Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 15:19 - ಕನ್ನಡ ಸಮಕಾಲಿಕ ಅನುವಾದ

19 ಅಲ್ಲದೆ ಅವನಿಗೆ, “ನನ್ನ ತಂದೆ ಮತ್ತು ನಿನ್ನ ತಂದೆಯ ನಡುವೆ ಇದ್ದಂತೆ ನನ್ನ ಮತ್ತು ನಿನ್ನ ನಡುವೆ ಒಡಂಬಡಿಕೆ ಉಂಟು. ಇಗೋ ನಾನು ಬೆಳ್ಳಿಬಂಗಾರವನ್ನು ದಾನವಾಗಿ ನಿನಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟುಹೋಗುವಂತೆ, ನೀನು ಅವನ ಸಂಗಡ ಮಾಡಿದ ಒಡಂಬಡಿಕೆಯನ್ನು ಮುರಿಯಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆತನು ಅವನಿಗೆ “ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆಯಾದಂತೆ, ಇಗೋ ನಿನಗೆ ಬೆಳ್ಳಿ ಮತ್ತು ಬಂಗಾರವನ್ನು ಕಾಣಿಕೆಯಾಗಿ ಕಳುಹಿಸಿದ್ದೇನೆ. ಇಸ್ರಾಯೇಲರ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವಂತೆ ಅವನ ಸಂಗಡ ನೀನು ಮಾಡಿಕೊಂಡಿರುವ ಒಡಂಬಡಿಕೆಯನ್ನು ಮುರಿದುಬಿಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅಲ್ಲದೆ ಅವನಿಗೆ, “ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಂದು ಒಪ್ಪಂದವಿದೆಯಲ್ಲವೆ? ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಾಣಿಕೆಯಾಗಿ ಕಳುಹಿಸಿದ್ದೇನೆ. ಇಸ್ರಯೇಲರ ಅರಸ ಬಾಷನು ನನ್ನ ನಾಡಿನಿಂದ ಸೈನ್ಯವನ್ನು ಹಿಂದಕ್ಕೆ ತೆಗೆದುಕೊಂಡು ನನ್ನನ್ನು ಬಿಟ್ಟುಹೋಗುವಂತೆ, ಅವನ ಸಂಗಡ ನೀನು ಮಾಡಿಕೊಂಡಿರುವ ಒಪ್ಪಂದವನ್ನು ಮುರಿದುಬಿಡು,” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆಯಿರುತ್ತದಲ್ಲಾ; ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಾಣಿಕೆಯಾಗಿ ಕಳುಹಿಸಿದ್ದೇನೆ. ಇಸ್ರಾಯೇಲ್ಯರ ಅರಸನಾದ ಬಾಷನು ನನ್ನನ್ನು ಬಿಟ್ಟುಹೋಗುವಂತೆ ಅವನ ಸಂಗಡ ನೀನು ಮಾಡಿಕೊಂಡಿರುವ ಒಡಂಬಡಿಕೆಯನ್ನು ಮುರಿದುಬಿಡು ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಸನು ಈ ಸಂದೇಶವನ್ನು ಕಳುಹಿಸಿದನು: “ನನ್ನ ತಂದೆಯೂ ನಿನ್ನ ತಂದೆಯೂ ಶಾಂತಿಒಪ್ಪಂದವನ್ನು ಮಾಡಿಕೊಂಡಿದ್ದರು. ಈಗ ನಾನು ನಿನ್ನೊಂದಿಗೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಅಪೇಕ್ಷಿಸಿದ್ದೇನೆ. ನಾನು ನಿನಗೆ ಬೆಳ್ಳಿಬಂಗಾರಗಳನ್ನು ಕಾಣಿಕೆಯಾಗಿ ಕಳುಹಿಸುತ್ತಿದ್ದೇನೆ. ಇಸ್ರೇಲಿನ ರಾಜನಾದ ಬಾಷನೊಂದಿಗೆ ನಿನಗಿರುವ ಒಪ್ಪಂದವನ್ನು ಮುರಿದುಬಿಡು. ಆಗ ಬಾಷನು ನನ್ನ ದೇಶವನ್ನು ಬಿಟ್ಟುಹೋಗುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 15:19
10 ತಿಳಿವುಗಳ ಹೋಲಿಕೆ  

“ಒಳ್ಳೆಯದಾಗುವಂತೆ ಕೆಟ್ಟದ್ದನ್ನು ಮಾಡೋಣ,” ಎಂದು ನಾವು ಹೇಳುತ್ತಿರುವುದಾಗಿ, ಕೆಲವರು ನಮ್ಮ ಬಗ್ಗೆ ದೂಷಿಸಿ ಹೇಳುವ ಪ್ರಕಾರ ನಾವೇಕೆ ಹೇಳಬಾರದು? ಅಂಥವರಿಗೆ ದಂಡನೆಯ ತೀರ್ಪಾಗುವುದು ನ್ಯಾಯವೇ!


ವಿವೇಚನೆಯಿಲ್ಲದವರೂ ನಂಬಿಕೆಯಿಲ್ಲದವರೂ ಮಮತೆಯಿಲ್ಲದವರೂ ಕರುಣೆಯಿಲ್ಲದವರೂ ಆದರು.


ಸಹಾಯಕ್ಕಾಗಿ ಈಜಿಪ್ಟನ್ನು ಸೇರಿ, ಅಶ್ವಬಲವನ್ನು, ಆಶ್ರಯಿಸುವವರಿಗೆ ಕಷ್ಟ! ಏಕೆಂದರೆ ರಥಗಳು ಬಹಳವೆಂದೂ, ಅವರ ನಂಬಿಕೆಯು ರಥಗಳ ಮೇಲೆ ಏಕೆಂದರೆ ಅವರು ಅನೇಕರು, ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವುದಿಲ್ಲ. ಇಲ್ಲವೆ ಯೆಹೋವ ದೇವರಿಂದ ಸಹಾಯವನ್ನು ಬಯಸುವುದಿಲ್ಲ.


ಆಗ ಪ್ರವಾದಿ ಹನಾನೀಯ ಮಗ ಯೇಹುವು ಅವನನ್ನು ಎದುರುಗೊಂಡು, ಅರಸನಾದ ಯೆಹೋಷಾಫಾಟನಿಗೆ ಅವನು, “ದುಷ್ಟನಿಗೆ ಸಹಾಯ ಕೊಡುವವನಾಗಿ ಯೆಹೋವ ದೇವರನ್ನು ದ್ವೇಷಮಾಡುವವರನ್ನು ಪ್ರೀತಿಮಾಡಬಹುದೋ? ಆದಕಾರಣ ನಿನ್ನ ಮೇಲೆ ಯೆಹೋವ ದೇವರ ಸನ್ನಿಧಿಯಿಂದ ಕೋಪಾಗ್ನಿ ಇದೆ.


ಅದೇ ಕಾಲದಲ್ಲಿ ದರ್ಶಿಯಾದ ಹನಾನೀಯು ಯೆಹೂದದ ಅರಸನಾದ ಆಸನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ದೇವರಾದ ಯೆಹೋವ ದೇವರ ಮೇಲೆ ಆತುಕೊಳ್ಳದೆ, ಅರಾಮಿನ ಅರಸನ ಮೇಲೆ ಆತುಕೊಂಡದ್ದರಿಂದ, ಅರಾಮಿನ ಅರಸನ ಸೈನ್ಯವು ನಿಮ್ಮ ಕೈಯಿಂದ ತಪ್ಪಿಸಿಕೊಂಡಿತು.


“ನನ್ನ ತಂದೆ ಮತ್ತು ನಿನ್ನ ತಂದೆಯ ನಡುವೆ ಇದ್ದಂತೆ ನನ್ನ ಮತ್ತು ನಿನ್ನ ನಡುವೆ ಒಡಂಬಡಿಕೆ ಉಂಟು. ಇಗೋ ನಾನು ಬೆಳ್ಳಿಬಂಗಾರವನ್ನು ನಿನಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟುಹೋಗುವಂತೆ, ನೀನು ಅವನ ಸಂಗಡ ಮಾಡಿದ ಒಡಂಬಡಿಕೆಯನ್ನು ಮುರಿಯಬೇಕು,” ಎಂದು ಹೇಳಿದನು.


ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆಕಳುಹಿಸಿದನು. ಗಿಬ್ಯೋನ್ಯರು ಇಸ್ರಾಯೇಲರಿಗೆ ಸೇರಿದವರಲ್ಲ. ಅಮೋರಿಯರಲ್ಲಿ ಉಳಿದ ಜನರಾಗಿದ್ದರು. ಅವರನ್ನು ಕೊಲ್ಲುವುದಿಲ್ಲವೆಂದು ಇಸ್ರಾಯೇಲರು ಆಣೆ ಇಟ್ಟಿದ್ದರು. ಆದರೆ ಸೌಲನು ಇಸ್ರಾಯೇಲರಿಗಾಗಿಯೂ, ಯೆಹೂದದವರಿಗಾಗಿಯೂ ತನಗಿದ್ದ ಆಸಕ್ತಿಯಿಂದ ಅವರನ್ನು ಕೊಂದುಹಾಕಲು ಪ್ರಯತ್ನಮಾಡಿದ್ದನು.


ಇದಲ್ಲದೆ ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷನಿಗೂ, ಅವರ ಜೀವಾಂತ್ಯದವರೆಗೂ ಯುದ್ಧ ನಡೆಯುತ್ತಿತ್ತು.


ಆದ್ದರಿಂದ ಹಿಜ್ಕೀಯನು ಯೆಹೋವ ದೇವರ ಆಲಯದಲ್ಲಿಯೂ, ಅರಸನ ಮನೆಯ ಬೊಕ್ಕಸಗಳಲ್ಲಿಯೂ, ಸಿಕ್ಕಿದ ಸಮಸ್ತ ಬೆಳ್ಳಿಯನ್ನೂ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು