Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:9 - ಕನ್ನಡ ಸಮಕಾಲಿಕ ಅನುವಾದ

9 ನೀನು ನಿನಗೆ ಮುಂಚೆ ಇದ್ದವರೆಲ್ಲರಿಗಿಂತ ಕೆಟ್ಟದ್ದನ್ನು ಮಾಡಿದೆ. ಏಕೆಂದರೆ, ನೀನು ಹೋಗಿ ನನಗೆ ಕೋಪವನ್ನೆಬ್ಬಿಸುವ ಅನ್ಯದೇವರುಗಳನ್ನೂ, ಎರಕದ ವಿಗ್ರಹಗಳನ್ನೂ ಮಾಡಿಕೊಂಡು, ನನ್ನನ್ನು ತಿರಸ್ಕರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದಿ. ನನ್ನನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದೆ; ನನ್ನನ್ನು ತಿರಸ್ಕರಿಸಿ ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದಿ; ನನ್ನನ್ನು ಉಲ್ಲಂಘಿಸಿ ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ನೀನು ಅನೇಕ ಪಾಪಗಳನ್ನು ಮಾಡಿರುವೆ. ನಿನಗಿಂತಲೂ ಮೊದಲು ಆಳಿದವರ ಪಾಪಗಳಿಗಿಂತ ನಿನ್ನ ಪಾಪಗಳು ಹೆಚ್ಚು ಭಯಂಕರವಾಗಿವೆ. ನೀನು ನನ್ನನ್ನು ಅನುಸರಿಸುವುದನ್ನು ಬಿಟ್ಟುಬಿಟ್ಟೆ. ನೀನು ವಿಗ್ರಹಗಳನ್ನು ಮತ್ತು ಅನ್ಯದೇವರುಗಳನ್ನು ನಿರ್ಮಿಸಿದೆ. ಇದು ನನ್ನಲ್ಲಿ ಹೆಚ್ಚು ಕೋಪವುಂಟುಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:9
42 ತಿಳಿವುಗಳ ಹೋಲಿಕೆ  

“ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ನನ್ನನ್ನು ಮರೆತುಬಿಟ್ಟು ನನ್ನನ್ನು ನಿನ್ನ ಬೆನ್ನಿನ ಮೇಲೆ ಮರೆಮಾಡಿದ ಮೇಲೆ ನೀನು ನಿನ್ನ ದುಷ್ಕರ್ಮವನ್ನೂ ವ್ಯಭಿಚಾರದ ಪ್ರತಿಫಲವನ್ನೂ ಅನುಭವಿಸಲೇಬೇಕು.”


ನೀನು ನನ್ನ ಶಿಕ್ಷಣವನ್ನು ದ್ವೇಷಿಸಿ, ನನ್ನ ವಾಕ್ಯಗಳನ್ನು ನಿಮ್ಮ ಹಿಂದೆ ಬಿಸಾಡಿಬಿಟ್ಟೀರಲ್ಲಾ.


“ಆದರೂ ಅವರು ನಿಮಗೆ ಅವಿಧೇಯರಾಗಿ ತಿರುಗಿಬಿದ್ದು, ನಿಮ್ಮ ನಿಯಮವನ್ನು ಉಲ್ಲಂಘಿಸಿ, ತಮ್ಮನ್ನು ಎಚ್ಚರಿಸುವುದಕ್ಕೂ, ನಿಮ್ಮ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿಮ್ಮ ಪ್ರವಾದಿಗಳನ್ನೇ ಕೊಂದುಹಾಕಿದರು. ಹೀಗೆ ನಿಮ್ಮನ್ನೇ ಬಹು ದೂಷಿಸಿ ಅಸಡ್ಡೆಮಾಡಿಬಿಟ್ಟರು.


ಉನ್ನತ ಸ್ಥಳಗಳಿಗೋಸ್ಕರವೂ ದೆವ್ವಗಳಿಗೋಸ್ಕರವೂ, ಯಾರೊಬ್ಬಾಮನು ಮಾಡಿದ ಕರುಗಳ ಮೂರ್ತಿಪೂಜೆಗಾಗಿ ತಾನೇ ಯಾಜಕರನ್ನು ನೇಮಿಸಿದ್ದರಿಂದ,


ಅರಸನು ತನ್ನ ಸಲಹೆಗಾರರನ್ನು ಕೇಳಿ, ಎರಡು ಬಂಗಾರದ ಕರುಗಳನ್ನು ಮಾಡಿಸಿ ಜನರಿಗೆ, “ಯೆರೂಸಲೇಮಿನವರೆಗೂ ಜಾತ್ರೆಗೆ ಹೋಗುವುದು ನಿಮಗೆ ಕಷ್ಟವಾಗಿದೆ. ಇಸ್ರಾಯೇಲರೇ, ಇಗೋ ಈಜಿಪ್ಟಿನಿಂದ ನಿಮ್ಮನ್ನು ಬರಮಾಡಿದ ನಿಮ್ಮ ದೇವರುಗಳು,” ಎಂದನು.


“ನಿಮಗಾಗಿ ದೇವರುಗಳ ಎರಕ ಹೊಯ್ದ ವಿಗ್ರಹಗಳನ್ನು ಮಾಡಿಕೊಳ್ಳಬಾರದು.


ನಾವು ಹೀಗೆ ದೇವರನ್ನು ಅಸೂಯೆಗೆಬ್ಬಿಸಬಹುದೇ? ನಾವು ದೇವರಿಗಿಂತಲೂ ಬಲಿಷ್ಠರಾಗಿದ್ದೇವೆಯೋ?


ಆಗ ಅವರು ನನಗೆ, “ಮನುಷ್ಯಪುತ್ರನೇ, ನೋಡಿದೆಯಾ? ಅವರು ಇಲ್ಲಿ ಮಾಡುವ ಅಸಹ್ಯವಾದವುಗಳು ಯೆಹೂದ ಮನೆತನದವರಿಗಲ್ಲವೇ? ಏಕೆಂದರೆ ಅವರು ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ, ನನ್ನನ್ನು ಕೆಣಕಬೇಕೆಂದು ಮತ್ತೆ ಯತ್ನಿಸುತ್ತಿದ್ದಾರಲ್ಲವೇ? ನೋಡು, ಅವರ ಮೂಗಿಗೆ ಕೊಂಬೆಗಳನ್ನಿಟ್ಟುಕೊಳ್ಳುತ್ತಾರೆ.


ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿದನು. ಆಗ ದೇವರಾತ್ಮರು ದೇವದರ್ಶನದಲ್ಲಿ ಯೆರೂಸಲೇಮಿನ ಉತ್ತರದ ಕಡೆಗೆ ಎದುರಾಗಿರುವ ಒಳ ಅಂಗಳದ ಕಡೆಗೆ, ರೋಷಗೊಳಿಸುವ ವಿಗ್ರಹವು ಇದ್ದಲ್ಲಿಗೆ ನನ್ನನ್ನು ಎತ್ತಿಕೊಂಡು ಹೋದರು.


ತಮ್ಮ ಕ್ರಿಯೆಗಳಿಂದ ದೇವರನ್ನು ಅಸಂತೋಷಪಡಿಸಿದರು. ಆದ್ದರಿಂದ ವ್ಯಾಧಿಯು ಅವರಲ್ಲಿ ಹಬ್ಬಿತು.


ಎಷ್ಟೋ ಸಾರಿ ಜನರು ಮರುಭೂಮಿಯಲ್ಲಿ ದೇವರಿಗೆ ಬೇಸರಮಾಡಿದರು. ಕಾಡಿನಲ್ಲಿ ದೇವರನ್ನು ದುಃಖಪಡಿಸಿದರು.


ಆದರೆ ಜನರು ಮಹೋನ್ನತರಾದ ದೇವರನ್ನು ಪರೀಕ್ಷಿಸಿ ವಿರೋಧಿಸಿದರು; ದೇವರ ಶಾಸನಗಳನ್ನು ಅವರು ಕೈಗೊಳ್ಳಲಿಲ್ಲ.


ಇದಲ್ಲದೆ ಮನಸ್ಸೆಯು ಬೆನ್ ಹಿನ್ನೋಮ್ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬಲಿಯಾಗಿ ಅರ್ಪಿಸಿದನು. ಮೇಘ ಮಂತ್ರಗಳನ್ನೂ, ಸರ್ಪಮಂತ್ರಗಳನ್ನೂ ಮಾಟವನ್ನೂ ಮಾಡಿದನು. ಕಣಿಹೇಳುವವರನ್ನೂ, ಮಾಂತ್ರಿಕರನ್ನೂ ವಿಚಾರಿಸಿದನು. ಯೆಹೋವ ದೇವರ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿ ಅವರಿಗೆ ಕೋಪವನ್ನು ಎಬ್ಬಿಸಿದನು.


ಆದರೂ ಮನಸ್ಸೆಯು ಮಾಡಿದ ದುಷ್ಕೃತ್ಯಗಳ ನಿಮಿತ್ತ ಯೆಹೂದ್ಯರ ಮೇಲೆ ಯೆಹೋವ ದೇವರ ಕೋಪವು ಇನ್ನೂ ನೆಲೆಯಾಗಿತ್ತು.


ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ, ಬಾಳನಿಗೆ ಬಲಿಪೀಠಗಳನ್ನು ಕಟ್ಟಿಸಿ, ಇಸ್ರಾಯೇಲಿನ ಅರಸನಾದ ಅಹಾಬನು ಮಾಡಿದ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿ, ಸಮಸ್ತ ನಕ್ಷತ್ರಮಂಡಲಕ್ಕೆ ಅಡ್ಡಬಿದ್ದು ಅವುಗಳನ್ನು ಪೂಜಿಸಿದನು.


ನೆಬಾಟನ ಮಗ ಯಾರೊಬ್ಬಾಮನ ಪಾಪಗಳಲ್ಲಿ ನಡೆಯುವುದು ಅವನಿಗೆ ಅಲ್ಪವಾಗಿತ್ತು. ಅವನು ಸೀದೋನ್ಯರ ಅರಸನಾದ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡಬಿದ್ದನು.


ಆದರೆ ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಯಾರೊಬ್ಬಾಮನ ಮಾರ್ಗದಲ್ಲಿಯೂ, ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದಲ್ಲಿಯೂ ಭಾಗಿಯಾದನು.


ಆದರೆ ಯೆಹೂದದವರು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟತನ ಮಾಡಿ, ತಮ್ಮ ಪಿತೃಗಳು ಮಾಡಿದ ಸಮಸ್ತ ಪಾಪಗಳಿಗಿಂತ, ತಾವು ಹೆಚ್ಚಾಗಿ ಪಾಪಮಾಡಿ ಯೆಹೋವ ದೇವರಿಗೆ ರೋಷವನ್ನೆಬ್ಬಿಸಿದರು.


ಯೆಹೋವ ದೇವರು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲರನ್ನು ಶತ್ರುಗಳಿಗೆ ಒಪ್ಪಿಸಿಬಿಡುವರು. ಏಕೆಂದರೆ ಯಾರೊಬ್ಬಾಮನೇ ಪಾಪಮಾಡಿ, ಪಾಪವನ್ನು ಮಾಡಲು ಇಸ್ರಾಯೇಲರನ್ನು ಪ್ರೇರೇಪಿಸಿದನು,” ಎಂದನು.


ಅವರು ಹೊಸ ದೇವರುಗಳನ್ನು ಆಯ್ದುಕೊಂಡರು. ಆಗ ಯುದ್ಧವು ಬಾಗಿಲುಗಳಲ್ಲಿ ಆಯಿತು. ಇಸ್ರಾಯೇಲಿನಲ್ಲಿ ನಲವತ್ತು ಸಾವಿರ ಸೈನಿಕರಲ್ಲಿ ಗುರಾಣಿಯೂ, ಕಠಾರಿಯೂ ಇರಲಿಲ್ಲ.


ದೇವರಲ್ಲದವುಗಳಿಂದ ಅವರು ನನಗೆ ರೋಷ ಹುಟ್ಟಿಸಿದರು. ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪವನ್ನು ಎಬ್ಬಿಸಿದರು. ನಾನು ಜನಾಂಗವಲ್ಲದವರ ಮೂಲಕ ನೀವು ಅಸೂಯೆಪಡುವಂತೆ ಮಾಡುವೆನು. ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.


ನಾನು ನಿಮ್ಮನ್ನು ತಿಳಿದಂದಿನಿಂದ ನೀವು ಯೆಹೋವ ದೇವರಿಗೆ ವಿರೋಧವಾಗಿ ತಿರುಗಿಬೀಳುವವರಾಗಿದ್ದೀರಿ.


ಅವನು ಆಳುತ್ತಿರುವಾಗ, ಯಾರೊಬ್ಬಾಮನ ಮನೆಯವರನ್ನೆಲ್ಲಾ ಸಂಹರಿಸಿಬಿಟ್ಟನು. ಯಾರೊಬ್ಬಾಮನು ಪಾಪಮಾಡಿ, ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನಿಮಿತ್ತವಾಗಿಯೂ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಿದ ನಿಮಿತ್ತವಾಗಿಯೂ, ಯೆಹೋವ ದೇವರು ಶೀಲೋವಿನವನಾಗಿರುವ ತನ್ನ ಸೇವಕನಾದ ಅಹೀಯನ ಮುಖಾಂತರ ಹೇಳಿದ ಮಾತಿನ ಪ್ರಕಾರವೇ ನೆರವೇರಿತು.


ಆದರೆ ಒಮ್ರಿಯು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕೆಟ್ಟವನಾಗಿ ನಡೆದನು.


ಒಮ್ರಿಯ ಮಗ ಅಹಾಬನು ತನಗೆ ಮುಂಚೆ ಇದ್ದ ಎಲ್ಲರಿಗಿಂತ ಯೆಹೋವ ದೇವರ ಮುಂದೆ ಹೆಚ್ಚು ಕೆಟ್ಟತನ ಮಾಡಿದನು.


ಅಹಾಬನು ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿದನು. ಹೀಗೆಯೇ ಅಹಾಬನು ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪ ಉಕ್ಕುವ ಹಾಗೆ ತನಗೆ ಮುಂಚಿನ ಇಸ್ರಾಯೇಲಿನ ಅರಸುಗಳೆಲ್ಲರಿಗಿಂತ ಅಧಿಕವಾಗಿ ಕೆಟ್ಟತನ ಮಾಡಿದನು.


ಆದರೂ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಗೆ ಅವನು ಅಂಟಿಕೊಂಡು ಅವುಗಳನ್ನು ಬಿಟ್ಟು ತೊಲಗದೆ ಇದ್ದನು.


ತಮ್ಮ ಉನ್ನತ ಸ್ಥಳಗಳಿಂದ ದೇವರಿಗೆ ಬೇಸರಗೊಳಿಸಿದರು. ತಮ್ಮ ಮೂರ್ತಿಗಳಿಂದ ದೇವರಿಗೆ ದುಃಖಪಡಿಸಿದರು.


‘ಗಗನದ ಒಡತಿ,’ ಎಂದು ಇವರು ಕರೆಯುವ ದೇವತೆಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಅವರ ಮಕ್ಕಳು ಸೌದೆಯನ್ನು ಆಯ್ದು ತರುತ್ತಾರೆ. ಗಂಡಸರು ಬೆಂಕಿ ಹೊತ್ತಿಸುತ್ತಾರೆ. ಹೆಂಗಸರು ಹಿಟ್ಟನ್ನು ನಾದುತ್ತಾರೆ. ನನ್ನನ್ನು ಕೆಣಕಬೇಕೆಂದೇ ಅನ್ಯ ದೇವತೆಗಳಿಗೆ ಪಾನ ನೈವೇದ್ಯವನ್ನು ಅರ್ಪಿಸುತ್ತಾರೆ.”


ನೀವು ಸಾವಿರಾರು ತಲೆಗಳವರೆಗೆ ಪ್ರೀತಿ, ದಯೆತೋರಿಸಿ, ತಂದೆಗಳ ಅಕ್ರಮಗಳನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸುರಿಸುವವರಾಗಿದ್ದೀರಿ. ಮಹತ್ವವುಳ್ಳವರೂ, ಪರಾಕ್ರಮವುಳ್ಳ ದೇವರೂ, ಸೇನಾಧೀಶ್ವರ ಯೆಹೋವ ದೇವರೂ ಎಂಬುದು ನಿಮ್ಮ ಹೆಸರು.


“ ‘ನೀವು ವಿಗ್ರಹಗಳ ಕಡೆಗೆ ತಿರುಗಿಕೊಳ್ಳಬೇಡಿರಿ. ಇಲ್ಲವೆ ನಿಮಗೋಸ್ಕರವಾಗಿ ಎರಕದ ದೇವರುಗಳನ್ನು ಮಾಡಿಕೊಳ್ಳಬೇಡಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನೂ ಪಾಪಕ್ಕೆ ಪ್ರೇರೇಪಿಸಿ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪವನ್ನು ಪ್ರಚೋದಿಸಿದ ಕಾರಣ ಇದು ಸಂಭವಿಸಿತು.


ಅವರು ಕೋಟೆ ಪಟ್ಟಣಗಳನ್ನೂ, ರಸವತ್ತಾದ ಭೂಮಿಯನ್ನೂ ವಶಪಡಿಸಿಕೊಂಡರು. ಉತ್ತಮವಾದವುಗಳಿಂದ ತುಂಬಿದ ಮನೆಗಳನ್ನೂ, ಅಗಿದ ಬಾವಿಗಳನ್ನೂ, ದ್ರಾಕ್ಷಿತೋಟಗಳನ್ನೂ, ಓಲಿವ್ ತೋಪುಗಳನ್ನೂ, ಸಮೃದ್ಧಿಯಾದ ಹಣ್ಣಿನ ಮರಗಳನ್ನೂ ಸ್ವಾಧೀನಮಾಡಿಕೊಂಡರು. ಹೀಗೆ ಅವರು ತಿಂದು ತೃಪ್ತಿಪಟ್ಟು, ಪುಷ್ಟಿಯಾಗಿ ನಿಮ್ಮ ಮಹಾ ಉಪಕಾರದಲ್ಲಿ ಆನಂದಿಸುತ್ತಿದ್ದರು.


ಆದರೂ ಅವರು ನನ್ನ ಮಾತಿಗೆ ಕಿವಿಗೊಡದೆ, ತಮ್ಮನ್ನು ಕಠಿಣ ಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು