Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:31 - ಕನ್ನಡ ಸಮಕಾಲಿಕ ಅನುವಾದ

31 ನೆಬಾಟನ ಮಗ ಯಾರೊಬ್ಬಾಮನ ಪಾಪಗಳಲ್ಲಿ ನಡೆಯುವುದು ಅವನಿಗೆ ಅಲ್ಪವಾಗಿತ್ತು. ಅವನು ಸೀದೋನ್ಯರ ಅರಸನಾದ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವುದು ಅಲ್ಪ ಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆಮಾಡಿಕೊಂಡು ಬಾಳ್ ದೇವರನ್ನು ಪೂಜಿಸತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಇವನು ನೆಬಾಟನ ಮಗ ಯಾರೊಬ್ಬಾಮನ ದುರ್ಮಾರ್ಗದಲ್ಲಿ ನಡೆದದ್ದು ಸಾಲದೆಂದು, ಸಿದೋನ್ಯರ ಅರಸ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆ ಮಾಡಿಕೊಂಡು ಬಾಳ್ ದೇವರನ್ನು ಪೂಜಿಸತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಇವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವದು ಅಲ್ಪಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆ ಮಾಡಿಕೊಂಡು ಬಾಳ್‍ದೇವರನ್ನು ಪೂಜಿಸತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದಂತಹ ಪಾಪಗಳನ್ನೇ ಅಹಾಬನು ಮಾಡಿದರೂ ಅವು ಅವನಿಗೆ ಸಾಕಾಗಲಿಲ್ಲ. ಆದ್ದರಿಂದ ಅಹಾಬನು ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾದನು. ಎತ್ಬಾಳನು ಚೀದೋನ್ಯರ ರಾಜನಾಗಿದ್ದನು. ನಂತರ ಅಹಾಬನು ಬಾಳ್ ದೇವರನ್ನು ಪೂಜಿಸಿ ಅದರ ಸೇವೆ ಮಾಡಲಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:31
35 ತಿಳಿವುಗಳ ಹೋಲಿಕೆ  

ಇದಲ್ಲದೆ ಅವರು ತಮ್ಮ ದೇವರಾದ ಯೆಹೋವ ದೇವರ ಸಮಸ್ತ ಆಜ್ಞೆಗಳನ್ನು ಬಿಟ್ಟುಬಿಟ್ಟು, ತಮಗೆ ತಾವೇ ಎರಡು ಎರಕದ ಕರುಗಳ ಮೂರ್ತಿಗಳನ್ನು ಮಾಡಿಕೊಂಡರು. ಅವರು ಅಶೇರ ಸ್ತಂಭವನ್ನು ನಿಲ್ಲಿಸಿ, ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು, ಬಾಳನನ್ನು ಸೇವಿಸಿ ತಮ್ಮ ಪುತ್ರಪುತ್ರಿಯರನ್ನೂ ಬೆಂಕಿಯಲ್ಲಿ ಬಲಿಕೊಟ್ಟರು.


ಯೇಹುವು ಜನರೆಲ್ಲರನ್ನು ಕೂಡಿಸಿ ಅವರಿಗೆ, “ಅಹಾಬನು ಸ್ವಲ್ಪವಾಗಿ ಬಾಳನನ್ನು ಸೇವಿಸಿದನು. ಆದರೆ ಯೇಹುವು ಅವನನ್ನು ಬಹಳವಾಗಿ ಸೇವಿಸುವನು.


ಆಗ ಆ ಐದು ಮಂದಿಯು ಹೊರಟು ಲಯಿಷಿಗೆ ಹೋಗಿ, ಅದರಲ್ಲಿ ವಾಸಿಸಿರುವ ಆ ಜನರನ್ನು ನೋಡುವಾಗ, ಅವರು ನಿರ್ಭೀತರಾಗಿಯೂ, ಸೀದೋನ್ಯರ ಹಾಗೆ ನೆಮ್ಮದಿಯಾಗಿಯೂ, ಸುರಕ್ಷಿತವಾಗಿಯೂ ಇದ್ದರು. ಅವರಿಗೆ ಯಾವ ಕೊರತೆಯು ಇರಲಿಲ್ಲ. ಅವರು ಸಮೃದ್ಧಿಯಲ್ಲಿದ್ದರು. ಸೀದೋನ್ಯರಿಂದ ದೂರವಾಗಿ ಜೀವಿಸುತ್ತಿದ್ದರು. ಬೇರೆ ಯಾರೊಂದಿಗೂ ಸಂಬಂಧವನ್ನು ಬೆಳೆಸಿರಲಿಲ್ಲ.


ಇಸ್ರಾಯೇಲರು ಯೆಹೋವ ದೇವರ ಮುಂದೆ ಕೆಟ್ಟತನ ಮಾಡಿ, ಬಾಳನನ್ನು ಸೇವಿಸಿ,


ಆದರೆ ನಿನ್ನ ಮೇಲೆ ಒಂದು ತಪ್ಪು ಹೊರಿಸಬೇಕಾಗುತ್ತದೆ. ಅದೇನೆಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ವ್ಯಭಿಚಾರ ಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವುದು.


ಒಳ್ಳೆಯ ಮೇವನ್ನು ಚೆನ್ನಾಗಿ ಮೇದು ಮಿಕ್ಕ ಮೇವನ್ನು ತುಳಿದು ಕಸಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದು ಮಿಕ್ಕಿದ್ದನ್ನು ಕಾಲಿನಿಂದ ಕಲಕಿ ಹೊಲಸು ಮಾಡಿದ್ದು ಸಣ್ಣ ಕೆಲಸವೋ?


ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ. ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ. ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ.


“ ‘ಇದಾದ ಮೇಲೆ ನನಗೆ ಹುಟ್ಟಿದ ನನ್ನ ಪುತ್ರರನ್ನೂ, ಪುತ್ರಿಯರನ್ನೂ ವಿಗ್ರಹಗಳ ಆಹಾರಕ್ಕಾಗಿ ಯಜ್ಞವಾಗಿ ಅರ್ಪಿಸಿದೆ. ಈ ನಿನ್ನ ವ್ಯಭಿಚಾರ ಸಾಕಾಗಲಿಲ್ಲವೋ?


ಆಗ ಅವರು ನನಗೆ, “ಮನುಷ್ಯಪುತ್ರನೇ, ನೋಡಿದೆಯಾ? ಅವರು ಇಲ್ಲಿ ಮಾಡುವ ಅಸಹ್ಯವಾದವುಗಳು ಯೆಹೂದ ಮನೆತನದವರಿಗಲ್ಲವೇ? ಏಕೆಂದರೆ ಅವರು ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ, ನನ್ನನ್ನು ಕೆಣಕಬೇಕೆಂದು ಮತ್ತೆ ಯತ್ನಿಸುತ್ತಿದ್ದಾರಲ್ಲವೇ? ನೋಡು, ಅವರ ಮೂಗಿಗೆ ಕೊಂಬೆಗಳನ್ನಿಟ್ಟುಕೊಳ್ಳುತ್ತಾರೆ.


ಅದಕ್ಕೆ ಯೆಶಾಯನು, “ದಾವೀದನ ವಂಶದವರೇ! ಈಗ ಕೇಳಿರಿ, ಮನುಷ್ಯರ ತಾಳ್ಮೆಯನ್ನು ಪರೀಕ್ಷಿಸುವುದು ಸಾಕಾಗುವುದಿಲ್ಲವೇ? ನೀವು ನನ್ನ ದೇವರ ತಾಳ್ಮೆಯನ್ನು ಪರೀಕ್ಷಿಸುವಿರಾ?


ಆದ್ದರಿಂದ ನೀನು ಕರ್ಮೆಲು ಬೆಟ್ಟದ ಬಳಿಯಲ್ಲಿ ಸಮಸ್ತ ಇಸ್ರಾಯೇಲನ್ನೂ, ಬಾಳನ ನಾನೂರ ಐವತ್ತು ಮಂದಿ ಪ್ರವಾದಿಗಳನ್ನೂ, ಈಜೆಬೆಲಳ ಮೇಜಿನ ಹತ್ತಿರ ಭೋಜನಮಾಡುವ ಅಶೇರನ ನಾನೂರು ಮಂದಿ ಪ್ರವಾದಿಗಳನ್ನೂ ನನ್ನ ಬಳಿಗೆ ಕೂಡಿಸು,” ಎಂದನು.


ಈಜೆಬೆಲಳು ಯೆಹೋವ ದೇವರ ಪ್ರವಾದಿಗಳನ್ನು ಕೊಲ್ಲುತ್ತಿದ್ದಾಗ, ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು, ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು, ಅವರಿಗೆ ಆಹಾರವನ್ನೂ, ನೀರನ್ನೂ ಕೊಟ್ಟು, ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.


ಸೀದೋನ್ಯ, ಅಮಾಲೇಕ್ಯ, ಮಾವೋನ್ಯ ಈ ಜನಾಂಗಗಳು ನಿಮ್ಮನ್ನು ಪೀಡಿಸಿದಾಗ ನೀವು ನನಗೆ ಮೊರೆಯಿಟ್ಟಿರಿ; ನಾನು ಅವುಗಳಿಂದ ನಿಮ್ಮನ್ನು ತಪ್ಪಿಸಿಬಿಡಲಿಲ್ಲವೋ?


ಇಸ್ರಾಯೇಲರು ಪುನಃ ಯೆಹೋವ ದೇವರ ಮುಂದೆ ಕೆಟ್ಟತನವನ್ನು ಮಾಡಿ, ಬಾಳನನ್ನೂ, ಅಷ್ಟೋರೆತನ್ನೂ, ಅರಾಮ್ ದೇಶದ ದೇವರುಗಳನ್ನೂ, ಸೀದೋನಿನ ದೇವರುಗಳನ್ನೂ, ಮೋವಾಬಿನ ದೇವರುಗಳನ್ನೂ, ಅಮ್ಮೋನಿಯರ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸಿದರು.


ಇಸ್ರಾಯೇಲರು ಯೆಹೋವ ದೇವರ ಮುಂದೆ ಕೆಟ್ಟದ್ದನ್ನು ಮಾಡಿ, ತಮ್ಮ ದೇವರಾದ ಯೆಹೋವ ದೇವರನ್ನು ಮರೆತು, ಬಾಳನನ್ನೂ ಅಶೇರನನ್ನೂ ಸೇವಿಸಿದರು.


ಯೆಹೋವ ದೇವರ ಗುಡಾರದ ಸೇವೆಯನ್ನು ಮಾಡುವುದಕ್ಕೂ, ಸಮೂಹದ ಮುಂದೆ ಇರುವ ಅವರ ಸೇವೆಯಲ್ಲಿ ನಿಲ್ಲುವುದಕ್ಕೂ ಇಸ್ರಾಯೇಲರ ದೇವರು ನಿಮ್ಮನ್ನು ಹತ್ತಿರ ಬರಮಾಡಿಕೊಳ್ಳುವ ವಿಷಯದಲ್ಲಿ ಇಸ್ರಾಯೇಲರೊಳಗಿಂದಲೇ ನಿಮ್ಮನ್ನು ಪ್ರತ್ಯೇಕಿಸಿದ್ದು, ನಿಮಗೆ ಅಲ್ಪವಾಗಿ ತೋರಿತೋ?


ಅದಕ್ಕೆ ಆಕೆಯು, “ನೀನು ನನ್ನ ಗಂಡನನ್ನು ತೆಗೆದುಕೊಂಡದ್ದು ಅಲ್ಪಕಾರ್ಯವೋ? ನೀನು ಈಗ ನನ್ನ ಮಗನು ತಂದ ದುದಾಯ ಫಲಗಳನ್ನು ಸಹ ತೆಗೆದುಕೊಳ್ಳುವಿಯೋ?” ಎಂದಳು. ಅದಕ್ಕೆ ರಾಹೇಲಳು, “ನಿನ್ನ ಮಗನು ತಂದ ದುದಾಯ ಫಲಗಳಿಗೋಸ್ಕರ ಯಾಕೋಬನು ಈ ರಾತ್ರಿ ನಿನ್ನ ಸಂಗಡ ಮಲಗಲಿ,” ಎಂದಳು.


ಆಗ ದೇವಪುತ್ರರು, ಮನುಷ್ಯ ಪುತ್ರಿಯರ ಸೌಂದರ್ಯವನ್ನು ಕಂಡು ಅವರನ್ನು ಆರಿಸಿಕೊಂಡು, ತಮಗೆ ಹೆಂಡತಿಯರನ್ನಾಗಿ ಮಾಡಿಕೊಂಡರು.


ನಿಮ್ಮ ದೇವರಾದ ಯೆಹೋವ ದೇವರು ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮನ್ನು ಬರಮಾಡಿದಾಗ, ಅವರು ನಿಮಗಿಂತ ದೊಡ್ಡವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಎಂದರೆ, ಗಿರ್ಗಾಷಿಯರನ್ನೂ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವರು.


ಅದಕ್ಕೆ ಅವನು, “ನಾನು ಇಸ್ರಾಯೇಲನ್ನು ಕಳವಳಪಡಿಸುವುದಿಲ್ಲ. ಆದರೆ ನೀನೂ, ನಿನ್ನ ತಂದೆಯ ಕುಟುಂಬದವರೂ ಯೆಹೋವ ದೇವರ ಆಜ್ಞೆಯನ್ನು ತೊರೆದುಬಿಟ್ಟು, ಬಾಳನನ್ನು ಹಿಂಬಾಲಿಸುವ ನೀವೇ ಕಳವಳಪಡಿಸುವವರು.


ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ತನ್ನ ತಂದೆಯಂತೆ, ತನ್ನ ತಾಯಿಯಂತೆ ಮಾಡಲಿಲ್ಲ. ತನ್ನ ತಂದೆಯು ಮಾಡಿಟ್ಟ ಬಾಳನ ಸ್ತಂಭವನ್ನು ತೆಗೆದುಹಾಕಿದನು.


ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ, ಬಾಳನಿಗೆ ಬಲಿಪೀಠಗಳನ್ನು ಕಟ್ಟಿಸಿ, ಇಸ್ರಾಯೇಲಿನ ಅರಸನಾದ ಅಹಾಬನು ಮಾಡಿದ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿ, ಸಮಸ್ತ ನಕ್ಷತ್ರಮಂಡಲಕ್ಕೆ ಅಡ್ಡಬಿದ್ದು ಅವುಗಳನ್ನು ಪೂಜಿಸಿದನು.


ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದು, ಅಹಾಬನ ಮನೆಯವರು ದೇವದ್ರೋಹ ಮಾಡಿದಂತೆ, ಯೆಹೂದದವರನ್ನೂ, ಯೆರೂಸಲೇಮಿನ ನಿವಾಸಿಗಳನ್ನೂ ದ್ರೋಹ ಮಾಡಲು ಪ್ರೇರೇಪಿಸಿ, ನಿನಗಿಂತ ಉತ್ತಮರಾಗಿರುವ ನಿನ್ನ ತಂದೆಯ ಮನೆಯವರಾದ ನಿನ್ನ ಸಹೋದರರನ್ನು ಕೊಂದುಹಾಕಿದ್ದರಿಂದ,


ಆಶೇರ್ಯರು ಅಕ್ಕೋವಿನ ವಾಸಿಗಳನ್ನೂ; ಸೀದೋನಿನ ವಾಸಿಗಳನ್ನೂ; ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಪಟ್ಟಣಗಳ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ.


ತನ್ನ ತಂದೆಯ ದೇವರನ್ನು ಹುಡುಕಿ, ಇಸ್ರಾಯೇಲಿನ ಕ್ರಿಯೆಗಳ ಪ್ರಕಾರ ನಡೆಯದೆ, ದೇವರ ಆಜ್ಞೆಗಳಲ್ಲಿ ನಡೆದನು.


ಅವಳ ದ್ರಾಕ್ಷಿತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ಕಣಿವೆಯನ್ನೇ, ಅವಳ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು. ಅಲ್ಲಿ ಅವಳು ತಾನು ಯೌವನದ ದಿವಸಗಳಲ್ಲಿಯೂ, ಈಜಿಪ್ಟ್ ದೇಶದೊಳಗಿಂದ ಹೊರಟು ಬಂದ ದಿವಸಗಳಲ್ಲಿಯೂ ಆದ ಹಾಗೆ ಆಡುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು