Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:14 - ಕನ್ನಡ ಸಮಕಾಲಿಕ ಅನುವಾದ

14 ಏಕೆಂದರೆ, ‘ಯೆಹೋವ ದೇವರು ಭೂಮಿಯ ಮೇಲೆ ಮಳೆಯನ್ನು ಕೊಡುವವರೆಗೂ ಮಡಕೆಯಲ್ಲಿರುವ ಹಿಟ್ಟು ತೀರುವುದಿಲ್ಲ. ಕುಡಿಕೆಯಲ್ಲಿರುವ ಎಣ್ಣೆಯು ಮುಗಿಯುವುದಿಲ್ಲ,’ ಎಂದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುತ್ತಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ, ‘ನಾನು ದೇಶಕ್ಕೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಿಕೆಯಲ್ಲಿರುವ ಹಿಟ್ಟು ತೀರುವುದಿಲ್ಲ ಮತ್ತು ಮೊಗೆಯಲ್ಲಿರುವ ಎಣ್ಣೆಯು ಮುಗಿದುಹೋಗುವುದಿಲ್ಲ’” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇಸ್ರಯೇಲ್ ದೇವರಾದ ಸರ್ವೇಶ್ವರ ನಿನಗೆ, “ನಾನು ನಾಡಿಗೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಕೆಯಲ್ಲಿರುವ ಹಿಟ್ಟು ತೀರುವುದಿಲ್ಲ, ಕುಡಿಕೆಯಲ್ಲಿರುವ ಎಣ್ಣೆ ಮುಗಿದುಹೋಗುವುದಿಲ್ಲ,” ಎಂದು ಹೇಳುತ್ತಾರೆ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ - ನಾನು ದೇಶಕ್ಕೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಕೆಯಲ್ಲಿರುವ ಹಿಟ್ಟು ತೀರುವದಿಲ್ಲ, ಮೊಗೆಯಲ್ಲಿರುವ ಎಣ್ಣೆಯು ಮುಗಿದುಹೋಗುವದಿಲ್ಲ ಎಂದು ಹೇಳುತ್ತಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇಸ್ರೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ಆ ಮಡಕೆಯಲ್ಲಿರುವ ಹಿಟ್ಟು ಎಂದೆಂದಿಗೂ ಖಾಲಿಯಾಗುವುದಿಲ್ಲ. ಆ ಪಾತ್ರೆಯಲ್ಲಿ ಯಾವಾಗಲೂ ಎಣ್ಣೆಯಿರುತ್ತದೆ. ಯೆಹೋವನು ಭೂಮಿಯ ಮೇಲೆ ಮಳೆಯನ್ನು ಸುರಿಸುವ ತನಕ ಇದು ಹೀಗೆಯೇ ಮುಂದುವರಿಯುತ್ತದೆ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:14
11 ತಿಳಿವುಗಳ ಹೋಲಿಕೆ  

ಆಗ ಎಲೀಷನು, “ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾಳೆ ಹೆಚ್ಚು ಕಡಿಮೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಿಲಲ್ಲಿ ಮೂರು ಕಿಲೋಗ್ರಾಂ ನಯವಾದ ಗೋಧಿಹಿಟ್ಟು ಒಂದು ಬೆಳ್ಳಿ ನಾಣ್ಯಕ್ಕೆ ಮತ್ತು ಆರು ಕಿಲೋಗ್ರಾಂ ಜವೆಗೋಧಿ ಒಂದು ಬೆಳ್ಳಿ ನಾಣ್ಯಕ್ಕೆ ಮಾರಲಾಗುವುದು,” ಎಂದನು.


ಆಗ ಅವನು, “ಈ ತಗ್ಗನ್ನು ಹಳ್ಳಕೊಳ್ಳಗಳಾಗಿ ಮಾಡಿರೆಂದು ಯೆಹೋವ ದೇವರು ಹೇಳುತ್ತಾರೆ.


ಯೇಹುವು ಎದ್ದು ಮನೆಯೊಳಕ್ಕೆ ಹೋದನು. ಆಗ ಪ್ರವಾದಿಯು ಎಣ್ಣೆಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ, “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ಯೆಹೋವ ದೇವರ ಜನರಾದ ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ.


ಅಲ್ಲಿ ನೀನು ಆ ಹೊಳೆಯ ನೀರನ್ನು ಕುಡಿಯುವೆ. ಅಲ್ಲಿ ನಿನಗೆ ಆಹಾರವನ್ನು ತಂದು ಕೊಡಲು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ,” ಎಂದು ಹೇಳಿದನು.


ಯೇಸು ಅಲ್ಲಿ ಊಟಕ್ಕೆ ಕುಳಿತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಸುಗಂಧ ತೈಲದ ಭರಣಿಯೊಂದಿಗೆ ಯೇಸುವಿನ ಬಳಿಗೆ ಬಂದು, ಅದನ್ನು ಅವರ ತಲೆಯ ಮೇಲೆ ಸುರಿದಳು.


ಆಗ ಎಲೀಯನು ಅವಳಿಗೆ, “ಭಯಪಡಬೇಡ, ನೀನು ಹೇಳಿದ ಪ್ರಕಾರವೇ ಮಾಡು. ಆದರೆ ಮೊದಲು ಅದರಲ್ಲಿ ನನಗೆ ಒಂದು ಚಿಕ್ಕ ರೊಟ್ಟಿಮಾಡಿ, ನನ್ನ ಬಳಿಗೆ ತೆಗೆದುಕೊಂಡು ಬಾ. ತರುವಾಯ ನಿನಗೂ, ನಿನ್ನ ಮಗನಿಗೂ ಸಿದ್ಧಮಾಡಿಕೋ.


ಆಗ ಅವಳು ಹೋಗಿ ಎಲೀಯನ ಮಾತಿನ ಹಾಗೆಯೇ ಮಾಡಿದಳು. ಎಲೀಯನಿಗೂ, ಮಹಿಳೆಗೂ, ಆಕೆಯ ಮಗನಿಗೂ ಪ್ರತಿದಿನ ಸಾಕಾಗುವಷ್ಟು ಆಹಾರವಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು