Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:10 - ಕನ್ನಡ ಸಮಕಾಲಿಕ ಅನುವಾದ

10 “ ‘ಆದ್ದರಿಂದ ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ, ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ, ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟುಕೊಂಡವರನ್ನೂ ಕಡಿದುಬಿಟ್ಟು, ಅದು ತೀರುವವರೆಗೆ ಮನುಷ್ಯನು ರಸವನ್ನು ಹೇಗೆ ತೆಗೆದು ಹಾಕುತ್ತಾನೋ, ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಉಳುವಿಕೆಯನ್ನು ತೆಗೆದುಹಾಕುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದುದರಿಂದ ಯಾರೊಬ್ಬಾಮನೇ ಕೇಳು, ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು. ನಿನ್ನ ಕುಟುಂಬದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಸಂಹರಿಸಿಬಿಡುವೆನು. ಒಬ್ಬನು ಕಸವನ್ನು ಗುಡಿಸಿ ತೆಗೆದುಹಾಕುವಂತೆ ನಾನು ನಿನ್ನ ಮನೆಯವರನ್ನು ತೆಗೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದುದರಿಂದ ಯಾರೊಬ್ಬಾಮನೇ, ಕೇಳು; ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು; ನಿನ್ನ ಕುಟುಂಬದ ಗಂಡಸರಲ್ಲಿ, ಸ್ವತಂತ್ರರಾಗಲಿ, ಪರತಂತ್ರರಾಗಲಿ, ಎಲ್ಲರನ್ನೂ ಇಸ್ರಯೇಲರ ಮಧ್ಯೆಯಿಂದ ಸಂಹರಿಸಿಬಿಡುವೆನು. ಕಸವನ್ನು ಗುಡಿಸಿ ಎಸೆಯುವಂತೆ ನಾನು ನಿನ್ನ ಮನೆಯವರನ್ನು ಎಸೆದುಬಿಡುವೆನು; ಅವರು ನಿರ್ನಾಮವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದದರಿಂದ ಯಾರೊಬ್ಬಾಮನೇ, ಕೇಳು; ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು; ನಿನ್ನ ಕುಟುಂಬದ ಗಂಡಸರಲ್ಲಿ ಸ್ವತಂತ್ರರಾಗಲಿ ಪರತಂತ್ರರಾಗಲಿ, ಎಲ್ಲರನ್ನೂ ಇಸ್ರಾಯೇಲ್ಯರೊಳಗಿಂದ ಸಂಹರಿಸಿಬಿಡುವೆನು. ಒಬ್ಬನು ಕಸವನ್ನು ಗುಡಿಸಿ ತೆಗೆದುಹಾಕುವಂತೆ ನಾನು ನಿನ್ನ ಮನೆಯವರನ್ನು ತೆಗೆದುಹಾಕುವೆನು; ಅವರು ನಿರ್ನಾಮವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದ್ದರಿಂದ ಯಾರೊಬ್ಬಾಮನೇ, ನಾನು ನಿನ್ನ ಕುಟುಂಬಕ್ಕೆ ಕೇಡುಗಳನ್ನು ಬರಮಾಡುತ್ತೇನೆ. ನಿನ್ನ ಕುಟುಂಬದ ಗಂಡಸರೆಲ್ಲರನ್ನು ನಾನು ಕೊಲ್ಲುತ್ತೇನೆ. ಬೆಂಕಿಯು ಕಸವನ್ನು ಸುಟ್ಟುಹಾಕುವಂತೆ ನಾನು ನಿನ್ನ ಕುಟುಂಬವನ್ನು ಸಂಪೂರ್ಣವಾಗಿ ನಾಶಪಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:10
25 ತಿಳಿವುಗಳ ಹೋಲಿಕೆ  

ಇಸ್ರಾಯೇಲಿನಲ್ಲಿ ಪ್ರತಿಯೊಬ್ಬರೂ ಸ್ವತಂತ್ರನಾಗಿರಲಿ, ಗುಲಾಮನಾಗಿರಲಿ, ಎಲ್ಲರು ಎಷ್ಟು ಕಷ್ಟದಲ್ಲಿದ್ದಾರೆಂಬುದನ್ನು ಯೆಹೋವ ದೇವರು ನೋಡಿದರು. ಅವರಿಗೆ ಸಹಾಯ ಮಾಡುವವರು ಯಾರೂ ಇರಲಿಲ್ಲ.


‘ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ, ನಿನ್ನ ಸಂತತಿಯನ್ನು ತೆಗೆದುಹಾಕಿ, ಅಹಾಬನಿಗೆ ಒಬ್ಬ ಗಂಡು ಮಗುವನ್ನಾದರೂ ಉಳಿಸದೆ ಇಸ್ರಾಯೇಲಿನಲ್ಲಿ ಎಲ್ಲರನ್ನು ತೆಗೆದುಹಾಕಿಬಿಡುವೆನು.


ಏಕೆಂದರೆ ಯೆಹೋವ ದೇವರು ತಮ್ಮ ಜನರಿಗೆ ನ್ಯಾಯತೀರಿಸುವರು. ದೇವರು ತಮ್ಮ ಸೇವಕರ ಬಲ ಹೋಯಿತೆಂದೂ, ಗುಲಾಮರಾಗಲಿ, ಸ್ವತಂತ್ರರಾಗಲಿ ಉಳಿಯಲಿಲ್ಲವೆಂದೂ ನೋಡಿದಾಗ, ತಮ್ಮ ಸೇವಕರಿಗೋಸ್ಕರ ಕರುಣಿಸುವರು.


“ಇಗೋ, ನಾನು ನಿಮ್ಮ ಸಂತತಿಯನ್ನು ಗದರಿಸುವೆನು. ನಿಮ್ಮ ಮುಖಗಳ ಮೇಲೆ, ನಿಮ್ಮ ಹಬ್ಬ ಬಲಿಗಳ ಸಗಣಿ ಬಳಿಯುವೆನು. ಅದರೊಂದಿಗೆ ನೀವು ಒಯ್ಯಲಾಗುವಿರಿ.


“ನಾನು ಮನುಷ್ಯರ ಮೇಲೆ ಇಕ್ಕಟ್ಟು ತರಿಸುವೆನು. ಅವರು ಕುರುಡರ ಹಾಗೆ ತಡಕುವರು. ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದಾರೆ. ಅವರ ರಕ್ತವು ಧೂಳಿನಂತೆಯೂ ಅವರ ಮಾಂಸವು ಗೊಬ್ಬರದಂತೆಯೂ ಸುರಿದಿರುವುದು.


ಪಟ್ಟಣದಲ್ಲಿ ಕಹಳೆಯನ್ನು ಊದಿದರೆ, ಜನರು ಹೆದರುವುದಿಲ್ಲವೇ? ಯೆಹೋವ ದೇವರಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೇ?


ಅವರು ಟೈರಿನ ಗೋಡೆಗಳನ್ನು ಕೆಡಿಸಿ ಅದರ ಗೋಪುರಗಳನ್ನು ಒಡೆದು ಬಿಡುವರು, ನಾನು ಅದರ ಧೂಳನ್ನು ಒರಸಿ ಅದನ್ನು ಬೋಳು ಬಂಡೆಯಂತೆ ಮಾಡುವೆನು.


ಅವರು ಪ್ರೀತಿ ಮಾಡಿದಂಥ, ಸೇವಿಸಿದಂಥ, ಹಿಂಬಾಲಿಸಿದಂಥ, ಹುಡುಕಿದಂಥ, ಆರಾಧಿಸಿದಂಥ, ಸೂರ್ಯನ ಮುಂದೆಯೂ, ಚಂದ್ರನ ಮುಂದೆಯೂ, ಸಮಸ್ತ ಆಕಾಶ ಸೈನ್ಯದ ಮುಂದೆಯೂ ಅವುಗಳನ್ನು ತೆರೆದಿಡುವರು; ಹೌದು, ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರವಾಗುವುವು.


“ಅದನ್ನು ಮುಳ್ಳುಹಂದಿಗಳ ನಿವಾಸವಾಗಿಯೂ, ಕೊಳಚೆ ಪ್ರದೇಶವನ್ನಾಗಿಯೂ ಪರಿವರ್ತಿಸುವೆನು. ನಾಶನದ ಕಸಬರಿಗೆಯಿಂದ ಅದನ್ನು ಗುಡಿಸುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಆದರೆ ನೀನು ತಿರಸ್ಕರಿಸಿದ ಕೊಂಬೆಯಂತೆಯೂ, ಖಡ್ಗ ತಿವಿದು ಕಲ್ಲುಗುಂಡಿಗೆ ಪಾಲಾದ ಹೆಣಗಳ ಹೊದಿಕೆಯಂತೆಯೂ, ಪರರ ತುಳಿತಕ್ಕೆ ಈಡಾಗಿ, ಸಮಾಧಿಯೊಳಗಿಂದ ಹೊರಗೆ ಬಿಸಾಡಿರುವ ಶವದ ಹಾಗಿದ್ದೀ.


ಆದಕಾರಣ ಯೆಹೋವ ದೇವರು ಕೋಪಗೊಂಡು ಜನರಿಗೆ ವಿರೋಧವಾಗಿ ಉರಿಗೊಂಡು ಅವರ ಮೇಲೆ ತಮ್ಮ ಕೈಚಾಚಿ, ಅವರನ್ನು ಹೊಡೆದಿದ್ದಾರೆ, ಬೆಟ್ಟಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿರುವುವು. ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇರುವುದು.


ಅವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು.


ಗೊಬ್ಬರದ ಹಾಗೆ ಶಾಶ್ವತವಾಗಿ ಅವನು ನಾಶವಾಗುವನು; ಅವನನ್ನು ನೋಡಿದವರು, ‘ಅವನೆಲ್ಲಿ?’ ಎಂದು ಕೇಳುವರು.


ನಾನು ಯೆರೂಸಲೇಮಿನ ಮೇಲೆ ಸಮಾರ್ಯದ ವಿರುದ್ಧ ಬಳಸಿದ ನೂಲನ್ನೂ, ಅಹಾಬನ ಮನೆಯ ವಿರುದ್ಧ ಬಳಸಿದ ಮಟ್ಟಗೋಲನ್ನೂ ಚಾಚಿ, ಒಬ್ಬನು ತಟ್ಟೆಯನ್ನು ಒರೆಸಿದಂತೆ ಅದನ್ನು ಒರೆಸಿ ತಲೆಕೆಳಗಾಗಿ ಹಾಕುವ ಹಾಗೆ ನಾನು ಯೆರೂಸಲೇಮನ್ನು ಅಳಿಸಿಬಿಡುವೆನು.


ಇದಲ್ಲದೆ ಇದೇ ಈಜೆಬೆಲಳೆಂದು ಗುರುತು ಸಿಕ್ಕದ ಹಾಗೆ ಇಜ್ರೆಯೇಲಿನ ಹೊಲದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವುದು,” ಎಂದನು.


ಜಿಮ್ರಿಯು ಆಳಲು ಆರಂಭಿಸಿದಾಗ, ಅವನು ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಲೇ, ಬಾಷನ ಮನೆಯವರನ್ನೆಲ್ಲಾ ಸಂಹರಿಸಿ, ಅವನ ಬಂಧುಗಳಲ್ಲಿಯೂ, ಅವನ ಸ್ನೇಹಿತರಲ್ಲಿಯೂ ಒಬ್ಬ ಗಂಡಸನನ್ನೂ ಉಳಿಸಲಿಲ್ಲ.


ಏಕೆಂದರೆ ನಿನಗೆ ಕೇಡು ಆಗದ ಹಾಗೆ ನನ್ನನ್ನು ತಡೆದ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಜೀವದಾಣೆ, ನೀನು ತ್ವರೆಯಾಗಿ ನನ್ನನ್ನು ಎದುರುಗೊಳ್ಳದಿದ್ದರೆ, ಉದಯವಾಗುವಷ್ಟರಲ್ಲಿ ನಾಬಾಲನಿಗೆ ಒಬ್ಬನಾದರೂ ಉಳಿಯುತ್ತಿರಲಿಲ್ಲ,” ಎಂದು ಹೇಳಿದನು.


ಬೆಳಗಾಗುವಷ್ಟರಲ್ಲಿ ಅವನ ಜನರಲ್ಲಿ ನಾನು ಒಬ್ಬ ಗಂಡಸನನ್ನಾದರೂ ಉಳಿಸಿದರೆ, ದೇವರು ದಾವೀದನಾದ ನನಗೆ ಹೀಗೆಯೂ ಇದಕ್ಕಿಂತ ಅಧಿಕವಾಗಿಯೂ ಮಾಡಲಿ,” ಎಂದು ಹೇಳಿದ್ದನು.


“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ಯಾರೊಬ್ಬಾಮನ ಮನೆಯವರನ್ನು ಭೂಮಿಯಿಂದ ಸಂಹರಿಸುವುದಕ್ಕೂ, ನಾಶಮಾಡುವುದಕ್ಕೂ ಈ ಪಾಪವು ಅವರಿಗೆ ಕಾರಣವಾಯಿತು.


ನಾನು ಬಾಷನ ಸಂತತಿಯನ್ನೂ, ಅವನ ಮನೆಯ ಸಂತತಿಯನ್ನೂ ತೆಗೆದುಹಾಕಿ, ನಿನ್ನ ಮನೆಯನ್ನು ನೆಬಾಟನ ಮಗ ಯಾರೊಬ್ಬಾಮನ ಮನೆಯ ಹಾಗೆ ಮಾಡುವೆನು.


ನೀವು ಸಾವಿರಾರು ತಲೆಗಳವರೆಗೆ ಪ್ರೀತಿ, ದಯೆತೋರಿಸಿ, ತಂದೆಗಳ ಅಕ್ರಮಗಳನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸುರಿಸುವವರಾಗಿದ್ದೀರಿ. ಮಹತ್ವವುಳ್ಳವರೂ, ಪರಾಕ್ರಮವುಳ್ಳ ದೇವರೂ, ಸೇನಾಧೀಶ್ವರ ಯೆಹೋವ ದೇವರೂ ಎಂಬುದು ನಿಮ್ಮ ಹೆಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು