮ್ಮ ಸಮ್ಮುಖದಲ್ಲಿ ನನಗೆ ದಯೆ ದೊರಕಿದ್ದರೆ, ನನ್ನ ಸಂಗಡ ಮಾತನಾಡುವವರು ನೀವು ಎಂಬುದಕ್ಕೆ ನನಗೆ ಒಂದು ಗುರುತನ್ನು ತೋರಿಸಬೇಕು.


“ ‘ನನ್ನ ಮಾತುಗಳು ನಿಮಗೆ ವಿರೋಧವಾಗಿ ಕೇಡಿಗಾಗಿ ನಿಶ್ಚಯವಾಗಿ ನಿಲ್ಲುವುವೆಂದು ನೀವು ತಿಳಿಯುವ ಹಾಗೆ ನಾನು ಈ ಸ್ಥಳದಲ್ಲಿ ನಿಮ್ಮನ್ನು ದಂಡಿಸುವೆನೆಂಬುದಕ್ಕೆ ಇದೇ ನಿಮಗೆ ಗುರುತು,’ ಎಂದು ಯೆಹೋವ ದೇವರು ಹೇಳುತ್ತಾರೆ.


ಇದಲ್ಲದೆ ಹಿಜ್ಕೀಯನು, “ನಾನು ಯೆಹೋವ ದೇವರ ಆಲಯಕ್ಕೆ ಹೋಗುವೆನೆಂಬುದಕ್ಕೆ ನನಗೆ ಗುರುತೇನು?” ಎಂದು ಕೇಳಿದ್ದನು.


ಹಿಜ್ಕೀಯನು ಯೆಶಾಯನಿಗೆ, “ಯೆಹೋವ ದೇವರು ನನ್ನನ್ನು ಸ್ವಸ್ಥಮಾಡುವರೆಂಬುದಕ್ಕೆ ಮತ್ತು ನಾನು ಮೂರನೆಯ ದಿವಸದಲ್ಲಿ ಯೆಹೋವ ದೇವರ ಆಲಯಕ್ಕೆ ಹೋಗುವೆನೆಂಬುದಕ್ಕೆ ನನಗೆ ಗುರುತೇನು?” ಎಂದು ಕೇಳಿದನು.


“ ‘ಇದಲ್ಲದೆ ನಿನಗೆ ಗುರುತಾಗಿ ಹೊಫ್ನಿಯು, ಫೀನೆಹಾಸನು ಎಂಬ ಇಬ್ಬರು ಮಕ್ಕಳು ಒಂದೇ ದಿವಸದಲ್ಲಿ ಸಾಯುವರು.


ಆಗ ಮೋಶೆಯೂ ಆರೋನನೂ ಫರೋಹನ ಬಳಿಗೆ ಹೋಗಿ ಯೆಹೋವ ದೇವರು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹ ಮತ್ತು ಅವನ ಸೇವಕರ ಮುಂದೆಯೂ ಬಿಸಾಡಿದಾಗ, ಅದು ಸರ್ಪವಾಯಿತು.


ಮೋಶೆಯು ಉತ್ತರವಾಗಿ, “ಅವರು ನನ್ನನ್ನು ನಂಬದೆ, ನನ್ನ ಮಾತಿಗೆ ಕಿವಿಗೊಡದೆ, ‘ಯೆಹೋವ ದೇವರು ನಿನಗೆ ಕಾಣಿಸಿಕೊಂಡೇ ಇಲ್ಲ,’ ಎಂದು ಹೇಳಬಹುದು,” ಎಂದನು.


ಅರಸನಾದ ಯಾರೊಬ್ಬಾಮನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿ ದೇವರ ಮನುಷ್ಯನು ಹೇಳಿದ ಮಾತನ್ನು ಕೇಳಿದಾಗ, ಅವನು ಪೀಠದ ಬಳಿಯಿಂದ ತನ್ನ ಕೈಚಾಚಿ, “ಅವನನ್ನು ಹಿಡಿಯಿರಿ,” ಎಂದನು. ಆಗ ಅವನಿಗೆ ವಿರೋಧವಾಗಿ ಚಾಚಿದ ಅವನ ಕೈ ಹಿಂದಕ್ಕೆ ಎಳೆದುಕೊಳ್ಳದ ಹಾಗೆ ಒಣಗಿ ಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು