Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 15:14 - ಕನ್ನಡ ಸಮಕಾಲಿಕ ಅನುವಾದ

14 ಅವನು ಪೂಜಾಸ್ಥಳಗಳನ್ನು ತೆಗೆದು ಹಾಕದಿದ್ದರೂ ಆಸನ ಹೃದಯವು ತನ್ನ ಜೀವಮಾನದಲ್ಲೆಲ್ಲಾ ಯೆಹೋವ ದೇವರ ದೃಷ್ಟಿಯಲ್ಲಿ ದೋಷವಿಲ್ಲದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನು ದೇಶದಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದಿದ್ದರೂ ತನ್ನ ಜೀವಮಾನದಲ್ಲೆಲ್ಲಾ ಪ್ರಾಮಾಣಿಕವಾದ ಮನಸ್ಸಿನಿಂದ ಸತ್ಯಮಾರ್ಗದಲ್ಲಿ ಯೆಹೋವನಿಗೆ ನಡೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇವನು ನಾಡಿನಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದಿದ್ದರೂ ತನ್ನ ಜೀವಮಾನದಲ್ಲೆಲ್ಲಾ ಯಥಾರ್ಥಮನಸ್ಸಿನಿಂದ ಸರ್ವೇಶ್ವರನಿಗೆ ಪ್ರಾಮಾಣಿಕನಾಗಿ ನಡೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇವನು ದೇಶದಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದಿದ್ದರೂ ತನ್ನ ಜೀವಮಾನದಲ್ಲೆಲ್ಲಾ ಯಥಾರ್ಥಮನಸ್ಸಿನಿಂದ ಯೆಹೋವನಿಗೆ ನಡೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಸನು ಎತ್ತರವಾದ ಸ್ಥಳಗಳನ್ನು ನಾಶಪಡಿಸಲಿಲ್ಲ. ಆದರೆ ಅವನು ತನ್ನ ಜೀವಮಾನವೆಲ್ಲಾ ಯೆಹೋವನಿಗೆ ನಂಬಿಗಸ್ಥನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 15:14
14 ತಿಳಿವುಗಳ ಹೋಲಿಕೆ  

ಅವನು ತನ್ನ ತಂದೆ ಆಸನ ಮಾರ್ಗಗಳಲ್ಲಿ ನಡೆದು, ಅದನ್ನು ಬಿಟ್ಟು ತೊಲಗದೇ, ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು. ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು.


ಅಬಿಯಾಮನು, ತನ್ನ ಪಿತೃವಾದ ದಾವೀದನ ಹೃದಯದ ಪ್ರಕಾರ, ಅವನ ಹೃದಯವು ತನ್ನ ದೇವರಾದ ಯೆಹೋವ ದೇವರ ಮುಂದೆ ಪೂರ್ಣವಾಗಿರದೆ, ತನಗೆ ಮುಂಚೆ ಇದ್ದ ತನ್ನ ತಂದೆ ಮಾಡಿದ ಸಮಸ್ತ ಪಾಪಗಳಲ್ಲಿ ನಡೆದನು.


ಇಂದಿನ ಹಾಗೆಯೇ ಅವರ ಕಟ್ಟಳೆಗಳಲ್ಲಿ ನಡೆಯಲೂ, ಅವರ ಆಜ್ಞೆಗಳನ್ನು ಕೈಗೊಳ್ಳಲೂ, ನಮ್ಮ ದೇವರಾದ ಯೆಹೋವ ದೇವರಿಗೆ ನಿಮ್ಮ ಹೃದಯಗಳು ಪೂರ್ಣವಾಗಿ ಒಪ್ಪಿಸಿಕೊಟ್ಟದ್ದಾಗಿರಲಿ,” ಎಂದನು.


ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು.


ಇದಲ್ಲದೆ ಅವನು ಉನ್ನತ ಪೂಜಾಸ್ಥಳಗಳನ್ನೂ, ವಿಗ್ರಹಗಳನ್ನೂ ಯೆಹೂದದ ಸಮಸ್ತ ಪಟ್ಟಣಗಳಿಂದ ತೆಗೆದುಹಾಕಿದನು. ರಾಜ್ಯವು ಶಾಂತವಾಗಿತ್ತು.


ಅವನು ಅನ್ಯದೇವರುಗಳ ಬಲಿಪೀಠಗಳನ್ನೂ, ಉನ್ನತ ಪೂಜಾಸ್ಥಳಗಳನ್ನೂ ತೆಗೆದುಹಾಕಿ, ವಿಗ್ರಹಗಳನ್ನು ಒಡೆದುಬಿಟ್ಟು, ಅವುಗಳ ಅಶೇರ ಸ್ತಂಭಗಳನ್ನು ಕಡಿದುಹಾಕಿದನು.


ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು.


ಅವನು ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನೇ ಮಾಡಿದನು, ಆದರೆ ಪೂರ್ಣಹೃದಯದಿಂದಲ್ಲ.


ಏಕೆಂದರೆ ಯೆಹೋವ ದೇವರಿಗೆ ಪೂರ್ಣವಾಗಿ ಸಮರ್ಪಿಸಿಕೊಂಡವರ ಹೃದಯವನ್ನು ಬಲಪಡಿಸುವುದಕ್ಕೆ ಅವರ ಕಣ್ಣುಗಳು ಭೂಲೋಕದ ಎಲ್ಲಾ ಕಡೆ ಇವೆ. ಆದರೆ ಈಗ ನೀನು ಬುದ್ಧಿಹೀನನಾಗಿ ನಡೆದುಕೊಂಡಿದ್ದೀಯೆ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದನು.


ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು.


ಸೊಲೊಮೋನನು ಮುದುಕನಾದ ಕಾಲದಲ್ಲಿ ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗಿಸಿದರು. ಅವನ ಹೃದಯವು ತನ್ನ ತಂದೆ ದಾವೀದನ ಹೃದಯದ ಹಾಗೆ ತನ್ನ ದೇವರಾದ ಯೆಹೋವ ದೇವರ ಸಂಗಡ ಪರಿಪೂರ್ಣವಾಗಿ ಇರಲಿಲ್ಲ.


ಆ ಕಾಲದವರೆಗೂ ಯೆಹೋವ ದೇವರ ಹೆಸರಿಗಾಗಿ ಆಲಯ ಇರಲಿಲ್ಲ. ಆದುದರಿಂದ, ಜನರು ಎತ್ತರದ ಸ್ಥಳಗಳಲ್ಲಿ ಬಲಿ ಅರ್ಪಿಸುತ್ತಿದ್ದರು.


ಸೊಲೊಮೋನನು ಯೆಹೋವ ದೇವರನ್ನು ಪ್ರೀತಿಸಿ, ತನ್ನ ತಂದೆ ದಾವೀದನ ಕಟ್ಟಳೆಯಲ್ಲಿ ನಡೆಯುತ್ತಾ ಇದ್ದನು. ಆದರೂ ತಾನು ಎತ್ತರ ಸ್ಥಳಗಳಲ್ಲಿ ಬಲಿಯನ್ನೂ, ಧೂಪವನ್ನೂ ಅರ್ಪಿಸುತ್ತಾ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು