Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 15:4 - ಕನ್ನಡ ಸಮಕಾಲಿಕ ಅನುವಾದ

4 ಅವನ ತರುವಾಯ ಅವನ ಮಗನನ್ನು ನೇಮಿಸುವುದಕ್ಕೂ, ಯೆರೂಸಲೇಮನ್ನು ಸ್ಥಿರಪಡಿಸುವುದಕ್ಕೂ, ತನ್ನ ದೇವರಾದ ಯೆಹೋವ ದೇವರು ದಾವೀದನ ನಿಮಿತ್ತ ಯೆರೂಸಲೇಮಿನಲ್ಲಿ ಅವನಿಗೆ ದೀಪವನ್ನು ಉಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೂ ಹಿತ್ತಿಯನಾದ ಊರೀಯನ ವಿಷಯದ ಹೊರತಾಗಿ ಬೇರೆ ಯಾವ ವಿಷಯದಲ್ಲಿಯೂ ತನ್ನ ಆಜ್ಞೆಗಳನ್ನು ಮೀರದೆ ಜೀವದಿಂದಿರುವವರೆಗೂ ತನ್ನ ಚಿತ್ತಕ್ಕನುಸಾರವಾಗಿ ನಡೆದ ದಾವೀದನ ನಿಮಿತ್ತವಾಗಿ ಯೆಹೋವನು ಯೆರೂಸಲೇಮಿನಲ್ಲಿರುವ ಅವನ ದೀಪವನ್ನು ಆರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹಿತ್ತಿಯನಾದ ಊರೀಯನ ವಿಷಯವೊಂದನ್ನು ಬಿಟ್ಟರೆ, ಬೇರೆ ಯಾವ ವಿಷಯದಲ್ಲೂ ತಮ್ಮ ಆಜ್ಞೆಯನ್ನು ಮೀರದೆ, ಜೀವದಿಂದಿರುವವರೆಗೂ ತಮ್ಮ ಚಿತ್ತಕ್ಕನುಸಾರ ನಡೆದ ದಾವೀದನ ನಿಮಿತ್ತ, ಸರ್ವೇಶ್ವರಸ್ವಾಮಿ ಜೆರುಸಲೇಮಿನಲ್ಲಿನ ಇವನ ದೀಪವನ್ನು ಆರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆದರೂ ಹಿತ್ತಿಯನಾದ ಊರೀಯನ ವಿಷಯ ಹೊರತಾಗಿ ಬೇರೆ ಯಾವ ವಿಷಯದಲ್ಲಿಯೂ ತನ್ನ ಆಜ್ಞೆಯನ್ನು ಮೀರದೆ ಜೀವದಿಂದಿರುವವರೆಗೂ ತನ್ನ ಚಿತ್ತಕ್ಕನುಸಾರನಾಗಿ ನಡೆದ ದಾವೀದನ ನಿವಿುತ್ತವಾಗಿ ಯೆಹೋವನು ಯೆರೂಸಲೇವಿುನಲ್ಲಿನ ಇವನ ದೀಪವನ್ನು ಆರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ದಾವೀದನನ್ನು ಪ್ರೀತಿಸಿದ್ದರಿಂದ ಅವನಿಗೋಸ್ಕರ ಅಬೀಯಾಮನಿಗೆ ಜೆರುಸಲೇಮಿನಲ್ಲಿ ರಾಜ್ಯವನ್ನು ದಯಪಾಲಿಸಿದನು; ಅವನಿಗೆ ಮಗನನ್ನು ಅನುಗ್ರಹಿಸಿದನು; ಜೆರುಸಲೇಮ್ ಸುರಕ್ಷಿತವಾಗಿರುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 15:4
26 ತಿಳಿವುಗಳ ಹೋಲಿಕೆ  

ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಎಂದಿಗೂ ಬೆಳಕು ಆರಿಹೋಗದ ಹಾಗೆ, ಅವನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು.


ಆದರೆ ಯೆಹೋವ ದೇವರು ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂದು ಪ್ರಮಾಣ ಮಾಡಿದ ಕಾರಣ, ದೇವರು ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.


“ಈ ಪಟ್ಟಣವನ್ನು ನನಗೋಸ್ಕರವೂ ನನ್ನ ಸೇವಕನಾದ ದಾವೀದನಿಗೋಸ್ಕರವೂ ಕಾಪಾಡಿ ಅದನ್ನು ರಕ್ಷಿಸುವೆನು.”


“ಇಲ್ಲಿ ದಾವೀದನಿಗೆ ಬಲದಾಯಕ ಅರಸನನ್ನು ಚಿಗುರುವಂತೆ ಮಾಡುವೆನು; ನನ್ನ ಅಭಿಷಿಕ್ತನಿಗೆ ದೀಪವನ್ನು ಸಿದ್ಧಮಾಡಿದ್ದೇನೆ.


ಯೆಹೋವ ದೇವರೇ, ನೀವು ನನ್ನ ದೀಪವನ್ನು ಬೆಳಗಿಸಿರಿ. ನನ್ನ ದೇವರು ನನ್ನ ಕತ್ತಲೆಯನ್ನು ಬೆಳಕನ್ನಾಗಿ ಮಾರ್ಪಡಿಸುವರು.


ಆದರೆ, ನನ್ನ ಸೇವಕ ದಾವೀದನಿಗೋಸ್ಕರವೂ, ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆಯ್ದುಕೊಂಡ ಪಟ್ಟಣವಾದ ಯೆರೂಸಲೇಮಿಗೋಸ್ಕರವೂ ಅವನಿಗೆ ಒಂದು ಗೋತ್ರ ಇರುವುದು.


ಆದರೆ ನಿನ್ನ ತಂದೆ ದಾವೀದನಿಗೋಸ್ಕರ ನಿನ್ನ ಕಾಲದಲ್ಲಿ ನಾನು ಇದನ್ನು ಮಾಡದೆ ನಿನ್ನ ಮಗನ ಕೈಯೊಳಗಿಂದ ಅದನ್ನು ಕಸಿದುಕೊಳ್ಳುವೆನು.


“ನಾನು ನಿನ್ನನ್ನು ದೊಡ್ಡ ಜನಾಂಗದವನನ್ನಾಗಿ ಮಾಡಿ, ನಿನ್ನನ್ನು ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಸಿದ್ಧ ಮಾಡುವೆನು. ನೀನು ಆಶೀರ್ವಾದವಾಗಿ ಇರುವಿ.


“ಯೇಸುವೆಂಬ ನಾನು ನಮ್ಮ ಸಭೆಗಳಲ್ಲಿ ಈ ಸಂಗತಿಗಳ ವಿಷಯವಾಗಿ ನಿಮಗೆ ಸಾಕ್ಷಿ ನೀಡುವಂತೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶದ ಕುಡಿ, ಅವನ ಸಂತತಿಯೂ ಉದಯದ ಪ್ರಕಾಶಮಾನ ತಾರೆಯೂ ಆಗಿದ್ದೇನೆ!” ಎಂದರು.


ಸುವಾರ್ತೆಯ ಪ್ರಕಾರ ಇಸ್ರಾಯೇಲರು ಈಗ ನಿಮ್ಮ ನಿಮಿತ್ತ ಶತ್ರುಗಳು. ಆದರೆ ದೇವರ ಆಯ್ಕೆಯ ದೃಷ್ಟಿಯಲ್ಲಿ ನೋಡುವಾಗ ಮೂಲಪಿತೃಗಳ ನಿಮಿತ್ತದಿಂದ ಅವರು ಪ್ರೀತಿಹೊಂದಿದವರು.


ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವರು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ. ಅವರು ಜೀವದ ಬೆಳಕನ್ನು ಹೊಂದಿರುವರು,” ಎಂದು ಹೇಳಿದರು.


ಅದು ಯೆಹೂದ್ಯರಲ್ಲದವರಿಗೆ ಪ್ರಕಟಣೆಯ ಬೆಳಕೂ, ನಿಮ್ಮ ಪ್ರಜೆಯಾದ ಇಸ್ರಾಯೇಲರ ಮಹಿಮೆಯೂ ಆಗಿದೆ.”


ನಾನು ಸಹ ನಿನಗೆ ಹೇಳುವುದೇನಂದರೆ, ನೀನು ಪೇತ್ರನು. ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ದ್ವಾರಗಳು ಅದನ್ನು ಜಯಿಸಲಾರವು.


“ಭೂಮಿಯನ್ನು ಸೃಷ್ಟಿಮಾಡುವ ಯೆಹೋವ ದೇವರೂ ಅದನ್ನು ಸ್ಥಾಪಿಸುವುದಕ್ಕಾಗಿ ಅದನ್ನು ರೂಪಿಸಿದ ಯೆಹೋವನೆಂಬ ಹೆಸರುಳ್ಳವನೂ ಹೇಳುವುದೇನೆಂದರೆ,


ಯೆರೂಸಲೇಮನ್ನು ಸ್ಥಾಪಿಸಿ, ಲೋಕಪ್ರಸಿದ್ಧಿಗೆ ತರುವ ತನಕ ಆತನಿಗೂ ವಿಶ್ರಾಂತಿ ಕೊಡಬೇಡಿರಿ.


ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡಬೇಕು? “ಯೆಹೋವ ದೇವರು ಚೀಯೋನನ್ನು ಸ್ಥಾಪಿಸಿದ್ದಾರೆ. ಬಾಧೆಪಟ್ಟ ಅವರ ಜನರು ಅದನ್ನು ಆಶ್ರಯಿಸಿಕೊಳ್ಳುವರು.”


ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವುದು, ದಾವೀದನ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು, ಸೇನಾಧೀಶ್ವರ ಯೆಹೋವ ದೇವರ ಅನುಗ್ರಹವು ಇದನ್ನು ನೆರವೇರಿಸುವುದು.


ಚೀಯೋನಿನ ವಿಷಯವಾಗಿ, “ಸಕಲ ಜನಾಂಗದವರೂ ಚೀಯೋನಿನಲ್ಲಿ ಹುಟ್ಟಿದರು. ಮಹೋನ್ನತರೇ ಅದನ್ನು ಸ್ಥಿರಪಡಿಸುವರು,” ಎಂದು ಹೇಳುವರು.


ಆದರೆ ಚೆರೂಯಳ ಮಗ ಅಬೀಷೈಯನು ಅವನಿಗೆ ಸಹಾಯವಾಗಿ ಬಂದು, ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿದನು. ಆಗ ದಾವೀದನ ಜನರು ಅವನಿಗೆ, “ಇಸ್ರಾಯೇಲಿನ ಬೆಳಕಾಗಿರುವ ನೀನು ಆರಿಹೋಗದಂತೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಬರಬೇಡ,” ಎಂದು ಆಣೆ ಇಟ್ಟರು.


ದೇವರು ನಿಮ್ಮ ಪಿತೃಗಳನ್ನು ಪ್ರೀತಿಮಾಡಿದ್ದರಿಂದ, ಅವರ ತರುವಾಯ ಅವರ ಸಂತತಿಯನ್ನು ಆಯ್ದುಕೊಂಡು, ನಿಮ್ಮನ್ನು ತಮ್ಮ ದೃಷ್ಟಿಯಲ್ಲಿ ತಮ್ಮ ದೊಡ್ಡ ಬಲದಿಂದ ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದರು.


ಏಕೆಂದರೆ ಅಬ್ರಹಾಮನು ನನ್ನ ಮಾತಿಗೆ ನನ್ನ ವಿಧಿಯನ್ನೂ, ನನ್ನ ಆಜ್ಞೆಗಳನ್ನೂ, ನನ್ನ ಕಟ್ಟಳೆಗಳನ್ನೂ ನನ್ನ ನೇಮಗಳನ್ನೂ, ಕೈಗೊಂಡು ನಡೆದನು,” ಎಂದರು.


ದೇವರು ಆ ಬಯಲುಸೀಮೆಯ ಪಟ್ಟಣಗಳನ್ನು ನಾಶಮಾಡಿದಾಗ, ಲೋಟನು ವಾಸವಾಗಿದ್ದ ಪಟ್ಟಣಗಳನ್ನು ನಾಶಮಾಡಿದರು. ಆದರೆ ಅಬ್ರಹಾಮನನ್ನು ಜ್ಞಾಪಕಮಾಡಿಕೊಂಡು, ಲೋಟನನ್ನು ಹೊರಗೆ ಕಳುಹಿಸಿ ಪಾರು ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು