Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:9 - ಕನ್ನಡ ಸಮಕಾಲಿಕ ಅನುವಾದ

9 ಏಕೆಂದರೆ, ‘ನೀನು ರೊಟ್ಟಿ ತಿನ್ನಬೇಡ, ನೀರನ್ನು ಕುಡಿಯಬೇಡ, ನೀನು ಬಂದ ಮಾರ್ಗದಿಂದ ಹಿಂದಿರುಗಿ ಹೋಗಬೇಡ,’ ಎಂದು ಯೆಹೋವ ದೇವರ ವಾಕ್ಯದಿಂದ ನನಗೆ ಆಜ್ಞೆಯಾಗಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ ಮತ್ತು ಹಿಂದಿರುಗಿ ಹೋಗುವಾಗ ಬೇರೆ ದಾರಿಯಿಂದ ಹೋಗಬೇಕೆಂತಲೂ ನನಗೆ ಯೆಹೋವನ ಅಪ್ಪಣೆಯಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ ಹಿಂದಿರುಗಿ ಹೋಗುವಾಗ ಬೇರೆ ದಾರಿಯಿಂದ ಹೋಗಬೇಕೆಂದೂ ನನಗೆ ಸರ್ವೇಶ್ವರನ ಅಪ್ಪಣೆಯಾಗಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ ಹಿಂದಿರುಗಿಹೋಗುವಾಗ ಬೇರೆ ದಾರಿಯಿಂದ ಹೋಗಬೇಕೆಂದೂ ನನಗೆ ಯೆಹೋವನ ಅಪ್ಪಣೆಯಾಗಿದೆ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾನು ಏನನ್ನೂ ತಿನ್ನಬಾರದು ಮತ್ತು ಕುಡಿಯಬಾರದೆಂದು ಯೆಹೋವನು ನನಗೆ ಆಜ್ಞಾಪಿಸಿದ್ದಾನೆ. ನಾನು ಇಲ್ಲಿಗೆ ಬಂದ ರಸ್ತೆಯಲ್ಲಿ ಮತ್ತೆ ಹಿಂದಿರುಗಿ ಹೋಗಬಾರದೆಂದು ಯೆಹೋವನು ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:9
19 ತಿಳಿವುಗಳ ಹೋಲಿಕೆ  

ಪ್ರಿಯರೇ, ನೀವು ಕಲಿತುಕೊಂಡ ಬೋಧನೆಗೆ ವಿರೋಧವಾಗಿರುವ ಭೇದಗಳನ್ನೂ ಅಭ್ಯಂತರಗಳನ್ನೂ ಮಾಡುವವರ ಬಗ್ಗೆ ಎಚ್ಚರಿಕೆಯಿಂದಿರಿ. ಅಂಥವರಿಂದ ದೂರವಾಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನಾನು ನಿಮಗೆ ಆಜ್ಞಾಪಿಸಿದ್ದನ್ನು ಪಾಲಿಸಿದರೆ ನೀವು ನನ್ನ ಸ್ನೇಹಿತರು.


ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.


ಅಪರಾಧ ಮಾಡುವವರ ಸಂಗಡ ನಾನು ಸಹ ಸೇರಿಕೊಂಡು ಕೆಟ್ಟ ಕಾರ್ಯಗಳನ್ನು ಮಾಡಲು ನನ್ನ ಹೃದಯ ಸೆಳೆಯದಂತೆ ಕಾಪಾಡಿರಿ; ಅವರ ಸವಿ ಊಟಗಳನ್ನು ನಾನು ಉಣ್ಣದಿರಲಿ.


ದೇವರ ತುಟಿಗಳ ಆಜ್ಞೆಯಿಂದ ನಾನು ಹಿಂಜರಿಯಲಿಲ್ಲ; ನನ್ನ ದೈನಂದಿನ ಆಹಾರಕ್ಕಿಂತ ದೇವರ ಬಾಯಿಯ ಮಾತುಗಳನ್ನು ನನ್ನೆದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ.


ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ, ಯೆಹೂದದಿಂದ ಬೇತೇಲಿಗೆ ಯೆಹೋವ ದೇವರ ಮಾತಿನಂತೆ ಒಬ್ಬ ದೇವರ ಮನುಷ್ಯ ಬಂದನು.


ಅದಕ್ಕೆ ಸಮುಯೇಲನು ಹೇಳಿದ್ದೇನೆಂದರೆ, “ಯೆಹೋವ ದೇವರ ವಾಕ್ಯಕ್ಕೆ ವಿಧೇಯನಾದರೆ, ಯೆಹೋವ ದೇವರಿಗೆ ಆಗುವ ಸಂತೋಷ ದಹನಬಲಿಗಳಲ್ಲಿಯೂ ಯಜ್ಞಗಳಲ್ಲಿಯೂ ಆಗುವುದೋ? ಇಗೋ, ಯಜ್ಞಕ್ಕಿಂತ ವಿಧೇಯತೆಯು, ಟಗರುಗಳ ಕೊಬ್ಬಿಗಿಂತ ಮಾತುಕೇಳುವುದೇ ಉತ್ತಮವಾಗಿರುವುದು.


ಅವನು ಸಮೂಹದವರಿಗೆ, “ನೀವು ಈ ದುಷ್ಟ ಮನುಷ್ಯರ ಡೇರೆಗಳ ಬಳಿಯಿಂದ ತೊಲಗಿಹೋಗಿರಿ. ನೀವು ಅವರ ಎಲ್ಲಾ ಪಾಪಗಳ ದೆಸೆಯಿಂದ ನಾಶವಾಗದಂತೆ ಅವರಿಗಿರುವ ಯಾವುದನ್ನು ಮುಟ್ಟಬೇಡಿರಿ,” ಎಂದನು.


ಅನಂತರ ಪರಲೋಕದಿಂದ ಇನ್ನೊಂದು ಧ್ವನಿಯು: “ ‘ನನ್ನ ಜನರೇ, ಆಕೆಯನ್ನು ಬಿಟ್ಟು ಬನ್ನಿರಿ, ನೀವು ಆಕೆಯ ಪಾಪಗಳಲ್ಲಿ ಪಾಲುಗಾರರಾಗಬಾರದು, ಆಕೆಯ ಉಪದ್ರವಗಳಿಗೆ ಗುರಿಯಾಗಬಾರದು.’


ನಿಷ್ಪ್ರಯೋಜಕವಾದ ಕತ್ತಲೆಯ ಕಾರ್ಯಗಳೊಂದಿಗೆ ಪಾಲುಗಾರರಾಗಿರದೆ ಅವುಗಳನ್ನು ಬೆಳಕಿಗೆ ತನ್ನಿರಿ.


ಆದರೆ ಸಹೋದರಿ ಅಥವಾ ಸಹೋದರನೆನಿಸಿಕೊಂಡವನು ಜಾರನಾದರೂ ಲೋಭಿಯಾದರೂ ವಿಗ್ರಹಾರಾಧಕನಾದರೂ ಪರನಿಂದಕನಾದರೂ ಕುಡುಕನಾದರೂ ಸುಲಿಗೆ ಮಾಡುವವನಾದರೂ ಆಗಿದ್ದರೆ, ಅಂಥವರ ಸಹವಾಸ ಮಾಡಬೇಡಿರಿ. ಅಂಥವರ ಸಂಗಡ ಊಟ ಮಾಡಲೂ ಬೇಡಿರಿ ಎಂದು ಈಗ ಬರೆಯುತ್ತಿದ್ದೇನೆ.


ಆದರೆ ದೇವರ ಮನುಷ್ಯನು ಅರಸನಿಗೆ ಉತ್ತರವಾಗಿ, “ನೀನು ನನಗೆ ನಿನ್ನ ಅರ್ಧ ಆಸ್ತಿಯನ್ನು ಕೊಟ್ಟರೂ, ನಾನು ನಿನ್ನ ಸಂಗಡ ಹೋಗುವುದಿಲ್ಲ. ಈ ಸ್ಥಳದಲ್ಲಿ ರೊಟ್ಟಿ ತಿನ್ನುವುದಿಲ್ಲ, ಕುಡಿಯುವುದಿಲ್ಲ.


ಆದ್ದರಿಂದ ಅವನು ಬೇತೇಲಿಗೆ ಬಂದ ಮಾರ್ಗದಿಂದ ಹಿಂದಿರುಗಿ ಹೋಗದೆ, ಮತ್ತೊಂದು ಮಾರ್ಗವಾಗಿ ಹೋದನು.


ಅದಕ್ಕವನು, “ನಾನು ನಿನ್ನ ಸಂಗಡ ಹಿಂದಿರುಗಲೂ ಕೂಡದು, ಹೋಗಲೂ ಕೂಡದು. ಈ ಸ್ಥಳದಲ್ಲಿ ನಿನ್ನ ಸಂಗಡ ರೊಟ್ಟಿ ತಿನ್ನುವುದಿಲ್ಲ, ನೀರು ಕುಡಿಯುವುದಿಲ್ಲ.


ಹಾಗೆಯೇ ದೇವರ ಮನುಷ್ಯನು ವೃದ್ಧನ ಸಂಗಡ ಹಿಂದಿರುಗಿ ಹೋಗಿ, ಅವನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು