Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:13 - ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ ಸಮಸ್ತ ಇಸ್ರಾಯೇಲರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಳಿಡುವರು. ಏಕೆಂದರೆ, ಯಾರೊಬ್ಬಾಮನವರಲ್ಲಿ ಅವನೊಬ್ಬನೇ ಸಮಾಧಿಗೆ ಸೇರುವನು. ಯಾರೊಬ್ಬಾಮನ ಮನೆಯವರೊಳಗೆ ಅವನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗಾದ ಒಳ್ಳೆಯ ಕ್ರಿಯೆ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಸ್ರಾಯೇಲರೆಲ್ಲರೂ ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಸಮಾಧಿಮಾಡುವರು. ಯಾರೊಬ್ಬಾಮನ ಮನೆಯವರೊಳಗೆ ಅವನು ಮಾತ್ರ ಇಸ್ರಾಯೇಲ್ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರುವುದರಿಂದ ಅವನೊಬ್ಬನೇ ಸಮಾಧಿಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇಸ್ರಯೇಲರೆಲ್ಲರೂ ಅವನಿಗಾಗಿ ಗೋಳಾಡಿ ಅವನ ಶವವನ್ನು ಸಮಾಧಿಮಾಡುವರು. ಯಾರೊಬ್ಬಾಮನ ಮನೆಯವರೊಳಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿರುವುದರಿಂದ ಇವನೊಬ್ಬನೇ ಸಮಾಧಿಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಸ್ರಾಯೇಲ್ಯರೆಲ್ಲರೂ ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಸಮಾಧಿಮಾಡುವರು. ಯಾರೊಬ್ಬಾಮನ ಮನೆಯವರೊಳಗೆ ಇಸ್ರಾಯೇಲ್ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರುವದರಿಂದ ಇವನೊಬ್ಬನೇ ಸಮಾಧಿಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇಸ್ರೇಲರೆಲ್ಲರು ಅವನಿಗಾಗಿ ಗೋಳಾಡಿ ಸಮಾಧಿಮಾಡುತ್ತಾರೆ. ಯಾರೊಬ್ಬಾಮನ ಕುಟುಂಬದಲ್ಲಿ ನಿನ್ನ ಮಗನನೊಬ್ಬನನ್ನು ಮಾತ್ರ ಸಮಾಧಿ ಮಾಡುತ್ತಾರೆ. ಏಕೆಂದರೆ ಯಾರೊಬ್ಬಾಮನ ಕುಟುಂಬದಲ್ಲಿ ಇವನೊಬ್ಬನು ಮಾತ್ರ ಇಸ್ರೇಲಿನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:13
10 ತಿಳಿವುಗಳ ಹೋಲಿಕೆ  

ಆದರೂ ನೀನು ದೇಶದಿಂದ ಅಶೇರ ಸ್ತಂಭಗಳನ್ನು ತೆಗೆದುಹಾಕಿ, ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ, ನಿನ್ನಲ್ಲಿ ಉತ್ತಮವಾದ ಕಾರ್ಯಗಳು ತೋರಿಬಂದಿವೆ,” ಎಂದನು.


ರೆಹಬ್ಬಾಮನು ತನ್ನನ್ನು ತಗ್ಗಿಸಿಕೊಂಡಾಗ, ಯೆಹೋವ ದೇವರ ಕೋಪವು ಅವನನ್ನು ಬಿಟ್ಟು ತಿರುಗಿತು. ಆತನು ಪೂರ್ಣವಾಗಿ ನಾಶಮಾಡಲಿಲ್ಲ. ಯೆಹೂದದಲ್ಲಿ ಸಹ ಕೆಲವು ಕಾರ್ಯಗಳು ಸುಲಕ್ಷಣಗಳು ಕಂಡುಬಂದವು.


ನಿನ್ನ ವಿಶ್ವಾಸದಲ್ಲಿ ಅನ್ಯೋನ್ಯತೆಯು ನಿನ್ನ ಎಲ್ಲಾ ಒಳ್ಳೆಯದರ ಆಳವಾದ ತಿಳುವಳಿಕೆಯನ್ನು ಕ್ರಿಸ್ತ ಯೇಸುವಿಗಾಗಿ ಪರಿಣಾಮಗೊಳಿಸಿ ಹಂಚುವಂತೆ ನಾನು ಪ್ರಾರ್ಥಿಸುತ್ತೇನೆ.


ಆದ್ದರಿಂದ ಯೋಷೀಯನ ಮಗ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅವರು ಅವನನ್ನು ಕುರಿತು ಗೋಳಾಡಿ, ‘ಅಯ್ಯೋ, ನನ್ನ ಸಹೋದರನೇ, ಅಯ್ಯೋ, ನನ್ನ ಸಹೋದರಿಯೇ,’ ಎಂದು ಅನ್ನುವುದಿಲ್ಲ. ‘ಅಯ್ಯೋ, ದೊರೆಯೇ, ಅಯ್ಯೋ, ಅವನ ವೈಭವವೇ,’ ಎಂದು ಅವನನ್ನು ಕುರಿತು ಗೋಳಾಡುವುದಿಲ್ಲ.


ಮರಣ ಹೊಂದಿದ ಅರಸನಿಗಾಗಿ ಅಳಬೇಡಿರಿ. ಅವನಿಗಾಗಿ ಗೋಳಾಡಬೇಡಿರಿ. ಹೊರಟು ಹೋದವನಿಗಾಗಿ ಬಹಳವಾಗಿ ಅಳಿರಿ. ಏಕೆಂದರೆ ಅವನು ತಿರುಗಿ ಬರುವುದೇ ಇಲ್ಲ. ತಾನು ಹುಟ್ಟಿದ ದೇಶವನ್ನು ಇನ್ನು ನೋಡುವುದೇ ಇಲ್ಲ.


“ ‘ಸ್ನೇಹಿತರೇ, ಅವನ ದುರ್ಗತಿಗೆ ಕಾರಣ ಅವನಲ್ಲಿಯೇ ಇದೆ, ನಾವು ಅವನಿಗೆ ಹೇಗೆ ತೊಂದರೆಕೊಡೋಣ?’ ಎಂದು ನೀವು ಹೇಳಿದರೆ,


ಆರೋನನು ತೀರಿಹೋದನೆಂದು ಸಭೆಯೆಲ್ಲಾ ನೋಡಿದಾಗ, ಇಸ್ರಾಯೇಲರೆಲ್ಲರೂ ಆರೋನನಿಗೋಸ್ಕರ ಮೂವತ್ತು ದಿವಸಗಳವರೆಗೂ ದುಃಖಿಸಿದರು.


ಯೆಹೋವ ದೇವರು ಪ್ರವಾದಿಯಾದ ಅಹೀಯನ ಮುಖಾಂತರವಾಗಿ ತಿಳಿಸಿದ ಪ್ರಕಾರ ಅವರು ಅವನನ್ನು ಹೂಳಿಟ್ಟರು. ಇಸ್ರಾಯೇಲರೆಲ್ಲರು ಅವನಿಗೋಸ್ಕರ ಗೋಳಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು