Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:5 - ಕನ್ನಡ ಸಮಕಾಲಿಕ ಅನುವಾದ

5 ಇದಲ್ಲದೆ ಯೆಹೋವ ದೇವರ ಮಾತಿನಿಂದ ದೇವರ ಮನುಷ್ಯನು ಕೊಟ್ಟ ಗುರುತಿನ ಪ್ರಕಾರವೇ ಬಲಿಪೀಠವು ಸೀಳಿಹೋಗಿ, ಬೂದಿಯು ಬಲಿಪೀಠದಿಂದ ಬಿದ್ದುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಯಿತು. ಹೀಗೆ ಆ ದೇವರ ಮನುಷ್ಯನು ಯೆಹೋವನ ಅಪ್ಪಣೆಯಿಂದ ಹೇಳಿದ ಗುರುತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಬಲಿಪೀಠವು ಸೀಳಿ ಅದರ ಮೇಲಿನ ಬೂದಿ ಬಿದ್ದುಹೋಯಿತು. ಹೀಗೆ ಆ ದೈವಭಕ್ತನು ಸರ್ವೇಶ್ವರನ ಅಪ್ಪಣೆಯಿಂದ ಹೇಳಿದ ಗುರುತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ಅದನ್ನು ಹಿಂದೆಗೆಯಲಾರದವನಾದನು. ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಯಿತು; ಹೀಗೆ ಆ ದೇವರ ಮನುಷ್ಯನು ಯೆಹೋವನ ಅಪ್ಪಣೆಯಿಂದ ಹೇಳಿದ ಗುರುತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯಜ್ಞವೇದಿಕೆಯೂ ಒಡೆದು ಚೂರಾಯಿತು. ಅದರ ಮೇಲಿನ ಬೂದಿಯು ನೆಲದ ಮೇಲೆ ಚೆಲ್ಲಿಹೋಯಿತು. ದೇವರೇ ಆಜ್ಞಾಪಿಸಿದನೆಂದು ದೇವಮನುಷ್ಯನು ಹೇಳಿದ ಸಂಗತಿಗಳಿಗೆ ಇದೇ ಗುರುತಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:5
13 ತಿಳಿವುಗಳ ಹೋಲಿಕೆ  

ಶಿಷ್ಯರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು. ಕರ್ತನು ಅವರ ಜೊತೆಯಲ್ಲಿ ಕೆಲಸ ಮಾಡುತ್ತಾ, ಸೂಚಕಕಾರ್ಯಗಳಿಂದ ತಮ್ಮ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದರು.


ಆ ದಿವಸವೆಲ್ಲಾ ಯುದ್ಧವು ಬಹು ಘೋರವಾದದ್ದರಿಂದ ಇಸ್ರಾಯೇಲಿನ ಅರಸನು ಅರಾಮ್ಯರಿಗೆ ಎದುರಾಗಿ ರಥದಲ್ಲಿಯೇ ಆತುಕೊಂಡು ನಿಂತಿದ್ದನು. ಅವನ ಗಾಯದ ರಕ್ತವು ರಥದ ಅಡಿಭಾಗದಲ್ಲಿ ಸುರಿದು ನಿಂತಿತ್ತು, ಸಾಯಂಕಾಲದಲ್ಲಿ ಅವನು ಮರಣಹೊಂದಿದನು.


ಅದಕ್ಕೆ ಮೀಕಾಯನು, “ನೀನು ಸಮಾಧಾನದಿಂದ ನಿಜವಾಗಿ ಬಂದರೆ, ಯೆಹೋವ ದೇವರು ನನ್ನ ಮುಖಾಂತರ ಮಾತನಾಡಿಲ್ಲ, ಎಂದು ಹೇಳಿ; ಜನರೇ ನೀವೆಲ್ಲರೂ ನನ್ನ ಮಾತನ್ನು ಗಮನದಲ್ಲಿಡಿರಿ!” ಎಂದು ಕೂಗಿ ಹೇಳಿದನು.


ಅದೇ ದಿವಸದಲ್ಲಿ ಅವನು ಗುರುತನ್ನು ಕೊಟ್ಟು ಅವರಿಗೆ, “ಯೆಹೋವ ದೇವರು ಇದಕ್ಕೆ ಹೇಳಿದ ಗುರುತೇನೆಂದರೆ, ಇಗೋ, ಬಲಿಪೀಠವು ಸೀಳಿಹೋಗಿ, ಅದರ ಮೇಲೆ ಇರುವ ಬೂದಿಯು ಬಿದ್ದುಹೋಗುವುದು,” ಎಂದನು.


ಒಬ್ಬ ಪ್ರವಾದಿಯು ಯೆಹೋವ ದೇವರ ಹೆಸರಿನಲ್ಲಿ ಮುಂತಿಳಿಸಿದ ಮಾತು ಸಂಭವಿಸದೆ ಹೋದರೆ ಅಥವಾ ನಿಜವಾಗದಿದ್ದರೆ, ಅದು ಯೆಹೋವ ದೇವರ ಮಾತು ಅಲ್ಲವೆಂದು ನೀವು ತಿಳಿದುಕೊಳ್ಳಬೇಕು. ಆ ಪ್ರವಾದಿಯು ಅಹಂಕಾರದಿಂದ ಅದನ್ನು ಮಾತನಾಡಿದ್ದರೆ, ಆದ್ದರಿಂದ ನೀವು ಅವನಿಗೆ ಭಯಪಡಬಾರದು.


ಅರಸನಾದ ಯಾರೊಬ್ಬಾಮನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿ ದೇವರ ಮನುಷ್ಯನು ಹೇಳಿದ ಮಾತನ್ನು ಕೇಳಿದಾಗ, ಅವನು ಪೀಠದ ಬಳಿಯಿಂದ ತನ್ನ ಕೈಚಾಚಿ, “ಅವನನ್ನು ಹಿಡಿಯಿರಿ,” ಎಂದನು. ಆಗ ಅವನಿಗೆ ವಿರೋಧವಾಗಿ ಚಾಚಿದ ಅವನ ಕೈ ಹಿಂದಕ್ಕೆ ಎಳೆದುಕೊಳ್ಳದ ಹಾಗೆ ಒಣಗಿ ಹೋಯಿತು.


ಆಗ ಅರಸನು ಉತ್ತರವಾಗಿ ದೇವರ ಮನುಷ್ಯನಿಗೆ, “ನನ್ನ ಕೈ ಗುಣವಾಗುವ ಹಾಗೆ ನೀನು ನಿನ್ನ ದೇವರಾದ ಯೆಹೋವ ದೇವರ ಕಟಾಕ್ಷವನ್ನು ಬೇಡಿಕೊಂಡು, ನನಗೋಸ್ಕರ ಪ್ರಾರ್ಥನೆ ಮಾಡು,” ಎಂದನು. ಆಗ ದೇವರ ಮನುಷ್ಯನು ಯೆಹೋವ ದೇವರ ಕಟಾಕ್ಷವನ್ನು ಬೇಡಿಕೊಂಡದ್ದರಿಂದ ಅರಸನ ಕೈಗುಣವಾಗಿ, ಮುಂಚಿನ ಹಾಗೆ ಆಯಿತು.


ಯೆಹೋವ ದೇವರು ಎಲೀಯನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಮಡಕೆಯಲ್ಲಿರುವ ಹಿಟ್ಟು ತೀರದೆ, ಕುಡಿಕೆಯಲ್ಲಿರುವ ಎಣ್ಣೆಯು ಮುಗಿಯದೆ ಇತ್ತು.


“ನಾನು ಇಸ್ರಾಯೇಲಿನ ಪಾಪಗಳನ್ನು ವಿಚಾರಿಸುವ ದಿವಸದಲ್ಲಿ, ಬೇತೇಲಿನ ಬಲಿಪೀಠಗಳನ್ನು ನಾಶಮಾಡುವೆನು. ಬಲಿಪೀಠದ ಕೊಂಬುಗಳು ಕಡಿಯಲಾಗಿ, ನೆಲಕ್ಕೆ ಉರುಳುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು