Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:20 - ಕನ್ನಡ ಸಮಕಾಲಿಕ ಅನುವಾದ

20 “ನನ್ನ ದೇವರಾದ ಯೆಹೋವ ದೇವರೇ, ವಿಧವೆಯ ಮಗನನ್ನು ಕೊಂದುಹಾಕುವ ಈ ದುರಂತ ಅವಳ ಮೇಲೆ ಬರಮಾಡಿದಿಯಲ್ಲಾ?” ಎಂದು ಯೆಹೋವ ದೇವರನ್ನು ಕೂಗಿ ಬೇಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅನಂತರ ಅವನು ಯೆಹೋವನಿಗೆ, “ನನ್ನ ದೇವರಾದ ಯೆಹೋವನೇ, ನನಗೆ ಸ್ಥಳಕೊಟ್ಟ ಈ ವಿಧವೆಯ ಮಗನನ್ನು ನೀನು ಸಾಯಿಸಿ, ಆಕೆಗೆ ಕೇಡನ್ನುಂಟುಮಾಡಿದ್ದೇನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅನಂತರ ಅವನು, “ನನ್ನ ದೇವರಾದ ಸರ್ವೇಶ್ವರಾ, ನನಗೆ ಆಶ್ರಯವಿತ್ತ ಈ ವಿಧವೆಯ ಮಗನನ್ನು ನೀವು ಸಾಯಿಸಿ ಆಕೆಗೂ ಕೇಡನ್ನುಂಟುಮಾಡಿದ್ದೇಕೆ?” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನನ್ನ ದೇವರಾದ ಯೆಹೋವನೇ, ನನಗೆ ಸ್ಥಳಕೊಟ್ಟ ಈ ವಿಧವೆಯ ಮಗನನ್ನು ನೀನು ಸಾಯಿಸಿ ಆಕೆಗೂ ಕೇಡನ್ನುಂಟುಮಾಡಿದ್ದೇನು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಂತರ ಎಲೀಯನು, “ನನ್ನ ದೇವರಾದ ಯೆಹೋವನೇ, ಈ ವಿಧವೆಯು ತನ್ನ ಮನೆಯಲ್ಲಿ ನನಗೆ ಸ್ಥಳವನ್ನು ಕೊಟ್ಟಿದ್ದಾಳೆ. ನೀನು ಅವಳಿಗೆ ಈ ಕೇಡನ್ನು ಮಾಡುವೆಯಾ? ನೀನು ಅವಳ ಮಗುವನ್ನು ಸಾಯಿಸುವೆಯಾ?” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:20
19 ತಿಳಿವುಗಳ ಹೋಲಿಕೆ  

ನೀವು ನಂಬಿಕೆಯಿಂದ ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅವುಗಳನ್ನೆಲ್ಲಾ ಪಡೆಯುವಿರಿ,” ಎಂದರು.


ಯೆಹೋವ ದೇವರ ಯಾಜಕರಲ್ಲಿ ಮೋಶೆಯೂ ಆರೋನನೂ ಇದ್ದಾರೆ. ದೇವರ ಹೆಸರೆತ್ತಿ ಕರೆದವರಲ್ಲಿ ಸಮುಯೇಲನೂ ಸಹ ಒಬ್ಬನು. ಇವರೆಲ್ಲರೂ ಯೆಹೋವ ದೇವರನ್ನು ಕರೆದರು. ದೇವರು ಅವರಿಗೆ ಉತ್ತರಕೊಟ್ಟರು.


ಇದಲ್ಲದೆ ಹಿಜ್ಕೀಯನು ಯೆಹೋವ ದೇವರ ಮುಂದೆ ಪ್ರಾರ್ಥನೆಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನೀವೊಬ್ಬರೇ ಭೂಮಿಯ ಸಮಸ್ತ ರಾಜ್ಯಗಳಿಗೆ ದೇವರಾಗಿದ್ದೀರಿ. ನೀವೇ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ.


ಆಗ ಮೋಶೆಯು ಯೆಹೋವ ದೇವರಿಗೆ ಮೊರೆಯಿಟ್ಟು, “ಈ ಜನರಿಗೆ ನಾನೇನು ಮಾಡಲಿ? ಅವರು ಬಹಳಮಟ್ಟಿಗೆ ನನಗೆ ಕಲ್ಲೆಸೆಯುವುದಕ್ಕಿದ್ದಾರೆ,” ಎಂದನು.


ಓ ಯೆಹೋವ ದೇವರೇ, ನಾನು ನಿಮ್ಮ ಸಂಗಡ ವಾದಿಸುವಾಗ, ನೀವು ನೀತಿವಂತರೇ ಆಗಿದ್ದೀರಿ. ಆದರೂ ನಾನು ನಿಮ್ಮ ಸಂಗಡ ನ್ಯಾಯವಾದವುಗಳನ್ನು ಕುರಿತು ಮಾತನಾಡುವೆನು. ದುಷ್ಟರ ಮಾರ್ಗವು ಸಮೃದ್ಧಿಯಾಗುವುದು ಏಕೆ? ಮಹಾ ವಂಚನೆ ಮಾಡುವವರೆಲ್ಲರು ಸುಖವಾಗಿರುವುದು ಏಕೆ?


ಜೀವಿಸುವ ದೇವರನ್ನು ನಿಂದಿಸಲು ಅಸ್ಸೀರಿಯದ ಅರಸನಿಂದ ಕಳುಹಿಸಲಾಗಿದ್ದ ಸೈನ್ಯಾಧಿಕಾರಿಯ ನಿಂದೆಯ ಮಾತುಗಳನ್ನು ನಿನ್ನ ದೇವರಾದ ಯೆಹೋವ ದೇವರು ಕೇಳಿದ್ದಾರೆ. ನಿನ್ನ ದೇವರಾದ ಯೆಹೋವ ದೇವರು ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವರು. ಆದ್ದರಿಂದ ನೀನು ಉಳಿದಿರುವ ಜನರಿಗಾಗಿ ಅವರನ್ನು ಪ್ರಾರ್ಥಿಸು,’ ” ಎಂದರು.


ಅವನು ಅವಳಿಗೆ, “ನಿನ್ನ ಮಗನನ್ನು ನನಗೆ ಕೊಡು,” ಎಂದು ಹೇಳಿ, ಅವನನ್ನು ಅವಳ ಮಡಿಲಿನಿಂದ ಎತ್ತಿಕೊಂಡು, ತಾನು ವಾಸವಾಗಿದ್ದ ಮಾಳಿಗೆಯ ಕೋಣೆಗೆ ಹೋಗಿ, ಅವನನ್ನು ಮಂಚದ ಮೇಲೆ ಮಲಗಿಸಿದನು.


ಅವನು ಬಾಲಕನ ಮೇಲೆ ಮೂರು ಸಾರಿ ಬೋರಲು ಬಿದ್ದು, “ನನ್ನ ದೇವರಾದ ಯೆಹೋವ ದೇವರೇ, ಈ ಬಾಲಕನ ಪ್ರಾಣ ಅವನಲ್ಲಿ ತಿರುಗಿಬರಲಿ,” ಎಂದು ಯೆಹೋವ ದೇವರನ್ನು ಕೂಗಿದನು.


ಆದರೆ ಯೆಹೂದನ ಜೇಷ್ಠಪುತ್ರ ಏರನು ಯೆಹೋವ ದೇವರ ದೃಷ್ಟಿಯಲ್ಲಿ ದುಷ್ಟನಾಗಿದ್ದುದರಿಂದ, ಯೆಹೋವ ದೇವರು ಅವನನ್ನು ಸಾವಿಗೀಡುಮಾಡಿದರು.


ಅವನು ಮಾಡಿದ್ದು ಯೆಹೋವ ದೇವರ ದೃಷ್ಟಿಯಲ್ಲಿ ಮೆಚ್ಚಿಗೆಯಾಗಿರಲಿಲ್ಲ. ಆದ್ದರಿಂದ ಅವರು ಇವನನ್ನೂ ಸಾವಿಗೀಡುಮಾಡಿದರು.


ಅವನು ಒಳಗೆ ಪ್ರವೇಶಿಸಿ, ಯಾರೂ ಒಳಗೆ ಬಾರದಂತೆ ಬಾಗಿಲು ಮುಚ್ಚಿಕೊಂಡು, ಯೆಹೋವ ದೇವರನ್ನು ಪ್ರಾರ್ಥಿಸಿದನು.


ಆಗ ಪ್ರವಾದಿಯಾದ ಯೆಶಾಯನು ಯೆಹೋವ ದೇವರಿಗೆ ಮೊರೆಯಿಟ್ಟದ್ದರಿಂದ, ದೇವರು ಆಹಾಜನ ಮೆಟ್ಟಲುಗಳಲ್ಲಿ ಇಳಿದು ಹೋದ ನೆರಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡಿದರು.


ಆದರೂ ದೇವರ ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವುದರಿಂದಲೂ ಈ ರೀತಿಯಾದ ದೆವ್ವ ಹೊರಟು ಹೋಗುವುದಿಲ್ಲ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು