Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:11 - ಕನ್ನಡ ಸಮಕಾಲಿಕ ಅನುವಾದ

11 ಯಾರೊಬ್ಬಾಮನವರಲ್ಲಿ ಯಾವನು ಪಟ್ಟಣದಲ್ಲಿ ಸಾಯುವನೋ ಅವನನ್ನು ನಾಯಿಗಳು ತಿಂದುಬಿಡುವವು. ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿಂದುಬಿಡುವವು,’ ಎಂದು ಯೆಹೋವ ದೇವರು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ನಿರ್ನಾಮವಾಗುವರು. ಅವರಲ್ಲಿ ಪಟ್ಟಣದೊಳಗೆ ಸಾಯುವಂಥವರನ್ನು ನಾಯಿಗಳೂ ಮತ್ತು ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದುಬಿಡುವವು ಎಂದು ಹೇಳುತ್ತಾನೆ’. ಇದು ಯೆಹೋವನಾದ ನನ್ನ ಮಾತು. ನೀನು ಎದ್ದು ನಿನ್ನ ಮನೆಗೆ ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವರಲ್ಲಿ ಪಟ್ಟಣದೊಳಗೆ ಸಾಯುವಂಥವರನ್ನು ನಾಯಿಗಳೂ, ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ, ತಿಂದುಬಿಡುವವು,’ ಎಂದು ಹೇಳುತ್ತಾರೆ. ಇದು ಸರ್ವೇಶ್ವರನ ಮಾತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರಲ್ಲಿ ಪಟ್ಟಣದೊಳಗೆ ಸಾಯುವಂಥವರನ್ನು ನಾಯಿಗಳೂ ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದುಬಿಡುವವು ಎಂದು ಹೇಳುತ್ತಾನೆ. ಇದು ಯೆಹೋವನ ಮಾತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಿನ್ನ ಕುಟುಂಬದಲ್ಲಿ ಯಾವನಾದರೂ ನಗರದಲ್ಲಿ ಸತ್ತರೆ, ಅವನನ್ನು ನಾಯಿಗಳು ಕಿತ್ತುತಿನ್ನುತ್ತವೆ. ನಿನ್ನ ಕುಟುಂಬದಲ್ಲಿ ಯಾವನಾದರೂ ಹೊಲಗಳಲ್ಲಿ ಸತ್ತರೆ, ಅವನನ್ನು ಪಕ್ಷಿಗಳು ಕಿತ್ತುತಿನ್ನುತ್ತವೆ. ಇದು ಯೆಹೋವನ ನುಡಿ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:11
14 ತಿಳಿವುಗಳ ಹೋಲಿಕೆ  

ಬಾಷನ ಕಡೆಯವರಲ್ಲಿ ಪಟ್ಟಣದೊಳಗೆ ಸಾಯುವವನನ್ನು ನಾಯಿಗಳು ತಿನ್ನುವುವು. ಅವನ ಕಡೆಯವನಲ್ಲಿ ಹೊಲದೊಳಗೆ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವುವು,” ಎಂಬುದೇ ಆ ವಾಕ್ಯ.


“ನಾನು ಅವರಿಗೆ ವಿರೋಧವಾಗಿ ನಾಲ್ಕು ವಿಧವಾದ ವಿನಾಶಗಳನ್ನು ಎಂದರೆ, ಕೊಲ್ಲುವುದಕ್ಕೆ ಖಡ್ಗವನ್ನೂ, ಹರಿಯುವುದಕ್ಕೆ ನಾಯಿಗಳನ್ನು, ನುಂಗುವುದಕ್ಕೂ ನಾಶಮಾಡುವುದಕ್ಕೂ ಆಕಾಶದ ಪಕ್ಷಿಗಳನ್ನೂ, ಕಾಡುಮೃಗಗಳನ್ನೂ ನೇಮಿಸುತ್ತೇನೆ ಎಂಬುದು ಯೆಹೋವ ದೇವರಾದ ನನ್ನ ಮಾತು.


“ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹಮಾಡಿದ ಮನುಷ್ಯರ ಹೆಣಗಳನ್ನು ನೋಡುವರು. ಅವುಗಳನ್ನು ಕಡಿಯುವ ಹುಳ ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ, ಅವರು ಎಲ್ಲಾ ಮನುಷ್ಯರಿಗೆ ಹೇಸಿಗೆಯಾಗುವರು.”


ನೀನು ಅವನಿಗೆ, ‘ನೀನು ಕೊಂದುಹಾಕಿ ಸ್ವಾಧೀನ ಮಾಡಿಕೊಂಡಿಯಲ್ಲಾ. ಆದ್ದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲಿಯೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕುವುವು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ಅಹಾಬನ ಮನೆಯನ್ನು ನೆಬಾಟನ ಮಗ ಯಾರೊಬ್ಬಾಮನ ಮನೆಯ ಹಾಗೆಯೂ ಅಹೀಯನ ಮಗ ಬಾಷನ ಮನೆಯ ಹಾಗೆಯೂ ಮಾಡುವೆನು.


ಅವರ ಶತ್ರುಗಳ ಕೈಯಲ್ಲಿಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ ಒಪ್ಪಿಸುವೆನು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗುವುವು.


ದೇವರು ಮನುಷ್ಯನಂತೆ ಸುಳ್ಳಾಡುವವರಲ್ಲ. ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಅವರು ನುಡಿದದ್ದನ್ನು ಮಾಡದಿರುವರೇ? ವಾಗ್ದಾನ ಮಾಡಿದ್ದನ್ನು ಅವರು ನೆರವೇರಿಸದಿರುವರೇ?


ಯಾರೊಬ್ಬಾಮನ ಮನೆಯವರನ್ನು ಭೂಮಿಯಿಂದ ಸಂಹರಿಸುವುದಕ್ಕೂ, ನಾಶಮಾಡುವುದಕ್ಕೂ ಈ ಪಾಪವು ಅವರಿಗೆ ಕಾರಣವಾಯಿತು.


ಅವನು ಆಳುತ್ತಿರುವಾಗ, ಯಾರೊಬ್ಬಾಮನ ಮನೆಯವರನ್ನೆಲ್ಲಾ ಸಂಹರಿಸಿಬಿಟ್ಟನು. ಯಾರೊಬ್ಬಾಮನು ಪಾಪಮಾಡಿ, ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನಿಮಿತ್ತವಾಗಿಯೂ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಿದ ನಿಮಿತ್ತವಾಗಿಯೂ, ಯೆಹೋವ ದೇವರು ಶೀಲೋವಿನವನಾಗಿರುವ ತನ್ನ ಸೇವಕನಾದ ಅಹೀಯನ ಮುಖಾಂತರ ಹೇಳಿದ ಮಾತಿನ ಪ್ರಕಾರವೇ ನೆರವೇರಿತು.


ನಾನು ಬಾಷನ ಸಂತತಿಯನ್ನೂ, ಅವನ ಮನೆಯ ಸಂತತಿಯನ್ನೂ ತೆಗೆದುಹಾಕಿ, ನಿನ್ನ ಮನೆಯನ್ನು ನೆಬಾಟನ ಮಗ ಯಾರೊಬ್ಬಾಮನ ಮನೆಯ ಹಾಗೆ ಮಾಡುವೆನು.


ಆಗ ಯೆಹೋವ ದೇವರ ಮಹಿಮೆಯು ಗೋಚರವಾಗುವುದು. ಮಾನವರೆಲ್ಲರೂ ಒಟ್ಟಿಗೆ ಅದನ್ನು ಕಾಣುವರು. ಏಕೆಂದರೆ ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು