Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 15:27 - ಕನ್ನಡ ಸಮಕಾಲಿಕ ಅನುವಾದ

27 ನಾದಾಬನೂ, ಸಮಸ್ತ ಇಸ್ರಾಯೇಲರೂ ಫಿಲಿಷ್ಟಿಯರ ಪಟ್ಟಣವಾದ ಗಿಬ್ಬೆತೋನಿಗೆ ಮುತ್ತಿಗೆ ಹಾಕುತ್ತಾ ಇದ್ದರು. ಆದುದರಿಂದ ಇಸ್ಸಾಕಾರನ ಗೋತ್ರದ ಅಹೀಯನ ಮಗ ಬಾಷನು ನಾದಾಬನಿಗೆ ವಿರೋಧವಾಗಿ ಒಳಸಂಚುಮಾಡಿ, ನಾದಾಬನನ್ನು ಕೊಂದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವನು ಇಸ್ರಾಯೇಲರೊಡನೆ ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ಇಸ್ಸಾಕಾರನ ಕುಲದವನೂ, ಅಹೀಯನ ಮಗನೂ ಆದ ಬಾಷನೆಂಬುವವನು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಇವನು ಇಸ್ರಯೇಲರೊಡನೆ ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ಇಸ್ಸಾಕಾರನ ಕುಲದವನೂ ಅಹೀಯನ ಮಗನೂ ಆದ ಬಾಷನೆಂಬವನು ಇವನಿಗೆ ವಿರುದ್ಧ ಒಳಸಂಚು ಮಾಡಿ ಇವನನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇವನು ಇಸ್ರಾಯೇಲ್ಯರೊಡನೆ ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ಇಸ್ಸಾಕಾರನ ಕುಲದವನೂ ಅಹೀಯನ ಮಗನೂ ಆದ ಬಾಷನೆಂಬವನು ಇವನಿಗೆ ವಿರೋಧವಾಗಿ ಒಳಸಂಚು ಮಾಡಿ ಇವನನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಬಾಷನು ಅಹೀಯನ ಮಗ. ಅವನು ಇಸ್ಸಾಕಾರನ ಕುಲದವನಾಗಿದ್ದನು. ರಾಜನಾದ ನಾದಾಬನನ್ನು ಕೊಲ್ಲಲು ಬಾಷನು ಸಂಚು ಮಾಡಿದನು. ನಾದಾಬನು ಇಸ್ರೇಲರೊಡನೆ ಗಿಬ್ಬೆತೋನ್ ಪಟ್ಟಣದ ವಿರುದ್ಧ ಹೋರಾಟ ಮಾಡುತ್ತಿದ್ದ ಸಂದರ್ಭವಿದು. ಇದು ಫಿಲಿಷ್ಟಿಯ ಪಟ್ಟಣ. ಆ ಸ್ಥಳದಲ್ಲಿ ಬಾಷನು ನಾದಾಬನನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 15:27
15 ತಿಳಿವುಗಳ ಹೋಲಿಕೆ  

“ಇದಲ್ಲದೆ ಯೆಹೋವ ದೇವರು ಇಸ್ರಾಯೇಲನ್ನು ಆಳುವುದಕ್ಕೆ ಅದೇ ದಿನದಲ್ಲಿ ಯಾರೊಬ್ಬಾಮನ ಮನೆಯನ್ನು ಕಡಿದುಬಿಡುವ ಒಬ್ಬ ಅರಸನನ್ನು ತನಗೋಸ್ಕರ ಎಬ್ಬಿಸುವರು.


ಇದಲ್ಲದೆ ದಾನ್ಯನ ಗೋತ್ರದಲ್ಲಿ, ಎಲ್ತೆಕೇಯನ್ನೂ ಗಿಬ್ಬೆತೋನನ್ನೂ


ಎಲ್ತೆಕೇ, ಗಿಬ್ಬೆತೋನ್, ಬಾಲಾತ್,


ಯೆಹೂದದ ಅರಸನಾದ ಆಸನ ಇಪ್ಪತ್ತೇಳನೆಯ ವರ್ಷದಲ್ಲಿ ಜಿಮ್ರಿಯು ತಿರ್ಚದಲ್ಲಿ ಇಸ್ರಾಯೇಲರ ಅರಸನಾಗಿ ಏಳು ದಿನ ಆಳಿದನು. ಆಗ ಇಸ್ರಾಯೇಲರು ಫಿಲಿಷ್ಟಿಯರಿಗೆ ಸಂಬಂಧಪಟ್ಟ ಗಿಬ್ಬೆತೋನಿನ ಬಳಿಯಲ್ಲಿ ದಂಡಿಳಿಸಿದ್ದರು.


ಯೋವಾಷನ ಸೇವಕರು ಎದ್ದು ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಸಿಲ್ಲಾ ಊರಿಗೆ ಇಳಿದು ಹೋಗುವ ಮಾರ್ಗವಾದ ಬೇತ್ ಮಿಲ್ಲೋ ಎಂಬ ಸ್ಥಳದಲ್ಲಿ ಯೋವಾಷನನ್ನು ಕೊಂದುಹಾಕಿದರು.


ಆಗ ಒಮ್ರಿಯೂ ಅವನ ಸಂಗಡ ಇಸ್ರಾಯೇಲರೆಲ್ಲರೂ ಗಿಬ್ಬೆತೋನನ್ನು ಬಿಟ್ಟು ಹೋಗಿ ತಿರ್ಚವನ್ನು ಮುತ್ತಿಗೆ ಹಾಕಿದರು.


ಆದರೆ ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕನಾದ ಅರ್ಚನ ಮನೆಯಲ್ಲಿ ಅವನು ಕುಡಿದು ಮತ್ತನಾಗಿರುವಾಗ, ಅರ್ಧ ರಥಗಳಿಗೆ ಅಧಿಪತಿಯಾಗಿರುವ ಅವನ ಸೇವಕನಾದ ಜಿಮ್ರಿಯನು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದನು.


ಯೆಹೂದದ ಅರಸನಾದ ಆಸನ ಮೂರನೆಯ ವರುಷದಲ್ಲಿ ಬಾಷನು ನಾದಾಬನನ್ನು ಕೊಂದುಹಾಕಿ, ಅವನಿಗೆ ಬದಲಾಗಿ ಅರಸನಾದನು.


ಬಾಷನು ಯಾರೊಬ್ಬಾಮನ ಮನೆಯವರ ಹಾಗಿದ್ದು, ಅವರನ್ನು ಸಂಹರಿಸಿದ್ದರಿಂದ ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಿ, ಯೆಹೋವ ದೇವರ ಸಮ್ಮುಖದಲ್ಲಿ ತಾನು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ಅವನಿಗೆ ವಿರೋಧವಾಗಿಯೂ, ಅವನ ಮನೆಗೆ ವಿರೋಧವಾಗಿಯೂ ಹನಾನೀಯ ಮಗನಾಗಿರುವ ಪ್ರವಾದಿ ಯೇಹುವಿನ ಮುಖಾಂತರ ಯೆಹೋವ ದೇವರ ವಾಕ್ಯ ಬಂತು.


ಜಿಮ್ರಿಯು ಒಳಗೆ ಹೋಗಿ ಯೆಹೂದದ ಅರಸನಾದ ಆಸನ ಇಪ್ಪತ್ತೇಳನೆಯ ವರ್ಷದಲ್ಲಿ, ಅವನನ್ನು ಕೆಡವಿ ಕೊಂದುಹಾಕಿ, ಅವನಿಗೆ ಬದಲಾಗಿ ಅರಸನಾದನು.


ಜಿಮ್ರಿಯು ಒಳಸಂಚುಮಾಡಿ, ಅರಸನನ್ನು ಕೊಂದು ಹಾಕಿದ್ದಾನೆಂದು ಅಲ್ಲಿ ಇಳಿದಿರುವ ದಂಡಿನವರು ಕೇಳಿದ್ದರಿಂದ, ಇಸ್ರಾಯೇಲರೆಲ್ಲರು ಅದೇ ದಿವಸದಲ್ಲಿ ದಂಡಿನ ಅಧಿಪತಿಯಾದ ಒಮ್ರಿಯನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ನೇಮಿಸಿದರು.


ಹೀಗೆಯೇ ನಿಂಷಿಯ ಮಗ ಯೆಹೋಷಾಫಾಟನ ಮಗ ಯೇಹುವು ಯೋರಾಮನಿಗೆ ವಿರೋಧವಾಗಿ ಒಳಸಂಚು ಮಾಡಿದನು. ಅರಾಮ್ಯರ ಅರಸನಾದ ಹಜಾಯೇಲನ ನಿಮಿತ್ತ ಯೋರಾಮನೂ, ಸಮಸ್ತ ಇಸ್ರಾಯೇಲರೂ ಗಿಲ್ಯಾದಿನ ರಾಮೋತಿನಲ್ಲಿ ಕಾಯುತ್ತಿದ್ದರು.


ಅವನ ಸೇವಕರಾದ ಶಿಮೆಯಾತನ ಮಗ ಯೋಜಾಬಾದ್ ಮತ್ತು ಶೋಮೇರನ ಮಗ ಯೆಹೋಜಾಬಾದ್ ಎಂಬವರು ಅರಸನನ್ನು ಕೊಂದರು. ಯೋವಾಷನ ಜನರು ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಸಮಾಧಿಮಾಡಿದರು. ಅವನ ಮಗ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.


ಯೋವಾಷನು ತೀವ್ರ ಗಾಯಗೊಂಡು ಬಿದ್ದಿರುವಾಗ, ಅರಾಮೀಯರು ಅವನನ್ನು ಬಿಟ್ಟುಹೋದರು. ಅವರು ಹೋದ ತರುವಾಯ ಯಾಜಕನಾದ ಯೆಹೋಯಾದಾವನ ಮಕ್ಕಳ ರಕ್ತಾಪರಾಧದ ನಿಮಿತ್ತವಾಗಿ ಯೋವಾಷನ ಸ್ವಂತ ಸೇವಕರೇ ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಅವನ ಮಂಚದ ಮೇಲೆಯೇ ಅವನನ್ನು ಕೊಂದುಹಾಕಿದರು. ಅವರು ಯೋವಾಷನನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಆದರೆ ಅರಸರ ಸಮಾಧಿಯಲ್ಲಿ ಅವನನ್ನು ಸಮಾಧಿಮಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು