Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:6 - ಕನ್ನಡ ಸಮಕಾಲಿಕ ಅನುವಾದ

6 ಅನಂತರ ಅವಳು ಬಾಗಿಲಲ್ಲಿ ಪ್ರವೇಶಿಸುವಾಗ, ಅಹೀಯನು ಅವಳ ಹೆಜ್ಜೆಗಳ ಶಬ್ದ ಕೇಳುತ್ತಲೇ ಅವನು, “ಯಾರೊಬ್ಬಾಮನ ಪತ್ನಿಯೇ ಒಳಗೆ ಬಾ, ನೀನು ಮತ್ತೊಬ್ಬಳಂತೆ ತೋರಿಸಿಕೊಳ್ಳುವುದು ಏಕೆ? ನಾನು ಕಠಿಣವಾದವುಗಳನ್ನು ತಿಳಿಸಲು ನನಗೆ ಅಪ್ಪಣೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಕೆಯು ಅಹೀಯನ ಮನೆಯನ್ನು ಪ್ರವೇಶಿಸುತ್ತಿರುವಾಗಲೇ ಅಹೀಯನು ಆಕೆಯ ಕಾಲು ಸಪ್ಪಳವನ್ನು ಕೇಳಿ, “ಯಾರೊಬ್ಬಾಮನ ಹೆಂಡತಿಯೇ ಬಾ. ಯಾಕೆ ನಿನ್ನನ್ನು ಅನ್ಯಳೆಂದು ತೋರ್ಪಡಿಸಿಕೊಳ್ಳುತ್ತೀ? ನಿನಗೆ ಕಠಿಣವಾದ ಉತ್ತರ ಕೊಡಬೇಕೆಂದು ನನಗೆ ಅಪ್ಪಣೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಕೆ ಅಹೀಯನ ಮನೆಯನ್ನು ಪ್ರವೇಶಿಸುವಾಗಲೇ ಅಹೀಯನು ಆಕೆಯ ಕಾಲುಸಪ್ಪಳವನ್ನು ಕೇಳಿ, “ಯಾರೊಬ್ಬಾಮನ ಹೆಂಡತಿಯೇ, ಬಾ; ಏಕೆ ನೀನು ಅನ್ಯಳೆಂದು ನಟಿಸುತ್ತಿರುವೆ? ನಿನಗೆ ಕಠಿಣವಾದ ಉತ್ತರವನ್ನು ಕೊಡಬೇಕೆಂದು ನನಗೆ ಅಪ್ಪಣೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಕೆಯು ಅಹೀಯನ ಮನೆಯನ್ನು ಪ್ರವೇಶಿಸುವಾಗಲೇ ಅಹೀಯನು ಆಕೆಯ ಕಾಲುಸಪ್ಪಳವನ್ನು ಕೇಳಿ - ಯಾರೊಬ್ಬಾಮನ ಹೆಂಡತಿಯೇ, ಬಾ; ಯಾಕೆ ನಿನ್ನನ್ನು ಅನ್ಯಳೆಂದು ತೋರ್ಪಡಿಸಿಕೊಳ್ಳುತ್ತೀ? ನಿನಗೆ ಕಠಿಣವಾದ ಉತ್ತರವನ್ನು ಕೊಡಬೇಕೆಂದು ನನಗೆ ಅಪ್ಪಣೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವಳು ಬಾಗಿಲಿನ ಬಳಿಗೆ ಬಂದಾಗಲೇ ಅಹೀಯನಿಗೆ ಆಕೆಯ ಪಾದಗಳ ಸಪ್ಪಳವು ಕೇಳಿಸಿತು. ಆಗ ಅಹೀಯನು, “ಯಾರೊಬ್ಬಾಮನ ಪತ್ನಿಯೇ, ಒಳಗೆ ಬಾ. ನೀನು ಯಾರೆಂಬುದು ಜನರಿಗೆ ತಿಳಿಯದಂತೆ ಮಾಡಲು ಯಾಕೆ ಪ್ರಯತ್ನಿಸುತ್ತಿರುವೆ? ನಾನು ನಿನಗೆ ಅಶುಭದ ಸುದ್ದಿಯನ್ನು ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:6
25 ತಿಳಿವುಗಳ ಹೋಲಿಕೆ  

ನಾವು ಲೆಕ್ಕ ಒಪ್ಪಿಸಬೇಕಾಗಿರುವ ದೇವರ ದೃಷ್ಟಿಗೆ ಸಮಸ್ತವೂ ಬಹಿರಂಗವಾದದ್ದಾಗಿಯೂ ಬಯಲಾದದ್ದಾಗಿಯೂ ಆಗಿದೆ. ಎಲ್ಲಾ ಸೃಷ್ಟಿಯಲ್ಲಿ ದೇವರ ದೃಷ್ಟಿಗೆ ಮರೆಯಾದದ್ದು ಯಾವುದೂ ಇಲ್ಲ.


ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತೇನೆ. ಆದರೆ ಮನುಷ್ಯಪುತ್ರನಾದ ನನಗೆ ಯಾವನು ದ್ರೋಹಬಗೆಯುತ್ತಾನೋ ಆ ಮನುಷ್ಯನಿಗೆ ಕಷ್ಟ! ಆ ಮನುಷ್ಯನು ಹುಟ್ಟದೇ ಹೋಗಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗುತ್ತಿತ್ತು,” ಎಂದು ಹೇಳಿದರು.


ಯೆಹೋವ ದೇವರು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವರು; ಜನರ ದುರುದ್ದೇಶಗಳನ್ನು ನಿಷ್ಪಲ ಮಾಡುತ್ತಾರೆ.


ದೇವರು ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿಯೇ ಹಿಡಿಯುತ್ತಾರೆ, ಮತ್ತು ಕುತಂತ್ರಿಯ ಯೋಜನೆಗಳನ್ನು ನಿರರ್ಥಕಮಾಡುತ್ತಾರೆ.


ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾವು ಯೆಹೋವ ದೇವರನ್ನು ವಿಚಾರಿಸುವ ಹಾಗೆ ಇಮ್ಲನ ಮಗ ಮೀಕಾಯನೆಂಬ ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ದ್ವೇಷ ಮಾಡುತ್ತೇನೆ. ಏಕೆಂದರೆ ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ ಯಾವಾಗಲೂ ಕೆಟ್ಟದ್ದನ್ನು ಪ್ರವಾದಿಸುತ್ತಾನೆ,” ಎಂದನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗೆ ಅನ್ನದಿರಲಿ,” ಎಂದನು.


ಆಗ ಪ್ರವಾದಿಯು ಅಹಾಬನಿಗೆ, “ಯೆಹೋವ ದೇವರು ಹೇಳುವುದೇನೆಂದರೆ, ‘ನಾನು ಪೂರ್ಣ ನಾಶಕ್ಕೆ ಒಪ್ಪಿಸಿದ ಮನುಷ್ಯನನ್ನು ನೀನು ಬಿಟ್ಟುಬಿಟ್ಟ ಕಾರಣ, ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣ ಹೋಗುವುದು, ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು,’ ” ಎಂದನು.


ಆದರೆ ಯೆಹೋವ ದೇವರು ಅಹೀಯನಿಗೆ, “ಯಾರೊಬ್ಬಾಮನ ಪತ್ನಿಯು ತನ್ನ ಮಗನಿಗೋಸ್ಕರ ನಿನ್ನಿಂದ ದೈವೋತ್ತರವನ್ನು ಕೇಳುವುದಕ್ಕೆ ಬರುತ್ತಾಳೆ. ಏಕೆಂದರೆ ಅವಳ ಮಗನು ರೋಗದಲ್ಲಿದ್ದಾನೆ. ನೀನು ಅವಳಿಗೆ ಹೀಗೀಗೆ ಹೇಳು, ಅವಳು ಒಳಗೆ ಬರುವಾಗ ಮತ್ತೊಬ್ಬಳ ಹಾಗೆ ವೇಷಹಾಕಿಕೊಂಡು ಬರುವಳು,” ಎಂದು ಹೇಳಿಕೊಟ್ಟಿದ್ದನು.


“ನೀನು ಯಾರೊಬ್ಬಾಮನ ಪತ್ನಿ ಎಂದು ಯಾರೂ ತಿಳಿಯದ ಹಾಗೆ ನೀನೆದ್ದು, ವೇಷಹಾಕಿಕೊಂಡು ಶೀಲೋವಿಗೆ ಹೋಗು. ‘ಈ ಜನರ ಮೇಲೆ ಅರಸನಾಗಿರುವೆ,’ ಎಂದು ನನಗೆ ಹೇಳಿದ ಪ್ರವಾದಿ ಅಹೀಯನು ಅಲ್ಲಿದ್ದಾನೆ.


ನೀನು ಯೆಹೋವ ದೇವರ ಮಾತನ್ನು ಕೇಳದೆ, ಅಮಾಲೇಕ್ಯರ ಮೇಲೆ ಇದ್ದ ಅವರ ಉಗ್ರಕೋಪವನ್ನು ತೀರಿಸದೆ ಹೋದದ್ದರಿಂದ, ಯೆಹೋವ ದೇವರು ಈ ದಿವಸದಲ್ಲಿ ನಿನಗೆ ಹೀಗೆ ಮಾಡಿದರು.


ಆದರೆ ಸಮುಯೇಲನು ಸೌಲನಿಗೆ, “ನಾನು ನಿನ್ನ ಸಂಗಡ ಹಿಂದಿರುಗಿ ಬರುವುದಿಲ್ಲ. ಏಕೆಂದರೆ ನೀನು ಯೆಹೋವ ದೇವರ ವಾಕ್ಯವನ್ನು ತಿರಸ್ಕರಿಸಿದ್ದೀ. ಯೆಹೋವ ದೇವರು ನಿನ್ನನ್ನು ಇಸ್ರಾಯೇಲರ ಮೇಲೆ ಅರಸನಾಗಿರದ ಹಾಗೆ ತಿರಸ್ಕಾರಮಾಡಿಬಿಟ್ಟರು,” ಎಂದು ಹೇಳಿದನು.


ಆಗ ಸಮುಯೇಲನು ಸೌಲನಿಗೆ, “ಅದಿರಲಿ, ಯೆಹೋವ ದೇವರು ಕಳೆದ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ನಿನಗೆ ತಿಳಿಸುವೆನು,” ಎಂದನು. ಅದಕ್ಕವನು, “ಹೇಳು,” ಎಂದನು.


ನೀನು ಹೋಗಿ ಯಾರೊಬ್ಬಾಮನಿಗೆ ಹೇಳಬೇಕಾದದ್ದು, ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಾನು ಜನರೊಳಗಿಂದ ತೆಗೆದು ನಿನ್ನನ್ನು ಹೆಚ್ಚಿಸಿ, ನನ್ನ ಜನರಾದ ಇಸ್ರಾಯೇಲರ ಮೇಲೆ ನಾಯಕನಾಗಿ ಮಾಡಿದೆನು.


ಯೆಹೋವ ದೇವರಿಗೆ ವಿರೋಧವಾಗಿ ಯಾವ ಜ್ಞಾನವೂ, ವಿವೇಕವೂ, ಯೋಜನೆಯೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು